- Thursday
- July 2nd, 2026
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜರುಗುತ್ತಿದ್ದು, ಇಂದು(ಫೆ.16) ಬೆಳಗ್ಗೆ ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು. ದೇವಸ್ಥಾನದಲ್ಲಿ ಪೂರ್ವಾಹ್ನ ಕವಾಟೋದ್ಘಾಟನೆ, ತೈಲಾಭ್ಯಂಜನ, ಉಷಾಃಪೂಜೆ, ಆರಾಟು ಬಲಿ ನಡೆದು ಶ್ರೀ ದೇವರ ಅವಭೃಥ ಸ್ನಾನ ನಡೆಯಿತು. ಬಳಿಕ ದರ್ಶನ...
ಕಲ್ಮಡ್ಕ ಗ್ರಾಮ ಪಂಚಾಯತ್ ಇದರ ಆಶ್ರಯದಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಅಂಗವಾಗಿ ಕಲ್ಮಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಪುಸ್ತಕ ಗೂಡಿನ ಉದ್ಘಾಟನಾ ಕಾರ್ಯಕ್ರಮವು ಫೆಬ್ರವರಿ 14 ರಂದು ನಡೆಯಿತು.ಬಸ್ ನಿಲ್ದಾಣದ ಪುಸ್ತಕ ಗೂಡಿನ ಉದ್ಘಾಟನೆ ಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಹಾಜಿರಾ ಗಫೂರ್ ರವರು...
ಕಲ್ಮಡ್ಕ ಗ್ರಾಮದ ಮುಚ್ಚಿಲ ಮರಕ್ಕಡ ಕಾಚಿಲ ರಸ್ತೆಯ ಮುಚ್ಚಿಲ ಎಂಬಲ್ಲಿ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಯನ್ನು ಮುಚ್ಚಿಲ ಮಸೀದಿಯ ಧರ್ಮಗುರು ಝೈನುಲ್ ಅಭಿದೀನ್ ತಂಗಳ್ ಇವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹಾಜಿರಾ ಗಪೂರ್, ಉಪಾಧ್ಯಕ್ಷರಾದ ಮಹೇಶ್ ಕುಮಾರ್ ಕೆ ಎಸ್, ಸದಸ್ಯರಾದ ಲೋಕೇಶ್ ಆಕ್ರಿಕಟ್ಟೆ, ಲೋಕಯ್ಯ ನಾಯ್ಕ ಬೊಳಿಯೂರು, ಪಂಚಾಯತ್ ಅಭಿವೃದ್ಧಿ...
ಹಿಜಾಬ್ ಪ್ರಕರಣವನ್ನು ಎನ್ ಐ ಎ ನಿಂದ ತನಿಖೆ ನಡೆಸುವಂತೆ ವಿಶ್ವ ಹಿಂದೂ ಪರಿಷತ್ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದೆ. ಹಿಜಾಟ್ ಎಂಬುದು ಪ್ರಕರಣ ಮಾತ್ರವಲ್ಲ ಇದೊಂದು ಜಿಹಾದಿನ ಷಡ್ಯಂತ್ರ ಮುಸಲ್ಮಾನ ವಿದ್ಯಾರ್ಥಿಗಳ ಮೂಲಕ ಶಾಲಾ ಕಾಲೇಜುಗಳನ್ನು ಉಪಯೋಗಿಸಿ ಪ್ರತ್ಯೇಕತಾ ವಾದವನ್ನು ಬಿಂಬಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಈ ಪ್ರಕರಣದ ಹಿಂದೆ PFI SDPI ಮೂಲಭೂತವಾದಿ ಮುಸ್ಲಿಂ...
ಹಿಜಾಬ್ ಗಲಾಟೆ ಸುಳ್ಯಕ್ಕೂ ಕಾಲಿರಿಸಿದ್ದು, ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೆಲವರು ಹಿಜಾಬ್ ಧರಿಸಿ ಬಂದ ಘಟನೆ ಇಂದು ನಡೆದಿದೆ. ಹಿಜಬ್ ಧರಿಸಿದ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಪ್ರವೇಶ ನಿರಾಕರಿಸಿದ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಆವರಣದಲ್ಲಿ ವಿದ್ಯಾರ್ಥಿಗಳು ಸೇರಿದ್ದಾರೆ. ಸ್ಥಳಕ್ಕೆ ಪೋಲೀಸರು ಆಗಮಿಸಿದ್ದು ಬಂದೋಬಸ್ತ್ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.
ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸುಬ್ರಹ್ಮಣ್ಯ ಶಾಖೆಯ ಉದ್ಘಾಟನೆಯು ಫೆ. 17 ರಂದು ನಡೆಯಲಿದೆ ಎಂದು ಸೊಸೈಟಿ ಅಧ್ಯಕ್ಷ ಪಿ. ಸಿ. ಜಯರಾಮ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸುಬ್ರಹ್ಮಣ್ಯ ಶ್ರೀಕೃಪಾ ಕಾಂಪ್ಲೆಕ್ಸ್ ನಲ್ಲಿ ಸಂಘದ 16ನೇ ಶಾಖೆಯು ಕಾರ್ಯಾರಂಭ ಮಾಡಲಿದೆ. ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘ ಪ್ರವರ್ತಿಸಲ್ಪಟ್ಟಿರುವ ಸಂಘವು 1997ರಲ್ಲಿ...
ಎಡಮಂಗಲ ಗ್ರಾಮದ ಕಾರಣೀಕ ಕ್ಷೇತ್ರ ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪೂರ್ವಾಶಿಷ್ಟ ಸಂಪ್ರದಾಯ ಪ್ರಕಾರ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ಐದು ದಿವಸಗಳ ಉತ್ಸವಾದಿಗಳು ಸೇರಿದಂತೆ ವಾರ್ಷಿಕ ಜಾತ್ರೋತ್ಸವವು ಫೆ.12ರಂದು ಆರಂಭಗೊಂಡಿದ್ದು, ಫೆ.15 ಮಂಗಳವಾರದಂದು ಬೆಳಗ್ಗೆ ಉತ್ಸವ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ, ಬಲಿಯೊಂದಿಗೆ ಕೋಲಾಟ...
ಶ್ರೀಕೃಷ್ಣ ಭಜನಾ ಮಂದಿರ ಗುತ್ತಿಗಾರು ಇದರ ನೂತನ ಆಡಳಿತ ಮಂಡಳಿ ರಚನೆಗೊಂಡಿದ್ದು ಅಧ್ಯಕ್ಷರಾಗಿ ಬಿ ವಿ ರವಿಪ್ರಕಾಶ್ ಬಳ್ಳಡ್ಕ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಪೂರ್ಣಚಂದ್ರ ಬಿ ಬೊಮ್ಮದೇರೆ ಉಪಾಧ್ಯಕ್ಷರಾಗಿ ಸತೀಶ ಮೂಕಮಲೆ, ಜತೆ ಕಾರ್ಯದರ್ಶಿಯಾಗಿ ಲೀಲಾಧರ ಅಡ್ಡನಪಾರೆ, ಕೋಶಾಧಿಕಾರಿಯಾಗಿ ಲೋಹಿತ್ ಚೆಮ್ನೂರು, ಗೌರವಾಧ್ಯಕ್ಷರಾಗಿ ಕಿಶೋರ್ ಕುಮಾರ್ ಪಿ ಆರ್ ಆಯ್ಕೆಯಾದರು.ನಿರ್ದೇಶಕರುಗಳಾಗಿ ಪ್ರೀತಮ್ ಮುಂಡೋಡಿ, ನಿತ್ಯಾನಂದ ಕಾಂತಿಲ, ನಾರಾಯಣ...
ಮಾವಿನಕಟ್ಟೆ ಉದಯಗಿರಿ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಲ್ಲಿ ವಾರ್ಷಿಕ ದಿನದ ಅಂಗವಾಗಿ ಶ್ರೀ ದೈವಗಳಿಗೆ ತಂಬಿಲ ಸೇವೆ ಫೆ.10 ರಂದು ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ರಾಧಾಕೃಷ್ಣ ಶ್ರೀ ಕಟೀಲ್, ಬಾಸ್ಕರ ಬಾಳೆತೋಟ, ಕೃಷ್ಣಪ್ಪ ಗೌಡ ಮಾವಿನಕಟ್ಟೆ, ನಿತ್ಯಾನಂದ ಪಾರೆಪ್ಪಾಡಿ, ರಾಮಚಂದ್ರ ನಾಗನಗದ್ದೆ, ಜಗತ್ ಪಾರೆಪ್ಪಾಡಿ, ಪರಿಚಾರಕರಾದ ತೀರ್ಥರಾಮ ಹಲಸಿನಡ್ಕ ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.
Loading posts...
All posts loaded
No more posts
