ನಿಂತಿಕಲ್ಲು: ಸೋಲಾರ್ ಪಾಯಿಂಟ್ ಹೋಂ ಅಪ್ಲೈಯನ್ಸಸ್ & ಫರ್ನಿಚರ್ ಸಂಸ್ಥೆಯ “ಲಕ್ಕೀ ಡ್ರಾ” ಯೋಜನೆ ಮುಂದೂಡಿಕೆ – ಜೂ.11ರಂದು ಪ್ರಥಮ ಡ್ರಾ

ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸೋಲಾರ್ ಪಾಯಿಂಟ್ ಹೋಂ ಅಪ್ಲೈಯನ್ಸಸ್ & ಫರ್ನಿಚರ್ಸ್ ಸಂಸ್ಥೆಯ ನೂತನ ಯೋಜನೆಯಾದ "ಲಕ್ಕೀ ಡ್ರಾ" ಯೋಜನೆಯು ಕಾರಣಾಂತರಗಳಿಂದ ಮುಂದೂಡಲ್ಪಟ್ಟಿದ್ದು ಜೂ.11ರಂದು ಪ್ರಥಮ ಡ್ರಾ ನಡೆಯಲಿದೆ. ಈ "ಲಕ್ಕೀ ಡ್ರಾ" ದಲ್ಲಿ 15 ದಿನಗಳಿಗೊಮ್ಮೆ ರೂ.500/- ರಂತೆ 12 ಕಂತುಗಳನ್ನು ಪಾವತಿಸಬೇಕಾಗಿದ್ದು, ಪ್ರತೀ ಲಕ್ಕೀ ಡ್ರಾ ಸಂದರ್ಭ ವಿಜೇತ ಅದೃಷ್ಟಶಾಲಿಗಳಿಗೆ...

ಅಜ್ಜಾವರ : ಪ್ರತಾಪ ಯುವಕ ಮಂಡಲ ಪದಾಧಿಕಾರಿಗಳ ಆಯ್ಕೆ ; ಅಧ್ಯಕ್ಷ ಗುರುರಾಜ್ ಅಜ್ಜಾವರ, ಕಾರ್ಯದರ್ಶಿ ಅನಿಲ್ ರಾಜ್ ಕರ್ಲಪ್ಪಾಡಿ, ಖಜಾಂಜಿ ಲೋಕೇಶ್ ಮಾವಿನಪಳ್ಳ

ಅಜ್ಜಾವರ ಪ್ರತಾಪ ಯುವಕ ಮಂಡಲದ ಮಹಾಸಭೆಯು ಮೇ.19 ರಂದು ಶ್ರೀ ಅಯ್ಯಪ್ಪ ಭಜನಾ ಮಂದಿರ ಅಡ್ಪಂಗಾಯದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಿವಪ್ರಕಾಶ್ ಅಡ್ಪಂಗಾಯ ವಹಿಸಿದ್ದರು. ಸಭೆಯಲ್ಲಿ ನೂತನ ಅಧ್ಯಕ್ಷ ರಾಗಿ ಗುರುರಾಜ್ ಅಜ್ಜಾವರ, ಉಪಾಧ್ಯಕ್ಷ ರಾಗಿ ವಿಕ್ರಮ್ ಅಡ್ಪಂಗಾಯ ಮತ್ತು ರವಿರಾಜ್ ಕರ್ಲಪ್ಪಾಡಿ,ಪ್ರಧಾನ ಕಾರ್ಯದರ್ಶಿಯಾಗಿ ಅನಿಲ್ ರಾಜ್ ಕರ್ಲಪ್ಪಾಡಿ, ಜತೆ ಕಾರ್ಯದರ್ಶಿಯಾಗಿ ನವೀನ್ ಕುಮಾರ್, ಕೋಶಾಧಿಕಾರಿಯಾಗಿ...
Ad Widget

ಎನ್ನೆಂಸಿ: ಯುವ ರೆಡ್ ಕ್ರಾಸ್ ಘಟಕದಿಂದ ವಿಶ್ವ ತಂಬಾಕು ರಹಿತ ದಿನಾಚರಣೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ "ತಂಬಾಕು ನಮ್ಮ ಪರಿಸರಕ್ಕೆ ಅಪಾಯ" ಎಂಬ ಶೀರ್ಷಿಕೆಯಡಿ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ರತ್ನಾವತಿ ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಟಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ...

ಕೊಲ್ಲಮೊಗ್ರು :- ಶ್ರೀ ಮಾತಾ ಪ್ರಗತಿಬಂಧು ಸಂಘ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಸುಬ್ರಹ್ಮಣ್ಯ ವಲಯದ ಕೊಲ್ಲಮೊಗ್ರುವಿನಲ್ಲಿ ಶ್ರೀಮಾತಾ ಎಂಬ ಹೆಸರಿನ ನೂತನ ಪ್ರಗತಿಬಂಧು ಸಂಘವು ಮೇ.29 ರಂದು ಉದ್ಘಾಟನೆಗೊಂಡಿತು.ನೂತನ ಸಂಘದ ಉದ್ಘಾಟನೆಯನ್ನು ಒಕ್ಕೂಟದ ಅಧ್ಯಕ್ಷರಾದ ಜನಾರ್ಧನ ದೋಣಿಪಳ್ಳ ನೆರವೇರಿಸಿದರು. ನೂತನ ಸಂಘದ ಪ್ರಬಂಧಕರಾಗಿ ಗಾಯತ್ರಿ ಕೊಳಗೆ, ಸಂಯೋಜಕರಾಗಿ ನಮಿತಾ ಅಂಬೆಕಲ್ಲು, ಕೋಶಾಧಿಕಾರಿಯಾಗಿ ದಿವ್ಯಾ ತೀರ್ಥರಾಮ ನಾಲಡ್ಕ...

ಸುಬ್ರಹ್ಮಣ್ಯ : ಸ್ಕೌಟ್ ಗೈಡ್ಸ್ ಘಟಕದ ಬೇಸಿಗೆ ಶಿಬಿರ ಉದ್ಘಾಟನೆ

ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿನ ಸ್ಕೌಟ್ ಗೈಡ್ಸ್ ಘಟಕದ ಬೇಸಿಗೆ ಶಿಬಿರ ಮೇ. 30 ರಂದು ಉದ್ಘಾಟನೆಗೊಂಡಿತು. ಎಣ್ಮೂರು ಸರಕಾರಿ ಪ್ರೌಢ ಶಾಲೆಯ ಚಿತ್ರಕಲಾ ಅಧ್ಯಾಪಕ ಮೋಹನ ಗೌಡ ಶಿಬಿರ ಉದ್ಘಾಟಿಸಿದರು. ಪ್ರೌಢಶಾಲಾ ಮುಖ್ಯಸ್ಥರಾಗಿರುವ ಯಶವಂತ ರೈಯವರು ಅಧ್ಯಕ್ಷತೆ ವಹಿಸಿದ್ದರು. ಸ್ಕೌಟ್ ಮಾಸ್ಟರ್ ಸತೀಶ್ ಪ್ರಾಸ್ತವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಗೈಡ್ ಕ್ಯಾಪ್ಟನ್ ಸ್ಮಿತಾ ಕೆ.ಎಸ್., ಅಧ್ಯಾಪಕ ಕೃಷ್ಣಾಭಟ್,...

ಗುತ್ತಿಗಾರು : ಶೀಘ್ರದಲ್ಲಿ ಪ್ರಾರಂಭವಾಗಲಿರುವ ನಿರೀಕ್ಷಾ ಕೋಚಿಂಗ್ ಹಾಗೂ ಟ್ಯುಟೋರಿಯಲ್ – ದಾಖಲಾತಿ ಆರಂಭ

ಗುತ್ತಿಗಾರು ಮುತ್ತಪ್ಪ ನಗರದ ಬಾಲಾಜಿ ಕಾಂಪ್ಲೆಕ್ಸ್ ನ ಒಂದನೇ ಮಹಡಿಯಲ್ಲಿ ರಂಜಿತ್ ಅಂಬೆಕಲ್ಲು ಹಾಗೂ ಜೀವನ್ ಕುಮಾರ್ ತಳೂರು ಸಾರಥ್ಯದಲ್ಲಿ ನಿರೀಕ್ಷಾ ಕೋಚಿಂಗ್ ತರಗತಿ ಹಾಗೂ ಟ್ಯುಟೋರಿಯಲ್ ಆರಂಭಗೊಳ್ಳಲಿದೆ. ಇಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಆಸಕ್ತರಿಗೆ ಇಂಗ್ಲಿಷ್ ಸ್ಪೀಕಿಂಗ್ ತರಗತಿಗಳು, 8,9,10ನೇ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ,ಗಣಿತ, ಇಂಗ್ಲಿಷ್ ಹಾಗೂ ಎಲ್ಲಾ ವಿಷಯಗಳಿಗೆ ತರಗತಿಗಳು, ನೇರವಾಗಿ 10 ನೇ...

ಎನ್ನೆಂಸಿ: ವಿಶ್ವ ರೆಡ್ ಕ್ರಾಸ್ ದಿನದ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ವಿಶ್ವ ರೆಡ್ ಕ್ರಾಸ್ ದಿನದ ಪ್ರಯುಕ್ತ ರೆಡ್ ಕ್ರಾಸ್ ಸದಸ್ಯರಿಗೆ ರಸ ಪ್ರಶ್ನೆ ಸ್ಪರ್ಧೆಯನ್ನು ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿ ವಿಜೇತರಿಗೆ ಬಹುಮಾನ ವಿತರಿಸಿದರು. ಸುಳ್ಯ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ...

ಎನ್ನೆಂಸಿ: ಉಚಿತ ಆರೋಗ್ಯ ತಪಾಸಣಾ ಶಿಬಿರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಮಾಜಕಾರ್ಯ ವಿಭಾಗ, ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಇಲಾಖೆ ಮತ್ತು ಮಂಡಳಿ ಸಹಯೋಗದೊಂದಿಗೆ ಭಾರತ ಸರಕಾರದ ಮಾನ್ಯತೆ ಪಡೆದ ಹೆಚ್.ಎಲ್.ಎಲ್ ಲೈಫ್ ಕೇರ್ ಮಂಗಳೂರು ಇದರ ನುರಿತ ತಜ್ಞರ ಸಹಕಾರದಲ್ಲಿ ಕಟ್ಟಡ ಕಾರ್ಮಿಕರಿಗೆ,...

ಬೊಳುಬೈಲು : ಅಪಾಯಕಾರಿ ಸ್ಥಿತಿಯಲ್ಲಿರುವ ಟ್ರಾನ್ಸ್ ಫಾರ್ಮರ್ ಬಗ್ಗೆ ಗಮನ ಹರಿಸಲು ಸಾರ್ವಜನಿಕರ ಒತ್ತಾಯ

ಬೊಳುಬೈಲು ಸಮೀಪ ಗ್ಯಾರೇಜ್ ಎದುರು ಇರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಅಪಾಯಕಾರಿ ಸ್ಥಿತಿಯಲ್ಲಿದೆ. ಟ್ರಾನ್ಸ್ ಫಾರ್ಮರ್ ತುಂಬೆಲ್ಲಾ ಬಳ್ಳಿ ಹಬ್ಬಿದ್ದು ಬೆಂಕಿ ಬಂದು ಕರೆಂಟ್ ಕೈಕೊಡುತ್ತಿದೆ. ಈ ಬಗ್ಗೆ ಇಲಾಖೆ ಶೀಘ್ರವಾಗಿ ಗಮನ ಹರಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ತೆಲಂಗಾಣ ಯೂತ್ ಕಾಂಗ್ರೆಸ್ ಅಧ್ಯಕ್ಷ ಶಿವಸೇನಾ ರೆಡ್ಡಿ ಕುಕ್ಕೆ ಕ್ಷೇತ್ರ ಭೇಟಿ

ತೆಲಂಗಾಣ ಯೂತ್ ಕಾಂಗ್ರೆಸ್ ಅಧ್ಯಕ್ಷ ಶಿವಸೇನಾ ರೆಡ್ಡಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಎಸ್.ಸಿ.ಘಟಕದ ಉಪಾಧ್ಯಕ್ಷ ಪ್ರಹ್ಲಾದ್ ಬೆಳ್ಳಿಪ್ಪಾಡಿ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ರಂಜಿತ್ ಬಂಗೇರ ಜತೆಗಿದ್ದರು.
Loading posts...

All posts loaded

No more posts

error: Content is protected !!