ಸಂಪಾಜೆ : ಗ್ರಾ.ಪಂ.ವತಿಯಿಂದ ಅಶಕ್ತರಿಗೆ ನೆರವು

ಸಂಪಾಜೆ ಗ್ರಾಮ ಪಂಚಾಯಿತಿ ವತಿಯಿಂದ ವಿಕಲಚೇತನರಾದ ಸುರೇಶ ಗೂನಡ್ಕ ರವರ ಮನೆ ರಿಪೇರಿಗೆ ಸಹಾಯಧನ ಹಾಗೂ ಕಡೆಪಾಲ ನಿವಾಸಿ ಅನಿಶ್ ಪಿಂಟೋ ರವರಿಗೆ ವಾಟರ್ ಬೆಡ್ ನೀಡಲಾಯಿತು.‌ ಸಹಾಯಧನ ವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ ಸರಿತಾ ಡಿಸೋಜಾ, ಉಪಾಧ್ಯಕ್ಷರಾದ ಎಸ್. ಕೆ.ಹನೀಫ್,...

ಇಂದು ವಳಲಂಬೆಯಲ್ಲಿ ಸತ್ಯನಾರಾಯಣ ದೇವರ ಪೂಜೆ, ರಾತ್ರಿ ದುರ್ಗಾ ಪೂಜೆ – ನಾಳೆ ರಾಜ್ಯದೈವ, ಪುರುಷ ದೈವಗಳ ನೇಮೋತ್ಸವ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24 ರ ಬೆಳಗ್ಗೆ ಗಣಪತಿ ಹೋಮ, ಶತ ರುದ್ರಾಭಿಷೇಕ, ಲಕ್ಷ್ಮಿ ಸಹಿತ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಲಿದೆ. ಸಂಜೆ ಭಜನೆ ರಾತ್ರಿ ಶ್ರೀ ದುರ್ಗಾ ಪೂಜೆ ಮತ್ತು ಕಾರ್ತಿಕ ಪೂಜೆ ನಡೆಯಲಿದೆ. ರಾತ್ರಿ ದಿ| ಕೀರ್ತಿಶೇಷ ದೇವಕಿ ಸ್ಮರಣಾರ್ಥ ಶ್ರೀ ಪಂಜುರ್ಲಿ ಪ್ರಸಾದಿತ ಯಕ್ಷಗಾನ ಮಂಡಳಿ ಸಾಸ್ತಾನ...
Ad Widget

ಉಬರಡ್ಕ : ಮಾವಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಬಡ ಕುಟುಂಬಕ್ಕೆ ಬೇಕಿದೆ ಸಹಾಯ ಹಸ್ತ

ಉಬರಡ್ಕ ಮಿತ್ತೂರು ಗ್ರಾಮದ ಉಬರಡ್ಜ ಚಂದ್ರಶೇಖರ ಎಂಬವರು ಮಾವಿನಕಾಯಿ ಜೊಯ್ಯುವ ವೇಳೆ ಮರದಿಂದ ಬಿದ್ದು ಗಂಬೀರ ಗಾಯಗೊಂಡು ಮಂಗಳೂರಿನ ಎ.ಜೆ. ಆಸ್ಪತ್ರೆಯ ತುರ್ತು ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌ ಆರ್ಥಿಕವಾಗಿ ಬಡತನದಲ್ಲಿರುವ ಇವರ ಕುಟುಂಬಕ್ಕೆ ಅಘಾತವನ್ನುಂಟು ಮಾಡಿದ್ದು ಚಿಕಿತ್ಸಾ ವೆಚ್ಚ ಭರಿಸಲು ಪರದಾಡುವಂತಾಗಿದೆ. ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಜಳನ್ನು ಹೊಂದಿರುವ ಈ ಬಡ ಕುಟುಂಬಕ್ಕೆ ಸಾರ್ವಜನಿಕ ಸಹೃದಯಿಗಳು...

ಬೆಳ್ಳಾರೆ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

ಸದೃಢ ಭಾರತ ಕಟ್ಟುವಲ್ಲಿ ಮಹಿಳೆಯರ ಪಾತ್ರ ಅಪಾರವಾಗಿದೆ ಎಂದು ಬೆಳ್ಳಾರೆ ಪೊಲೀಸ್ ಠಾಣೆಯ ಮಹಿಳಾ ಕಾನ್ಸ್ ಟೇಬಲ್ ಪೂಜಾ ಎಸ್ ನಾಯಕ ಹೇಳಿದರು. ಅವರು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಆಶ್ರಯ ದಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ...

ಕೆ ಎಸ್ ಎಸ್ ಕಾಲೇಜು ವಿದ್ಯಾರ್ಥಿಗಳಿಂದ ವಿಧಾನಸಭೆ ಭೇಟಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದಿಂದ 20 ಮಾರ್ಚ್ 2025 ವಿಧಾನಸಭೆಯ ಅಧಿವೇಶನಕ್ಕೆ ಅಂತಿಮ ಬಿ ಎ ವಿದ್ಯಾರ್ಥಿಗಳು ಶೈಕ್ಷಣಿಕ ಭೇಟಿ ನೀಡಿದರು. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಸ್ವಾತಿ ಕೆ ಮತ್ತು ಉಪನ್ಯಾಸಕ ಭರತ್ ಎಂ.ಎಲ್ ಅವರ ಮಾರ್ಗದರ್ಶನದಲ್ಲಿ ಮತ್ತು ಪ್ರಾಕ್ತನ ವಿದ್ಯಾರ್ಥಿ ಜಯಪ್ರಕಾಶ್ ಎಂ.ಸಿ a ಅವರ ಸಹಕಾರದೊಂದಿಗೆ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ...

ಜಿ ಎಲ್ ಆಚಾರ್ಯ ಜನ್ಮ ಶತಾಬ್ದಿ- ವಿವೇಕಾನಂದ ಇಂಜಿನಿಯರಿಂಗ್‌ ಕಾಲೇಜಿಗೆ ಕಾರಂಜಿ ಹಸ್ತಾಂತರ

ಪುತ್ತೂರು: ಕಾರಂಜಿಯಲ್ಲೂ ಒಂದು ಧ್ಯೇಯವಿದೆ, ಅದರ ನೀರು ಹೇಗೆ ಮೇಲಕ್ಕೆ ಚಿಮ್ಮುತ್ತದೋ ಅದೇ ರೀತಿ ನಮ್ಮ ಜೀವನೋತ್ಸಾಹವು ಮೇಲೆ ಏರುತ್ತಿರಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮುಂಭಾಗದಲ್ಲಿ, ದಿವಂಗತ ಜಿ.ಎಲ್.ಆಚಾರ್ಯ ಅವರ ಜನ್ಮ ಶತಾಬ್ಧಿಯ ಸನೆನಪಿಗಾಗಿ...

ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಅಮರ ಯೋಗ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಸ್ನೇಹ ಸಂಗಮ ಯೋಗ ಬಳಗ(ರಿ.), ಪತಂಜಲಿ ಯೋಗ ಕೇಂದ್ರ ಹಾಗೂ ಭುವನ್ ರಾಜ್ ಫೌಂಡೇಶನ್ ಮೈಸೂರು ಇವುಗಳ ಸಹಯೋಗದೊಂದಿಗೆ ಫೆ.23 ರಂದು ಮೈಸೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 8 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಶೈನಿ.ಕೊರಂಬಡ್ಕ, ಚಿನ್ನದ ಪದಕ,8 ವರ್ಷದಿಂದ 12 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಹವೀಕ್ಷ. ಎಸ್. ಆರ್ 4ನೇ ಸ್ಥಾನ,ಜಿಶಾ. ಕೊರಂಬಡ್ಕ...

ಅಡ್ತಲೆ : ರಸ್ತೆಯ ಸಾಮರ್ಥ್ಯಕ್ಕಿಂತ ಹೆಚ್ಚಿನ ಭಾರ ಹೊತ್ತು ಸಾಗುತ್ತಿದ್ದ ವಾಹನಕ್ಕೆ ತಡೆ – ಪೋಲೀಸ್ ದೂರು

ಅರಂತೋಡು – ಎಲಿಮಲೆ ಲೋಕೋಪಯೋಗಿ ರಸ್ತೆಯ ಸಾಮರ್ಥ್ಯಕ್ಕಿಂತ ಹೆಚ್ಚಿನ ಭಾರ ಹೊತ್ತು ಸಾಗುವ ವಾಹನಗಳಿಂದ ರಸ್ತೆಯ ಬಾಳ್ವಿಕೆ ಕಡಿಮೆಯಾಗಿ ಹೊಸದಾಗಿ ನಿರ್ಮಾಣಗೊಂಡ ರಸ್ತೆಗೂ ಹಾನಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅಡ್ತಲೆ ಭಾಗದ ನಾಗರಿಕರು ವಾಹನ ತಡೆದು ಪೋಲೀಸರಿಗೆ ಮಾಹಿತಿ ನೀಡಿದ ಘಟನೆ ಕಳೆದ ರಾತ್ರಿ ನಡೆದಿದೆ.ಈ ಹಿಂದೆಯೇ ರಸ್ತೆಯ ಧಾರಣಾ ಸಾಮರ್ಥ್ಯಕ್ಕಿಂತ ಅಧಿಕ ಭಾರದ ವಾಹನಗಳನ್ನು ನಿರ್ಬಂಧಿಸಿ...

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಹಕ್ಕಿಗಳಿಗೆ ನೀರಿಡುವ ಕಾರ್ಯಕ್ರಮ

ಇತ್ತೀಚಿನ ಕೆಲವು ದಿನಗಳಿಂದ ವಾತಾವರಣದ ಉಷ್ಣತೆ ಹೆಚ್ಚಾಗುತ್ತಿದ್ದು ಪ್ರಾಣಿ ಪಕ್ಷಿಗಳು ನೀರಿಲ್ಲದೆ ಸಾಯುತ್ತಿವೆ. ಒಂದು ಹನಿ ನೀರಿಗೂ ಪರಿತಪಿಸುವ ಈ ಸಂದರ್ಭದಲ್ಲಿ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಶಾಲಾ ಪರಿಸರದ ಸುತ್ತ ನೀರಿಡುವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಶಾಲಾ ಮುಖ್ಯ ಗುರುಗಳಾದ ಉದಯಕುಮಾರ್ ರೈ ಪ್ರಾಸ್ತಾವಿಕ ಮಾತನಾಡಿದರು. ಶಾಲಾ ಸ್ಕೌಟ್ಸ್...

ಸುಬ್ರಹ್ಮಣ್ಯದಲ್ಲಿ ವಿಶ್ವ ಮಹಿಳಾ ದಿನಾಚರಣೆ

ಇಂದು ಪ್ರಪಂಚದ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿರುವುದು ಮಾತ್ರವಲ್ಲದೆ, ಅತ್ಯುನ್ನತ ಹುದ್ದೆ ಅಲಂಕರಿಸಿರುತ್ತಾರೆ. ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ಹಿಡಿದು ತಾಲೂಕು, ಜಿಲ್ಲೆ, ರಾಜ್ಯ ಹಾಗೂ ದೇಶದ ಎಲ್ಲಾ ಸಾರ್ವಜನಿಕ ಸಂಸ್ಥೆಗಳಲ್ಲಿ, ಉದ್ದಿಮೆಗಳಲ್ಲಿ, ಸಂಘ-ಸಂಸ್ಥೆಗಳಲ್ಲಿ, ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು ಸಾರಥಿಯಾಗಿ ಮುನ್ನಡೆಯುತ್ತಿದ್ದಾರೆ. ಇಡೀ ನಾರಿ ಶಕ್ತಿ ನಮ್ಮ ದೇಶದ ಆಸ್ತಿ ಆಗಿರುತ್ತದೆ.” ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ...
Loading posts...

All posts loaded

No more posts

error: Content is protected !!