ಯೋಗಾಸನದಲ್ಲಿ ನೋಬೆಲ್ ವರ್ಲ್ಡ್ ರೆಕಾರ್ಡ್ ನಲ್ಲಿ ಮೋನಿಷ್ ತಂಟೆಪ್ಪಾಡಿ

ಯೋಗಾಸನದಲ್ಲಿ ನೋಬೆಲ್ ವರ್ಲ್ಡ್ ರೆಕಾರ್ಡ್ ನಲ್ಲಿ ಮೋನಿಷ್ ತಂಟೆಪ್ಪಾಡಿ ಹೆಸರು ಮಾಡಿದ್ದಾರೆ. ಬದ್ದ ಪದ್ಮಾಸನದಲ್ಲಿ 1ಗಂಟೆ 02 ನಿಮಿಷ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ. ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ. ಪ್ರಗತಿ ವಿದ್ಯಾ ಸಂಸ್ಥೆ (ರಿ.) ಕಾಣಿಯೂರಿನಲ್ಲಿ6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಇವರು ತಂಟೆಪ್ಪಾಡಿ ಶ್ರೀ ವಿಶ್ವನಾಥ ಗೌಡ...

ಇಂಟರ್ ಗ್ರೂಪ್ ಫೈರಿಂಗ್ ಕಾಂಪಿಟೇಷನ್ ಗೆ ಪ್ರತೀಕ್ಷಾ ಡಿ.ಎಸ್.ಆಯ್ಕೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಎನ್.ಸಿ.ಸಿ. ವಿದ್ಯಾರ್ಥಿನಿ ಪ್ರತೀಕ್ಷಾ.ಡಿ.ಎಸ್ ಇವರು ಮಡಿಕೇರಿ 19ಕೆಎಆರ್ ಬೆಟಾಲಿಯನ್ ನಿಂದ ಬೆಂಗಳೂರುನಲ್ಲಿ ನಡೆಯುವ ಇಂಟರ್ ಗ್ರೂಪ್ ಫೈರಿಂಗ್ ಕಾಂಪಿಟೇಷನ್ ನಲ್ಲಿ ಭಾಗವಹಿಸಲು ಅರ್ಹತೆಯನ್ನು ಪಡೆದಿರುತ್ತಾರೆ. ಇವರಿಗೆ ಕಾಲೇಜಿನ ಲೆಪ್ಟಿನೆಂಟ್ ಸೀತಾರಾಮ.ಎಂ.ಡಿ ಇವರು ತರಬೇತಿ ನೀಡಿರುತ್ತಾರೆ. ಇವರು ಎನ್.ಎಂ.ಸಿ ಪದವಿ ಕಾಲೇಜಿನ ದ್ವಿತೀಯ ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿ. ಗುತ್ತಿಗಾರು ಗ್ರಾಮದ ವಳಲಂಬೆ ಗೋಳಿಯಡ್ಕ...
Ad Widget

ಪ್ರಕೃತಿಯಲ್ಲೂ ಪತ್ತನಾಜೆಯ ಪ್ರಭಾವ

ತುಳುವರ ಆಚರಣೆ ಎಂದರೆ ಅದು ವೈಜ್ಞಾನಿಕ, ಪ್ರಾಕೃತಿಕ. ಪರಿಸರವನ್ನು ಬಿಟ್ಟು ಮಾಡುವ ತುಳುವರ ಯಾವ ಆಚರಣೆಯು ಬಹುಶಃ ಇಲ್ಲ. ‘ಪತ್ತನಾಜೆಗ್ ಪತ್ತ್ ಪನಿ ಬರ್ಸ’ (ಪತ್ತನಾಜೆಯ ದಿನ ಹತ್ತು ಹನಿಯಾದರೂ ಮಳೆ) ಎಂದು ನನ್ನ ಅಜ್ಜಿ ಬಾಲ್ಯದಲ್ಲಿ ನನಗೆ ಹೇಳುತ್ತಿದ್ದರು. ಇದು ಈಗಲೂ ಕಿವಿಗೆ ಕೇಳುತ್ತದೆ ಮತ್ತು ಇದು ಸತ್ಯವೂ ಹೌದು. ಬೇಸಿಗೆಯ ತಾಪದಿಂದ ಬೇಸತ್ತ...

ಐನೆಕಿದು : ಮೇ.25 ರಂದು ಬೃಹತ್ ರಕ್ತದಾನ ಶಿಬಿರ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸ.ಹಿ.ಪ್ರಾ ಶಾಲೆ ಐನೆಕಿದು, ಎ.ಜೆ ಆಸ್ಪತ್ರೆ & ಸಂಶೋಧನಾ ಕೇಂದ್ರ ಬ್ಲಡ್ ಬ್ಯಾಂಕ್ ಮಂಗಳೂರು, ಕುಕ್ಕೆಶ್ರೀ ಆಟೋ ಚಾಲಕ ಮತ್ತು ಮಾಲಕರ ಸಂಘ (ರಿ.) ಸುಬ್ರಹ್ಮಣ್ಯ, ಬಿ.ಎಂ.ಎಸ್ ಸಂಯೋಜಿತ ಶ್ರೀ ಹರಿ ಆಟೋ ಚಾಲಕ ಮಾಲಕರ ಸಂಘ (ರಿ.) ಹರಿಹರ ಪಲ್ಲತ್ತಡ್ಕ...

ಬೇಕಾಗಿದ್ದಾರೆ

ಖಾಸಗಿ ಸಂಸ್ಥೆಯೊಂದಕ್ಕೆ ಕಂಪ್ಯೂಟರ್ ತಿಳಿದಿರುವ ಮಹಿಳಾ ಅಭ್ಯರ್ಥಿ ಬೇಕಾಗಿದ್ದಾರೆಮೊ : 77601 71607

ಕೊಲ್ಲಮೊಗ್ರು : ಕಜ್ಜೋಡಿಯಲ್ಲಿ ಶ್ರೀ ಪಾಷಾಣಮೂರ್ತಿ ದೈವಗಳ ನೇಮೋತ್ಸವ

ಕೊಲ್ಲಮೊಗ್ರು ಗ್ರಾಮದ ಮೋಹನಾಂಗಿ ದೇವಿದಾಸ್ ಕಜ್ಜೋಡಿ ಅವರ ಮನೆಯಲ್ಲಿ ಮೇ.22 ರಂದು ಶ್ರೀ ಪಾಷಾಣಮೂರ್ತಿ ದೈವಗಳ ನೇಮೋತ್ಸವವು ನಡೆಯಿತು.ಸಂಜೆ ಭಂಡಾರ ತೆಗೆದು ನಾಲ್ಕು ಪಾಷಾಣಮೂರ್ತಿ ದೈವಗಳ ನೇಮೋತ್ಸವ ನಡೆಯಿತು. ನಂತರ ಅನ್ನಸಂತರ್ಪಣೆ ನಡೆಯಿತು. ವರದಿ :- ಉಲ್ಲಾಸ್ ಕಜ್ಜೋಡಿ

ಮೇ.26 : ಜಿಲ್ಲಾಧಿಕಾರಿ ಸುಳ್ಯ ಭೇಟಿ – ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ‌. ಯವರು ಮೇ. 26 ರಂದು ಸುಳ್ಯ ತಾಲೂಕು ಕಛೇರಿಗೆ ಭೇಟಿ ನೀಡಲಿದ್ದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಆದುದರಿಂದ ಸಾರ್ವಜನಿಕ ತಮ್ಮ ಕುಂದುಕೊರತೆಗಳ ಬಗ್ಗೆ ಅಹವಾಲು ಸಲ್ಲಿಸಬಹುದು ಎಂದು ತಹಶೀಲ್ದಾರ್ ಕು. ಅನಿತಾಲಕ್ಷ್ಮೀ ತಿಳಿಸಿದ್ದಾರೆ.

ವಿರಾಟ್ ಫ್ರೆಂಡ್ಸ್(ರಿ.)ಬೆಳ್ಳಾರೆ ವಾರ್ಷಿಕ ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ

ವಿರಾಟ್ ಫ್ರೆಂಡ್ಸ್(ರಿ.)ಬೆಳ್ಳಾರೆ ಇದರ ವಾರ್ಷಿಕ ಮಹಾಸಭೆಯು ಮೇ.20ರಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಿರಾಟ್ ಫ್ರೆಂಡ್ಸ್(ರಿ.)ಬೆಳ್ಳಾರೆ ಅಧ್ಯಕ್ಷ ಸಚಿನ್ ರೈ ಪೂವಾಜೆ ವಹಿಸಿದ್ದರು. ಈ ಸಂದರ್ಭದಲ್ಲಿ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಅಧ್ಯಕ್ಷರಾಗಿ ಮನೋಜ್ ಶೆಟ್ಟಿ ಬೆಳ್ಳಾರೆ, ಕಾರ್ಯದರ್ಶಿಯಾಗಿ ಧೀರಜ್. ಪಿ, ಕೋಶಾಧಿಕಾರಿಯಾಗಿ ಪ್ರದೀಪ್ ಬೆಳ್ಳಾರೆ ಇವರುಗಳು ಅವಿರೋಧವಾಗಿ ಆಯ್ಕೆಯಾದರು.

ಕು|ಹರ್ಷಿತಾ.ಟಿ ರಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 552 ಅಂಕ

ಬೆಳ್ಳಾರೆ ಶ್ರೀ ಸುಬ್ರಹ್ಮಣ್ಯೇಶ್ವರ ಮೋಟಾರ್ ವರ್ಕ್ಸ್ ನ ಮಾಲಕರಾದ ಶ್ರೀ ತಿರುಮಲೇಶ್ವರ ಕುಲಾಲ್ ಹಾಗೂ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಶ್ರೀಮತಿ ಕೆ.ಸಿ.ಬೇಬಿ ದಂಪತಿಗಳ ಪುತ್ರಿ ಕು|ಹರ್ಷಿತಾ.ಟಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 552 ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಪುತ್ತೂರು ತಾಲೂಕಿನ ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ.

ಎಸ್.ಎಸ್.ಎಲ್.ಸಿ ಫಲಿತಾಂಶ : ಕೊಲ್ಲಮೊಗ್ರು ಕೆ.ವಿ.ಜಿ ಅನುದಾನಿತ ಪ್ರೌಢಶಾಲೆಗೆ ಶೇ.75 ಫಲಿತಾಂಶ

2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು, ಕೊಲ್ಲಮೊಗ್ರು ಕೆ.ವಿ.ಜಿ ಅನುದಾನಿತ ಪ್ರೌಢಶಾಲೆ ಶೇ.75 ಫಲಿತಾಂಶ ದಾಖಲಿಸಿದೆ.32 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 24 ಮಂದಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.4 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ 1 ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ವರದಿ :- ಉಲ್ಲಾಸ್ ಕಜ್ಜೋಡಿ
Loading posts...

All posts loaded

No more posts

error: Content is protected !!