ಕುಕ್ಕೆ ಸುಬ್ರಹ್ಮಣ್ಯ :- ಬಾಲಿವುಡ್ ಖ್ಯಾತ ನಟ ಸುನೀಲ್ ಶೆಟ್ಟಿ ಭೇಟಿ

ಬಾಲಿವುಡ್ ನ ಖ್ಯಾತ ನಟ ಸುನೀಲ್ ಶೆಟ್ಟಿ ಅವರು ಮಾ.23 ರಂದು ತಮ್ಮ ಸ್ನೇಹಿತರೊಂದಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಶಿಷ್ಠಾಚಾರ ವಿಭಾಗದ ಜಯರಾಮ್ ರಾವ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.ತನ್ನ ಊರು ಉಡುಪಿಯ ಕಾಪು ಜಾತ್ರೆಗೆ...

ಹಾಲೆಮಜಲು ಅಂಗಡಿಯಲ್ಲಿ ಕಳ್ಳತನ

ನಾಲ್ಕೂರು ಗ್ರಾಮದ ಹಾಲೆಮಜಲಿನಲ್ಲಿರುವ ಸುಪ್ರೀತ್ ಗುಡ್ಡೆಮನೆ ಅವರ ಚಿಕನ್ ಸೆಂಟರ್ ಕಳೆದ ರಾತ್ರಿ ಕಳ್ಳರು ಅಂಗಡಿಯ ಬೀಗ ಮುರಿದು ಒಳನುಗ್ಗಿ ನಗದು ಹಾಗೂ ಸಿಸಿ ಕ್ಯಾಮರ ಕೊಂಡೊಯ್ದಿದ್ದಾರೆ.‌ ಈ ಬಗ್ಗೆ ಅಂಗಡಿ ಮಾಲಕ ಸುಪ್ರೀತ್ ರವರು ಸುಬ್ರಹ್ಮಣ್ಯ ಪೋಲೀಸರಿಗೆ ದೂರು ನೀಡಿದ್ದಾರೆ.
Ad Widget

ಐಕೋನಿಕ್ ಆಫ್ ಇಂಡಿಯಾ ಅವಾರ್ಡ್ ರಾಷ್ಟ್ರ ಪ್ರಶಸ್ತಿಗೆ ಮಿತ್ರದೇವ ಮಡಪ್ಪಾಡಿ ಆಯ್ಕೆ

ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಪರಿಷತ್ (ಐ) ಇಂಡಿಯಾ ಸಂಘಟನೆಯವರು ನೀಡುವ 2022 ನೇ ಸಾಲಿನ ಐಕೋನಿಕ್ ಆಫ್ ಇಂಡಿಯಾ ಅವಾರ್ಡ್ ರಾಷ್ಟ್ರ ಪ್ರಶಸ್ತಿಗೆ ಮಡಪ್ಪಾಡಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ಅವರು ಆಯ್ಕೆ ಆಗಿದ್ದಾರೆ . ಮಂಗಳೂರಿನ ಬೊಕ್ಕಪಟ್ಟಣದ ಅಬ್ಬಕ್ಕ ನೌಕೆಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ವಿಹಾರ ನೌಕೆ ಸಾಂಸ್ಕೃತಿಕ ಸೌರಭ ಸಮಾರಂಭದಲ್ಲಿ ವಿಶೇಷ ಗಣ್ಯರ...

ದೇವರಗುಂಡ : ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ

ಮಂಡೆಕೋಲು ಗ್ರಾಮದ ದೇವರಗುಂಡ ಡಿ.ವಿ. ಸದಾನಂದ ಗೌಡರ ಸಹೋದರ ದಿ. ಬಾಸ್ಕರ ಗೌಡರ ಮನೆ ಮೇಲೆ ಕಳೆದ ರಾತ್ರಿ ತೆಂಗಿನ ಮರ ಬಿದ್ದು ಮನೆಯ ಮಾಡು ಕುಸಿದಿದೆ. ಮನೆಯವರಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಕುಂಬಳಚೇರಿಯಲ್ಲಿ ಬೈಕ್ ಜೀಪು ಅಪಘಾತ : ಓರ್ವ ಸಾವು – ಇನ್ನೋರ್ವ ಗಂಭೀರ

ಪೆರಾಜೆಯ ಕುಂಬಳಚೇರಿ ಎಂಬಲ್ಲಿ ಬೈಕ್ ಹಾಗೂ ಜೀಪು ಮಧ್ಯೆ ಅಪಘಾತ ನಡೆದು ಬೈಕ್ ನಲ್ಲಿದ್ದ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಹಾಗೂ ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ವರದಿಯಾಗಿದೆ.ಪೆರಾಜೆಯ ಆರ್.ಡಿ. ವೆಂಕಪ್ಪ ರವರ ಪುತ್ರ ದರ್ಶನ್ ಮತ್ತು ಪೆರಾಜೆಯ ಲೋಕನಾಥ ಕುಂದಲ್ಪಾಡಿ ಅವರ ಪುತ್ರ ವಿಶ್ವದೀಪ್ ಸುಳ್ಯದ ಸೈಂಟ್ ಜೋಸೆಫ್ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿಗಳಾಗಿದ್ದು...

ಅರಂತೋಡು : ಸೊಸೈಟಿ ವತಿಯಿಂದ ರಬ್ಬರ್ ಹಾಗೂ ಗೇರು ಬೀಜ ಖರೀದಿ ಆರಂಭ

ಅರಂತೋಡು-ತೊಡಿಕಾನ ಪ್ರಾಕೃ.ಪ.ಸ.ಸಂಘ ನಿಯಮಿತದ ವತಿಯಿಂದ ಬೆಳ್ತಂಗಡಿ ರಬ್ಬರ್ ಬೆಳೆಗಾರರ ಮತ್ತು ಮಾರಾಟಗಾರರ ಸಹಕಾರ ಸಂಘ ನಿ. ಉಜಿರೆ ಇದರ ಸಹಭಾಗಿತ್ವದಲ್ಲಿ ರಬ್ಬರ್ ಖರೀದಿ ಕೇಂದ್ರ ಹಾಗೂ ಗಣೇಶ್ ಕ್ಯಾಶ್ಯೂಸ್ ಅಡ್ಕಾರ್ ಸಹಕಾರದೊಂದಿಗೆ ಗೇರು ಬೀಜ ಖರೀದಿ ಕೇಂದ್ರ ಮಾ.23 ರಂದು ಶುಭಾರಂಭಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಭಾರತೀಯ ಜನತಾ ಪಾರ್ಟಿ...

ಕಾಂಕ್ರೀಟೀಕರಣಗೊಂಡ ಸೇವಾಜೆ ಮಂಜೋಳುಕಜೆ ರಸ್ತೆಯ ಉದ್ಘಾಟನೆ

ದೇವಚಳ್ಳ ಗ್ರಾಮದ ಸೇವಾಜೆ - ಮಂಜೊಳುಕಜೆ ಸಾರ್ವಜನಿಕ ರಸ್ತೆಯ ಕಾಂಕ್ರೀಟಿಕರಣ ಉದ್ಘಾಟನಾ ಕಾರ್ಯಕ್ರಮವು ಮಾ.23 ರಂದು ನಡೆಯಿತು.ಉದ್ಘಾಟನೆ ಯನ್ನು ರಾಘವಗೌಡ ಮೆತ್ತಡ್ಕ ದೀಪ ಬೆಳಗಿಸುವ ಮೂಲಕ, ಗ್ರಾಮ ಪಂಚಾಯತ್ ಸದಸ್ಯರಾದ ಲೀಲಾವತಿ ಸೇವಾಜೆ ರಿಬ್ಬನ್ ತುಂಡರಿಸುವ ಮೂಲಕ ರಸ್ತೆಗೆ ಚಾಲನೆ ನೀಡಿದರು. ಹಾಗೂ ಪರಮೇಶ್ವರ ನಂದಗೋಕುಲ ತೆಂಗಿನಕಾಯಿ ಒಡೆದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಗಳಾದ...

ಎಲಿಮಲೆ ಕಲ್ಲುಪಣೆ ಕಾಂಕ್ರೀಟ್ ರಸ್ತೆಯ ಉದ್ಘಾಟನೆ

ದೇವಚಳ್ಳ ಗ್ರಾಮದ ಎಲಿಮಲೆ - ಕಲ್ಲುಪಣೆ ಸಾರ್ವಜನಿಕ ರಸ್ತೆಯ ಕಾಂಕ್ರೀಟಿಕರಣಗೊಂಡ ಕಾಮಗಾರಿಯ ಉದ್ಘಾಟನಾ ಕಾರ್ಯಕ್ರಮವು ಮಾ.21ರಂದು ನಡೆಯಿತು.ಉದ್ಘಾಟನೆ ಯನ್ನು ಶ್ರೀಮತಿ ವಿಜಯಲಕ್ಷ್ಮಿ ಶಂಕರನಾರಾಯಣ ಭಟ್ ಮೂಲೆತೋಟ ಹಾಗೂ ಎಲಿಮಲೆ ಪ್ರೌಢಶಾಲಾ ದೈಹಿಕ ಶಿಕ್ಷಕಿ ತಿರುಮಲೇಶ್ವರಿ ದೀಪ ಬೆಳಗಿಸುವ ಮೂಲಕ ನೆರವೇರಿಸಿದರು. ಶೀನಪ್ಪ ಗೌಡ ಅಂಬೆಕಲ್ಲು ಹಾಗೂ ಧರ್ಮಪಾಲ ಗೌಡ ಗಟ್ಟಿಗಾರು ರಿಬ್ಬನ್ ಕತ್ತರಿಸಿ ಹಾಗೂ ಮಹಾಲಿಂಗ...

ಪಂಜದಲ್ಲಿ ಸಚಿವರಿಂದ ಸಿಸಿ ಕ್ಯಾಮರಾ ಉದ್ಘಾಟನೆ ಹಾಗೂ ವಿವಿಧ ಸವಲತ್ತು ವಿತರಣೆ

ಪಂಜ ಗ್ರಾಮ ಪಂಚಾಯತ್ ವತಿಯಿಂದ ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಮತ್ತು ವಿಶೇಷ ಚೇತನರಿಗೆ ಸವಲತ್ತು ವಿತರಣಾ ಕಾರ್ಯಕ್ರಮ ಗ್ರಾಮ ಪಂಚಾಯತ್ ನಲ್ಲಿ ಮಾ.22ರಂದು ಜರುಗಿತು. ಪಂಜ ಪೇಟೆಯಲ್ಲಿ ಸಿಸಿ ಕ್ಯಾಮರಾ ಉದ್ಘಾಟನೆ ಬಳಿಕ ಸಚಿವ ,ಶಾಸಕ ಎಸ್ .ಅಂಗಾರ ರವರು ಗ್ರಾಮ ಪಂಚಾಯತ್ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮತ್ತು ಕಂದಾಯ ಇಲಾಖೆಯ...

ಬಾಳಿಲ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ವಿದಾಯ ಸಮಾರಂಭ

ವಿದ್ಯಾಬೋಧಿನೀ ಪ್ರೌಢ ಶಾಲೆಯಲ್ಲಿ 2021-22ನೆಯ ಸಾಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳ ವಿದಾಯ ಸಮಾರಂಭವು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ವೆಂಕಟ್ರಮಣ ಭಟ್ ನೆಟ್ಟಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅತಿಥಿಗಳಾಗಿ ಬಾಳಿಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸವಿತಾ ಕೆ, ಉಪಾಧ್ಯಕ್ಷರಾದ ಶ್ರೀಮತಿ ತ್ರಿವೇಣಿ, ಬಾಳಿಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಹೂವಪ್ಪ ಗೌಡ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ...
Loading posts...

All posts loaded

No more posts

error: Content is protected !!