- Wednesday
- July 1st, 2026
ಕಟ್ಟಿಂಗ್ ಮೆಷಿನ್ ತಾಗಿ ಗಂಭೀರ ಗಾಯಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಇಂದು ಐವರ್ನಾಡಿನಿಂದ ವರದಿಯಾಗಿದೆ. ಐವರ್ನಾಡು ನಾಟಿಕೇರಿ ನಿವಾಸಿ ದಯಾನಂದ (36) ಮೃತಪಟ್ಟ ದುರ್ದೈವಿ. ಕಟ್ಟಿಂಗ್ ಮೆಷಿನ್ ತೊಡೆಯ ಭಾಗಕ್ಕೆ ತಾಗಿ ಗಂಭೀರ ಗಾಯಗೊಂಡ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ರಕ್ತಸ್ರಾವದಿಂದ ಮೃತಪಟ್ಟರೆಂದು ತಿಳಿದುಬಂದಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಏನೆಕಲ್ಲಿನ ಕಲಾಮಾಯೆ ಸಂಸ್ಥೆಯ ಸಾರಥ್ಯದಲ್ಲಿ ನಿರ್ಮಾಣಗೊಂಡಸುಧೀರ್ ಏನೆಕಲ್ ನಟಿಸಿ ನಿರ್ದೇಶಿಸಿರುವ ಅರೆಭಾಷೆ ಸಾಮಾಜಿಕ ಚಿತ್ರ "ಕೇಸ್ ಪುಸ್ಕ" ಮಾ. 06 ರಂದು ಸಂಜೆ 06 ಗಂಟೆಗೆ ಕನ್ನಡ ಭವನ ಅಂಬೆಟಡ್ಕ ಸುಳ್ಯ ಇಲ್ಲಿ ಬಿಡುಗಡೆಗೊಂಡು ಪ್ರದರ್ಶನ ಕಾಣಲಿದೆಸಿನಿಮಾದ ಕಥೆ, ಚಿತ್ರಕತೆ, ಸಂಭಾಷಣೆ, ಸಾಹಿತ್ಯ ಸುಧೀರ್ ಏನೆಕಲ್ ನಿರ್ವಹಿಸಿದ್ದುಛಾಯಾಗ್ರಾಹಕರಾಗಿ ಯಕ್ಷಿತ್ ಸಿ. ಕಲ್ಲುಗುಂಡಿ, ಪುಷ್ಪರಾಜ್ ಏನೆಕಲ್. ಗೀತೆ...
ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಭಕ್ತರು ಸೇರಿ 25 ಚಯರ್ ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಫೆ.28 ರಂದು ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಕುಮಾರ್ ರುದ್ರಪಾದ ಹಾಗೂ ಪ್ರಧಾನ ಪೂಜಾರಿ ರಾಮಚಂದ್ರ ಮಣಿಯಾಣಿ ಅವರಿಗೆ ನಾಗೇಶ್.ಎ.ವಿ ಹಾಗೂ ಗೋಪಾಲ್ ಕುಲ್ಕುಂದ ಅವರು ಚಯರ್ ಗಳನ್ನು ಹಸ್ತಾಂತರಿಸಿದರು.ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.02 ರಿಂದ 4 ರವರೆಗೆ...
ಕ್ಯಾಂಪ್ಕೋ ಸಂಸ್ಥೆ , ಮಂಗಳೂರು ಇದರ ವತಿಯಿಂದ "ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ" ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ದಿನಾಂಕ ಮಾ.01ರಂದು ಅಲಂಕಾರು ಕ್ಯಾಂಪ್ಕೋ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೋ ಸದಸ್ಯರಾದ ಶ್ರೀ ಅಚ್ಚುತ ಗೌಡ ಪಟ್ರಮೆ ಇವರ ತೆರೆದ ಹೃದಯ ಶಸ್ತ್ರಚಿಕಿತ್ಸೆಗಾಗಿ ಕ್ಯಾಂಪ್ಕೋ ವತಿಯಿಂದ ನೀಡಲಾದ ರೂ. 1,98,500/- ಚೆಕ್ ನ್ನು...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಆಯೋಜಿಸಿದ್ದ ಅರೆಭಾಷೆ ಕಥೆ, ಕವಿತೆ ಮತ್ತು ಲಲಿತ ಪ್ರಬಂಧ ಸ್ಪರ್ಧೆಯ ವಿಜೇತರನ್ನು ಆಯ್ಕೆ ಮಾಡಿದ್ದು, ವಿಜೇತರ ಹೆಸರನ್ನು ಪ್ರಕಟಿಸಿದೆ. ಅರೆಭಾಷೆ ಕಥಾ ಸ್ಪರ್ಧೆ ವಿಜೇತರು:ಪ್ರಥಮ: ಕಥೆ ಶೀರ್ಷಿಕೆ: ಕಾಲ್ ದಾರಿಲಿ ಹೆಜ್ಜೆ ಮೂಡಿಕನ- ಕುಕ್ಕುನೂರು ರೇಷ್ಮ ಮನೋಜ್ದ್ವಿತೀಯ: ಕಥೆ ಶೀರ್ಷಿಕೆ : ಬದ್ಕಿಗೆ ಅರ್ಥ ಬಾಕನ...
ವಿನೋಬನಗರದ ವಿವೇಕಾನಂದ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಫೆಬ್ರವರಿ 28ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಪ್ರಕಾಶ್ ಮೂಡಿತ್ತಾಯರು ವಿಶೇಷವಾದ ಜ್ಞಾನ ವಿಜ್ಞಾನ, ವಿಜ್ಞಾನವೇ ಸತ್ಯ, ಭಾರತೀಯ ಋಷಿಗಳೇ ವಿಜ್ಞಾನಿಗಳು ಎಂಬುದಾಗಿ ವಿಜ್ಞಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಸಂವಾದದ ಮೂಲಕ ತಿಳಿಸಿಕೊಟ್ಟರು. ನಂತರ"ಈ ಭೂಮಿ ಹುಟ್ಟಿದ್ದು ಹೇಗೆ ಹೇಗೆ ಹೇಗೆ"? ಎಂಬ ಅಭಿನಯ...
ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಫೆ.28ರಂದು ಅಡುಗೆ ತಯಾರಿ ಸ್ಪರ್ಧೆ ನಡೆಸಲಾಯಿತು. ಸ್ಪರ್ಧೆಯಲ್ಲಿ ಸುಮಾರು 60 ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧಾಳುಗಳಿಗೆ ಬೆಂಕಿ ಬಳಸದೆ ಒಂದು ತಿಂಡಿ ಹಾಗೂ ಪಾನೀಯ ಮತ್ತು ಬೆಂಕಿ ಬಳಸಿ ಒಂದು ತಿಂಡಿ ಹಾಗೂ ಪಾನೀಯ ತಯಾರಿಸುವಂತೆ ಸೂಚನೆ ನೀಡಲಾಗಿತ್ತು. ಅದರಂತೆ ವಿದ್ಯಾರ್ಥಿಗಳು ನೀರುಳ್ಳಿ ಬಜೆ, ಪೋಡಿ,...
ಬಾಳುಗೋಡು ಅಂಗನವಾಡಿ ಕೇಂದ್ರದಲ್ಲಿ ಸೆ.27 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಪಲ್ಸ್ ಪೋಲಿಯೋ ಲಸಿಕೆ ವಿತರಣಾ ಕಾರ್ಯಕ್ರಮವನ್ನು ನಡೆಸಲಾಯಿತು.ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಬಾಳುಗೋಡು ಅವರು ಮಗುವಿಗೆ 2 ಹನಿ ಪೋಲಿಯೋ ಲಸಿಕೆ ಹಾಕುವ ಮುಖಾಂತರ ಈ ಕಾರ್ಯಕ್ರಮವನ್ನು...
ರಕ್ತದಾನ ಎಲ್ಲಾ ದಾನಗಳಿಗಿಂತ ಶ್ರೇಷ್ಠವಾದುದು, ಒಬ್ಬ ರಕ್ತದಾನ ಮಾಡುವ ಮೂಲಕ ಮೂರು ಜೀವಗಳನ್ನು ಉಳಿಸಲು ಸಾಧ್ಯವಿದೆ. ಹಾಗಾಗಿ ರಕ್ತ ಜೀವ ಉಳಿಸುವ ಸಂಜೀವಿನಿಯಾಗಿದೆ. ಎಂದು ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜಿನ ಬ್ಲಡ್ ಬ್ಯಾಂಕ್ ಅಧಿಕಾರಿ ಡಾ. ಮಹಂತ ದೇವರು ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಹಮ್ಮಿಕೊಂಡ...
ಐವರ್ನಾಡು ಪ್ರಾ.ಕೃ.ಪ.ಸಹಕಾರ ಸಂಘದ ವತಿಯಿಂದ ಸಿಮೆಂಟ್ ಮಾರಾಟ ವಿಭಾಗ ಪ್ರಾರಂಭವಾಗಿದ್ದು ಬಾಲಕೃಷ್ಣ ಕೀಲಾಡಿ ಉದ್ಘಾಟಿಸಿದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ ವಹಿಸಿದ್ದರು. ಈ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಬಾಲಚಂದ್ರ ಪಲ್ಲತ್ತಡ್ಕ, ವಾಹನ ಚಾಲಕ ಮಾಲಕರ ಸಂಘದ ಅಧ್ಯಕ್ಷ ಅಚ್ಚುತ, ಕಟ್ಟಡ ಮಾಲಕರಾದ ಮಮತಾ ಸತೀಶ್, ಗ್ರಾಮಸ್ಥರು ಹಾಗೂ ಸಿಬ್ಬಂದಿಗಳು...
Loading posts...
All posts loaded
No more posts
