Ad Widget

ಎನ್. ಎಂ. ಎಂ. ಎಸ್. ಪರೀಕ್ಷೆಯಲ್ಲಿ ದೀಪಕ್ ಎಸ್. ತಾಲೂಕಿಗೆ ಪ್ರಥಮ

2024-25 ನೇ ಸಾಲಿನ ಎನ್.ಎಂ.ಎಂ.ಎಸ್. ಪರೀಕ್ಷೆಯಲ್ಲಿ ದೀಪಕ್ ಎಸ್.180 ರಲ್ಲಿ 107 ಅಂಕ ಪಡೆದು ಸುಳ್ಯ ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಇವರು ಪದವಿಪೂರ್ವ ಕಾಲೇಜು ಗುತ್ತಿಗಾರು( ಪ್ರೌಢಶಾಲಾ ವಿಭಾಗ) ಇಲ್ಲಿಯ 8 ನೇ ತರಗತಿಯ ಆಂಗ್ಲ ಮಾಧ್ಯಮದ ವಿದ್ಯಾರ್ಥಿಯಾಗಿದ್ದು, ದೇವಚಳ್ಳ ಗ್ರಾಮದ ಮಾವಿನಕಟ್ಟೆ ನಿವಾಸಿ ರಾಜೇಂದ್ರ ಎಂ. ಮತ್ತು ಆಶಾ ಎಸ್. ಇವರ ಸುಪುತ್ರ.

ಸುಳ್ಯ : ಸ. ಮಾ. ಹಿ. ಪ್ರಾ. ಶಾಲೆ ಸುಳ್ಯ- ರೈಟು ಟು ಲೀವ್ ಕೋಟೆ ಫೌಂಡೇಶನ್ ಬೆಂಗಳೂರು ಇವರಿಂದ ಸ್ಮಾರ್ಟ್ ಟಿವಿ ಮತ್ತು ಮಕ್ಕಳಿಗೆ ಬ್ಯಾಗ್ ಕೊಡುಗೆ

ದಿನಾಂಕ 27/03/2025ರಂದು ಕೋಟೆ ಫೌಂಡೇಶನ್ ವತಿಯಿಂದ ಮಾದರಿ ಶಾಲೆ, ಸುಳ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಣೆ ಹಾಗೂ ಎರಡು ಸ್ಮಾರ್ಟ್ ಟಿವಿ ಯನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಕೋಟೆ ಫೌಂಡೇಶನ್ ನಿರ್ದೇಶಕರಾದ ಶ್ರೀ ರಮೇಶ್, ಹಾಗೂ ಸದಸ್ಯರಾದ ಜಯಂತ ವೆಂಕಟರಾಜ್, ಸುಳ್ಯದ ಸಂಯೋಜಕರಾದ ಶ್ರೀಯುತ ಪ್ರದೀಪ್ ಉಬರಡ್ಕ, ನಗರ ಪಂಚಾಯತ್...
Ad Widget

ಮಹಿಳೆಗೆ ಹಲ್ಲೆ –  ಆರೋಪಿ ಬಂಧನಕ್ಕೆ ವಿ.ಹಿ.ಪಂ. ಒತ್ತಾಯ, ಪ್ರತಿಭಟನೆಯ ಎಚ್ಚರಿಕೆ

ಸುಳ್ಯದ ನಾವೂರು ಎಂಬಲ್ಲಿ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿರುವ ಚಂದ್ರಿಕಾ ಎಂಬ ಮಹಿಳೆಗೆ ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ ಎಂಬವರು ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆಯನ್ನು ತೀವ್ರವಾಗಿ ಖಂಡಿಸುತೇವೆ. FIR ದಾಖಲಿಸಿ 24 ಗಂಟೆ ಕಳೆದರೂ ಇನ್ನೂ ಬಂಧಿಸದ ಪೊಲೀಸ್ ಇಲಾಖೆ ಆದಷ್ಟು ಬೇಗ ಆರೋಪಿಯನ್ನು ಬಂಧಿಸಬೇಕು. ಇಲ್ಲವಾದಲ್ಲಿ ಮುಂದಿನ...

ಸುಳ್ಯ ತಾಲೂಕಿನ 9-11ಅರ್ಜಿ ವಿಲೇವಾರಿ ಶೀಘ್ರ ಪರಿಹರಿಸಬೇಕು – ರಾಧಾಕೃಷ್ಣ ಬೊಳ್ಳೂರು

ಸುಳ್ಯ ತಾಲೂಕಿನಲ್ಲಿ 9-11ಗೆ ಸಂಬಂಧಪಟ್ಟ ಸುಮಾರು 160ಕ್ಕಿಂತಲೂ ಹೆಚ್ಚಿನ ಅರ್ಜಿಗಳು ತಾಲೂಕು ಪಂಚಾಯತ್‌ನಲ್ಲಿ ವಿಲೇವಾರಿಯಾಗದೇ ಬಾಕಿ ಉಳಿದಿದೆ. ಮೂಡಾ ಅನುಮತಿಗಾಗಿ ಪುತ್ತೂರು, ಮಂಗಳೂರು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಗ್ರಾಮೀಣ ಪ್ರದೇಶದ ನೂರಾರು ಜನರ ನಿರೀಕ್ಷೆಗಳು ಕಮರಿಹೋಗಿವೆ. ಮತ್ತು ಗ್ರಾಮೀಣ ಜನರ ಜೀವನ ದುಸ್ತರವಾಗಿದೆ. ಆದುದರಿಂದ ಈಗ ಸುಳ್ಯದಲ್ಲಿ ಸುಳ್ಯ ನಗರಾಭಿವೃದ್ದಿ ಪ್ರಾಧಿಕಾರ (ಸೂಡಾ) ರಚನೆಯಾಗಿರುವ...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯಡಾ. ಲೀಲಾಧರ್ ಡಿ. ವಿ., ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಆಯುರ್ವೇದ ಪದವಿ ವಿಭಾಗದ ಅಧ್ಯಯನ ಮಂಡಳಿಯ ನೂತನ ಚೇರ್ ಮೆನ್ ಆಗಿ ನೇಮಕ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇದರ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ., ಅವರನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಇದರ ಆಯುರ್ವೇದ ಪದವಿ ವಿಭಾಗದ ಅಧ್ಯಯನ ಮಂಡಳಿಗೆ ಚೆರ್ ಮೆನ್ ಆಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಭಗವಾನ್ ಬಿ ಸಿ...

ಮಹಿಳೆಗೆ ಹಲ್ಲೆ ಆರೋಪ – ನ.ಪಂ.ಸದಸ್ಯ ಶರೀಫ್ ಕಂಠಿ ವಿರುದ್ಧ ದೂರು ದಾಖಲು

ನಗರ ಪಂಚಾಯತ್ ಸದಸ್ಯರಾಗಿರುವ ಶರೀಫ್ ಕಂಠಿ ಯವರು ಅವಾಚ್ಯ ಶಬ್ದಗಳಿಂದ ನಿಂಧಿಸಿ ಹಲ್ಲೆ ನಡೆಸಿದ್ದಾರೆಂದು ಮಹಿಳೆಯೊಬ್ಬರು ಸುಳ್ಯ ಠಾಣೆಗೆ ದೂರು ನೀಡಿದ್ದು ಶರೀಫ್ ಕಂಠಿ ವಿರುದ್ಧ ದೂರು ದಾಖಲಾದ ಘಟನೆ ಮಾ.26 ರಂದು ವರದಿಯಾಗಿದೆ. ಮಾ. 25 ರಂದು ನಾನು ನನ್ನ ಬಾಡಿಗೆ ಮನೆಯಲ್ಲಿ ಇರುವಾಗ ಶರೀಫ್ ಕಂಠಿ ಎಂಬವರು ಕಾರನ್ನು ನನ್ನ ಮನೆಯ ಗೇಟಿಗೆ...

ಜ್ಞಾನದೀಪ ನವೋದಯ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದ 18 ವಿದ್ಯಾರ್ಥಿಗಳು ನವೋದಯ ವಿದ್ಯಾಲಯಕ್ಕೆ ಆಯ್ಕೆ

ನವೋದಯ ವಿದ್ಯಾಲಯ ಸಮಿತಿ ಜನವರಿ ತಿಂಗಳಲ್ಲಿ ನಡೆಸಿದ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಬೆಳ್ಳಾರೆ, ಸುಳ್ಯ ಮತ್ತು ಉಪ್ಪಿನಂಗಡಿ ಯ ಜ್ಞಾನದೀಪ ನವೋದಯ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದ ಒಟ್ಟು 18 ವಿದ್ಯಾರ್ಥಿಗಳು ಮುಡಿಪು ಜವಾಹರ್ ನವೋದಯ ವಿದ್ಯಾಲಯದ ಪ್ರವೇಶಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ. ಅಮರಪಡ್ನೂರು ಗ್ರಾಮದ ಮಂಗಲ್ಪಾಡಿ ಮನೋಹರ ಎಂ ಮತ್ತು ಲಲಿತಾ...

ಸುಳ್ಯ : 110ಕೆವಿ ವಿದ್ಯುತ್ ಲೈನ್ ನಿರ್ಮಾಣ ವಿಳಂಬ ಸಾಧ್ಯತೆ – ರೈತರ ಸಭೆ ಕರೆದ ಶಾಸಕರು – ಈಗ ಯೋಜಿಸಿರುವ ಮಾರ್ಗ ಬದಲಿಸಲು ರೈತರ ಒತ್ತಾಯ

ಸುಳ್ಯದ ವಿದ್ಯುತ್ ಸಮಸ್ಯೆ ನಿವಾರಣೆಗೆ ತುರ್ತಾಗಿ 110 ಕೆವಿ ವಿದ್ಯುತ್ ಸಬ್ ಸ್ಟೇಷನ್ ನಿರ್ಮಾಣವಾಗಿಬೇಕಿದ್ದು, ಇದೀಗ ಲೈನ್ ನಿರ್ಮಾಣಕ್ಕೆ ರೈತರ ಆಕ್ಷೇಪ ಬಂದ ಹಿನ್ನೆಲೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ರೈತರ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ರೈತ ಮುಖಂಡರು ರೈತರಿಗೆ ನೊಟೀಸ್ ನೀಡದೇ ಕೃಷಿ ಜಾಗಗಳಿಗೆ ಅಧಿಕಾರಿಗಳು ಬಂದು ದಬ್ಬಾಳಿಕೆ ಹಾಗೂ ಬೆದರಿಕೆ...

ಉಬರಡ್ಕ : ಮಾವಿನ ಮಿಡಿ ಕೊಯ್ಯುವಾಗ ಮರದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ಉಬರಡ್ಕದಲ್ಲಿ ಮಾವಿನ ಮಿಡಿ ಕೊಯ್ಯುತ್ತಿದ್ದಾಗ ಗೆಲ್ಲು ತುಂಡಾಗಿ ಬಿದ್ದ ಪರಿಣಾಮ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಜನಾರ್ದನ ಪೂಜಾರಿಯವರು ಮಾ.22ರಂದು ಕೆಲಸಕ್ಕೆ ಹೋಗಿದ್ದರು. ಅಲ್ಲಿ ಮಾವಿನ ಮರವೇರಿ ಮಾವಿನಮಿಡಿ ಕೊಯ್ಯುತ್ತಿದ್ದಾಗ ತಾನು ನಿಂತಿದ್ದ ಗೆಲ್ಲು ತುಂಡಾಗಿ ಕೆಳಕ್ಕೆ ಬಿದ್ದರು. ಪರಿಣಾಮ ಅವರ ಸೊಂಟಕ್ಕೆ ಹಾಗೂ ತಲೆಗೆ...

ಆಲೆಟ್ಟಿ ಸದಾಶಿವ ದೇವಸ್ಥಾನದಲ್ಲಿ ಉಚಿತ ಸಾಮೂಹಿಕ ವಿವಾಹ ನಡೆಸಲು ಚಿಂತನೆ – ಅರ್ಜಿ ಸಲ್ಲಿಸಲು ಏ.05 ಕೊನೆಯ ದಿನಾಂಕ

ಆಲೆಟ್ಟಿ ಸದಾಶಿವ ದೇವಸ್ಥಾನದಲ್ಲಿ ಉಚಿತ ಸಾಮೂಹಿಕ ವಿವಾಹ ನಡೆಸುವುದಾಗಿ ಚಿಂತನೆ ನಡೆಸಲಾಗಿದೆ. ಸಾಮೂಹಿಕ ವಿವಾಹವಾಗಲು ಬಯಸುವವರು ಏಪ್ರಿಲ್ ತಿಂಗಳ 5ನೇ ತಾರೀಖಿನೊಳಗೆ ಹೆಸರನ್ನು ನೋಂದಾಯಿಸಬೇಕಾಗಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ತೀರ್ಥಕುಮಾರ್ ಕುಂಚಡ್ಕ ತಿಳಿಸಿದ್ದಾರೆ. ವಿವಾಹದ ದಿನಾಂಕವನ್ನುನಿಗದಿಪಡಿಸಿ ತಿಳಿಸಲಾಗುವುದು. ಹೆಚ್ಚಿನ ವಿವರಗಳಿಗೆ 72598944079483288240, 9449471373 ಇವರನ್ನು ಸಂಪರ್ಕಿಸಬಹುದು.
Loading posts...

All posts loaded

No more posts

error: Content is protected !!