ಮಂಗಳೂರು ಕ್ಯಾಂಪ್ಕೋ ಸಂಸ್ಥೆಯಿಂದ ಆರ್ಥಿಕ ನೆರವಿನ ಚೆಕ್ ಹಸ್ತಾಂತರ

ಕ್ಯಾಂಪ್ಕೋ ಸಂಸ್ಥೆ , ಮಂಗಳೂರು ಇದರ ವತಿಯಿಂದ "ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ" ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಮೇ.02ರಂದು ಅಲಂಕಾರು ಕ್ಯಾಂಪ್ಕೋ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೋ ಸದಸ್ಯರಾದ ಪುರುಷೋತ್ತಮ ಗೌಡ ಬಲ್ಯ ಇವರ ಅಂಜಿಯೋಪ್ಲಾಸ್ಟಿ ಚಿಕಿತ್ಸೆಗಾಗಿ ಕ್ಯಾಂಪ್ಕೋ ವತಿಯಿಂದ ನೀಡಲಾದ ರೂ. 50000/- ಚೆಕ್ ನ್ನು ಸಂಸ್ಥೆಯ ನಿರ್ದೇಶಕ ಕೃಷ್ಣ...

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ಸೀತಾರಾಮ್ ಕಾನಾವು ಅವರಿಗೆ ಬೀಳ್ಕೊಡುಗೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ಸೀತಾರಾಮ್ ಕಾನಾವು ಅವರಿಗೆ ದೊಡ್ಡತೋಟಕ್ಕೆ ವರ್ಗಾವಣೆ ಆಗಿದ್ದು, ಮೇ.02 ರಂದು ಬೀಳ್ಕೊಡುಗೆ ಸಮಾರಂಭ ನಡೆಯಿತು.ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ನಾಗೇಶ್, ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ವಿಮಲಾ ರಂಗಯ್ಯ, ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ...
Ad Widget

ಹರಿಹರ ಪಲ್ಲತ್ತಡ್ಕ :- ಪ್ರೌಢಶಾಲೆಗೆ ಮಕ್ಕಳನ್ನು ಸೇರಿಸುವಂತೆ ಪೋಷಕರ ಮನೆಗೆ ಭೇಟಿ ಕಾರ್ಯಕ್ರಮ

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಹಾಗೂ ಹರಿಹರ ಪಲ್ಲತ್ತಡ್ಕ ಸ.ಪ.ಪೂ ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಎ.29 ರಂದು ಹರಿಹರ ಪಲ್ಲತ್ತಡ್ಕ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡುವ ಕಾರ್ಯಕ್ರಮ ನಡೆಯಿತು.ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಪ್ರೌಢಶಾಲಾ ಶಿಕ್ಷಣವನ್ನು ಹರಿಹರ ಪಲ್ಲತ್ತಡ್ಕ ಪ್ರೌಢಶಾಲೆಯಲ್ಲಿ ಕೊಡಿಸುವಂತೆ ವಿನಂತಿಸಲಾಗಿದ್ದು, ಉತ್ತಮ...

ಹರಿಹರ ಪಲ್ಲತ್ತಡ್ಕ : ಮೇ.08 ರಂದು ರಕ್ತದಾನ ಶಿಬಿರ

ವಿವೇಕ ಜಾಗೃತ ಬಳಗ, ಹರಿಹರ ಪಲ್ಲತ್ತಡ್ಕ-ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇವರ ಸಹಕಾರದೊಂದಿಗೆ ಮೇ.08 ರಂದು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಮದ್ಯಾಹ್ನ 1:00 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಲಿದೆ. ವರದಿ :- ಉಲ್ಲಾಸ್ ಕಜ್ಜೋಡಿ

ಸುಬ್ರಹ್ಮಣ್ಯ: ಪರ್ವತಮುಖಿ ಬಸ್ ನಿಲ್ದಾಣದ ಬಳಿ ಮರದ ಕೊಂಬೆ ಮುರಿದು ವಿದ್ಯುತ್ ವ್ಯತ್ಯಯ

ಸುಬ್ರಹ್ಮಣ್ಯದ ಪರ್ವತಮುಖಿ ಬಸ್ ನಿಲ್ದಾಣದ ಬಳಿ ಮರವೊಂದರ ಕೊಂಬೆ ಮುರಿದು ವಿದ್ಯುತ್ ತಂತಿಯ ಮೇಲೆ ಬಿದ್ದಿದ್ದರಿಂದ ಪರ್ವತಮುಖಿ ಸುತ್ತಮುತ್ತ ವಿದ್ಯುತ್ ಸಂಪರ್ಕ ಕಡಿತವಾಗಿದೆ. ತಕ್ಷಣವೇ ಸುಬ್ರಹ್ಮಣ್ಯ ವಿದ್ಯುತ್ ಕೇಂದ್ರದವರು ಬಂದು ದುರಸ್ತಿ ಕಾರ್ಯವನ್ನು ಪ್ರಾರಂಭಿಸಿದ್ದು, ವಿದ್ಯುತ್ ಸಂಪರ್ಕವು ಕೆಲವು ಗಂಟೆಗಳ ಕಾಲ ಇರುವುದಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ. ವಿದ್ಯುತ್ ಕಂಬವು ನೆಲಕ್ಕೆ ಉರುಳಿ ಬಿದ್ದಿದ್ದು,ಯಾವುದೇ ಅಪಾಯ...

ಆಲೆಟ್ಟಿ ಸದಾಶಿವ ದೇವಳದಲ್ಲಿ ಯಕ್ಷಗಾನ ಸೇವೆಯಾಟ : ಶ್ರೀ ದೇವಿ ಮಹಾತ್ಮೆಯನ್ನು ಕಣ್ತುಂಬಿಕೊಂಡ ಜನ

ಆಲೆಟ್ಟಿ ಗ್ರಾಮದ ಬಾಳೆಬಲ್ಪು ಭವಾನಿಶಂಕರ ರವರ ಸೇವೆಯಾಟ ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದ ವಠಾರದಲ್ಲಿ ಪ್ರಥಮ ಸೇವೆಯಾಟವಾಗಿ ಎ.27.ರಂದು ನಡೆಯಿತು ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶವತಾರ ಯಕ್ಷಗಾನ ಮಂಡಳಿಯ ಕಲಾವಿದರ ಕೂಡುವಿಕೆಯಿಂದ ಶ್ರೀ ದೇವಿ ಮಹಾತ್ಮೆ ಎಂಬ ಪೌರಾಣಿಕ ಯಕ್ಷಗಾನ ಬಯಲಾಟ ಪ್ರದರ್ಶನವನ್ನು ನಡೆಸಲಾಯಿತು. ರಾತ್ರಿ ಗಂಟೆ 8.30 ರಿಂದ ಚೌಕಿ ಪೂಜೆಯು ನಡೆದು ಪ್ರಸಾದ...

ಸಂಪಾಜೆ : ಮೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ರಾಮಚಂದ್ರ ಭೇಟಿ

ಮೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ರಾಮಚಂದ್ರ ರವರು ಸಂಪಾಜೆ ಗ್ರಾಮದ ರಾಜರಾಂಪುರ ವಿದ್ಯುತ್ ಸಬ್ ಸ್ಟೇಷನ್ ಜಾಗ ಪರಿಶೀಲನೆ ಮಾಡಿ ಶೀಘ್ರದಲ್ಲಿ ಸ್ಥಳಕ್ಕೆ ಬೇಲಿ ಹಾಕಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಗ್ರಾಮದ ಹಳೆಯದಾದ ತಂತಿಗಳ ಬದಲಾವಣೆ, ವಿದ್ಯುತ್ ಲೈನ್ ಗೆ ತಾಗಿರುವ ಮರದ ಕೊಂಬೆ ತೆರವುಗೊಳಿಸಿ, ಗ್ರಾಮಕ್ಕೆ ತಡೆ ರಹಿತ ವಿದ್ಯುತ್ ವ್ಯವಸ್ಥೆಗೆ ಟ್ರಾನ್ಸ್ ಫಾರ್ಮರ್...

ಏನೆಕಲ್‌ನಲ್ಲಿ ಮೇ.1ರಿಂದ ರಾಜ್ಯಮಟ್ಟದ ಬೇಸಿಗೆ ಶಿಬಿರ

ಏನೆಕಲ್ಲಿನಲ್ಲಿ ‘ಕಲಾಮಾಯೆ’ ವತಿಯಿಂದ ರಾಜ್ಯಮಟ್ಟದ ಮಕ್ಕಳ ಬೇಸಿಗೆ ಶಿಬಿರ "ಪ್ರೀತಿಯಿಂದ"ಮೇ.1ರಿಂದ 7ರವರೆಗೆ ಏನೆಕಲ್‌ನ ಬಾಲಾಡಿ ಆದಿಶಕ್ತಿ ಭಜನಾ ಮಂದಿರದಲ್ಲಿ ನಡೆಯಲಿದೆ. ಕಲಾವಿದ, ಕಲಾ ಸಂಘಟಕ, ಅರೆಭಾಷೆ ಚಲನಚಿತ್ರ "ಕೇಸ್ ಪುಸ್ಕ" ಖ್ಯಾತಿಯ ನಿರ್ದೇಶಕ ಸುಧೀರ್ ಏನೆಕಲ್ ನಿರ್ದೇಶನದಲ್ಲಿ ನಡೆಯುವ ಶಿಬಿರದಲ್ಲಿ ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ.ಸುಬ್ರಮಣ್ಯ, ಏನೆಕಲ್,ಬಳ್ಪಸೇರಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಒಳಗೊಂಡಂತೆ ಸುಳ್ಯ ಹಾಗು...

ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಡಬ ಶಾಖೆಯಲ್ಲಿ ಗಣಹೋಮ ಹಾಗೂ ಲಕ್ಷ್ಮೀಪೂಜೆ

ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಡಬ ಶಾಖೆಯು ಇಂದು ಹತ್ತನೆ ವರ್ಷಕ್ಕೆ ಪಾದಾರ್ಪಣೆಗೊಂಡಿದ್ದು ಈ ಪ್ರಯುಕ್ತ ಶಾಖೆಯಲ್ಲಿ ಗಣಹೋಮ ಹಾಗೂ ಲಕ್ಷ್ಮೀಪೂಜೆ ನಡೆಯಿತು. ಈ ಶುಭ ಸಂದರ್ಭದಲ್ಲಿ ಸಹಕರಿಸಿದ ಆಡಳಿತ ಮಂಡಳಿಗೆ, ಸಿಬ್ಬಂದಿ ವರ್ಗದವರಿಗೆ ಹಾಗೂ ಗ್ರಾಹಕರಿಗೆ ಸಂಸ್ಥೆಯ ವತಿಯಿಂದ ಕೃತಜ್ಞತೆಯ ಸಲ್ಲಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಪಿ ಸಿ ಜಯರಾಮ್, ನಿರ್ದೇಶಕರಾದ ಶೈಲೇಶ್...

ನಾಗಪಟ್ಟಣ ಸೇತುವೆ ದುರಸ್ತಿಗೆ ಮನವಿ – ತಾತ್ಕಾಲಿಕ ದುರಸ್ತಿ ಪಡಿಸುವ ಭರವಸೆ ನೀಡಿದ ಇಂಜಿನಿಯರ್

ಆಲೆಟ್ಟಿ ಗ್ರಾಮದ ನಾಗಪಟ್ಟಣ ಸೇತುವೆ ಕಾಮಗಾರಿ ತುರ್ತಾಗಿ ದುರಸ್ತಿ ಪಡಿಸುವಂತೆ ಆಗ್ರಹಿಸಿ ಪಂಚಾಯತ್ ಸದಸ್ಯ ಧರ್ಮಪಾಲ ಕೊಯಿಂಗಾಜೆ ಯವರ ನೇತೃತ್ವದಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರರಿಗೆ ಮನವಿ ಸಲ್ಲಿಸಿದರು. ಸ್ಪಂದಿಸಿದ ಇಲಾಖೆಯ ಅಭಿಯಂತರ ರಾದ ಲೋಕೇಶ್ ಮತ್ತು ಪರಮೇಶ್ವರ ರವರು ಎ.29 ರಂದು ಸ್ಥಳಕ್ಕೆ ಭೇಟಿ ನೀಡಿ ಸೇತುವೆಯ ಕಾಮಗಾರಿ ಕುರಿತು ಪರಿಶೀಲನೆ ನಡೆಸಿ ತಾತ್ಕಾಲಿಕವಾಗಿ...
Loading posts...

All posts loaded

No more posts

error: Content is protected !!