ಮನ್ವಿತ ಸುಳ್ಯ ಅವರಿಗೆ ರಾಜ್ಯ ಮಟ್ಟದ ಪ್ರತಿಭಾ ರತ್ನ ಪ್ರಶಸ್ತಿ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಸಾಧನೆ ಮಾಡಿದ ಮನ್ವಿತ ಸುಳ್ಯ ಅವರಿಗೆ ಎಸ್ ಎಸ್ ಕಲಾ ಸಂಗಮ ಟೀಮ್ ಪ್ರತಿಭಾ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ದಿನೇಶ್ ಅಡ್ಡಂತಡ್ಕ ಹೃದಯಾಘಾತದಿಂದ ನಿಧನ

ಬೆಂಗಳೂರಿನ ಕೆನರಾ ಆಗೋ ಕೆಮಿಕಲ್ಸ್ ನಲ್ಲಿ ಪ್ರೊಡಕ್ಷನ್ ಮೆನೇಜರ್ ಆಗಿದ್ದ ಅಜ್ಞಾವರ ಗ್ರಾಮದ ದಿನೇಶ್ ಅಡ್ಡತಂಡ್ಕರವರು ಮಾ.18 ರಂದು ಹೃದಯಾಘಾತದಿಂದ ನಿಧನರಾದರು. ಅವರಿಗೆ 44 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಅಪರ್ಣಾ, ಪುತ್ರಿ ಆದ್ಯ, ತಂದೆ ರಾಮಪ್ಪ, ತಾಯಿ ಸಾವಿತ್ರಿ ಸಹೋದರರಾದ ಲೊಕೇಶ್, ಸುರೇಶ್ ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.
Ad Widget

ಚೊಕ್ಕಾಡಿ ಸಹಕಾರ ಸಂಘದ ನೂತನ ಆಡಳಿತ ಮಂಡಳಿ ರಚನೆ : ಅಧ್ಯಕ್ಷರಾಗಿ ಕೇಶವ ಕರ್ಮಾಜೆ – ಉಪಾಧ್ಯಕ್ಷರಾಗಿ ಪ್ರವೀಣ್ ಎಸ್ ರಾವ್ ಅವಿರೋಧ ಆಯ್ಕೆ

Praveen S. Rao ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕುಕ್ಕುಜಡ್ಕ ಇದರ ಆಡಳಿತ ಮಂಡಳಿಗೆ ಮಾ.7ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು 11 ಸ್ಥಾನಗಳಲ್ಲಿ ಹಾಗು ಬಿಜೆಪಿ ಬಂಡಾಯ ಸ್ವಾಭಿಮಾನಿ ಬಳಗ 2 ಸ್ಥಾನದಲ್ಲಿ ಗೆಲುವು ಸಾಧಿಸಿದ್ದರು. ಇಂದು ಅಧ್ಯಕ್ಷ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಮಾಜಿ ಉಪಾಧ್ಯಕ್ಷ...

ಬೂಡೂದ ಮಾಯ್ಕಾರೆ ತುಳು ಭಕ್ತಿಗೀತೆ ಆಲ್ಬಮ್ ಬಿಡುಗಡೆ ಕಾರ್ಯಕ್ರಮ

ಬೂಡು ಕೊರಗಜ್ಜ ದೈವ ಕುರಿತ ಬೂಡೂದ ಮಾಯ್ಕಾರೆ ಎಂಬ ತುಳು ಭಕ್ತಿಗೀತೆ ಆಲ್ಬಮ್ ಬಿಡುಗಡೆ ಕಾರ್ಯಕ್ರಮವು ಬೆಳ್ಳಾರೆಯ ಬೂಡು ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಗರಡಿ ಯಲ್ಲಿ ಜರುಗಿತು . ಸುಳ್ಯದ ಗಾಯಕ ಮತ್ತು ಜ್ಯೋತಿಷಿ ಎಚ್ .ಭೀಮರಾವ್ ವಾಷ್ಠರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು . ಗಾಯಕ ಪೆರುಮಾಳ್ ಲಕ್ಷ್ಮಣ್ ಐವರ್ನಾಡು ರವರು ಪ್ರಾಸ್ತಾವಿಕ ಮಾತಾಡಿದರು ....

ಮಹಶೀರ್ ಮತ್ಸ್ಯ ರೈತ ಉತ್ಪಾದಕ ಸಂಸ್ಥೆಯ ಸಭೆ

ರಾಜ್ಯ ಸರ್ಕಾರದ ಮಹಶೀರ್ ಮತ್ಸ್ಯ ರೈತ ಉತ್ಪಾದಕ ಸಂಸ್ಥೆಯ ನಿರ್ದೇಶಕರುಗಳ ಸಭೆಯು ಸುಳ್ಯದ ತಾಲೂಕು ಪಂಚಾಯತ್ ನ ಸಚಿವ ಎಸ್. ಅಂಗಾರರವರ ಕಚೇರಿಯಲ್ಲಿ ಮಾ.21ರಂದು ನಡೆಯಿತು.ಮಹಶೀರ್ ಮತ್ಯ ರೈತ ಉತ್ಪದಕರ ಸಂಸ್ಥೆಯ ಅಧ್ಯಕ್ಷ ಮಹೇಶ್ ಕುಮಾರ್ ಮೇನಾಲ ಅಧ್ಯಕ್ಷತೆ ವಹಿಸಿದ್ದರು.ಉಪಾಧ್ಯಕ್ಷ ಸುರೇಶ್ ಕಣೆಮರಡ್ಕ ನಿರ್ದೇಶಕರುಗಳಾದ ಸುಪ್ರೀತ್ ಮೋಂಟಡ್ಕ, ಚನಿಯ ಕಲ್ತಡ್ಕ, ಅಶೋಕ ಅಡ್ಕಾರು, ಚಂದ್ರಶೇಖರ ನೆಡಿಲು,...

ಬಾಕಿಲ : ಆದಿಶಕ್ತಿ ಕ್ರೀಡಾ ಮತ್ತು ಕಲಾ ಸಂಘದ ಅಧ್ಯಕ್ಷರಾಗಿ ಪ್ರಶಾಂತ್ ಬಾಕಿಲ

ಆದಿಶಕ್ತಿ ಕ್ರೀಡಾ ಮತ್ತು ಕಲಾ ಸಂಘ ಬಾಕಿಲ ಇದರ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಮಾ. 21ರಂದು ನಡೆದ ವಾರ್ಷಿಕ ಮಹಾಸಭೆಯಲ್ಲಿ ತೀರ್ಮಾನಿಸಲಾಯಿತು.ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಬಾಕಿಲ, ಕಾರ್ಯದರ್ಶಿಯಾಗಿ ಗಣೇಶ್ ಹುಲಿಕೆರೆ, ಉಪಾಧ್ಯಕ್ಷರಾಗಿ ಮಿಥುನ್ ಬಾಕಿಲ, ಜೊತೆ ಕಾರ್ಯದರ್ಶಿಯಾಗಿ ನಿಶಾಂತ್ ಬಾಕಿಲ, ಕೋಶಾಧಿಕಾರಿಯಾಗಿ ಜಗದೀಶ್ ಬಾಕಿಲ ಆಯ್ಕೆಯಾದರು. ಸಂಘದ ಸ್ಥಾಪಕಾಧ್ಯಕ್ಷರಾದ ಜಯಪ್ರಕಾಶ್ ಬಾಕಿಲ ಸ್ವಾಗತಿಸಿ, ಗೌರವಾಧ್ಯಕ್ಷರಾದ...

ಸುಬ್ರಹ್ಮಣ್ಯ :- ದಿ.ಕೃಷ್ಣಕುಮಾರ್ ರುದ್ರಪಾದ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ

ಸುಮಾರು 40 ವರ್ಷಗಳ ಇತಿಹಾಸ ಹೊಂದಿರುವ ಗಾಂಗೇಯ ಕ್ರಿಕೆಟರ್ಸ್ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ದಿ.ಕೃಷ್ಣಕುಮಾರ್ ರುದ್ರಪಾದ ಅವರ ಸ್ಮರಣಾರ್ಥವಾಗಿ ಮಾ.19 ಮತ್ತು ಮಾ.20 ರಂದು 2 ದಿನಗಳ ಕಾಲ ಅವಿಭಜಿತ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಪ್ರತಿಷ್ಠಿತ ಆಯ್ದ 20 ತಂಡಗಳ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗಾಂಗೇಯ ಟ್ರೋಫಿ 2022 ನಡೆಯಿತು.ಗಾಂಗೇಯ ತಂಡದ...

ಹರಿಹರ ಪಲ್ಲತ್ತಡ್ಕ :- ಸ.ಹಿ.ಪ್ರಾ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕದಲ್ಲಿ ಮಾ.19 ರಂದು 7ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.ಈ ಸಂದರ್ಭದಲ್ಲಿ 7ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ನಾಮಫಲಕ ಕೊಡುಗೆ ನೀಡಿದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಸಾವಿತ್ರಿ ಕಜ್ಜೋಡಿ ಹಾಗೂ ಸಹ ಶಿಕ್ಷಕರಾದ ದೇವಕಿ.ಸಿ, ಶರಣಪ್ಪ ಡೋಣಿ, ಸುವರ್ಣ, ಹರ್ಷಿತಾ.ಪಿ ಹಾಗೂ ಶಾಲಾ ವಿದ್ಯಾರ್ಥಿಗಳು ಸೇರಿದಂತೆ...

ರಾಜ್ಯದ 224 ಕ್ಷೇತ್ರಗಳಿಗೆ ಆಪ್ ಸ್ಪರ್ಧೆ- ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ- ಹಲವಾರು ಮಂದಿ ಪಕ್ಷ ಸೇರ್ಪಡೆ

ಮುಂದಿನ ರಾಜ್ಯ ವಿಧಾನ ಸಭೆ‌ ಚುನಾವಣೆಯಲ್ಲಿ 224 ಸ್ಥಾನಗಳಲ್ಲಿಯೂ ಆಮ್ ಆದ್ಮಿ ಪಾರ್ಟಿ ಸ್ಪರ್ಧೆ ನಡೆಸಲಿದ್ದು ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು ಎಂದು ಆಪ್ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹೇಳಿದ್ದಾರೆ. ಸುಳ್ಯಕ್ಕೆ ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ‌ ಮಾತನಾಡಿದರು. ಮುಂದಿನ ಮೂರು ತಿಂಗಳಲ್ಲಿ ರಾಜ್ಯ ಪ್ರವಾಸ ಮಾಡಿ ಎಲ್ಲಾ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಆಯ್ಕೆ...

ಹರಿಹರ ಪಲ್ಲತ್ತಡ್ಕ : ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಹರಿಹರ ಪಲ್ಲತ್ತಡ್ಕ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಮಾ.18 ರಂದು ಎಸ್.ಡಿ.ಎಂ.ಸಿ ಅಧ್ಯಕ್ಷ ಲವ ಮಲ್ಲಾರ ಅವರ ಅಧ್ಯಕ್ಷತೆಯಲ್ಲಿ ಪೋಷಕರ ಸಭೆ ನಡೆಯಿತು.ಸಭೆಯಲ್ಲಿ ಶಾಲಾಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವ ಬಗ್ಗೆ ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಗ್ರಾಮ ಪಂಚಾಯತ್ ಸದಸ್ಯ ದಿವಾಕರ ಮುಂಡಾಜೆ,...
Loading posts...

All posts loaded

No more posts

error: Content is protected !!