- Friday
- May 8th, 2026
ಅಮರ ಸುಳ್ಯದ ಸ್ವಾತಂತ್ರ್ಯ ಸಮರದ ಸ್ಮಾರಕ ನಿರ್ಮಾಣ ಮತ್ತು ಕೆದಂಬಾಡಿ ಉತ್ಸವದ ಕುರಿತು ಎ.4 ರಂದು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಟಿ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಗೋಪಾಲ ಪೆರಾಜೆ ಅವರು ಉಬರಡ್ಕ ಮಿತ್ತೂರು ಮತ್ತು ಬೆಳ್ಳಾರೆಯಲ್ಲಿ ಯುದ್ಧ ಸ್ಮಾರಕ ನಿರ್ಮಾಣ ಮಾಡುವ ವಿಚಾರ, ಮಂಗಳೂರು ವಿ.ವಿಯಲ್ಲಿ ಅಮರ ಸುಳ್ಯ ಸ್ವಾಂತಂತ್ರ್ಯ ಹೋರಾಟ ಅಥವಾ...
ಪುತ್ತೂರು ತಾಲೂಕಿನ ಕುಂಬ್ರ ಪೇಟೆಯ ಮುಖ್ಯರಸ್ತೆಯ ಸಮೀಪ ಇಂದು ಬೆಳಗ್ಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪಿ.ಎಚ್.ಡಿ ಸಂಶೋಧನೆ ನಡೆಸುತ್ತಿರುವ ನವೀನ್ ಕುಮಾರ್ ಪೆರುವಾಜೆ ರವರು ಚಲಾಯಿಸುತ್ತಿದ್ದ ಯಮಹಾ ಎಫ್.ಜ಼ೆಡ್ ಬೈಕ್ ಹಾಗೂ ಸುಳ್ಯ ಕಡೆಗೆ ಬರುತ್ತಿದ್ದ ಉಪ್ಪಿನಂಗಡಿಯ ಶಮಂತ್ ಎಂಬವರ ಬುಲೆಟ್ ಬೈಕ್ ಪರಸ್ಪರ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಜಖಂಗೊಂಡಿದ್ದು, ಹೆಲ್ಮೆಟ್ ಧರಿಸಿದ್ದ...
ಶ್ರೀ ರಾಜ್ಯ ದೈವ ಪುರುಷ ದೈವ ದೇವಸ್ಥಾನ ತಳೂರು, ಸ್ನೇಹ ಯುವ ಬಳಗ ಮತ್ತು ಸೌರಭ ಯುವತಿ ಮಂಡಲದ ಜಂಟಿ ಆಶ್ರಯದಲ್ಲಿ ವಾರ್ಷಿಕ ಕ್ರೀಡಾಕೂಟ ಏ.3 ರಂದು ತಳೂರಿನ ಚಾಕಟೆತಡಿಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಾಗಪ್ಪ ಗೌಡ ಮೆತ್ತಡ್ಕ ನಡೆಸಿದರು. ವೇದಿಕೆಯಲ್ಲಿ ಊರಿನ ಹಿರಿಯರಾದ ಶಿವಣ್ಣ ಗೌಡ ತಳೂರು, ಸ್ನೇಹ ಯುವ ಬಳಗ ಅಧ್ಯಕ್ಷ ವರ್ಷಿತ್...
ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಮೋನಿಷ್ ತಂಟೆಪ್ಪಾಡಿ ಸಾಧನೆ ಮೆರೆದಿದ್ದಾರೆ. ಬದ್ದ ಪದ್ಮಾಸನ ದಲ್ಲಿ 1ಗಂಟೆ 02 ನಿಮಿಷ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ. ಕಳೆದ ಏಳು ತಿಂಗಳಿಂದ ಯೋಗಾಭ್ಯಾಸವನ್ನು ನಿರಂತರ ಯೋಗ ಕೇಂದ್ರ ಸುಳ್ಯ ಇದರ ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ. ಯೋಗ...
ವಳಲಂಬೆ ಸಮೀಪ ಲೇಡಿಸ್ ಪರ್ಸೊಂದು ಇಂದು ಬಿದ್ದು ಸಿಕ್ಕಿರುತ್ತದೆ. ಕಳೆದುಕೊಂಡವರು ಅಮರ ಸುಳ್ಯ ಸುದ್ದಿ ಕಛೇರಿಯನ್ನು ಸಂಪರ್ಕಿಸಬಹುದು. ಮೊ: 9449387044
ಐವರ್ನಾಡಿನ ಬಿರ್ಮುಕಜೆ ತರವಾಡು ಮನೆಯ ಶ್ರೀ ರುದ್ರಚಾಮುಂಡಿ, ಧರ್ಮದೈವ ಮತ್ತು ಪರಿವಾರ ದೈವಗಳ ಧರ್ಮ ನಡಾವಳಿ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮ ಎ.13 ರಂದು ಬಿರ್ಮುಕಜೆ ಕುಟುಂಬದ ತರವಾಡು ಮನೆಯಲ್ಲಿ ಜರುಗಲಿದೆ. ಎ.6 ರಂದು ಗೊನೆ ಕಡಿಯುವ ಕಾರ್ಯಕ್ರಮ ನಡೆಯಲಿದೆ. ಎ.13ರ ಬೆಳಿಗ್ಗೆಯಿಂದ ಗಣಹೋಮ, ನಾಗತಂಬಿಲ, ಮುನಿಸ್ವಾಮಿಗೆ ನೈವೇದ್ಯ, ಶ್ರೀ ವೆಂಕಟ್ರಮಣ ದೇವರ ಹರಿಸೇವೆ ನಡೆಯಲಿದೆ....
ಅರಂತೋಡಿನಲ್ಲಿ ಅನಿಲ್ ಕುಮಾರ್ ಬಿಳಿಯಾರು ಅವರ ಮಾಲೀಕತ್ವದಲ್ಲಿ ಖುಷಿ ಬೇಕರಿ ಏ.2 ರಂದು ಶುಭಾರಂಭಗೊಂಡಿತು. ಬೇಕರಿಯನ್ನು ಅರಂತೋಡು ಪ್ರಾ. ಕೃ. ಪ. ಸ. ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಉದ್ಘಾಟಿಸಿದರು. ಸುಳ್ಯದ ವರ್ತಕರ ಸಂಘದ ಅಧ್ಯಕ್ಷ ಸುಧಾಕರ ರೈ, ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಯು.ಎಂ., ಅರಂತೋಡು ಮಲ್ಲಿಕಾರ್ಜುನ...
ಐನೆಕಿದು ಗ್ರಾಮದ ಕೆದಿಲ ಶಶಿಧರ್ ರವರ ತೋಟಕ್ಕೆ ಆನೆ ದಾಳಿ ನಡೆಸಿದ ಘಟನೆ ಇಂದು ಬೆಳಗಿನ ಜಾವ 5.30ಕ್ಕೆ ಸಂಭವಿಸಿದೆ. ಎರಡು ದಿವಸಗಳ ಹಿಂದೆ ಇದೇ ಗ್ರಾಮದ ರವಿ ಕೆದಿಲರವರ ತೋಟಕ್ಕೆ ಆನೆ ದಾಳಿ ಮಾಡಿದ್ದು ಇದರಿಂದ ಕೃಷಿಗೆ ಸಾಕಷ್ಟು ಹಾನಿಯಾಗಿತ್ತು. ಇದೀಗ ಆನೆ ದಾಳಿ ಈ ಪ್ರದೇಶದಲ್ಲಿ ಹೆಚ್ಚಾಗುತ್ತಿದ್ದು ಕೃಷಿಗೆ ವ್ಯಾಪಕ ಹಾನಿಯಾಗುತ್ತಿದೆ.
ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏ.2 ರಂದು ರಾಜ್ಯ ಧಾರ್ಮಿಕ ದಿನಾಚರಣೆ ಮತ್ತು ಯುಗಾದಿ ಆಚರಣೆ ನೆರವೇರಲಿದೆ. ಈ ಪ್ರಯುಕ್ತ ಮುಂಜಾನೆ 6 ಗಂಟೆಯಿಂದ ಶ್ರೀ ವಿದ್ಯಾಸಾಗರ ಭಜನಾ ಸಂಗಮ ಮತ್ತಿತರ ಸ್ವಯಂಸೇವಕ ತಂಡದವರಿದ ಶ್ರೀ ದೇವಳದ ಧರ್ಮಸಮ್ಮೇಳನ ಮಂಟಪದಲ್ಲಿ ಅಹಃಪೂರ್ಣ ಭಜನಾ ಕಾರ್ಯಕ್ರಮ ನೆರವೇರಲಿದೆ. ರಾಜ್ಯದ ಅಭಿವೃದ್ಧಿಗಾಗಿ ಪ್ರಾರ್ಥನೆ:ಯುಗಾದಿಯ...
ಅರಂತೋಡು ಗ್ರಾಮ ಪಂಚಾಯತ್ ಘನತ್ಯಾಜ್ಯ ನಿರ್ವಹಣೆಯನ್ನು ಮಾಡುತ್ತಿರುವ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣಾ ಸಂಘದ ಮಹಿಳಾ ತಂಡವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಪ್ರಥಮ ಮಹಿಳಾ ಘನತ್ಯಾಜ್ಯ ನಿರ್ವಹಣಾ ತಂಡವಾಗಿರುತ್ತದೆ. ಏ.3 ರಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ರವರು ಮಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಂಸಾ ಪತ್ರವನ್ನು ನೀಡಿ ಗೌರವಿಸಲಿದ್ದಾರೆ. ಘನ...
Loading posts...
All posts loaded
No more posts
