- Tuesday
- June 30th, 2026
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಬಳ್ಪ ಗ್ರಾಮದ ಕುಂಜತ್ತಾಡಿ ನಿವಾಸಿಗಳಿಗೆ ರೂ 8000.00 ದಂಡ ವಿಧಿಸಿದ ಘಟನೆ ಮೇ.13 ರಂದು ನಡೆದಿದೆ. ಬೇಂಗಮಲೆ ಪರಿಸರದಲ್ಲಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಎಸೆದು ಹೋಗಿದ್ದಾರೆ ಎಂಬ ಮಾಹಿತಿ ಪಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ಯಾಮ್ ಪ್ರಸಾದ್ ಎಂ ಆರ್ ರವರು ಮೇ.13 ರಂದು...
2021-22 ನೇ ಶೈಕ್ಷಣಿಕ ಸಾಲಿನ ಕರ್ನಾಟಕ ಎಸ್.ಎಸ್.ಎಲ್.ಸಿ ಫಲಿತಾಂಶ ಮೇ.19ರಂದು ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಘೋಷಣೆ ಮಾಡಲಾಗುತ್ತದೆ ಎಂದು ಸಚಿವ ಬಿ.ಸಿ ನಾಗೇಶ್ ಅವರು ಇಂದು ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ SSLC ಪರೀಕ್ಷೆ ಫಲಿತಾಂಶ ಮೇ.19ರಂದು ಘೋಷಣೆ ಫಿಕ್ಸ್ ಆದಂತೆ ಆಗಿದೆ. ಈ ಶೈಕ್ಷಣಿಕ ಸಾಲಿನಲ್ಲಿ ಪರೀಕ್ಷೆಗೆ 8.76 ಲಕ್ಷ ವಿದ್ಯಾರ್ಥಿಗಳು...
ಕಡಬ ತಾಲೂಕಿನ ಚಾರ್ವಾಕ ಕಪಿಲೇಶ್ವರ ಸಿಂಗಾರಿ ಮೇಳವು ಕಳೆದ ಮೇ.7ರಿಂದ ಮೇ.10 ರವರೆಗೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮದೇವತೆ ಊರ ಜಾತ್ರೆಯಲ್ಲಿ ಭಾಗವಹಿಸಿ ಅಲ್ಲಿನ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಸುಮಾರು 1ಲಕ್ಷಕ್ಕೂ ಅಧಿಕ ಜನ ಸೇರಿದ ಜಾತ್ರೆಯಲ್ಲಿ ಊರ ಕಾಯುವ ದೇವಿಯ ಮೆರವಣಿಗೆ ಬಹಳ ವಿಜೃಂಭಣೆಯಿಂದ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ...
ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಪಿ.ಎಂ.ಎಫ್.ಎಂ.ಇ ಚೆಕ್ ವಿತರಣಾ ಕಾರ್ಯಕ್ರಮವು ಮೇ.10 ರಂದು ನಡೆಯಿತು.ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಇದರ ನೂತನ ಅಧ್ಯಕ್ಷರಾಗಿ ದಿವ್ಯಾ ಸುಜನ್ ಗುಡ್ಡೆಮನೆ, ಉಪಾಧ್ಯಕ್ಷರಾಗಿ ಸವಿತಾ ಕುಳ್ಳಂಪಾಡಿ, ಕಾರ್ಯದರ್ಶಿಯಾಗಿ ಯಮಿತಾ ಪೂರ್ಣಚಂದ್ರ, ಜೊತೆ ಕಾರ್ಯದರ್ಶಿಯಾಗಿ ಗೀತಾ,...
ಮರ್ಕಂಜ ಗ್ರಾಮದ ವಿಶೇಷ ಚೇತನ ಬಾಲಕನಿಗೆ ಸೆಲ್ಕೋ ಸೋಲರ್ ವತಿಯಿಂದ 10 ಸಾವಿರ ಮೌಲ್ಯದ 2 ದೀಪದ ಸೋಲರ್ ಲ್ಯಾಂಪ್ ಹಸ್ತಾಂತರಿಸಲಾಯಿತು. ಅದರಲ್ಲಿ 5 ಸಾವಿರ ಸೆಲ್ಕೋ ಸೋಲರ್ ಸಂಸ್ಥೆಯ ವತಿಯಿಂದ ಉಚಿತವಾಗಿದ್ದು ಉಳಿದ 5 ಸಾವಿರ ಊರಿನ ಸಹೃದಯಿ ಬಂದುಗಳು ನೀಡಿ ಸಹಕರಿಸುವಂತೆ ಮಿತ್ತಡ್ಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ಸಂದ್ಯಾದೋಳ ಇವರಲ್ಲಿ ತಿಳಿಸಿದಾಗ ಇವರು...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯ ಇದರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಮೇ.08 ರಂದು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ನದಿ ಸ್ವಚ್ಚತಾ ಅಭಿಯಾನ ನಡೆಯಿತು.ಬೆಳಿಗ್ಗೆ 9:00 ಗಂಟೆಗೆ ಗಡಿಕಲ್ಲು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ವಠಾರದಲ್ಲಿ...
ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನ ವತಿಯಿಂದ ನಡೆಯುತ್ತಿರುವ ಸಂಸ್ಕಾರ ವಾಹಿನಿ ಶಿಬಿರದಸಮಾಪನಾ ಸಮಾರಂಭವು ದಿನಾಂಕ ೦೯-೦೫-೨೦೨೨ ರಂದು ಸುಳ್ಯದ ಹಳೆಗೇಟಿನ ವಿದ್ಯಾನಗರದ ಶ್ರೀ ಕೇಶವಕೃಪಾ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಸಭಾಧ್ಯಕ್ಷತೆಯನ್ನು ಶ್ರೀ ಗೋಪಾಲಕೃಷ್ಣ ಭಟ್ಶಿವನಿವಾಸ ವಹಿಸಿದ್ದರು. ಸಪಾಮನಾ ಮುಖ್ಯ ಭಾಷಣವನ್ನು ವೇ| ಮೂ| ಅಭಿರಾಮ ಭಟ್ ಸರಳಿಕುಂಜ ಮಾತನಾಡುತ್ತಾ ಹಣ ಸಂಪಾದನೆಯೊಂದೇ ಜೀವನದ...
ವಿವೇಕ ಜಾಗೃತ ಬಳಗ, ಹರಿಹರ ಪಲ್ಲತ್ತಡ್ಕ-ಸುಬ್ರಮಣ್ಯ ಇದರ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇವರ ಸಹಕಾರದೊಂದಿಗೆ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮೇ.08 ರಂದು ರಕ್ತದಾನ ಶಿಬಿರ ನಡೆಯಿತು.ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ ಅವರು ಶಿಬಿರದ ಉದ್ಘಾಟನೆಯನ್ನು ನೆರವೇರಿಸಿದರು.ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇದರ ವೈದ್ಯಾಧಿಕಾರಿ...
ದ.ಕ. ಸಂಪಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ 2022-27 ನೇ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸಂಪಾಜೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಹಾಗೂ ಉಪಾಧ್ಯಕ್ಷರಾಗಿ ಉದಯ ಕುಮಾರ್ ಕೆ ಸಿ ಅವಿರೋಧವಾಗಿ ಅಯ್ಕೆಯಾಗಿದ್ದಾರೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಇಂದು ಆಶ್ಲೇಷಾ ನಕ್ಷತ್ರವಾಗಿರುವುದರಿಂದ ಶ್ರೀ ದೇವರ ದರ್ಶನಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದಾರೆ. ಮುಂಜಾನೆಯಿಂದಲೇ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯಲು ಕಾಯುತ್ತಿದ್ದಾರೆ. ದೇವಳದ ಮುಂಭಾಗದಲ್ಲಿ ರಥಬೀದಿಯವರೆಗೆ 2 ಸಾಲಿನಲ್ಲಿ ಭಕ್ತರನ್ನು ಕಾಣಬಹುದು. ಎಂದಿನಂತೆ ಮುಂಜಾನೆ 6.00ರಿಂದ ಪೂಜೆಗಳು ಪ್ರಾರಂಭಗೊಂಡಿದ್ದು,ಮುಂಜಾನೆಯ ಪೂಜೆ ನಾಲ್ಕು ವಿಭಾಗಗಳಲ್ಲಿ ನಡೆಯಲಿದೆ. ವರದಿ: ಅನನ್ಯ ಹೆಚ್...
Loading posts...
All posts loaded
No more posts
