ಅಡ್ಕಾರು : ವಿದ್ಯುತ್ ಕಂಬಕ್ಕೆ ಗುದ್ದಿ ಕಾರು ಪಲ್ಟಿ – ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಅಡ್ಕಾರು ಸಮೀಪ ಸುಳ್ಯ ಕಡೆಗೆ ಬರುತ್ತಿದ್ದ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಪಲ್ಟಿಯಾದ ಘಟನೆ ಮಾ.03 ರಂದು ಸಂಜೆ ನಡೆದಿದೆ. ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ್ದರಿಂದ ಕೆಲ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.‌

ಸ್ವರ್ಣ ಶ್ರೀ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಸುಳ್ಯ. ರೂ. 19.22 ಕೋಟಿ ವ್ಯವಹಾರ ರೂ. 6.51 ಲಕ್ಷ ಲಾಭ.

ಸುಳ್ಯದ ರಥಬೀದಿಯ ವಿನಾಯಕ ಬಿಲ್ಡಿಂಗ್ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣ ಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿಯಮಿತ ಸುಳ್ಯ ಇದು 2023ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು 2024-25 ನೇ ಸಾಲಿನ ಆರ್ಥಿಕ ವರ್ಷವೂ ಸಹಕಾರಿಗೆ ಪೂರ್ಣವಾಗಿ ವ್ಯವಹರಿಸಲು ದೊರಕಿದ ಪ್ರಥಮ ಆರ್ಥಿಕ ವರ್ಷವಾಗಿದ್ದು ಈ ಅವಧಿಯಲ್ಲಿ ಸದಸ್ಯರ ಸಹಕಾರದೊಂದಿಗೆ ರೂ. 19.22 ಕೋಟಿ ವ್ಯವಹಾರ ನಡೆಸಿ...
Ad Widget

ಪಾಲಡ್ಕ : ಅಪಘಾತ ಪ್ರಕರಣ – ಆರೋಪಿ ದೋಷಮುಕ್ತ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾಲಡ್ಕ ಎಂಬಲ್ಲಿ ದಿನಾಂಕ : 01/03/2024 ರಂದು ಹರಿಶ್ಚಂದ್ರ ಎಂಬುವರು ಚಲಾಯಿಸಿಕೊಂಡು ಬರುತ್ತಿದ್ದ ಅವಿನಾಶ್ ಬಸ್ ಬಸ್ಸನ್ನು ದುಡುಕುತನ ಮತ್ತು ಅಜಾರುಕತೆಯಿಂದ ಚಲಾಯಿಸಿಕೊಂಡು ಹೋಗಿ, ಅದೇ ಮಾರ್ಗವಾಗಿ ಪದ್ಮನಾಭ ರವರು ಚಲಾಯಿಸಿಕೊಂಡು ಹೋಗುತ್ತಿರುವ ಮೋಟಾರ್ ಸೈಕಲ್ ಗೆ ಓವರ್ ಟೆಕ್ ಮಾಡುವ ಬರದಲ್ಲಿ ಆರೋಪಿತನು ತನ್ನ ಬಸ್ಸನ್ನು ಎಡಬದಿಗೆ ಒಮ್ಮೆಗೆ...

ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳು ಬಾಳಿಲ: ‘ರಂಗ ತರಂಗ’ ಬೇಸಿಗೆ ಶಿಬಿರ

ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳು ಬಾಳಿಲದಲ್ಲಿ ಏಳು ದಿನಗಳ ಬೇಸಿಗೆ ಶಿಬಿರ 'ರಂಗ ತರಂಗ' ಎ. 01ರಂದು ಉದ್ಘಾಟನೆಗೊಂಡಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿ (ರಿ) ಬಾಳಿಲ ಇದರ ಅಧ್ಯಕ್ಷರಾಗಿರುವ ಶ್ರೀ ರಾಧಾಕೃಷ್ಣ ರಾವ್ ಯು ವಹಿಸಿದ್ದರು. "ಇನ್ನಷ್ಟು ಹೊಸತನ ಬರಲಿ. ರಂಗ ತರಂಗ ಅಲೆ ಅಲೆಯಾಗಿ ಸಾಗಲಿ …." ಎಂದು ಶುಭಹಾರೈಸಿದರು. ಪಿ. ಜಿ....

ಸುಳ್ಯದ ಕೋಟೆಕ್ಕಲ್ ಆರ್ಯವೈದ್ಯ ಶಾಲೆಯ ವೈದ್ಯ ಕುಂಞರಾಮನ್ ವೈದ್ಯರ್ ನಿಧನ

ಸುಳ್ಯದ ಹಿರಿಯ ಆಯುರ್ವೇದ ಪಂಡಿತ ಹಾಗೂ ಕೋಟೆಕ್ಕಲ್ ಆರ್ಯವೈದ್ಯ ಶಾಲೆಯ ವೈದ್ಯರಾಗಿದ್ದ ಕುಂಞ್ಞರಾಮನ್ ವೈದ್ಯರ್ ರವರು ಅಲ್ಪಕಾಲದ ಅಸೌಖ್ಯದಿಂದ ಎ.1ರಂದು ನಿಧನರಾದರು. ಅವರಿಗೆ (80) ವರ್ಷ ವಯಸ್ಸಾಗಿತ್ತು. ಕಳೆದ 60 ವರ್ಷಗಳಿಂದ ಸುಳ್ಯದಲ್ಲಿ ಕೋಟೆಕಲ್ಲು ಔಷದಿಗಳ ಹಂಚಿಕೆ ದಾರರಾಗಿದ್ದ ಇವರು ಆಯುರ್ವೇದ ಔಷದಿ ವೃತ್ತಿಯಲ್ಲಿ ಸುಳ್ಯದಲ್ಲಿ ತುಂಬಾ ಹೆಸರುವಾಸಿಯಾಗಿದ್ದರು. ಇವರು ಕಳೆದ ಕೆಲವು ತಿಂಗಳುಗಳಿಂದ ಅಸೌಖ್ಯದಿಂದ...

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಬಟ್ಟೋಡಿ ಅವರಿಗೆ ಬೀಳ್ಕೊಡುಗೆ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಬಟ್ಟೋಡಿ ಅವರಿಗೆ ಸೇವಾ ನಿವೃತ್ತಿಗೊಂಡ ಹಿನ್ನೆಲೆಯಲ್ಲಿ ಮಾ.31 ರಂದು ಸಂಘದ ಪ್ರಧಾನ ಕಛೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.ಈ ಸಂದರ್ಭದಲ್ಲಿ ಚಂದ್ರಶೇಖರ ಬಟ್ಟೋಡಿ ಅವರಿಗೆ ಶಾಲು ಹೊದಿಸಿ ಸ್ಮರಣಿಕೆ ಹಾಗೂ ಸನ್ಮಾನ ಪತ್ರ ನೀಡಿ ಗೌರವಿಸಲಾಯಿತು.ಚಂದ್ರಶೇಖರ ಬಟ್ಟೋಡಿ ರವರ ಪತ್ನಿ ಶ್ರೀಮತಿ ಕಿರಣ, ಪುತ್ರ...

ಮಡಪ್ಪಾಡಿ ಕಾಶಿ ನಡುಬೆಟ್ಟು ಕಡಿದಾದ ದಿಣ್ಣೆ(ಚಡಾವು) ತಗ್ಗಿಸುವ ಕಾರ್ಯಕ್ಕೆ ಗುದ್ದಲಿ ಪೂಜೆ

ಮಡಪ್ಪಾಡಿಯಿಂದ ಕಾಶಿ ನಡುಬೆಟ್ಟು ಮನೆಗಳಿಗೆ ಸಂಪರ್ಕಿಸುವ ರಸ್ತೆಯು ಹಲವು ವರ್ಷಗಳಿಂದ ತೀರ ಹದಗೆಟ್ಟಿದ್ದು, ಆ ರಸ್ತೆಯ ಫಲಾನುಭವಿಗಳ ಬಹು ಬೇಡಿಕೆಗೆ ಸ್ಪಂದಿಸಿ ಮಾನ್ಯ ಶಾಸಕರಿಗೆ ಮಡಪ್ಪಾಡಿ ಗ್ರಾಮ ಸಮಿತಿ ಕಡೆಯಿಂದ ಬಿಜೆಪಿ ಜಿಲ್ಲಾಕಾರ್ಯದರ್ಶಿ ವಿನಯ್ ಕುಮಾರ್ ಮುಳುಗಾಡು ನೇತೃತ್ವದಲ್ಲಿ ಮನವಿ ಸಲ್ಲಿಸಿ ಶಾಸಕರ ವಿಶೇಷ ಅನುದಾನವನ್ನು ತರಿಸಿಕೊಂಡು ಮಡಪ್ಪಾಡಿ - ಕಾಶಿ- ನಡುಬೆಟ್ಟು ರಸ್ತೆಯಲ್ಲಿ ಫಲಾನುಭವಿಗಳ...

ಐನೆಕಿದು : ಮೂರ್ನಾಲ್ಕು ವಾರಗಳಿಂದ ಗ್ರಾಮದಲ್ಲಿ ಬೀಡುಬಿಟ್ಟಿರುವ ಆನೆಗಳು – ನಿರಂತರ ಆನೆ ದಾಳಿಯಿಂದ ನಾಶವಾಗುತ್ತಿರುವ ಕೃಷಿಯನ್ನು ರಕ್ಷಿಸುವಂತೆ ಸಂಬಂಧಪಟ್ಟವರಿಗೆ ಮನವಿ ಮಾಡುತ್ತಿರುವ ಗ್ರಾಮಸ್ಥರು – ಸಮಸ್ಯೆಗೆ ಸ್ಪಂದಿಸದಿದ್ದರೆ ಹೋರಾಟ : ಜಯಪ್ರಕಾಶ್ ಕೂಜುಗೋಡು

ಕಳೆದ ಮೂರ್ನಾಲ್ಕು ವಾರಗಳಿಂದ ಐನೆಕಿದು ಗ್ರಾಮದಲ್ಲಿ ಬೀಡುಬಿಟ್ಟಿರುವ ಆನೆ ದಾಳಿಯಿಂದಾಗಿ ನಾಶವಾಗುತ್ತಿರುವ ಕೃಷಿಯನ್ನು ರಕ್ಷಿಸುವಂತೆ ಸಂಬಂಧಪಟ್ಟವರಿಗೆ ಗ್ರಾಮಸ್ಥರು ಮನವಿ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಮಾತನಾಡಿದ ಸ್ಥಳೀಯರಾದ ಜಯಪ್ರಕಾಶ್ ಕೂಜುಗೋಡು “ಒಂದು ಕಡೆಯಿಂದ ಕೋತಿ, ಕಡವೆ, ಕಾಟಿ, ಹಂದಿ ಇತ್ಯಾದಿ ಕಾಡು ಪ್ರಾಣಿಗಳು ಮಾಡುವ ದಾಳಿಯಿಂದ ಕೃಷಿ ನಾಶವಾಗುತ್ತಿದ್ದು, ಇನ್ನೊಂದು ಕಡೆಯಿಂದ ಹೊಸ ಹೊಸ...

ಬಾಳಿಲ ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ನೂತನ ಮುಖ್ಯೋಪಾಧ್ಯಾಯರಾಗಿ ಉದಯಕುಮಾರ್ ರೈ ಎಸ್

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ಮುಖ್ಯ ಶಿಕ್ಷಕರಾಗಿದ್ದ ಯಶೋಧರ ಎನ್ ಇವರು ಮಾರ್ಚ್ 31ರಂದು ವಯೋ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ 1 ಏಪ್ರಿಲ್ 2025 ರಿಂದ ಪ್ರೌಢಶಾಲೆಯ ನೂತನ ಮುಖ್ಯಶಿಕ್ಷಕರಾಗಿ ಗಣಿತ-ವಿಜ್ಞಾನ ಸಹಶಿಕ್ಷಕರಾದ ಉದಯಕುಮಾರ್ ರೈ ಎಸ್ ಅಧಿಕಾರ ವಹಿಸಿಕೊಂಡಿದ್ದಾರೆ. 30.03.1998ರಲ್ಲಿ ಶಿಕ್ಷಕರಾಗಿ ಸೇರ್ಪಡೆಗೊಂಡು, 28.07.1998 ರಂದು ಇಲಾಖಾ ಅನುಮೋದನೆಯೊಂದಿಗೆ ಖಾಯಂ ಸಹಶಿಕ್ಷಕರಾಗಿ 27 ವರ್ಷಗಳ ಸೇವಾ...

ಕುಂಬರ್ಚೋಡು ಮೊಹಿಯದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಪಿತರ್ ಹಬ್ಬ ಆಚರಣೆ

ಮೊಹಿಯದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ಹಬ್ಬವನ್ನು ಆಚರಿಸಲಾಯಿತು. ಮಸೀದಿಯ ಖತಿಬರಾದ ಅಶ್ರಫ್ ಮುಸ್ಲಿಯಾರ್ ರವರು ಕುತುಬಾ ನೆರವೇರಿಸಿ ಈದ್ ಸಂದೇಶವನ್ನು ನೀಡಿ ಮಾತನಾಡಿ ಹಬ್ಬ ಸಂಭ್ರಮದ ಹೆಸರಿನಲ್ಲಿ ಒಂದು ಕ್ಷಣ ಆಚರಿಸುವ ಅನಿಸ್ಲಾಮಿಕ ಕಾರ್ಯಕ್ರಮಗಳು ನಮ್ಮ ಶಾಶ್ವತ ಇಹ ಪರ ನಷ್ಟಕ್ಕೆ ಹೇತು ಎಂಬುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕಿದೆ. ಇಸ್ಲಾಮಿನಲ್ಲಿ ಸಂಭ್ರಮಗಳ ಆಚರಣೆಗೂ ಒಂದು...
Loading posts...

All posts loaded

No more posts

error: Content is protected !!