ಸುಬ್ರಹ್ಮಣ್ಯ ಪೋಲೀಸ್ ಠಾಣೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಜೂ.27 ರಂದು ಸುಬ್ರಹ್ಮಣ್ಯ ಪೋಲೀಸ್ ಠಾಣೆಗೆ ಭೇಟಿ ನೀಡಿದರು. ಠಾಣೆಯ ವತಿಯಿಂದ ಗೃಹ ಸಚಿವರಿಗೆ ಗೌರವ ವಂದನೆ ಸಲ್ಲಿಸಲಾಯಿತು.ಸುಬ್ರಹ್ಮಣ್ಯ ಠಾಣೆಗೆ ಟರ್ಪಾಲು ಹೊದಿಸಿರುವ ಬಗ್ಗೆ ಮಾಧ್ಯಮ ವರದಿಯನ್ನರಿತು, ಠಾಣೆಯ ಕಟ್ಟಡ ಪರಿಶೀಲಿಸಿ ಮಾತನಾಡಿದ ಅವರು ಎಲ್ಲಾ ತೊಡಕು ನಿವಾರಿಸಿ ಶೀಘ್ರವೇ ಸುಬ್ರಹ್ಮಣ್ಯ ಠಾಣೆಗೆ ಹೊಸ ಕಟ್ಟಡ ಕಟ್ಟುವಂತೆ ಕ್ರಮ...

ಕುಕ್ಕೆ ಸುಬ್ರಹ್ಮಣ್ಯ :- ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಜೂ.26 ರಂದು ಭೇಟಿ ನೀಡಿದ್ದು, ಜೂ.27 ರಂದು ದೇವರ ದರ್ಶನ ಪಡೆದು ಆಶ್ಲೇಷ ಪೂಜೆಯಲ್ಲಿ ಭಾಗಿಯಾದರು.ತೀರ್ಥಹಳ್ಳಿಯ ಪುರುಷೋತ್ತಮ ರಾವ್ ಕೃಷಿ ಸಂಶೋಧನಾ ಪ್ರತಿಷ್ಠಾನದ ವತಿಯಿಂದ ನಡೆದ ಆಶ್ಲೇಷ ಪೂಜೆ, ಶೇಷ ಸೇವೆಯಲ್ಲಿ ಪಾಲ್ಗೊಂಡರು.ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ್...
Ad Widget

ಐವರ್ನಾಡು : ನವೋದಯ ಸಂಘಗಳ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

ನವೋದಯ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ನವೋದಯ ಸ್ವ ಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮವು ಜೂ.27 ರಂದು ಐವರ್ನಾಡು ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್. ಮನ್ಮಥರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಮವಸ್ತ್ರ ವಿತರಣೆ ಮಾಡಿದರು.ನವೋದಯ ಸ್ವ ಸಹಾಯ ಸಂಘದ ತಾಲೂಕು ಮೇಲ್ಬಿಚಾರಕ ಶ್ರೀಧರ ಮಾಣಿಮರ್ದು ಪ್ರಾಸ್ತಾವಿಕವಾಗಿ...

ಹೆಚ್ಚಿದ ಭೂಕಂಪದ ತೀವ್ರತೆ -ರಿಕ್ಟರ್ ಮಾಪಕದಲ್ಲಿ 3.0 ದಾಖಲು: ಚೆಂಬು ಕಂಪನದ ಕೇಂದ್ರ

ಸುಳ್ಯ ಹಾಗೂ ಕೊಡಗು ಭಾಗದಲ್ಲಿ ಸಂಭವಿಸಿದ ಲಘು ಭೂಕಂಪನದ ಕುರಿತಂತೆ ಕರ್ನಾಟಕ ರಾಜ್ಯ ನ್ಯಾಚುರಲ್ ಡಿಸಾಸ್ಟರ್ ಮಾನಿಟರಿಂಗ್ ಸೆಂಟರ್ ಅಧಿಕೃತ ಬುಲೆಟಿನ್ ಬಿಡುಗಡೆಗೊಳಿಸಿದ್ದು, ಇದರ ಪ್ರಕಾರ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು ಗ್ರಾಮ ಸಮೀಪ ಭೂ ಕಂಪನ ಉಂಟಾಗಿದ್ದು ರಿಕ್ಟರ್ ಸ್ಕೇಲ್‌ನಲ್ಲಿ 3.0 ದಾಖಲಾಗಿದೆ.ಇದರ ಪ್ರಭಾವದಿಂದ ಸುಳ್ಯ ತಾಲೂಕಿನ ಹಲವೆಡೆ ಭೂಮಿಕಂಪಿಸಿರುವುದಾಗಿ ಹೇಳಲಾಗಿದೆ. ಜೂ.28...

ಪೈಚಾರು : ಪ್ರಯಾಣಿಕರ ತಂಗುದಾಣವನ್ನು ಪುನರ್ ನಿರ್ಮಿಸಿಕೊಡುವಂತೆ ತಹಶೀಲ್ದಾರರಿಗೆ ಮನವಿ

ಪೈಚಾರು ಬಳಿಯ ಶಾಂತಿನಗರ ತಿರುವು ಬಳಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಗೊಳಿಸುವ ಸಂದರ್ಭ ಸ್ಥಳದಲ್ಲಿದ್ದ ಪ್ರಯಾಣಿಕರ ತಂಗುದಾಣವನ್ನು ತೆರವುಗೊಳಿಸಲಾಗಿತ್ತು.ಇದರಿಂದ ಶಾಂತಿನಗರ ಹಾಗೂ ಬೆಟ್ಟಂಪಾಡಿ ಪರಿಸರದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಬಸ್ ಗೆ ಕಾಯುವ ಸಂದರ್ಭ ಮಳೆ ಹಾಗೂ ಬಿಸಿಲಿನಿಂದ ರಕ್ಷಣೆ ಪಡೆಯಲು ವ್ಯವಸ್ಥೆ ಇಲ್ಲದೇ ಸಮಸ್ಯೆಯಾಗುತ್ತಿದೆ.ಈಗಾಗಲೇ ಮಳೆಗಾಲ ಆರಂಭವಾಗಿದ್ದು ವಿದ್ಯಾರ್ಥಿಗಳಿಗೆ ವಾಹನಕ್ಕಾಗಿ ಕಾಯುವ ಸಂದರ್ಭ ತಂಗುದಾಣ...

ಸುಳ್ಯ : ಮತ್ತೆ ಕಂಪಿಸಿದ ಭೂಮಿ

ಕಳೆದಎರಡು ದಿನಗಳ ಹಿಂದಷ್ಟೇ ಭೂಕಂಪನವಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕು ಹಾಗೂ ಕೊಡಗಿನ ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದೆ. ಮುಂಜಾನೆ 7.46 ರ ಸುಮಾರಿಗೆ ಕಂಪನವಾಗಿದ್ದು ಜನ ಭಯಬೀತರಾಗಿ ಮನೆಗಳಿಂದ ಹೊರಗೋಡಿದ್ದಾರೆ. ಪೆರಾಜೆ, ಸುಳ್ಯ , ಉಬರಡ್ಕ, ಮಡಪ್ಪಾಡಿ, ಕೊಲ್ಲಮೊಗ್ರು, ಕಲ್ಮಕಾರು, ದೇವಚಳ್ಳ, ಜಾಲ್ಸೂರು, ಆಲೆಟ್ಟಿ, ಐವರ್ನಾಡು, ಅಮರಮುಡ್ನೂರು, ಸಂಪಾಜೆ ಸೇರಿದಂತೆ ಬಹುತೇಕ ಕಡೆ ಭೂಮಿ...

ಬೆಳ್ಳಾರೆ: ಮತ್ತೆ ವಿಲೇವಾರಿಯಾಗದಿರುವ ಸಂತೆ ಮಾರುಕಟ್ಟೆ ತ್ಯಾಜ್ಯ – ಶೀಘ್ರ ವಿಲೇವಾರಿಯಾಗದಿದ್ದರೆ ಸಾರ್ವಜನಿಕರಿಂದ ಪ್ರತಿಭಟನೆಗೆ ನಿರ್ಧಾರ

ಕಳೆದ ವಾರವಷ್ಟೇ ಬೆಳ್ಳಾರೆಯ ಮೇಲಿನ ಪೇಟೆಯಲ್ಲಿರುವ ಸಂತೆ ಮಾರುಕಟ್ಟೆಯ ತ್ಯಾಜ್ಯ ಸೂಕ್ತ ಸಮಯಕ್ಕೆ ವಿಲೇವಾರಿಯಾಗದೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸುಳ್ಯ ಘಟಕದ ಅಧ್ಯಕ್ಷರಾದ ಸದಾಶಿವ ಪೂಜಾರಿಯವರು ದ.ಕ.ಜಿಲ್ಲಾಧಿಕಾರಿಗಳ ಕಛೇರಿಗೆ ದೂರು ನೀಡಿದ ಬಳಿಕ ವಿಲೇವಾರಿಯಾಗಿ ಸುದ್ದಿಯಾಗಿತ್ತು. ಇದೀಗ ಕಳೆದ ಶನಿವಾರ ಬೆಳ್ಳಾರೆಯಲ್ಲಿ ವಾರದ ಸಂತೆ ನಡೆದಿದ್ದು, ಸಂತೆ ನಡೆದ ಬಳಿಕ ಮಾರುಕಟ್ಟೆಯಲ್ಲಿ ಮತ್ತೆ ವಿಲೇವಾರಿಯಾಗದೆ...

ಶೌಚಾಲಯ ಕಟ್ಟಡ ಸ್ಥಳ ಬದಲಾಯಿಸಿ ನಿರ್ಮಿಸಿದ್ದಾರೆಂದು ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ – ಮೇಲಾಧಿಕಾರಿಗಳ ಉತ್ತರ ಬರುವವರೆಗೆ ಕಾಯಲು ನಿರ್ಧರಿಸಿ ಪ್ರತಿಭಟನೆ ಹಿಂತೆಗೆತ

ಸುಳ್ಯ ಸ್ವಚ್ಛ ಭಾರತ ಮಿಷನ್ ಯೋಜನೆ ಅಡಿಯಲ್ಲಿ ಸುಳ್ಯ ಕೊಡಿಯಾಲ ಬೈಲು ದಲಿತರ ಕಾಲೋನಿಗೆ ಬಂದ ಶೌಚಾಲಯ ಮತ್ತು ಸ್ನಾನ ಘಟಕದ ಸಂಕೀರ್ಣ ಕಟ್ಟಡವನ್ನು ಕೊಡಿಯಾಲಬೈಲು ಹಿಂದೂ ರುದ್ರಭೂಮಿ ಒಳಗಡೆ ಮಾಡಿದ್ದಾರೆ ಎಂದು ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಆರೋಪ ಕೇಳಿಬಂದಿದೆ. ಇದರ ಬಗ್ಗೆ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಸುಂದರ ಪಾಟಾಜೆ, ಹಾಗೂ...

ವಳಲಂಬೆಯಲ್ಲಿ ಸಂಭ್ರಮದಿಂದ ನಡೆದ ಭಜನಾ ಮಹೋತ್ಸವ ;
ಭಜನೆಯಿಂದ ಧರ್ಮದ ಉಳಿವು- ಪ್ರವೀಣ್ ಕುಮಾರ್

ಭಜನೆಯಿಂದ ಸಂಸ್ಕಾರ ಬೆಳೆಯುವುದರ ಜೊತೆಗೆ ಧರ್ಮ ಉಳಿಯುತ್ತದೆ, ಭಜಕರ ಒಗ್ಗೂಡುವಿಕೆಯಿಂದ ಮನೆ,ಮನದಲ್ಲಿ ಧರ್ಮದ ಜಾಗೃತಿ ಮೂಡುತ್ತದೆ ಎಂದು ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಜಿಲ್ಲಾ ನಿರ್ದೇಶಕ ದ.ಕ ಜಿಲ್ಲೆ-2ರ ಪ್ರವೀಣ್ ಕುಮಾರ್ ಹೇಳಿದರು. ಅವರು ಸುಳ್ಯ ತಾಲೂಕು ಭಜನಾ ಪರಿಷತ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಭಜನೋತ್ಸವ ಸಮಿತಿ ವಳಲಂಬೆ ಹಾಗೂ ತಾಲೂಕಿನ ಭಜನಾ ಮಂಡಳಿಗಳ...

ಸುಳ್ಯ : ಕರ್ನಾಟಕ ರಾಜ್ಯ ಅರೆಭಾಷೆ ಕಲಾವಿದರ ಒಕ್ಕೂಟದ ಸಮಿತಿ ಸಭೆ

ಅರೆಭಾಷೆ ಸಾಂಸ್ಕೃತಿಕ ಕ್ಷೇತ್ರದ ಪ್ರಗತಿ ಮತ್ತು ಭಾಷಾ ಬೆಳವಣಿಗೆಗೆ ಕಲಾವಿದರ ಕೊಡುಗೆ ಅಪಾರ, ಇತ್ತೀಚಿನ ದಿನಗಳಲ್ಲಿ ಅರೆಭಾಷೆ ರಂಗಭೂಮಿ ಮತ್ತು ಸಿನಿಮಾ ರಂಗ ಶ್ರೀಮಂತಿಕೆಯನ್ನು ಕಂಡು ಕೊಳ್ಳುತಿದ್ದು ಅರೆಭಾಷೆಯ ಗೌರವ ಮತ್ತು ಹಿರಿಮೆಯನ್ನು ಇಮ್ಮಡಿ ಗೊಳಿಸುತ್ತಿದೆ. ಅರೆಭಾಷೆ ಕಲಾವಿದರ ಒಗ್ಗಟ್ಟು ಮತ್ತು ಅರೆಭಾಷೆ ಕಲಾ ಕ್ಷೇತ್ರದ ಅಭಿವೃದ್ಧಿಗಾಗಿ ಸ್ಥಾಪನೆಗೊಂಡ ಕರ್ನಾಟಕ ರಾಜ್ಯ ಅರೆಭಾಷೆ ಕಲಾವಿದರ ಒಕ್ಕೂಟದ...
Loading posts...

All posts loaded

No more posts

error: Content is protected !!