ರಂಗಮನೆ ಚಿಣ್ಣರಮೇಳಕ್ಕೆ ಸಂಭ್ರಮದ ತೆರೆ -ವೇದಿಕೆಯೇರಿದ 300 ಮಕ್ಕಳಿಂದ ಸಾಂಸ್ಕೃತಿಕ ವೈಭವ

    ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ನಡೆದ ಚಿಣ್ಣರಮೇಳ 2022  ರಾಜ್ಯಮಟ್ಟದ ಮಕ್ಕಳ ಬೇಸಿಗೆ ಶಿಬಿರವು ಮಕ್ಕಳ ಸಾಂಸ್ಕೃತಿಕ ಸಂಭ್ರಮದೊಂದಿಗೆ ತೆರೆ ಕಂಡಿತು.   ಸಮಾರೋಪ ಭಾಷಣ ಮಾಡಿದ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಬಿ.ವಿ.ಸೂರ್ಯನಾರಾಯಣ ಇವರು ಮಾತಾನಾಡಿ" ಮಕ್ಕಳ ಶೈಕ್ಷಣಿಕ, ಮಾನಸಿಕ ಮತ್ತು ಬೌದ್ಧಿಕ  ಬೆಳವಣಿಗೆಯಲ್ಲಿ ಇಂತಹ ಬೇಸಿಗೆ ಶಿಬಿರಗಳು ಬಹುಮುಖ್ಯ...

ಕರೆಂಟ್ ಇಲ್ಲ ಎಂದು ಇಂಧನ ಸಚಿವರಿಗೆ ಬೈದ ಪ್ರಕರಣದ ತೀರ್ಪು ಪ್ರಕಟ : ಡಿಕೆಶಿ ಗೆ ಫೋನ್ ಮಾಡಿದ್ದ ಬೆಳ್ಳಾರೆಯ ಗಿರಿಧರ ರೈಗೆ ಜೈಲು ಶಿಕ್ಷೆ

ವಿದ್ಯುತ್ ಸಚಿವರಾಗಿದ್ದ ಡಿ. ಕೆ. ಶಿವಕುಮಾರ್ ಅವರಿಗೆ ಫೋನಾಯಿಸಿ ಬೈದು ನಿಂದಿಸಿದ್ದಾರೆಂಬ ಕಾರಣಕ್ಕಾಗಿ ಕೇಸಿಗೊಳಗಾಗಿದ್ದ ಬೆಳ್ಳಾರೆಯ ಸಾಯಿ ಗಿರಿಧರ್ ರೈಯವರಿಗೆ ಜೈಲು ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯ ತೀರ್ಪು ನೀಡಿದೆ. ಸುಳ್ಯದ ಅನಿಯಮಿತ ವಿದ್ಯುತ್ ಕಡಿತದ ಪರಿಸ್ಥಿತಿಯಿಂದ ರೋಷಗೊಂಡಿದ್ದ ಬೆಳ್ಳಾರೆಯ ವಿದ್ಯುತ್ ಬಳಕೆದಾರ ಸಾಯಿ ಗಿರಿಧರ ರೈಯವರು 2016 ಫೆಬ್ರವರಿ 28 ರಂದು ಆಗಿನ ವಿದ್ಯುತ್...
Ad Widget

ಏ.24: ನಿನಾದ ತಂಟೆಪ್ಪಾಡಿಯಲ್ಲಿ “ಸಾಧನೆಯ ಸಂಭ್ರಮ”, ಸಾಧನೆಯ ನಾಟಕ “ಮುಖ್ಯಮಂತ್ರಿ”

ಕಳಂಜ ಗ್ರಾಮದ ನಿನಾದ ಸಾಂಸ್ಕೃತಿಕ ಕೇಂದ್ರದಲ್ಲಿ "ಸಾಧನೆಯ ಸಂಭ್ರಮ", ಸಾಧಕರೊಂದಿಗೆ ಸಂವಾದ, ಸಾಧಕರಿಗೆ ಸನ್ಮಾನ ಹಾಗೂ "ಮುಖ್ಯಮಂತ್ರಿ" ನಾಟಕ ಪ್ರದರ್ಶನ ಏ.24 ಆದಿತ್ಯವಾರದಂದು ಸಂಜೆ ಗಂಟೆ 5.00ಕ್ಕೆ ಜರುಗಲಿದೆ. ಸಾಧಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ನಿವೃತ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಶ್ರೀ ಭಾಸ್ಕರ್ ರಾವ್ ಹಾಗೂ ಜನಪ್ರಿಯ ಚಲನಚಿತ್ರ, ಧಾರಾವಾಹಿ ಮತ್ತು ರಂಗಭೂಮಿ ನಟರಾದ ಶ್ರೀ ಮುಖ್ಯಮಂತ್ರಿ...

ಎ.26 : ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ ಉತ್ಸವ

ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಎ. 26ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ ಉತ್ಸವ ಜರಗಲಿರುವುದು. ಏ.26ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯ ವರಣ, ಸ್ವಸ್ತಿ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಪಂಚವಿಂಶತಿ, ಕಲಶಪೂಜೆ, ಮಧ್ಯಾಹ್ನ ಶ್ರೀದೇವರಿಗೆ ಸಾನಿಧ್ಯ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ....

ಶ್ರೀ.ಕ್ಷೇ.ಧ.ಗ್ರಾ. ಯೋಜನೆಯ ಗುತ್ತಿಗಾರು ವಲಯಕ್ಕೆ ಪ್ರಥಮ ಸ್ಥಾನ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಸುಳ್ಯ ತಾಲ್ಲೂಕು ಇದರ ವತಿಯಿಂದ ಏ. 15 ರಂದು ಯೋಜನಾ ಕಚೇರಿಯಲ್ಲಿ 2021/22 ಸಾಲಿನ ತಾಲೂಕು ಮಟ್ಟದ ಪ್ರತಿನಿಧಿಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು.‌ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ತಾಲ್ಲೂಕಿನ ಯೋಜನಾಧಿಕಾರಿಗಳಾದ ಚೆನ್ನಕೇಶವ ರವರು ಪ್ರಗತಿ ಪರಿಶೀಲನೆ ಸಭೆ ನಡೆಸಿ...

ಹರಿಹರ ಪಲ್ಲತ್ತಡ್ಕ : ನೂತನ ಒಕ್ಕೂಟ ರಚನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹರಿಹರ ಪಲ್ಲತ್ತಡ್ಕ ಒಕ್ಕೂಟದ 2022-23ನೇ ಸಾಲಿನ ಮುಂದಿನ 3 ವರ್ಷಗಳ ಅವಧಿಗೆ ನೂತನ ಒಕ್ಕೂಟವನ್ನು ಎ.10 ರಂದು ಬಾಲಸುಬ್ರಹ್ಮಣ್ಯ ಎಲ್ಲಪಡ್ಕ ಇವರ ಅಧ್ಯಕ್ಷತೆಯಲ್ಲಿ ರಚನೆ ಮಾಡಲಾಯಿತು.ಒಕ್ಕೂಟದ ನೂತನ ಅಧ್ಯಕ್ಷರಾಗಿ ಹರ್ಷ ಗೌಡ ಪಾಲ್ತಾಡು, ಉಪಾಧ್ಯಕ್ಷರಾಗಿ ಮೋಹನ್ ದಾಸ್ ಬಟ್ಟೋಡಿ, ಕಾರ್ಯದರ್ಶಿಯಾಗಿ ಗಿರೀಶ್ ಹೆರಕಜೆ, ಜೊತೆ ಕಾರ್ಯದರ್ಶಿಯಾಗಿ ಗೀತಾ ಹರಿಹರ,...

ಪಂಜ: ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ಕಾರ್ಮಿಕ ಶಿಬಿರ ಕಾರ್ಯಕ್ರಮ

ಪಂಜದ ಸೌದಾಮಿನಿ ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ್ ರ 131ನೇ ಜನ್ಮದಿನಾಚರಣೆ ಪ್ರಯುಕ್ತ ಪಂಜ ಜೈ ಭೀಮ್ ಕಾರ್ಮಿಕ ಸಮಿತಿಯ ಆಯೋಜನೆಯಲ್ಲಿ ಜನ್ಮದಿನಾಚರಣೆ ಮತ್ತು ಕಾರ್ಮಿಕ ಶಿಬಿರವನ್ನು ಏ.14ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಸುರೇಶ್ ಅಡ್ಡತೋಡು ವಹಿಸಿಕೊಂಡಿದ್ದು, ಕಾರ್ಯಕ್ರಮವನ್ನು ಶ್ರೀಪುರುಷೋತ್ತಮ ದಂಬೇಕೋಡಿ, ನ್ಯಾಯವಾದಿ, ನೋಟರಿ ಪಂಜ ಉದ್ಘಾಟಿಸಿ ಕಾನೂನು ಮಾಹಿತಿಯೊಂದಿಗೆ...

ಅಡ್ಪಂಗಾಯ: ಏಷ್ಯಾನೆಟ್ ಸುವರ್ಣ ನ್ಯೂಸ್ ಕಾರು ಅಪಘಾತ

ಅಜ್ಜಾವರ ಗ್ರಾಮದ ಅಡ್ಪಂಗಾಯ ಬಳಿ ಏಷ್ಯಾನೆಟ್ ಸುವರ್ಣ ನ್ಯೂಸ್ ಮಲಯಾಳಂ ಚಾನೆಲ್ ಗೆ ಸೇರಿದ ಕಾರು ತಿರುವೊಂದರಲ್ಲಿ ಅಪಘಾತವಾದ ಘಟನೆ ಏ.15(ಇಂದು) ಬೆಳ್ಳಂಬೆಳಗ್ಗೆ 2.00 ಗಂಟೆಗೆ ಸಂಭವಿಸಿದೆ. ಇಲ್ಲಿನ ಬಿ.ಎಸ್.ಎನ್.ಎಲ್ ಟವರ್ ಸಮೀಪ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರು ಜಖಂಗೊಡಿದ್ದು ಅದೃಷ್ಟವಶಾತ್ ಕಾರಿನೊಳಗಿದ್ದ ಮಾಧ್ಯಮ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಗುತ್ತಿಗಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೆಟ್ಟಿನಡ್ಕ ಒಕ್ಕೂಟದ ಉದ್ಘಾಟನೆ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುತ್ತಿಗಾರು ವಲಯದ ಮೆಟ್ಟಿನಡ್ಕ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆಯಿತು. ಒಕ್ಕೂಟದ ನೂತನ ಅಧ್ಯಕ್ಷರಾಗಿ ವಿಜಯ ದೋಣಿಮನೆ ,ಉಪಾಧ್ಯಕ್ಷರಾಗಿ ರವಿ ಗುಂಡಡ್ಕ ಕಾರ್ಯದರ್ಶಿಯಾಗಿ ರತಿ ಶಶಿಧರ, ಜೊತೆ ಕಾರ್ಯದರ್ಶಿಯಾಗಿ ಯತೀಂದ್ರ ಸಾಲ್ತಾಡಿ, ಕೋಶಾಧಿಕಾರಿಯಾಗಿ ಸಾಜಿದ ತಸ್ಲಿಂ ಆಯ್ಕೆಯಾದರು. ಈ ಸಂದರ್ಭ ವಲಯ ಮೇಲ್ವಿಚಾರಕರಾದ ಮುರಳೀಧರ ,ಒಕ್ಕೂಟದ ಅಧ್ಯಕ್ಷರಾದ...

ಗುತ್ತಿಗಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಳಲಂಬೆ ಒಕ್ಕೂಟದ ಉದ್ಘಾಟನೆ

ಎ.14: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುತ್ತಿಗಾರು ವಲಯದ ವಳಲಂಬೆ ಒಕ್ಕೂಟದ ನೂತನ ಪುಣ್ಯಕೋಟಿ ಸ್ವಸಹಾಯ ಸಂಘವನ್ನು ಒಕ್ಕೂಟದ ಅಧ್ಯಕ್ಷೆ ಕಲಾವತಿ ಮೊಟ್ಟೆಮನೆ ಉದ್ಘಾಟಿಸಿದರು. ಈ ಸಂದರ್ಭ ವಲಯ ಮೇಲ್ವಿಚಾರಕರಾದ ಮುರಳೀಧರರವರು ಸಂಘದ ನಿಯಮಾವಳಿಗಳು ಹಾಗೂ ದಾಖಲಾತಿಯ ಬಗ್ಗೆ ಮಾಹಿತಿ ನೀಡಿದರು. ಸಂಘದ ಪ್ರಬಂಧಕರಾಗಿ ಲತಾ ಕುಮಾರಿ, ಕಾರ್ಯದರ್ಶಿಯಾಗಿ ಕುಮಾರಿ ಸಂಗೀತಾ ಹಾಗೂ ಕೋಶಾಧಿಕಾರಿಯಾಗಿ ಭಾಗೀರಥಿ...
Loading posts...

All posts loaded

No more posts

error: Content is protected !!