ಬೊಳುಬೈಲು : ನವಚೇತನ ಯುವಕ ಮಂಡಲದ ಪದಗ್ರಹಣ – ಅಧ್ಯಕ್ಷ ಶಶಿಪ್ರಸಾದ್ ಕಾಟೂರು, ಕಾರ್ಯದರ್ಶಿ ನಿತಿನ್ ಅರ್ಭಡ್ಕ

ನವ ಚೇತನ ಯುವಕ ಮಂಡಲ ಬೊಳುಬೈಲು ಇದರ ವಾರ್ಷಿಕ ಮಹಾಸಭೆ ಮತ್ತು 2022-23ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮೇ.3 ರಂದು ಯುವಕ ಮಂಡಲದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌರವಾಧ್ಯಕ್ಷ ಸುಧೀರ್ ನೆಕ್ರಾಜೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ದಯಾನಂದ ಕೇರ್ಪಳ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು....

ಹರಿಹರ ಪಲ್ಲತ್ತಡ್ಕ : ಮೇ.06 ರಿಂದ ಯೋಗ ಶಿಬಿರ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಮೇ.06 ರಿಂದ ಮೇ.25 ರವರೆಗೆ ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ಯೋಗ ಶಿಬಿರ ನಡೆಯಲಿದೆ.
Ad Widget

ಪೆರಾಜೆಯಲ್ಲಿ ಈಜು ತರಬೇತಿ ಶಿಬಿರ ಉದ್ಘಾಟನೆ

ಪೆರಾಜೆಯ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಂಘ ಇದರ ಆಶ್ರಯದಲ್ಲಿ ಪೆರಾಜೆಯ ಪಯಸ್ವಿನಿ ಸೇತುವೆ ಬಳಿ ಈಜು ತರಬೇತಿ ಶಿಬಿರದ ಉದ್ಘಾಟನೆ ನಡೆಯಿತು. ಶಿಬಿರವನ್ನು ಪೆರಾಜೆ ಶ್ರೀ ಶಾಸ್ತಾವು ದೇವಳದ ಮೊಕ್ತೇಸರ ವಿಶ್ವನಾಥ ಕುಂಬಳಚೇರಿ ಉದ್ವಾಟಿಸಿದರು. ಈ ಸಂದರ್ಭದಲ್ಲಿ ಸಂಘಟಕರಾದ ಪೆರಾಜೆ ಅಯ್ಯಪ್ಪ ದಿಪೋತ್ಸವ ಸಮಿತಿ ಕಾರ್ಯದರ್ಶಿ ಸುರೇಶ್ ಪೆರುಮುಂಡ, ನಿರ್ದೇಶಕ ರಾದ ಯುವಾನಂದ ಪೆರಂಗಜೆ...

ಸುಳ್ಯ : ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಮನುದೇವ ಪರಮಲೆ

ಸುಳ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಚೇತನ್ ನಾವೂರು ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಯುವ ಮೋರ್ಚಾ ಉಪಾಧ್ಯಕ್ಷ ರಾಗಿದ್ದ ಮನುದೇವ್ ಪರಮಲೆ ಅವರಿಗೆ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿದುಬಂದಿದೆ.

ಸುಳ್ಯ : ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಚೇತನ್ ನಾವೂರು ರಾಜಿನಾಮೆ

ಸುಳ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಚೇತನ್ ನಾವೂರು ತನ್ನ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಬಿಜೆಪಿ ಸುಳ್ಯ ಮಂಡಲದಲ್ಲಿ ಮೂರು ವರ್ಷಗಳ ಅವಧಿಗೆ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಬೆಳಂದೂರು ಬಿಜೆಪಿ ಮಹಾ ಶಕ್ತಿ ಕೇಂದ್ರದ ವ್ಯಾಪ್ತಿಯಿಂದ ಚೇತನ್ ನಾವೂರು ಅವರನ್ನು ಆಯ್ಕೆ ಮಾಡಲಾಗಿತ್ತು. ಸ್ಥಳೀಯ ಬಿಜೆಪಿ ನಾಯಕರ ವರ್ತನೆಯಿಂದ ಮನನೊಂದು ಪಕ್ಷದ...

ಕೊಲ್ಲಮೊಗ್ರು : ಶಿರಾಡಿ ಹಾಗೂ ಉಪ ದೈವಗಳ ನೇಮೋತ್ಸವ

ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲುವಿನಲ್ಲಿ ಮೇ.01 ಮತ್ತು 02 ರಂದು ಶಿರಾಡಿ ಹಾಗೂ ಉಪ ದೈವಗಳ ನೇಮ ನಡಾವಳಿ ನಡೆಯಿತು.ಮೇ.01 ರಂದು ಶ್ರೀ ದೈವದ ಭಂಡಾರ ಬಂದು, ಮೇ.02 ರಂದು ಶಿರಾಡಿ ಹಾಗೂ ಉಪ ದೈವಗಳ ನೇಮೋತ್ಸವ ನಡೆಯಿತು. ಹಾಗೂ ಮದ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ವರದಿ :- ಉಲ್ಲಾಸ್ ಕಜ್ಜೋಡಿ

ನಾಗಪಟ್ಟಣ ಸೇತುವೆ ದುರಸ್ತಿ ಕಾರ್ಯ ಆರಂಭ – ಪಂಚಾಯತ್ ಸದಸ್ಯರ ಮನವಿಗೆ ಸ್ಪಂದಿಸಿದ ಇಲಾಖೆ

ಆಲೆಟ್ಟಿ ಗ್ರಾಮದ ನಾಗಪಟ್ಟಣ ಸೇತುವೆ ಕಾಮಗಾರಿ ತುರ್ತಾಗಿ ದುರಸ್ತಿ ಪಡಿಸುವಂತೆ ಆಗ್ರಹಿಸಿ ಪಂಚಾಯತ್ ಸದಸ್ಯ ಧರ್ಮಪಾಲ ಕೊಯಿಂಗಾಜೆ ಯವರ ನೇತೃತ್ವದಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರರಿಗೆ ಕೆಲ ದಿನಗಳ ಹಿಂದೆ ಮನವಿ ಸಲ್ಲಿಸಿದ್ದರು. ಇಲಾಖೆಯ ಅಭಿಯಂತರರಾದ ಲೋಕೇಶ್ ಮತ್ತು ಪರಮೇಶ್ವರ ರವರು ಎ.29 ರಂದು ಸ್ಥಳಕ್ಕೆ ಭೇಟಿ ನೀಡಿ ಸೇತುವೆಯ ಕಾಮಗಾರಿ ಕುರಿತು ಪರಿಶೀಲನೆ ನಡೆಸಿ...

ಕಳಂಜ ಗ್ರಾಮ ಪಂಚಾಯತ್ ಪಂಚಮಿ ಸಂಜೀವಿನಿ ಒಕ್ಕೂಟದಿಂದ ತೋಡಿನ ಹೂಳೆತ್ತುವ ಕಾಯಕ

ಕಳಂಜ ಗ್ರಾಮ ಪಂಚಾಯತ್ ನ ಪಂಚಮಿ ಸಂಜೀವಿನಿ ಒಕ್ಕೂಟ ಕಳಂಜ ಇದರ ಸದಸ್ಯರು ಒಟ್ಟಾಗಿ "ಕಾಯಕ ಶಕ್ತಿ" ಎಂಬ ತಂಡದೊಂದಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕಳಂಜ ಗ್ರಾಮದ ತಂಟೆಪ್ಪಾಡಿ -ಕಳಂಜ ತೋಡಿನ ಹೂಳೆತ್ತುವ ಕೆಲಸವನ್ನು ಲೋಕೇಶ್ ತಂಟೆಪ್ಪಾಡಿಯವರ ಮನೆಯ ಸಮೀಪದಿಂದ ಮೇ. 02ರಂದು ಆರಂಭಿಸಲಾಯಿತು. ತಂಡದಲ್ಲಿ ಗ್ರಾಮ ಪಂಚಾಯಿತಿ ಸಂಜೀವಿನಿ...

ಎಂ.ಎನ್.ಶ್ರೀಕೃಷ್ಣ ಸೋಮಯಾಗಿ ಅವರಿಗೆ ಆರ್ಯಭಟ ಪ್ರಶಸ್ತಿ

ಸುಳ್ಯದಲ್ಲಿ ಉದ್ಯಮದ ಜತೆಗೆ ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಎಂ.ಎನ್.ಶ್ರೀಕೃಷ್ಣ ಸೋಮಯಾಗಿ ಅವರಿಗೆ ಪ್ರತಿಷ್ಠಿತ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇವರು ಸುಳ್ಯದಲ್ಲಿ ಸ್ವಾತಿ ಲಾಡ್ಜ್ ಹಾಗೂ ಸ್ವಾತಿ ನರ್ಸರಿ ಪ್ರಾರಂಭಿಸಿ ಯಶಸ್ಸು ಗಳಿಸಿದ ಇವರು ಕಾಂತಮಂಗಲದ ಶ್ರೀ ರಾಘವೇಂದ್ರ ಮಠದ ಆಡಳಿತ ಸಮಿತಿ ಅಧ್ಯಕ್ಷ ಹಾಗು ಬೃಂದಾವನ ಸೇವಾ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷ ಸೇವೆ ಸಲ್ಲಿಸುತ್ತಿದ್ದಾರೆ....

ಕುಂಬ್ರಚೋಡು ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

ಕುಂಬ್ರಚೋಡು ಮೋಹಿಯುದ್ದಿನ್ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ ಇಂದು ನಡೆಯಿತು. ಮಸೀದಿಯ ಖತೀಬರಾದ ಅಶ್ರಫ್ ಮುಸ್ಲಿಯಾರ್ ರವರು ಈದ್ ನಮಾಜ್ ಗೆ ನೇತೃತ್ವ ನೀಡಿ ಸರ್ವರಲ್ಲಿಯೂ ಪ್ರೀತಿ ಗೌರವ ವಿಶ್ವಾಸದೊಂದಿಗೆ ಬದುಕು ಎಂಬ ಸಂದೇಶದೊಂದಿಗೆ ನಾಡಿನ ಜನತೆಗೆ ಈದ್ ಹಬ್ಬದ ಶುಭಾಶಯ ಹಾಗೂ ದುವಾ ನೆರವೇರಿಸಿದರು. ಈ ಸಂದರ್ಭದಲ್ಲಿ ಅಬ್ದುಲ್ ಸಲಾಂ ಉಸ್ತಾದ್ ಜಮಾಯತ್...
Loading posts...

All posts loaded

No more posts

error: Content is protected !!