Ad Widget

ಅರಂತೋಡಿನಲ್ಲಿ ನಾಯಿಗಳಿಗೆ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ – ಗ್ರಾ. ಪಂ. ಮನವಿಗೆ ಶೀಘ್ರ ಸ್ಪಂದಿಸಿದ ಸುಳ್ಯದ ಪಶು ವೈದ್ಯಾಧಿಕಾರಿ ನಿತಿನ್ ಪ್ರಭು

ಆರಂತೋಡಿನ ಮನೆಯೊಂದರ ಕೆಲಸಕ್ಕೆ ಬಂದು ನಾಯಿ ಕಡಿತದಿಂದ ನಾಲ್ಕೈದು ದಿನಗಳ ಹಿಂದೆ ಸಂಪಾಜೆಯ ಗೂನಡ್ಕದಲ್ಲಿ ಮಹಿಳೆಯೊಬ್ಬರು ಮೃತರಾದ ಹಿನ್ನಲೆಯಲ್ಲಿ ಆರಂತೋಡು ಗ್ರಾಮ ಪಂಚಾಯತ್ ಆಡಳಿತ ತಕ್ಷಣ ಕಾರ್ಯಪ್ರವೃತ್ತವಾಗಿ ಸುಳ್ಯ ಪಶು ವೈದ್ಯಕೀಯ ಆಸ್ಪತ್ರೆಯ ವೈದ್ಯಾಧಿಕಾರಿ ನಿತಿನ್ ಪ್ರಭು ಅವರ ಸಹಕಾರದಿಂದ ನಾಯಿಗಳಿಗೆ ರೇಬಿಸ್ ರೋಗ ನಿರೋಧಕ ಲಸಿಕೆ ಹಾಕುವ ಕಾರ್ಯ ಮಾಡಲಾಯಿತು. ಆರಂತೋಡು ಮತ್ತು ತೊಡಕಾನ...

ವಳಲಂಬೆ : ದಿ. ದೇವಕಿ ದೇರಪ್ಪಜ್ಜನಮನೆ ಸ್ಮರಣಾರ್ಥ “ಸತ್ಯದ ಸ್ವಾಮಿ ಕೊರಗಜ್ಜ” ಯಕ್ಷಗಾನ ಬಯಲಾಟ ಪ್ರದರ್ಶನ

ಉಡುಪಿಯ ಶ್ರೀ ಪಂಜುರ್ಲಿ ಪ್ರಸಾದಿತ ಯಕ್ಷಗಾನ ಮಂಡಳಿ ಶಾಸ್ತನ ಮೇಳದವರಿಂದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ಮಾ.24 ರಂದು ದಿ. ದೇವಕಿ ದೇರಪ್ಪಜ್ಜನಮನೆ ಸ್ಮರಣಾರ್ಥ "ಸತ್ಯದ ಸ್ವಾಮಿ ಕೊರಗಜ್ಜ" ಎಂಬ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು. ಆರಂಭದಲ್ಲಿ ನಡೆದ ಚೌಕಿ ಪೂಜೆ ನಡೆಯಿತು.‌ ವಳಲಂಬೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ವ್ಯವಸ್ಥಾಪನಾ...
Ad Widget

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಕೂಜುಗೋಡು ಕುಟುಂಬದ ಸದಸ್ಯರಿಗೆ ಪ್ರಾತಿನಿಧ್ಯ ನೀಡಬೇಕೆಂದು ಮುಜರಾಯಿ ಸಚಿವರಿಗೆ ಮನವಿ ಸಲ್ಲಿಕೆ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಕೂಜುಗೋಡು ಕುಟುಂಬದ ಸದಸ್ಯರೊಬ್ಬರಿಗೆ ಪ್ರಾತಿನಿಧ್ಯ ನೀಡಬೇಕೆಂದು ಕೂಜುಗೋಡು ಕುಟುಂಬಸ್ಥರು ಮುಜರಾಯಿ ಸಚಿವರಿಗೆ ಮನವಿ ಸಲ್ಲಿಕೆ ಮಾಡಿದರು.ಈ ಸಂದರ್ಭದಲ್ಲಿ ಶಿವಕುಮಾರ್ ಕೂಜುಗೋಡು, ನರೇಂದ್ರ ಕೂಜುಗೋಡು, ಜಯಪ್ರಕಾಶ್ ಕೂಜುಗೋಡು, ಸೋಮಸುಂದರ ಕೂಜುಗೋಡು, ಶರತ್ ಕೂಜುಗೋಡು, ಅಶೋಕ್ ಕೂಜುಗೋಡು, ಅಜಿತ್ ಕೂಜುಗೋಡು ಉಪಸ್ಥಿತರಿದ್ದರು.

ಕಲ್ಮಕಾರು : ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಬಿಡುಗಡೆ

ಏ.09 ರಂದು ನಡೆಯಲಿರುವ ಕಲ್ಮಕಾರು ಶಕ್ತಿನಗರದ ಶ್ರೀ ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ವಾರ್ಷಿಕೋತ್ಸವ, ಗಣಪತಿ ಹವನ ಹಾಗೂ ಸಾಮೂಹಿಕ ಸತ್ಯನಾರಾಯಣ ದೇವರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾ.24 ರಂದು ನಡೆಯಿತು.ಈ ಸಂದರ್ಭದಲ್ಲಿ ಭಜನಾ ಮಂದಿರದ ಅಡಳಿತ ಸಮಿತಿ, ಭಜನಾ ಮಂಡಳಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರು, ಸೇವಾಪ್ರತಿನಿಧಿ, ಒಕ್ಕೂಟದ ಅಧ್ಯಕ್ಷರು ಹಾಗೂ...

ಕೊಲ್ಲಮೊಗ್ರು : ಕೊಚ್ಚಿಲ ಶ್ರೀ ಮಯೂರವಾಹನ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧಿಕಾರ ಸ್ವೀಕಾರ

ಕೊಲ್ಲಮೊಗ್ರು ಗ್ರಾಮದ ಕೊಚ್ಚಿಲ ಶ್ರೀ ಮಯೂರವಾಹನ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಅಧಿಕಾರ ಸ್ವೀಕಾರವು ಮಾ.20 ರಂದು ವಿದ್ಯುಕ್ತವಾಗಿ ನಡೆಯಿತು.ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶೇಖರ ಅಂಬೆಕಲ್ಲು ಹಾಗೂ ಬಳಗದವರು ಅಧಿಕಾರ ಸ್ವೀಕರಿಸಿದರು. ನೂತನ ವ್ಯವಸ್ಥಾಪನಾ ಸಮಿತಿ ಅಧಿಕಾರ ಸ್ವೀಕರಿಸುವವರೆಗೆ ಆಡಳಿತ ಅಧಿಕಾರಿಗಳಾಗಿದ್ದ ಮೋಹನ್ ಇವರು ಅಧಿಕಾರ ಹಸ್ತಾಂತರ ಮಾಡಿದರು.ಈ ಸಂದರ್ಭದಲ್ಲಿ ಸೇವಾ ಸಮಿತಿಯ ಅಧ್ಯಕ್ಷರಾದ...

ಕುಕ್ಕೆಯಲ್ಲಿ ಉಚಿತ ಸಾಮೂಹಿಕ ವಿವಾಹಹಸೆಮಣೆಗೇರಿದ 10 ನವ ಜೋಡಿಗಳು

ಸುಬ್ರಹ್ಮಣ್ಯ ಮಾ.24: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿವರ್ಷ ನಡೆಸಿಕೊಂಡು ಬರುವಂತೆ ಈ ವರ್ಷವೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಸೋಮವಾರ ಆದಿ ಸುಬ್ರಹ್ಮಣ್ಯ ಕಲ್ಯಾಣ ಮಂಟಪದಲ್ಲಿ ನಡೆಯಿತು. ಪೂರ್ವಾಹ್ನ ಗಂಟೆ 11:00 ರಿಂದ 12:00 ರವರೆಗಿನ ವೃಷಭ ಲಗ್ನದಲ್ಲಿ 10 ನವ ಜೋಡಿಗಳು ಮಾಂಗಲ್ಯ ಭಾಗ್ಯ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪರಸ್ಪರ...

ಸಂಪಾಜೆ : ಗ್ರಾ.ಪಂ.ವತಿಯಿಂದ ಅಶಕ್ತರಿಗೆ ನೆರವು

ಸಂಪಾಜೆ ಗ್ರಾಮ ಪಂಚಾಯಿತಿ ವತಿಯಿಂದ ವಿಕಲಚೇತನರಾದ ಸುರೇಶ ಗೂನಡ್ಕ ರವರ ಮನೆ ರಿಪೇರಿಗೆ ಸಹಾಯಧನ ಹಾಗೂ ಕಡೆಪಾಲ ನಿವಾಸಿ ಅನಿಶ್ ಪಿಂಟೋ ರವರಿಗೆ ವಾಟರ್ ಬೆಡ್ ನೀಡಲಾಯಿತು.‌ ಸಹಾಯಧನ ವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ ಸರಿತಾ ಡಿಸೋಜಾ, ಉಪಾಧ್ಯಕ್ಷರಾದ ಎಸ್. ಕೆ.ಹನೀಫ್,...

ಇಂದು ವಳಲಂಬೆಯಲ್ಲಿ ಸತ್ಯನಾರಾಯಣ ದೇವರ ಪೂಜೆ, ರಾತ್ರಿ ದುರ್ಗಾ ಪೂಜೆ – ನಾಳೆ ರಾಜ್ಯದೈವ, ಪುರುಷ ದೈವಗಳ ನೇಮೋತ್ಸವ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24 ರ ಬೆಳಗ್ಗೆ ಗಣಪತಿ ಹೋಮ, ಶತ ರುದ್ರಾಭಿಷೇಕ, ಲಕ್ಷ್ಮಿ ಸಹಿತ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಲಿದೆ. ಸಂಜೆ ಭಜನೆ ರಾತ್ರಿ ಶ್ರೀ ದುರ್ಗಾ ಪೂಜೆ ಮತ್ತು ಕಾರ್ತಿಕ ಪೂಜೆ ನಡೆಯಲಿದೆ. ರಾತ್ರಿ ದಿ| ಕೀರ್ತಿಶೇಷ ದೇವಕಿ ಸ್ಮರಣಾರ್ಥ ಶ್ರೀ ಪಂಜುರ್ಲಿ ಪ್ರಸಾದಿತ ಯಕ್ಷಗಾನ ಮಂಡಳಿ ಸಾಸ್ತಾನ...

ಉಬರಡ್ಕ : ಮಾವಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಬಡ ಕುಟುಂಬಕ್ಕೆ ಬೇಕಿದೆ ಸಹಾಯ ಹಸ್ತ

ಉಬರಡ್ಕ ಮಿತ್ತೂರು ಗ್ರಾಮದ ಉಬರಡ್ಜ ಚಂದ್ರಶೇಖರ ಎಂಬವರು ಮಾವಿನಕಾಯಿ ಜೊಯ್ಯುವ ವೇಳೆ ಮರದಿಂದ ಬಿದ್ದು ಗಂಬೀರ ಗಾಯಗೊಂಡು ಮಂಗಳೂರಿನ ಎ.ಜೆ. ಆಸ್ಪತ್ರೆಯ ತುರ್ತು ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌ ಆರ್ಥಿಕವಾಗಿ ಬಡತನದಲ್ಲಿರುವ ಇವರ ಕುಟುಂಬಕ್ಕೆ ಅಘಾತವನ್ನುಂಟು ಮಾಡಿದ್ದು ಚಿಕಿತ್ಸಾ ವೆಚ್ಚ ಭರಿಸಲು ಪರದಾಡುವಂತಾಗಿದೆ. ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಜಳನ್ನು ಹೊಂದಿರುವ ಈ ಬಡ ಕುಟುಂಬಕ್ಕೆ ಸಾರ್ವಜನಿಕ ಸಹೃದಯಿಗಳು...

ಬೆಳ್ಳಾರೆ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

ಸದೃಢ ಭಾರತ ಕಟ್ಟುವಲ್ಲಿ ಮಹಿಳೆಯರ ಪಾತ್ರ ಅಪಾರವಾಗಿದೆ ಎಂದು ಬೆಳ್ಳಾರೆ ಪೊಲೀಸ್ ಠಾಣೆಯ ಮಹಿಳಾ ಕಾನ್ಸ್ ಟೇಬಲ್ ಪೂಜಾ ಎಸ್ ನಾಯಕ ಹೇಳಿದರು. ಅವರು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಆಶ್ರಯ ದಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ...
Loading posts...

All posts loaded

No more posts

error: Content is protected !!