ರಾಜ್ಯಮಟ್ಟದ ಛಾಯಸಾಧಕ ಪ್ರಶಸ್ತಿಗೆ ಆಯ್ಕೆಯಾದ ಸ್ಟುಡಿಯೋ ಗೋಪಾಲ್

ಸುಳ್ಯ ವಲಯದ ಎಸ್ ಕೆ ಪಿ ಯ ಸ್ಥಾಪಕಾಧ್ಯಕ್ಷರು, ಎಸ್ ಕೆ ಪಿ ಮಾಜಿ ಜಿಲ್ಲಾಧ್ಯಕ್ಷರು, ಸುಳ್ಯದ ಹಿರಿಯ ಛಾಯಾಗ್ರಾಹಕ, ಸುಳ್ಯ ಗೋಪಾಲ್ ಸ್ಟುಡಿಯೋ ಮಾಲಕ ಗೋಪಾಲ್ ಸುಳ್ಯ ರವರಿ ಕೆ ಪಿ ಎ ರಾಜ್ಯ ಮಟ್ಟದ ಛಾಯಾ ಸಾಧಕ ರಾಜ್ಯ ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಸುಳ್ಯ :- ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ರೆಡ್ ಕ್ರಾಸ್ ಸಮಿತಿ ವತಿಯಿಂದ ಸನ್ಮಾನ

ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಜೂ.14 ರಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಇದರ ವತಿಯಿಂದ ಸುಳ್ಯ ವರ್ತಕರ ಸಂಘದ ಸಭಾಭವನದಲ್ಲಿ ರಕ್ತದಾನಿಗಳ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಕ್ತದಾನ ವಾಟ್ಸಾಪ್ ಗುಂಪಿನ ಅಡ್ಮಿನ್ ಗಳನ್ನು, ಸುಳ್ಯ ಯುವ ರೆಡ್ ಕ್ರಾಸ್ ಗಳನ್ನು, ರಕ್ತದಾನಿಗಳನ್ನು ಹಾಗೂ ಪ್ರೋತ್ಸಾಹಕರನ್ನು ಸನ್ಮಾನಿಸಲಾಯಿತು. ಕೆ.ವಿ.ಜಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲರಾದ...
Ad Widget

ಆಲೆಟ್ಟಿ : ಮನೆ ಬೀಳುವ ಪರಿಸ್ಥಿತಿಗೆ ತಲುಪಿದ್ದರೂ ಮಹಿಳೆಯ ಅಳಲಿಗೆ ಸ್ಪಂದಿಸದ ಅಧಿಕಾರಿಗಳು – ಅಂಬೇಡ್ಕರ್ ರಕ್ಷಣಾ ವೇದಿಕೆ ಹೋರಾಟದ ಎಚ್ಚರಿಕೆ

ಆಲೆಟ್ಟಿ ಗ್ರಾಮದ ಬಡ ದಲಿತ ಮಹಿಯೊಬ್ಬರು ಸರಕಾರದ ಸವಲತ್ತಿಗಾಗಿ ಅಲೆದಾಡಿದಾಡಿದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ದಿಂದಾಗಿ ಬೀಳುವ ಸ್ಥಿತಿಯಲ್ಲಿರುವ ಮನೆಯಲ್ಲಿಯೇ ಜೀವನ ಸಾಗಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆಲೆಟ್ಟಿ ಗ್ರಾಮದ ಮೊರಂಗಲ್ಲು ದಲಿತ ಮಹಿಳೆ ಭಾಗೀರಥಿ ಎಂಬವರು ಸುಮಾರು 40 ವರ್ಷಗಳಿಂದ ಸರ್ವೇ ನಂಬರ್ 121 ರಲ್ಲಿ ಸಣ್ಣದೊಂದು ಮನೆಕಟ್ಟಿಕೊಂಡು ವಾಸವಾಗಿದ್ದಾರೆ. ಆದರೆ ಈ ಜಾಗಕ್ಕೆ...

ಸುಬ್ರಹ್ಮಣ್ಯ ಹಾಗೂ ಬಳ್ಪದಲ್ಲಿ ಎಕ್ಸಲೆಂಟ್ ಟ್ಯೂಷನ್ ತರಗತಿ ಪ್ರಾರಂಭ

ಬಳ್ಪ ಮತ್ತು ಸುಬ್ರಹ್ಮಣ್ಯದಲ್ಲಿ 1 ರಿಂದ 10 ನೇ ತರಗತಿ ವಿಧ್ಯಾರ್ಥಿಗಳಿಗಾಗಿ ಅನುಭವಿ ಶಿಕ್ಷಕರಿಂದ ಎಕ್ಸಲೆಂಟ್ ಟ್ಯೂಷನ್ ತರಗತಿ ಮತ್ತು ನವೋದಯ,ಮೊರಾರ್ಜಿ ದೇಸಾಯಿ ಪ್ರವೇಶ ಪರೀಕ್ಷೆಯ ತರಬೇತಿ ನೀಡಲಾಗುವುದೆಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 97414939247353494386

ಕುಕ್ಕುಜಡ್ಕ : ಪ್ರಗತಿ ರಕ್ಷಾ ಕವಚದ ಬಗ್ಗೆ ಮಾಹಿತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ಳಾರೆ ಹಾಗೂ ದೊಡ್ಡತೋಟ ವಲಯಗಳ ಸೇವಾಪ್ರತಿನಿಧಿಗಳಿಗೆ ಜೂ.15 ರಂದು ಕುಕ್ಕುಜಡ್ಕ ಗ್ರಾಮ ಪಂಚಾಯತ್ ಕೊರಗ ಭವನದಲ್ಲಿ ಪ್ರಗತಿ ರಕ್ಷಾ ಕವಚದ ಬಗ್ಗೆ ಮಾಹಿತಿ ಮಾಹಿತಿ ಕಾರ್ಯಕ್ರಮ ನಡೆಯಿತು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ನಾಗೇಶ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ತಾಲೂಕು ಕೃಷಿ ಅಧಿಕಾರಿ ರಮೇಶ್ ಹಾಗೂ...

ನಡುಗಲ್ಲು : ಶಾಲಾ ಮಂತ್ರಿಮಂಡಲ ರಚನೆ – ಮುಖ್ಯಮಂತ್ರಿಯಾಗಿ ಯಶ್ವಿತ್ ಎಂ.ಎಂ.- ಉಪಮುಖ್ಯಮಂತ್ರಿಯಾಗಿ ಕೌಶಿಕ್ ಎನ್

ನಡುಗಲ್ಲು ಸ.ಹಿ.ಪ್ರಾ ಶಾಲೆಯಲ್ಲಿ ಪ್ರಜಾಪ್ರಭುತ್ವದ ಮಾದರಿಯಲ್ಲಿ ಶಾಲಾ ಸಂಸತ್ತು ಚುನಾವಣೆ ನಡೆಯಿತು. ಮುಖ್ಯಮಂತ್ರಿ ಸ್ಥಾನಕ್ಕೆ 4 ಅಭ್ಯರ್ಥಿಗಳು,ಉಪಮುಖ್ಯಮಂತ್ರಿ ಸ್ಥಾನಕ್ಕೆ 5 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ ಕಣದಲ್ಲಿದ್ದರು. ನಾಮಪತ್ರ ಪರಿಶೀಲನೆ ವೇಳೆ ಓರ್ವ ಅಭ್ಯರ್ಥಿ ನಾಮಪತ್ರ ಹಿಂಪಡೆದರು. ಚುನಾವಣಾಧಿಕಾರಿಗಳಾಗಿ ಶಿಕ್ಷಕರುಗಳಾದ ಕುಶಾಲಪ್ಪ ಟಿ., ಕು.ಸುಧಾರಾಣಿ, ಶ್ರೀಮತಿ ಮೋಕ್ಷ ಸಹಕರಿಸಿದರು. ಚಂದ್ರಶೇಕರ ಪಿ. ಇವರು ಸಲಹೆಗಾರರಾಗಿ ಸಹಕರಿಸಿದರು. ಮತದಾನ‌...

ಅನುಭವ ಕಲಿಸುವ ಬದುಕಿನ ಪಾಠ

ಅನುಭವವು ತಾನೇ ಜಗದ ಅತೀ ದೊಡ್ಡ ಪಾಠವು, ಅನುಭವವು ಕಲಿಸುವ ಪಾಠ ಎಂದೂ ಮರೆಯದು, ಬದುಕಿನಲ್ಲಿ ಎಂದೂ ಮರೆಯದು, ಅದು ಸೋಲೇ ಇರಲಿ ಇಲ್ಲ ಗೆಲುವೇ ಇರಲಿ, ಅದು ನೋವೇ ಇರಲಿ ಇಲ್ಲ ನಲಿವೇ ಇರಲಿ…ಬದುಕಿನ ಪ್ರತಿ ನಿಮಿಷ ಅನುಭವವೇ ತಾನೇ, ಒಂದೊಂದು ನಿಮಿಷವು ಇಲ್ಲಿ ಪಾಠವೇ ತಾನೇ…ಅನುಭವದ ಪುಸ್ತಕದಲ್ಲಿ ಸೋಲುನೂ ಒಂದು ಪಾಠ, ಗೆಲುವನ್ನು...

ಎಣ್ಮೂರು: ಬೀಳ್ಕೊಡುಗೆ ಸಮಾರಂಭ ಮತ್ತು ಯಕ್ಷಗಾನ ತಾಳಮದ್ದಳೆ

ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿ ಸುಮಾರು 12 ವರ್ಷಗಳಿಂದ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ಸಲ್ಲಿಸಿ ವರ್ಗಾವಣೆಗೊಂಡ ಶ್ರೀಮತಿ ಶೀತಲ್ ಯು.ಕೆ ಇವರ ಬೀಳ್ಕೊಡುಗೆ ಸಮಾರಂಭ ಜೂ.11ರಂದು ನಿಂತಿಕಲ್ಲಿನ ಧರ್ಮಶ್ರೀ ಆರ್ಕೇಡ್ ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಮಾರಿ ಜಾನಕಿ ಮುರುಳ್ಯ ಮಾತನಾಡಿ ಪ್ರಾಮಾಣಿಕ ಸೇವೆಯನ್ನು ಎಲ್ಲರೂ ಮೆಚ್ಚುತ್ತಾರೆ ಎನ್ನುವುದಕ್ಕೆ...

ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ಪ್ರತೀ ವರ್ಷ ರಕ್ತದಾನ ಶಿಬಿರ ಹಮ್ಮಿಕೊಳ್ಳುತ್ತಿರುವ ಯುವ ರೆಡ್ ಕ್ರಾಸ್ ಘಟಕದ ಕಾರ್ಯ ಶ್ಲಾಘನೀಯ – ಡಾ. ಕೆ ವಿ ಚಿದಾನಂದ

ರಕ್ತದಾನ ಜೀವ ಉಳಿಸುವ ಸಂಜೀವಿನಿ. ಆ ನಿಟ್ಟಿನಲ್ಲಿ ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ಪ್ರತೀ ವರ್ಷ ರಕ್ತದಾನ ಶಿಬಿರ ಹಮ್ಮಿಕೊಳ್ಳುವ ಮೂಲಕ ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕ ಜೀವದಾನದ ಕೆಲಸ ಮಾಡುತ್ತಿದೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ (ರಿ) ನ ಅಧ್ಯಕ್ಷರಾದ ಡಾ. ಕೆ. ವಿ ಚಿದಾನಂದ ಅವರು ಅಭಿಪ್ರಾಯಪಟ್ಟರು. ಅವರು ಸುಳ್ಯದ...

ಅರಂತೋಡು : ಸಾಮಾನ್ಯ ಸಭೆ

ಅರಂತೋಡು ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಹರಿಣಿ ದೇರಾಜೆಯವರ ಅಧ್ಯಕ್ಷತೆ ಯಲ್ಲಿ ಜೂ.13 ರಂದು ಪಂಚಾಯತ್ ಸಭಾಂಗಣ ನಡೆಯಿತು. ಸಭೆಯಲ್ಲಿ ಉಪಾಧ್ಯಕ್ಷೆ ಶ್ವೇತಾ ಅರಮನೆಗಯ, ಸದಸ್ಯರಾದ ಶಿವಾನಂದ ಕುಕ್ಕುಂಬಳ, ಕೇಶವ ಅಡ್ತಲೆ, ರವೀಂದ್ರ ಪಂಜಿಕೋಡಿ, ವೆಂಕಟ್ರಮಣ ಪೆತ್ತಾಜೆ, ಗಂಗಾಧರ ಗುಡ್ಲಬನ, ಶಶಿಧರ ದೊಡ್ಡಕುಮೇರಿ, ಭವಾನಿ ಚಿಟ್ಟನ್ನೂರು,ವಿನೋದ ತೊಡಿಕಾನ, ಮಾಲಿನಿ...
Loading posts...

All posts loaded

No more posts

error: Content is protected !!