ಹರಿಹರ ಪಲ್ಲತ್ತಡ್ಕ :- ಆರೋಗ್ಯ ಮತ್ತು ಕ್ಷೇಮ ಕೇಂದ್ರ ಉದ್ಘಾಟನೆ

ಹರಿಹರ ಪಲ್ಲತ್ತಡ್ಕದಲ್ಲಿ ಜೂ.01 ರಂದು ಆರೋಗ್ಯ ಇಲಾಖೆಯ ಆಶ್ರಯದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಉದ್ಘಾಟನೆಗೊಂಡಿತು.ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಅಂಙಣ ಅವರು ದೀಪ ಬೆಳಗಿಸಿ ಆರೋಗ್ಯ ಮತ್ತು ಕ್ಷೇಮ ಕೇಂದ್ರವನ್ನು ಉದ್ಘಾಟಿಸಿದರು. ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ ಈ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ...

ಬೆಳ್ಳಾರೆ : ದಾರುಲ್ ಹಿಕ್ಮಾ ಆಂಗ್ಲ ಮಾಧ್ಯಮ ಶಾಲೆಯ ಮಂತ್ರಿ ಮಂಡಲ ರಚನೆ

ಬೆಳ್ಳಾರೆಯ ದಾರುಲ್ ಹಿಕ್ಮ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ 2022-23 ನೇ ಸಾಲಿನ ಮಂತ್ರಿ ಮಂಡಲವನ್ನು ಜೂನ್ 1ರಂದು ಪ್ರಜಾಪ್ರಭುತ್ವ ಮಾದರಿಯಲ್ಲಿ ರಚಿಸಲಾಯಿತು. ಮುಖ್ಯಮಂತ್ರಿಯಾಗಿ ಮತದಾನದ ಮೂಲಕ ಫಾತಿಮಾ ರಿಝಾ ಆಯ್ಕೆಯಾದರೆ, ಉಪಮುಖ್ಯಮಂತ್ರಿಯಾಗಿ ಮಹಮ್ಮದ್ ಸಲೀತ್ ಆಯ್ಕೆಯಾದರು. ಶಿಕ್ಷಣ ಮಂತ್ರಿಯಾಗಿ ಫಾತಿಮಾ ಮಾಶಿಯಾ, ಉಪ ಶಿಕ್ಷಣ ಮಂತ್ರಿಯಾಗಿ ತಾನಿಷ ಎನ್ ಎಸ್, ಶಿಸ್ತುಮಂತ್ರಿಯಾಗಿ ರಿಝಾ...
Ad Widget

ಪಂಜ : ಅಕ್ಷಯ ಫೂಟ್ ವೇರ್ ಮತ್ತು ಸ್ಪೋರ್ಟ್ಸ್ ಸಾಮಾಗ್ರಿ ಮಳಿಗೆ ಶುಭಾರಂಭ

ಪಂಜದ ದೀನ್ ದಯಾಳ್ ಕಾಂಪ್ಲೆಕ್ಸ್ ನಲ್ಲಿ ಅಕ್ಷಯ ಫೂಟ್ ವೇರ್ ಮತ್ತು ಸ್ಪೋರ್ಟ್ಸ್ ಸಾಮಾಗ್ರಿಗಳ ಶಾಪ್ ಜೂ.2 ರಂದು ಶುಭಾರಂಭಗೊಂಡಿತು. ಇಲ್ಲಿ ಎಲ್ಲಾ ಕಂಪೆನಿಯ ವಿವಿಧ ವಿನ್ಯಾಸದ ಪಾದರಕ್ಷೆಗಳು ಹಾಗೂ ಸ್ಪೋರ್ಟ್ಸ್ ಸಾಮಾಗ್ರಿಗಳು ದೊರೆಯುತ್ತದೆ ಎಂದು ಪಾಲುದಾರರಾದ ದೀಪಕ್ ಪೂಜಾರಿಮನೆ ಹಾಗೂ ರಮೇಶ್ ಕಾಯಂಬಾಡಿ ತಿಳಿಸಿದ್ದಾರೆ.

ಬಿರುವೆರ್ ಕುಡ್ಲ ಸುಳ್ಯ ಘಟಕದ ವತಿಯಿಂದ ಶೈಕ್ಷಣಿಕ ನಿಧಿ-ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬಿರುವೆರ್ ಕುಡ್ಲ ಸುಳ್ಯ ಘಟಕದ ವತಿಯಿಂದ ತಾಲೂಕಿನ ಅರ್ಹ 10 ಮಂದಿ ಬಡ ವಿದ್ಯಾರ್ಥಿಗಳಿಗೆ ಜೂ.5 ಆದಿತ್ಯವಾರದಂದು ಬೆಳ್ಳಾರೆಯಲ್ಲಿ ಶೈಕ್ಷಣಿಕ ನಿಧಿ/ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನಡೆಯಲಿದೆ. ಶೈಕ್ಷಣಿಕ ನಿಧಿ ಪಡೆಯಲಿಚ್ಚಿಸುವ ವಿದ್ಯಾರ್ಥಿಗಳು ಜೂ.3 ರ ಮೊದಲು ಅಗತ್ಯ ದಾಖಲೆಯೊಂದಿಗೆ ಅರ್ಜಿ ಸಲ್ಲಿಸುವುದು. ವಿದ್ಯಾರ್ಥಿಯ ಹೆಸರು, ವಿಳಾಸ, ರೇಷನ್ ಕಾರ್ಡ್ ಪ್ರತಿ, ಸೂಚಕರ ಹೆಸರಿನೊಂದಿಗೆ ಘಟಕದ...

ಕೊಲ್ಲಮೊಗ್ರು : ಗ್ರಾಮ ಸಭೆ

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2021-22ನೇ ಸಾಲಿನ ದ್ವಿತೀಯ ಹಂತದ ಹಾಗೂ 2021-22ನೇ ಸಾಲಿನ 14 & 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಯು ಜೂ.01 ರಂದು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.ಗ್ರಾಮ ಸಭೆಯ ನೋಡೇಲ್ ಅಧಿಕಾರಿಯಾಗಿ ತೋಟಗಾರಿಕಾ ಇಲಾಖೆ ಸುಳ್ಯ ಇದರ...

ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್ ಕೆ ಜಿ ತರಗತಿ ಉದ್ಘಾಟನೆ ಮತ್ತು ದಾನಿಗಳಿಂದ ಉಚಿತ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ

ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು, ಶಾಲಾ ಅಭಿವೃದ್ಧಿ ಸಮಿತಿ ಸಹಕಾರದೊಂದಿಗೆ ಪ್ರಥಮವಾಗಿ ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.1 ರಂದು ಎಲ್ ಕೆ ಜಿ ತರಗತಿ ಉದ್ಘಾಟನೆಗೊಂಡಿತು. ಎಲ್ ಕೆ ಜಿ ತರಗತಿ ಕೊಠಡಿಯನ್ನು ಕ್ಷೇತ್ರ ಸಂಪನ್ಮೂಲ ಸಮನ್ವಯಧಿಕಾರಿ ಶ್ರೀಮತಿ ಯು.ಕೆ.ಶೀತಲ್ ರವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು....

ಸುಳ್ಯ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸುಳ್ಯ ವಿದ್ಯಾರ್ಥಿಗಳ ದ್ವಿತೀಯ ಸೋಪಾನ ಪರೀಕ್ಷೆ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸುಳ್ಯ ಇದರ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಪರೀಕ್ಷೆ-2022 ಮೇ.31 ಮಂಗಳವಾರದಂದು ಸ್ಕೌಟ್ಸ್ ಭವನ ಸುಳ್ಯ ಇಲ್ಲಿ ನಡೆಯಿತು. ಬೆಳಗ್ಗೆ 10.00 ಕ್ಕೆ ಧ್ವಜಾರೋಹಣ ನಡೆಯಿತು. ಆ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳಾದ ಶ್ರೀಮತಿ ಶೀತಲ್ ಯು.ಕೆ, ಪ್ರಭಾರ ತಾಲೂಕು...

ಸುಬ್ರಹ್ಮಣ್ಯ : ಹಿರಿಯ ಪತ್ರಕರ್ತ ಮಂಜುನಾಥ ರಾವ್ ವಿಧಿವಶ

ಸುಬ್ರಹ್ಮಣ್ಯದ ಹಿರಿಯ ಪತ್ರಕರ್ತ,ಉದ್ಯಮಿ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಮಂಜುನಾಥ್ ರಾವ್ (55) ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಕೆಲ ಸಮಯದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು.

ಸುಬ್ರಹ್ಮಣ್ಯ ವಲಯದ ಫಾರೆಸ್ಟರ್ ಸಂತೋಷ್ ದಮ್ಮಸೂರ್‌ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆ

ಅರಣ್ಯ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರಿಗೆ ರಾಜ್ಯ ಸರಕಾರ ಕೊಡಮಾಡುವ ೨೦೨೧ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಸುಬ್ರಹ್ಮಣ್ಯ ವಲಯದ ಫಾರೆಸ್ಟರ್ ಸಂತೋಷ್ ಶಿವಪ್ಪ ದಮ್ಮಸೂರ್ ಆಯ್ಕೆಯಾಗಿದ್ದಾರೆ.ರಾಜ್ಯದ ಅರಣ್ಯ ಇಲಾಖೆಯಲ್ಲಿ ಟ್ಟು ೨೫ ಮಂದಿಗೆ ಮುಖ್ಯಮಂತ್ರಿ ಪದಕ ನೀಡಲಾಗುತ್ತಿದ್ದು ಸುಳ್ಯ ಅರಣ್ಯ ಇಲಾಖೆಯಿಂದ ಸಂತೋಷ್‌ರವರು ಸಂಶೋಧನಾ ವಿಭಾಗದಲ್ಲಿ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ. ಸಂತೋಷ್ ರವರು ಬೆಳಗಾವಿ...

ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ಆಶ್ರಮಕ್ಕೆ ಧನ ಸಹಾಯ

ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ಬೀರಮಲೆಯಲ್ಲಿರುವ ಪ್ರಜ್ಞಾ ಆಶ್ರಮಕ್ಕೆ ಲಯನ್ಸ್ ಅಧ್ಯಕ್ಷ ಲಯನ್ ಆನಂದ ಪೂಜಾರಿ ಯವರು ರೂ. 10,000 ರೂಪಾಯಿ ಚೆಕ್ ನ್ನು ಆಶ್ರಮದ ಮುಖ್ಯಸ್ಥರಾದ ಅಣ್ಣಪ್ಪ ವಿ ಎಂ ರವರಿಗೆ ಹಸ್ತಾಂತರಿಸಿದರು.ಕ್ಲಬ್ಬಿನ ಸದಸ್ಯರು ತಮ್ಮ ಮನೆಯಲ್ಲಿ ತಯಾರಿಸಿ ತಂದಿದ್ದ ಆಹಾರವನ್ನು ಆಶ್ರಮದ ಸದಸ್ಯರೊಂದಿಗೆ ಸೇವಿಸಿದರು. ಲಯನ್ಸ್ ವಲಯ ಸಲಹೆಗಾರರಾದ ಲಯನ್ ಗಂಗಾಧರ್ ರೈ,ಕಾರ್ಯದರ್ಶಿ...
Loading posts...

All posts loaded

No more posts

error: Content is protected !!