ಶ್ರೀ ಭಗವತಿ ಯುವ ಸೇವಾ ಸಂಘದ ಮಹಾಸಭೆ- ನೂತನ ಪದಾಧಿಕಾರಿಗಳ ಆಯ್ಕೆ ;
ಅಧ್ಯಕ್ಷರಾಗಿ ಗೋಪಾಲ್ ನಡುಬೈಲು, ಪ್ರ.ಕಾರ್ಯದರ್ಶಿಯಾಗಿ ವಾಸುದೇವ ನಾಯಕ್, ಕೋಶಾಧಿಕಾರಿಯಾಗಿ ಮಹಾಬಲ ರೈ ಬೂಡು

ಬೂಡು ಭಗವತಿ ದೇವಸ್ಥಾನದಲ್ಲಿ ಶ್ರೀ ಭಗವತಿ ಯುವ ಸೇವಾ ಸಂಘದ ಮಹಾಸಭೆ ಜೂ.12 ರಂದು ಜರುಗಿತು. ಗೌರವಾಧ್ಯಕ್ಷರಾದ ಬೂಡು ರಾಧಾಕೃಷ್ಣ ರೈಯವರು ಅಧ್ಯಕ್ಷತೆ ವಹಿಸಿದ್ದರು. ಅಧ್ಯಕ್ಷರಾದ ವಾಸುದೇವನಾಯಕ್ ರವರು ಸ್ವಾಗತಿಸಿದರು. ಸಂಘದ ಖಜಾಂಜಿಯವರಾದ ರಾಮಚಂದ್ರ (ಪುಟ್ಟ) ರವರು ಲೆಕ್ಕಪತ್ರ ಮಂಡಿಸಿದರು. ಬಳಿಕ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಬೂಡು ರಾಧಾಕೃಷ್ಣ ರೈಯವರು ಪುನರಾಯ್ಕೆಯಾದರು. ಅಧ್ಯಕ್ಷರಾಗಿ...

ಜಯಂತ್ – ಸ್ವಾತಿ ಶುಭವಿವಾಹ

ಕಲ್ಮಡ್ಕ ಗ್ರಾಮದ ಕಡಂಬುಕಾನ ದಿ|ಕೃಷ್ಣ ನಾಯ್ಕರವರ ಪುತ್ರ ಜಯಂತ್ ಆರ್ ಕೆ ರವರ ವಿವಾಹವು ಮಡಿಕೇರಿ ತಾಲೂಕಿನ ಯಂ.ಚೆಂಬು ಗ್ರಾಮದ ಮಾಪ್ಲಕಜೆ ಮಹಾಲಿಂಗ ನಾಯ್ಕರ ಸುಪುತ್ರಿ ಸ್ವಾತಿ ಎಂ ಎಂ ರವರೊಂದಿಗೆ ಜೂ.06 ರಂದು ಬಿ.ಯಸ್. ಸಭಾಭವನ ತೊಡಿಕಾನದಲ್ಲಿ ನಡೆಯಿತು. ಜೂ. 08 ರಂದು ಕಾಚಿಲ ವಿಷ್ಣುಮೂರ್ತಿ ಸಭಾಭವನದಲ್ಲಿ ಅತಿಥಿ ಸತ್ಕಾರ ನಡೆಯಿತು.
Ad Widget

ಪಂಜ : ಪ್ರಗತಿ ರಕ್ಷಾ ಕವಚದ ಬಗ್ಗೆ ಮಾಹಿತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ, ಪಂಜ, ಗುತ್ತಿಗಾರು ವಲಯಗಳ ಸೇವಾಪ್ರತಿನಿಧಿಗಳಿಗೆ ಜೂ.13 ರಂದು ಪಂಜ ಭಜನಾ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ನಾಗೇಶ್, ಜಿಲ್ಲಾ ಸಮನ್ವಯಾಧಿಕಾರಿಗಳಾದ ಸೋಮಪ್ಪ ಗೌಡ ಹಾಗೂ ಜೆ.ವಿ.ಕೆ ಸಮನ್ವಯಾಧಿಕಾರಿಗಳಾದ ಶ್ರೀಮತಿ ಭಾರತಿ ಇವರುಗಳು ಪ್ರಗತಿ ರಕ್ಷಾ ಕವಚದ ಬಗ್ಗೆ ಮಾಹಿತಿ ನೀಡಿದರು.ಈ...

ಸುಳ್ಯದ ಸಾಹಿತಿ ಭೀಮರಾವ್ ವಾಷ್ಠರ್ ರಚಿಸಿದ ಭಕ್ತಿಗೀತೆ ಆಲ್ಬಮ್ ಬಿಡುಗಡೆ

ಸುಳ್ಯದ ಖ್ಯಾತ ಜ್ಯೋತಿಷಿ ಮತ್ತು ಸಾಹಿತಿಗಳಾದ ಎಚ್ .ಭೀಮರಾವ್ ವಾಷ್ಠರ್ ರವರು ಸಾಹಿತ್ಯ ರಚಿಸಿ ಹಾಡಿರುವ ಭಕ್ತಿಗೀತೆ ಮ್ಯೂಸಿಕ್ ಆಲ್ಬಮ್ ನ್ನು ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬೇಡರ ಕಾರಲಕುಂಟಿಯ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ನಡೆದ ಸರ್ವಧರ್ಮದ ಸಮ್ಮೇಳನದಲ್ಲಿ ಬಿಡುಗಡೆ ಮಾಡಲಾಯಿತು . ಸುಕ್ಷೇತ್ರ ಬೇಡರ ಕಾರಲಕುಂಟಿಯ ಕಾಲಜ್ಞಾನ ಮಠದ ಕುರಿತ ಈ ಭಕ್ತಿಗೀತೆಯನ್ನು ಸುಕ್ಷೇತ್ರದ...

ಭೀಮರಾವ್ ವಾಷ್ಠರ್ ರಿಗೆ ಸರ್ವಜ್ಞ ಸಂಜೀವಿನಿ ರಾಜ್ಯ ಪ್ರಶಸ್ತಿ ಪ್ರದಾನ

ಸುಳ್ಯದ ಖ್ಯಾತ ಜ್ಯೋತಿಷಿ ಮತ್ತು ಸಾಹಿತಿಗಳಾದ ಎಚ್ .ಭೀಮರಾವ್ ವಾಷ್ಠರ್ ರವರಿಗೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬೇಡರ ಕಾರಲಕುಂಟಿಯ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ನಡೆದ ಸರ್ವಧರ್ಮದ ಸಮ್ಮೇಳನದಲ್ಲಿ ಇವರ ಸಾಧನೆ ಪರಿಗಣಿಸಿ 2022 ನೇ ಸಾಲಿನ ಸರ್ವಜ್ಞ ಸಂಜೀವಿನಿ ರಾಜ್ಯ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಪ್ರಶಸ್ತಿ ಪ್ರದಾನವನ್ನು ಪದ್ಮಶ್ರೀ ಪ್ರಶಸ್ತಿ ವಿಜೇತೆ ಮಾತಾ ಮಂಜಮ್ಮ...

ರೂ.1 ಕೋಟಿ ಅನುದಾನದಲ್ಲಿ ಐವರ್ನಾಡು – ಬಿರ್ಮುಕಜೆ ಅಮಲ ರಸ್ತೆಯ ಡಾಮರೀಕರಣ ಉದ್ಘಾಟನೆ

ಐವರ್ನಾಡು – ಬಿರ್ಮುಕಜೆ ಅಮಲ ರಸ್ತೆಗೆ ಲೋಕೋಪಯೋಗಿ ಇಲಾಖೆಯಿಂದ ರೂ.1 ಕೋಟಿ ಅನುದಾನದಲ್ಲಿ ರಸ್ತೆ ಡಾಮರೀಕರಣವಾಗಿದ್ದು. ಜೂ.12 ರಂದು ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಉದ್ಘಾಟಿಸಿ ಮಾತನಾಡಿರು. ಅವರು ಪಾಂಬಾರಿನಿಂದ ಮಾಡಾವು ಉಳಿಕೆಯಾದಂತಹ ಭಾಗಕ್ಕೆ ಸರಕಾರದಿಂದ ಅನುದಾನ ಮಂಜೂರು ಹಂತದಲ್ಲಿದೆ. ಅಲ್ಲದೆ ಕಲ್ಲೋಣಿ ದೇವರಕಾನ ರಸ್ತೆ, ನಿಡುಬೆ ರಸ್ತೆ ಐವರ್ನಾಡು ದೇವಸ್ಥಾನ...

ಎನ್ನೆಂಸಿ ನೇಚರ್ ಕ್ಲಬ್ ವತಿಯಿಂದ ದರ್ಖಾಸ್ತು ಶಾಲೆನಲ್ಲಿ ಹಸಿರು ಉಸಿರು ಸಸ್ಯೋದ್ಯಾನ ನಿರ್ಮಾಣಕ್ಕೆ ಚಾಲನೆ

ನೆಹರೂ ಸ್ಮಾರಕ ಪದವಿ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ವತಿಯಿಂದ ಸಾಮಾಜಿಕ ಅರಣ್ಯ ಇಲಾಖೆ ಸುಳ್ಯ ವಲಯ, ಶಾಲಾ ಸಂಚಲನ ಸಮಿತಿ, ಶಾಲಾಭಿವೃದ್ಧಿ ಸಮಿತಿ ದರ್ಖಾಸ್ತು, ಸ್ತ್ರೀ ಶಕ್ತಿ ಸಂಘಗಳು ಬೆಳ್ಳಾರೆ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದರ್ಖಾಸ್ತುನಲ್ಲಿ ಹಸಿರು ಉಸಿರು ಸಸ್ಯೋದ್ಯಾನ ನಿರ್ಮಾಣ ಮತ್ತು ಶ್ರಮದಾನ...

ಜೇಸಿಐ ಪಂಜ ಪಂಚಶ್ರೀ ವತಿಯಿಂದ ವಿಶ್ವ ಪರಿಸರ ದಿನಾಚರಣೆ

ಜೇಸಿಐ ಪಂಜ ಪಂಚಶ್ರೀ ಹಾಗೂ ಸಾನಿಕ ನರ್ಸರಿ ಪಂಜ ಇದರ ಸಹಯೋಗದಲ್ಲಿ ಗೋ - ಗ್ರೀನ್ ಹಬ್ಬ 2022 ವಿಶ್ವ ಪರಿಸರ ದಿನಾಚರಣೆಯನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆ ಪಂಜದಲ್ಲಿ ಆಚರಿಸಲಾಯಿತು. ಸಭಾಧ್ಯಕ್ಷತೆಯನ್ನು ಜೇಸಿಐ ಪಂಜ ಪಂಚಶ್ರೀ ಯ ಘಟಕಾಧ್ಯಕ್ಷರಾದ ಜೇಸಿ.ಶಿವಪ್ರಸಾದ್ ಹಾಲೆಮಜಲು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಚಲಪತಿ...

ನರೇಂದ್ರ ಮೋದಿ ಪ್ರಧಾನಿಯಾಗಿ ಯಶಸ್ವಿ 8 ವರ್ಷ ಪೂರೈಸಿದ ಸಂಭ್ರಮದಲ್ಲಿ ಯುವಮೋರ್ಚಾ ಬೈಕ್ ರ‍್ಯಾಲಿ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಯಶಸ್ವಿಯಾಗಿ 8 ವರ್ಷಗಳ ಆಡಳಿತ ಪೂರೈಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಸುಳ್ಯ ಮಂಡಲ ವತಿಯಿಂದ ಬೈಕ್ ರ‍್ಯಾಲಿ ಇಂದು ನಡೆಯಿತು. ಬೈಕ್ ರ‍್ಯಾಲಿಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ಬೆಳ್ಳಾರೆಯ ಲಕ್ಷ್ಮೀ ವೆಂಕಟರಮಣ ದೇವಾಲಯದ ಬಳಿ ತೆಂಗಿನಕಾಯಿ ಒಡೆದು ಧ್ವಜ...

ಬೆಳ್ಳಾರೆ : ಸಚಿವರಿಂದ ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಉದ್ಘಾಟನೆ

ಸೇವಾ ಭಾರತಿ ಬೆಳ್ಳಾರೆ, ಗ್ರಾಮ ವಿಕಾಸ ಸಮಿತಿ ಬೆಳ್ಳಾರೆ, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ, ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿ.ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಮತ್ತು ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರಿಂದ ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯುವ...
Loading posts...

All posts loaded

No more posts

error: Content is protected !!