ಐನೆಕಿದು :- ಉಚಿತ ಆರೋಗ್ಯ ತಪಾಸಣಾ ಶಿಬಿರ

ನಿಸರ್ಗ ಯುವಕ ಮಂಡಲ ಐನೆಕಿದು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ ಇವುಗಳ ಸಂಯುಕ್ತಾಶ್ರಯದಲ್ಲಿ ಮಾ.06 ರಂದು ಐನೆಕಿದು ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಈ ಉಚಿತ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲಲಿತಾ ಗುಂಡಡ್ಕ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ...

ಮೇ. 13-15 : ತೋಟಂಪಾಡಿ ಉಳ್ಳಾಕುಲು ದೈವಸ್ಥಾನದ ಪುನರ್ ಪ್ರತಿಷ್ಠೆ – ಬ್ರಹ್ಮಕಲಶೋತ್ಸವ ಸಮಿತಿ ರಚನೆ

ಅರಂತೋಡು ಗ್ರಾಮದ ತೋಟಂಪಾಡಿ ಉಳ್ಳಾಕುಲು ದೈವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಮೇ 13,14,15 ರಂದು ನಡೆಸಲು ತೀರ್ಮಾನಿಸಲಾಗಿದೆ. ಇದರ ಅಂಗವಾಗಿ ಮಾ.6 ರಂದು ಅರಂತೋಡಿನ ಸಿರಿ ಸೌಧ ಸಭಾಂಗಣದಲ್ಲಿ ಸಮಾಲೋಚನಾ ನಡೆಯಿತು. ಸಭೆ ಅಧ್ಯಕ್ಷತೆಯನ್ನು ಯು.ಎಸ್. ಮೇದಪ್ಪ ಗೌಡ ವಹಿಸಿದ್ದರು. ಈ ಸಭೆಯಲ್ಲಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಸಮಿತಿ ರಚನೆ ಮಾಡಲಾಯಿತು. ಬ್ರಹ್ಮಕಲಶೋತ್ಸವ ಸಮಿತಿ...
Ad Widget

ಕೊಲ್ಲಮೊಗ್ರ: ಬಂಗ್ಲೆಗುಡ್ಡೆ ಸ.ಹಿ.ಪ್ರಾ ಶಾಲೆಯಲ್ಲಿ ಕ್ರೀಡೋತ್ಸವ

ಕೊಲ್ಲಮೊಗ್ರದ ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾ.04 ರಂದು ಕ್ರೀಡಾಕೂಟ ನಡೆಯಿತು.ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಬಾಲಸುಬ್ರಮಣ್ಯ ಎನ್.ಜಿ. ಇವರು ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿದ್ದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ಸೀತಾರಾಮ್ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಬೊಳಿಯಮ್ಮ, ಪ್ರಗತಿಪರ ಕೃಷಿಕರಾದ ಕೃಷ್ಣಮೂರ್ತಿ ಕೊಳಗೆ, ಕೊಲ್ಲಮೊಗ್ರು ಗ್ರಾಮ...

ಐವರ್ನಾಡು : ಪಾಲೆಪ್ಪಾಡಿ ಡಾಮರೀಕರಣ ಕಾಮಗಾರಿಗೆ ಗುದ್ದಲಿಪೂಜೆ – ಕಾಂಕ್ರೀಟ್ ರಸ್ತೆ ಉದ್ಘಾಟನೆ

ಪಾಲೆಪ್ಪಾಡಿ ಐವರ್ನಾಡು ರಸ್ತೆಯಲ್ಲಿ ಸುಮಾರು 1 ಕೋಟಿ ವೆಚ್ಚದಲ್ಲಿ ಡಾಮರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ಹಾಗೂ 30 ಲಕ್ಷದಲ್ಲಿ ಕಾಂಕ್ರೀಟಿಕರಣಗೊಂಡ ರಸ್ತೆಯ ಉದ್ಘಾಟನೆ ಕಾರ್ಯಕ್ರಮ ಮಾ.6 ರಂದು ನಡೆಯಿತು. ಬಂದರು,ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಐವರ್ನಾಡು ಸಹಕಾರಿ ಸಂಘದ ಅಧ್ಯಕ್ಷ ಎಸ್. ಎನ್. ಮನ್ಮಥ,...

ದಿ.ದಯಾನಂದ ನಾಟಿಕೇರಿ ಮನೆಗೆ ಸಚಿವ ಎಸ್.ಅಂಗಾರ ಭೇಟಿ

ಕಟ್ಟಿಂಗ್ ಮೆಷಿನ್ ತಾಗಿ ಮೃತಪಟ್ಟ ಐವರ್ನಾಡು ಗ್ರಾಮದ ನಾಟಿಕೇರಿ ನಿವಾಸಿ ದಯಾನಂದರವರ ಮನೆಗೆ ಸಚಿವ ಎಸ್. ಅಂಗಾರ ಅವರು ಮಾ.06 ರಂದು ಭೇಟಿ ನೀಡಿ ಸಾಂತ್ವನ ಹೇಳಿದರು. ಸರಕಾರದಿಂದ ಸಿಗುವ ಪರಿಹಾರ ನೀಡಲು ಶೀಘ್ರ ಕ್ರಮ‌ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಬೆಳ್ಳಾರೆ – ಬೂಡು ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಹಾಗೂ ಸಪರಿವಾರ ದೈವಗಳ ನೇಮೋತ್ಸವದ ಆಮಂತ್ರಣ ಬಿಡುಗಡೆ

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಗರಡಿ ಬೂಡು – ಬೆಳ್ಳಾರೆಯಲ್ಲಿ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಹಾಗೂ ಸಪರಿವಾರ ದೈವಗಳ ನೇಮೋತ್ಸವವು ಮಾ.14 ಮತ್ತು ಮಾ.15 ರಂದು ನಡೆಯಲಿದ್ದು ಆ ಪ್ರಯುಕ್ತ ಮಾ.5 ರಂದು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಆರ್.ಕೆ.ಭಟ್ ಕುರುಂಬುಡೇಲು ಆಮಂತ್ರಣ ಬಿಡುಗಡೆಗೊಳಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್...

ಪೆರುವಾಜೆ : ಜಲದುರ್ಗಾ ಕುಣಿತ ಭಜನಾ ತಂಡದಿಂದ ಭಜನಾ ಸೇವೆ

ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನ, ಶ್ರೀ ಜಲದುರ್ಗಾ ದೇವಿ ಭಜನಾ ಮಂಡಳಿ, ಶ್ರೀ ಜಲದುರ್ಗಾ ದೇವಿ ಮಹಿಳಾ ಭಜನಾ ಮಂಡಳಿ ಪೆರುವಾಜೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಏಕಾಹ ಭಜನೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಜಲದುರ್ಗಾ ಕುಣಿತ ಭಜನಾ ತಂಡ ಪೆರುವಾಜೆ ಇಲ್ಲಿಯ ಭಜಕರಿಂದ ಕುಣಿತ ಭಜನಾ ಸೇವೆ ನಡೆಯಿತು. ತಂಡದ ಸದಸ್ಯರು...

ಅಂಬ್ರೋಟಿ : ಶ್ರೀ ಉಳ್ಳಾಕುಲು ದೈವದ ನೇಮೋತ್ಸವ

ಮಂಡೆಕೋಲು ಗ್ರಾಮದ ಅಂಬ್ರೋಟಿ ಶ್ರೀ ಮುಚ್ಚಿರಡಿ ಉಳ್ಳಾಕುಲು ದೈವಸ್ಥಾನದಲ್ಲಿ ಮಾ. 5 ರಂದು ದೈವದ ನೇಮೋತ್ಸವ ಜರಗಿತು.

ಐನೆಕಿದು: ಶ್ರೀ ಪಾಷಾಣಮೂರ್ತಿ ದೈವದ ನೇಮೋತ್ಸವ

ಐನೆಕಿದು ಗ್ರಾಮದ ಕೆದಿಲ ನಾಗಪ್ಪ ಗೌಡ ಕೆದಿಲ ರವರ ಮನೆಯಲ್ಲಿ ಶ್ರೀ ಪಾಷಾಣಮೂರ್ತಿ ದೈವದ ನೇಮೋತ್ಸವವು ಮಾ.5ರಂದು ನಡೆಯಿತು. ಈ ಸಂದರ್ಭದಲ್ಲಿ ಕೆದಿಲ ಕುಟುಂಬಸ್ಥರು ಹಾಗೂ ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ – ಪೋಕ್ಸೋ ಪ್ರಕರಣದಡಿ ಐವರ್ನಾಡಿನ ಆರೋಪಿ ಬಂಧನ

ಪುತ್ತೂರು ಹಾಸ್ಟೆಲ್ ನಿಂದ ಕಾಲೇಜಿಗೆ ಹೋಗುತ್ತಿದ್ದ ಸುಳ್ಯದ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿಯಲ್ಲಿ ಐವರ್ನಾಡಿನ ಯುವಕನ ವಿರುದ್ಧ ಪುತ್ತೂರು ಮಹಿಳಾ ಠಾಣಾ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಐವರ್ನಾಡು ನಿವಾಸಿ ರಕ್ಷಿತ್ ಪೋಕ್ಸೋ ಪ್ರಕರಣದಲ್ಲಿ ಬಂಧಿತನಾದ ಆರೋಪಿ. ಸುಳ್ಯ ಮೂಲದ 16 ವರ್ಷದ ಅಪ್ರಾಪ್ತ ನೊಂದ ಬಾಲಕಿ ಪುತ್ತೂರು ಹಾಸ್ಟೆಲ್ ನಿಂದ...
Loading posts...

All posts loaded

No more posts

error: Content is protected !!