ಅಮರ ಸುಳ್ಯ ವಾಹನ ಚಾಲಕ ಮಾಲಕರ ಸಂಘದ ಮಹಾಸಭೆ : ಅಧ್ಯಕ್ಷರಾಗಿ ಪಿ.ಜಿ.ಜಯರಾಮ ಪುನರಾಯ್ಕೆ

ಅಮರ ಸುಳ್ಯ ವಾಹನ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ ಸಂಘದ ಪಾರ್ಕಿಂಗ್ ಸ್ಥಳದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪಿ.ಜಿ.ಜಯರಾಮ ರವರು ವಹಿಸಿದ್ದರು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಪಿ.ಜಿ.ಜಯರಾಮ, ಕಾರ್ಯದರ್ಶಿ ಯಾಗಿ ನಝೀರ್ ಶಾಂತಿನಗರ ಪುನರಾಯ್ಕೆಯಾದರು. 13 ಜನ ನಿರ್ದೇಶಕ ರನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿ ನಝೀರ್ ಶಾಂತಿನಗರ...

ಬೆಳ್ಳಾರೆ : ಹಿರಿಯ ಗೃಹರಕ್ಷಕರಿಗೆ ಸನ್ಮಾನ : ಪ್ರಭಾಕರ, ರಾಮಚಂದ್ರ,ನಾರಾಯಣ ಮಣಿಯಾಣಿ ಯವರನ್ನು ಸನ್ಮಾನಿಸಿದ ಡಾ| ಮುರಲೀ ಮೋಹನ್ ಚೂಂತಾರು

https://youtu.be/Xweyxr0EJzc ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಬೆಳ್ಳಾರೆ ಘಟಕದ ಹಿರಿಯ ಗೃಹರಕ್ಷಕರಿಗೆ ಫೆ.20 ರಂದು ಸನ್ಮಾನ ಕಾರ್ಯಕ್ರಮವು ಬೆಳ್ಳಾರೆ ಗೃಹರಕ್ಷಕದಳ ಘಟಕ ಕಛೇರಿಯಲ್ಲಿ ನಡೆಯಿತು. ಪ್ರಭಾಕರ್ ರವರು 1993ರಲ್ಲಿ ಗೃಹರಕ್ಷಕದಳ ಸದಸ್ಯರಾಗಿ ಸೇರ್ಪಡೆಯಾಗಿ, 29 ವರ್ಷಗಳಿಂದ ಸೇವೆಯನ್ನು ಸಲ್ಲಿಸುತ್ತ ಬಂದಿರುತ್ತಾರೆ. ರಾಮಚಂದ್ರ ರವರು 2000 ರಲ್ಲಿ ಗೃಹರಕ್ಷಕದಳ ಸದಸ್ಯನಾಗಿ ಸೇರ್ಪಡೆಯಾಗಿ 22 ವರ್ಷಗಳಿಂದ ಸೇವೆಯನ್ನು ಸಲ್ಲಿಸುತ್ತಿದ್ದಾರೆ,...
Ad Widget

ಶಿಕ್ಷಕರ ಸಹಕಾರಿ ಸಂಘದ ನಿಂತಿಕಲ್ಲು ಶಾಖೆಯ ಉದ್ಘಾಟನಾ ಕಾರ್ಯಕ್ರಮ

ಶಿಕ್ಷಕರ ಸಹಕಾರ ಸಂಘ ಕಡಬ ಇದರ ನೂತನ ಶಾಖೆಯು ನಿಂತಿಕಲ್ಲಿನಲ್ಲಿ ಫೆ. 19 ರಂದು ನಿಂತಿಕಲ್ಲು ಸಾನಿಧ್ಯ ಕಾಂಪ್ಲೆಕ್ಸ್‌ನಲ್ಲಿ ಉದ್ಘಾಟನೆಗೊಂಡಿತು. ಸವಣೂರು ವಿದ್ಯಾರಶ್ಮಿ ಸಮೂಹ ಸಂಸ್ಥೆಯ ಸಂಚಾಲಕ ಹಾಗೂ ಸಹಕಾರಿ ಧುರೀಣ ಸವಣೂರು ಸೀತಾರಾಮ ರೈ ಯವರು ಕಚೇರಿಯನ್ನು ಉದ್ಘಾಟಿಸಿದರು. ಬಳಿಕ ಸಭಾ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ ಸಹಕಾರಿ ಸಂಘಗಳ ಬಗ್ಗೆ...

ಕೊಡಗು ಸಂಪಾಜೆ : ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ

ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ಕಾರ್ಯಕ್ರಮವು ಫೆ.19 ರಂದು ನಡೆಯಿತು. ಈ ಕ್ರಾರ್ಯಕ್ರಮದಲ್ಲಿ ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಪ್ರತಾಪ್ ಸಿಂಹ, ವಿರಾಜಪೇಟೆ ಕ್ಷೇತ್ರ ಶಾಸಕರಾದ ಕೆ ಜಿ ಬೋಪಯ್ಯನವರು, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆಯ...

ಕುಂಡಡ್ಕ : ಸ್ನೇಹ ಸೌಹಾರ್ದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಕೂಟ

ಫ್ಯಾಮಿಲಿ ಫ್ರೆಂಡ್ಸ್ ಕುಂಡಡ್ಕ ಇದರ ಆಶ್ರಯದಲ್ಲಿ ಪುರುಷರ 58 ಕೆ.ಜಿ.ವಿಭಾಗದ ಹೊನಲು-ಬೆಳಕಿನ ಕಬಡ್ಡಿ ಪಂದ್ಯಾಕೂಟ ಸ್ನೇಹ ಸೌಹಾರ್ದ ಟ್ರೋಫಿ- 2022 ಫೆ.19 ರಂದು ಕುಂಡಡ್ಕ ಶ್ರೀ ಬ್ರಹ್ಮ ಮೊಗೇರ್ಕಳ ದೈವಸ್ಥಾನದ ವಠಾರದಲ್ಲಿ ನಡೆಯಿತು.ಸಭಾ ಕಾರ್ಯಕ್ರಮದ ಮುಖ್ಯ ಅತಿಥಿ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಮಾತನಾಡಿ ಕ್ರೀಡಾಕೂಟದ ಆಯೋಜನೆಯ ಹಿಂದೆ ಸಂಘಟಕರ ಪರಿಶ್ರಮ ಸಾಕಷ್ಟು ಇರುತ್ತದೆ....

ಕುಲ್ಕುಂದ : ಬಸವೇಶ್ವರ ದೇವಸ್ಥಾನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಬಸವೇಶ್ವರ ದೇವಸ್ಥಾನ ಬಸವನಮೂಲೆ ಕುಲ್ಕುಂದ ಇಲ್ಲಿ ಮಾ.01 ರಂದು ನಡೆಯುವ ಮಹಾಶಿವರಾತ್ರಿಯ ಆಮಂತ್ರಣ ಪತ್ರಿಕೆಯನ್ನು ಫೆ.19 ರಂದು ಶ್ರೀ ಬಸವೇಶ್ವರ ದೇವರ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ಶ್ರೀ ಬಸವೇಶ್ವರ ದೇವಸ್ಥಾನ ಕುಲ್ಕುಂದ ಇದರ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ

ಸುಳ್ಯ: ಎಬಿವಿಪಿ ವತಿಯಿಂದ ಶಿವಾಜಿ ಜಯಂತಿ ಆಚರಣೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ಇದರ ವತಿಯಿಂದ ಚೆನ್ನಕೇಶವ ಸಭಾಂಗಣದಲ್ಲಿ ಶಿವಾಜಿ ಮಹಾರಾಜ್ ಜಯಂತಿ ಕಾರ್ಯಕ್ರಮ ಫೆ.20 ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಡಾ. ಚಂದ್ರಶೇಖರ್ ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ನಾಗೇಶ್ ಮಣಿಯಾನ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಧ್ಯಕ್ಷತೆಯನ್ನು ಕುಲದೀಪ್ ಪೆಲ್ತಡ್ಕ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಲೂಕು ಸಹ ಸಂಚಾಲಕ ರವೀಶ್ ಕೇವಳ ,ಅಧ್ಯಯನ ವೃತ್ತ...

ಬಾಲಣ್ಣ ಗೌಡ ನಾಯರ್ ಹಿತ್ಲು ನಿಧನ

ಜಾಲ್ಸೂರು ಗ್ರಾಮದ ಸೋಣಂಗೇರಿ ನಾಯರ್ ಹಿತ್ಲು ಬಾಲಣ್ಣ ಗೌಡ ಫೆ. 17 ರಂದು ನಿಧನರಾದರು. ಮೃತರು ಪುತ್ರರಾದ ರುಕ್ಮಯ್ಯ ಗೌಡ, ಮೋಹನ್ ಗೌಡ, ಗಿರಿಧರ ಗೌಡ, ಪುತ್ರಿಯರಾದ ಚಿನ್ನಮ್ಮ, ಲೀಲಾವತಿ, ಭವಾನಿ, ಅಳಿಯಂದಿರು, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಉಜಿರಡ್ಕ : ಸ್ವಾಮಿ ಕೊರಗಜ್ಜ ದೈವದ ನರ್ತನ ಸೇವೆ ಸಂಪನ್ನ – ಮಗುವನ್ನು ಹಿಡಿದು ಹರಕೆ ಸ್ವೀಕರಿಸಿದ ಅಜ್ಜನ ನರ್ತನದ ವಿಡಿಯೋ ವೈರಲ್

ನಾಲ್ಕೂರು ಗ್ರಾಮದ ಉಜಿರಡ್ಕ ಸ್ವಾಮಿ ಕೊರಗಜ್ಜ ದೈವ ಸಾನಿಧ್ಯದಲ್ಲಿ ಫೆ.16 ಮತ್ತು 17 ರಂದು ಶ್ರೀ ಕೊರಗಜ್ಜ ದೈವದ ನರ್ತನ ಸೇವೆ ನಡೆಯಿತು.ಫೆ.16 ಬುಧವಾರ ಸಂಜೆ 5:00 ಗಂಟೆಯಿಂದ ಶ್ರೀ ಮಾತಾ ಅಮೃತ ಕುಟುಂಬ ಏನೆಕಲ್ಲು ಇವರಿಂದ ಭಜನಾ ಕಾರ್ಯಕ್ರಮಗಳು ನಡೆಯಿತು. ನಂತರ ಕಲ್ಲುರ್ಟಿ ದೈವದ ಭಂಡಾರ ತೆಗೆಯುವುದು ಹಾಗೂ ರಾತ್ರಿ ಕಲ್ಲುರ್ಟಿ ದೈವದ ನರ್ತನ...

ಕಲ್ಮಡ್ಕ : ಅಂಗವಿಕಲರಿಗೆ ಸೌಲಭ್ಯ ವಿತರಣೆ

ಕಲ್ಮಡ್ಕ ಗ್ರಾಮ ಪಂಚಾಯತ್ ನಿಂದ ಅಂಗವಿಕಲ ಯೋಜನೆಯಡಿ ಮಂಚ ಸೌಲಭ್ಯವನ್ನು ಕಲ್ಮಡ್ಕ ಗ್ರಾಮದ ಮುಚ್ಚಿಲ ಯೂನುಸ್ ಬಿನ್ ಇಸುಬು ಮತ್ತು ಜೈನಾಬಿ ಬಿನ್ ಮೂಸೆ ಬ್ಯಾರಿ ಇವರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷೆ ಹಾಜಿರಾ ಗಫೂರ್ ಮತ್ತು ಸದಸ್ಯ ಲೋಕೇಶ್ ಆಕ್ರಿಕಟ್ಟೆ ಹಾಗೂ ಕಾರ್ಯದರ್ಶಿ ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!