ಸುಟ್ಟತ್ ಮಲೆ : ಅಕ್ರಮ ಹರಳುಕಲ್ಲು ಗಣಿಕಾರಿಕೆ ಸ್ಥಳಕ್ಕೆ ಪಶ್ಚಿಮ ಘಟ್ಟಗಳ ಕಾರ್ಯ ಪಡೆ ಅಧ್ಯಕ್ಷರ ಭೇಟಿ

ಸುಬ್ರಹ್ಮಣ್ಯ ಸಮೀಪದ ಸುಟ್ಟತ್ ಮಲೆ ಮೀಸಲು ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಹರಳು ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಪಶ್ಚಿಮ ಘಟ್ಟಗಳ ಕಾರ್ಯ ಪಡೆ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಭೇಟಿ ನೀಡಿ ಪರಿಶೀಲಿಸಿದರು. ಸುಟ್ಟತ್ ಮಲೆ ಮತ್ತಿತರ ಕೆಲ ಕಡೆ ಹರಳುಕಲ್ಲು ಅಗೆತಮತ್ತು ಮಾರಾಟ ದಂಧೆ ಅವ್ಯಾಹತವಾಗಿ ನಡೆಯುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದ ಹಿನ್ನಲೆಯಲ್ಲಿ...

ಬೆಳ್ಳಾರೆ: ಅಂಬೇಡ್ಕರ್ ರಕ್ಷಣಾ ವೇದಿಕೆಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೂತನ ಎಸೈ ಯವರಿಗೆ ಸ್ವಾಗತ

ಬೆಳ್ಳಾರೆ ಪೋಲಿಸ್ ಠಾಣೆಗೆ ನೂತನವಾಗಿ ಬಂದಿರುವಂತ ಉಪನಿರೀಕ್ಷಕರಾದ ರುಕ್ಮಯ್ಯ ನಾಯ್ಕ ಇವರನ್ನು ಅಂಬೇಡ್ಕರ್ ರಕ್ಷಣಾ ವೇದಿಕೆಯ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಜಿಲ್ಲಾಧ್ಯಕ್ಷರಾದ ಪಿ.ಸುಂದರ ಪಾಟಾಜೆ ಮತ್ತು ಜಿಲ್ಲಾ ಸಂಚಾಲಕರಾದ ಪರಮೇಶ್ವರ ಕೆಮ್ಮಿಂಜೆ ಇವರು ಏ.12ನೇ ಮಂಗಳವಾರದಂದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾದ ರುಕ್ಮಯ್ಯ ನಾಯ್ಕ ಎಂಬವರಿಗೆ ಹೂಗುಚ್ಚ ಕೊಟ್ಟು ಸ್ವಾಗತಿಸಿದರು.
Ad Widget

ಮುಕ್ಕೂರು : ಉಚಿತ ಬೇಸಗೆ ಶಿಬಿರ – ಏಳು ದಿನಗಳ ಚಿಣ್ಣರ ಸಂಭ್ರಮಕ್ಕೆ ಚಾಲನೆ

ಮುಕ್ಕೂರು : ಮಕ್ಕಳ ಪ್ರತಿಭೆಯನ್ನು ಅರಳಿಸಿ ಇನ್ನಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬೇಸಗೆ ಶಿಬಿರ ಉತ್ತಮ ವೇದಿಕೆ ಎಂದು ಈ ಬಾರಿಯ ದೆಹಲಿ ಗಣರಾಜೋತ್ಸವ ಪರೇಡ್‍ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಬಹುಮುಖ ಪ್ರತಿಭೆ ಹೇಮಸ್ವಾತಿ ಕುರಿಯಾಜೆ ಹೇಳಿದರು. ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಮುಕ್ಕೂರು ಶಾಲಾ ಹಿತ ಚಿಂತನಾ ಸಮಿತಿ...

ಪುತ್ರಿಕ್ಕಾರ್ಸ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಆಹಾರ ಕಿಟ್ ವಿತರಣೆ

ಗೂನಡ್ಕ ಪುತ್ರಿಕಾರ್ಸ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಸುಮಾರು 11 ಬಡ ಅನಾಥ ಕುಟುಂಬಗಳಿಗೆ ರಂಝಾನ್ ಆಹಾರ ಕಿಟ್ ಎ. 10ರಂದು ಪೇರಡ್ಕದಲ್ಲಿ ವಿತರಿಸಲಾಯಿತುಟ್ರಸ್ಟ್ ಉಪಾದ್ಯಕ್ಷರಾದ ಬಶೀರ್ ಒಮಾನ್, ಪ್ರಧಾನ ಕಾರ್ಯದರ್ಶಿ ಕಾದರ್ ಮೊಟ್ಟೆಂಗಾರ್,ಮಾಜಿ ಅಧ್ಯಕ್ಷ ರಾದ ಹಕೀಂ ದರ್ಕಾಸ್, ಕೊಶಾದಿಕಾರಿ ಸಿಯಾದ್ ಜಯನಗರ, ಕಾರ್ಯದರ್ಶಿ ನಸೀಮ ಪೇರಡ್ಕ,ಸದಸ್ಯರಾದ ಹನೀಫ್ ಮೊಟ್ಟೆಂಗಾರ್ಆಯಿಶ ಜಯನಗರ ಮುಂತಾದವರು ಈ ಸಂದರ್ಭದಲ್ಲಿ...

ಎಣ್ಮೂರು ಸರಕಾರಿ ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸರ್ಕಾರಿ ಪ್ರೌಢಶಾಲೆ ಎಣ್ಮೂರು ಇದರ ವತಿಯಿಂದ ನಡೆಯುವ 4 ದಿನಗಳ ಬೇಸಿಗೆ ಶಿಬಿರವು ಇಂದು ಉದ್ಘಾಟನೆಗೊಂಡಿತು. ಈ ದಿನ ಪೂ.9.30ಕ್ಕೆ ಸ್ಕೌಟ್ಸ್ ಗೈಡ್ಸ್ ಧ್ವಜಾರೋಹಣ ನಡೆಸಲಾಯಿತು. ಆ ಬಳಿಕ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಮುರುಳ್ಯ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಕುಮಾರಿ ಜಾನಕಿ ಮುರುಳ್ಯ "ಎಳವೆಯಲ್ಲೇ ಶಿಸ್ತು,‌ಸಹಕಾರ...

ಎಸ್ ಕೆ ಎಸ್ ಎಸ್ ಎಫ್ ಅರಂತೋಡು ಶಾಖೆ ವತಿಯಿಂದ ಮಾಸಿಕ ಮಜ್ಲಿಸ್ ನ್ನೂರ್ ಹಾಗೂ ಗ್ರಾಂಡ್ ಇಫ್ತಾರ್ ಕೂಟ

ಅರಂತೋಡು ಎಸ್ ಕೆ ಎಸ್ ಎಸ್ ಎಫ್ ವತಿಯಿಂದ ಮಾಸಿಕ ಮಜ್ಲಿಸ್ ನ್ನೂರ್ ಹಾಗೂ ಗ್ರಾಂಡ್ ಇಫ್ತಾರ್ ಕೂಟ ಮತ್ತು ರಮಳಾನ್ ಪ್ರಭಾಷಣ ಕಾರ್ಯಕ್ರಮ ಅರಂತೋಡು ಜುಮ್ಮಾ ಮಸೀದಿಯಲ್ಲಿ ಎ.10 ರಂದು ನಡೆಯಿತು.ಅಧ್ಯಕ್ಷತೆಯನ್ನು ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆಯ ಅಧ್ಯಕ್ಷ ಅಶೀಕ್ ಕುಕ್ಕುಂಬಳ ವಹಿಸಿದರು. ಮಾಸಿಕ ಮಜ್ಲಿಸ್ ನ್ನೂರ್ ಕಾರ್ಯಕ್ರಮ ವನ್ನು...

ಮಡಪ್ಪಾಡಿ: ಸ್ವಚ್ಛತಾ ಕಾರ್ಯಕ್ರಮ

ಮಡಪ್ಪಾಡಿ ಗ್ರಾಮ ಪಂಚಾಯತ್ ಮತ್ತು ಅಕ್ಷಯ ಸಂಜೀವಿನಿ ಒಕ್ಕೂಟ ಮಡಪ್ಪಾಡಿ ಇದರ ವತಿಯಿಂದ ಮಡಪ್ಪಾಡಿ ಪೇಟೆಯ ಮುಂಭಾಗ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು ಉಪಸ್ಥಿತರಿದ್ದರು.

ಮಡಪ್ಪಾಡಿ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ, ಮಕ್ಕಳ ಪ್ರತಿಭಾ ದಿನೋತ್ಸವ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡಪ್ಪಾಡಿಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ, ಮಕ್ಕಳ ಪ್ರತಿಭಾ ದಿನೋತ್ಸವ, 7ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಎ.9ರಂದು ನಡೆಯಿತು. ಎಸ್ ಡಿಎಂ ಸಿ ಅಧ್ಯಕ್ಷರಾದ ಮಾಧವ ಶೀರಡ್ಕರವರು ಶಾಲೆಗೆ ದೇವರ ಮಂಟಪವನ್ನು ಕೊಡುಗೆ ನೀಡಿದರು. 7ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ಕಡೆಯುವ ಕಲ್ಲು ಕೊಡುಗೆಯಾಗಿ ನೀಡಿದರು.ಶಾಲಾ ಮುಖ್ಯ ಶಿಕ್ಷಕರಾದ ಚಂದ್ರಶೇಖರ್...

ಮಡಪ್ಪಾಡಿ : ಸ್ವಚ್ಛತಾ ಕಾರ್ಯಕ್ರಮ

ಮಡಪ್ಪಾಡಿ ಗ್ರಾಮ ಪಂಚಾಯತ್ ಮತ್ತು ಅಕ್ಷಯ ಸಂಜೀವಿನಿ ಒಕ್ಕೂಟ ಮಡಪ್ಪಾಡಿ ಇದರ ವತಿಯಂದ ಮಡಪ್ಪಾಡಿ ಪೇಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಒಕ್ಕೂಟದ ಅಧ್ಯಕ್ಷರು,ಸದಸ್ಯರುಉಪಸ್ಥಿತರಿದ್ದರು.

ಕುಕ್ಕೆ ಸುಬ್ರಹ್ಮಣ್ಯ : ನಟ ರಾಕಿಂಗ್ ಸ್ಟಾರ್ ಯಶ್ ಭೇಟಿ

ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ರವರು ಎ.10 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.ಶೀಘ್ರ ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ ಕೆ.ಜಿ.ಎಫ್-2 ಚಿತ್ರತಂಡದ ಜೊತೆಯಲ್ಲಿ ಯಶ್ ಕ್ಷೇತ್ರಕ್ಕೆ ಬೇಟಿ ನೀಡಿದರು.ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಚಿತ್ರತಂಡಕ್ಕೆ ಸ್ವಾಗತಿಸಿದರು. ನಂತರ ಯಶ್ ಹಾಗೂ ಸಂಗಡಿಗರು ಕ್ಷೇತ್ರದಲ್ಲಿ...
Loading posts...

All posts loaded

No more posts

error: Content is protected !!