ಶ್ರಾವ್ಯ ಶೇಡಿಕಜೆ ಎಂ.ಬಿ.ಬಿ.ಎಸ್ ಗೆ ಆಯ್ಕೆ

2021-22ನೇ ಸಾಲಿನ ಮೆಡಿಕಲ್ ಕೋರ್ಸ್ ಗೆ ನಡೆಸುವ ರಾಷ್ಟ್ರಮಟ್ಟದ ನೀಟ್ ಪರೀಕ್ಷೆಯಲ್ಲಿ ಶ್ರಾವ್ಯ ಶೇಡಿಕಜೆಯವರು ಎಂ.ಬಿ.ಬಿ.ಎಸ್ ಕೋರ್ಸ್ ಗೆ ಆಯ್ಕೆಯಾಗಿರುತ್ತಾರೆ. ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡಿರುವ ಈಕೆ ರಾಷ್ಟ್ರೀಯ ಕರಾಟೆ ಹಾಗೂ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟಗಳಲ್ಲಿ ಭಾಗವಹಿಸಿರುತ್ತಾರೆ. ಸಾಂಸ್ಕೃತಿಕವಾಗಿ ನೃತ್ಯ, ಸಂಗೀತ, ಭಾಷಣ ಮುಂತಾದ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಇವರು ಗಳಿಸಿರುತ್ತಾರೆ. 'ಇಂಡಿಯನ್ ಇನ್‌ಸ್ಟಿಟ್ಯೂಟ್...

ಭಕ್ತಿ, ಸಡಗರದ ಕಾಂಚೋಡು ಜಾತ್ರೋತ್ಸವ ಸಂಪನ್ನ

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11ರಿಂದ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆದು ಫೆ.14ರಂದು ಸಂಪನ್ನಗೊಂಡಿತು. ಜಾತ್ರೋತ್ಸವದ ಅಂಗವಾಗಿ ಫೆ.11ರಂದು ಸಂಜೆ ತಂತ್ರಿಗಳವರ ಆಗಮನದ ಬಳಿಕ ಊರ ಭಕ್ತಾದಿಗಳಿಂದ ಬಾಳಿಲದಿಂದ ಮೆರವಣಿಗೆ ಮೂಲಕ ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ಇವರಿಂದ ಚೆಂಡೆವಾದನದೊಂದಿಗೆ ಹಸಿರುವಾಣಿಯನ್ನು...
Ad Widget

ಗುತ್ತಿಗಾರು : ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಬಿ.ಸಿ. ಟ್ರಸ್ಟ್ ಗುತ್ತಿಗಾರು ವಲಯದ ಗುತ್ತಿಗಾರಿನಲ್ಲಿ ಗ್ರಾಹಕ ಡಿಜಿಟಲ್ ಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರೇವತಿ ದೀಪ ಬೆಳಗಿಸಿ ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ ಲ್ಯಾಪ್ ಟಾಪ್ ಹಸ್ತಾಂತರಿಸಿದರು. ವಲಯ ಮೇಲ್ವಿಚಾರಕ ಮುರಳೀಧರ ರವರು ಸರಕಾರದ ಹಾಗೂ ಯೋಜನೆ ಕಾರ್ಯಕ್ರಮಗಳ...

ಸುಳ್ಯ : ಸೌಭಾಗ್ಯ ವಿಕಲಚೇತನರ ಸಹಕಾರ ಸಂಘದ ಸದಸ್ಯರ ಪ್ರಥಮ ಸಭೆ

ಸೌಭಾಗ್ಯ ವಿಕಲಚೇತನರ ಪತ್ತಿನ ಸಹಕಾರ ಸಂಘ ಸುಳ್ಯ ಇದರ ಸರ್ವಸದಸ್ಯರ ಸಭೆ ಫೆ.10 ರಂದು ಸುಳ್ಯದ ಪ್ರಧಾನ ಕಛೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಮುಖ್ಯ ಪ್ರವರ್ತಕ ಬಾಲಚಂದ್ರ ( ಭರತ್) ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯು ಸೂಚನ ಪತ್ರದ ನಿಯಮಗಳ ಪ್ರಕಾರ ನಡೆದು ನಿಬಂಧಕರು ಅನುಮೋದಿಸಿದ ಉಪನಿಯಮಗಳು, ನೊಂದಾವಣಿ ಪ್ರಮಾಣ ಪತ್ರದ ಕುರಿತು ಹಾಗೂ ನೋಂದಾವಣೆ ಮುನ್ನ ಹೊಂದಿದ...

ಐವರ್ನಾಡು: ಕ್ರಿಕೆಟ್ ಪಂದ್ಯಾಟ

ಐವರ್ನಾಡಿನ ಮಾಡತ್ತಕಾನ ಸ್ಪೋಟ್ಸ್ ಕ್ಲಬ್ ಇದರ ಸಹಕಾರದೊಂದಿಗೆ, ಐಪಿಎಲ್ ಸಮಿತಿ ಇದರ ಆಶ್ರಯದಲ್ಲಿ ಆರನೇ ವರ್ಷದ ಆರು ತಂಡಗಳ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟವು ಫೆ.13 ರಂದು ಐವರ್ನಾಡು ‌ಫ್ರೌಡಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.ಪಂದ್ಯಾಟದ ಉದ್ಘಾಟನೆಯನ್ನು ಐವರ್ನಾಡು ಪ್ರಾ.ಕೃ.ಪ ಸಹಕಾರ ಸಂಘದ ಅಧ್ಯಕ್ಷರಾದ ಎಸ್.ಎನ್.ಮನ್ಮಥ ನೆರವೇರಿಸಿದರು. ಪಂದ್ಯಾಟದಲ್ಲಿ ಕರುಣಾಕರ ಮಡ್ತಿಲ ಮಾಲಕತ್ವದ ಮಡ್ತಿಲ ಬ್ಲಾಸ್ಟಸ್೯, ವಾಸುದೇವ ಬೊಳುಬೈಲು...

ಮಂಡೆಕೋಲು : ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಗುದ್ದಲಿಪೂಜೆ

ಮಂಡೆಕೋಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೇರಾಲು ಕುಂಟಿಕಾನ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿತು. ಇದಕ್ಕೆ ಸಚಿವ ಅಂಗಾರರು 20 ಲಕ್ಷ ಅನುದಾನ ಒದಗಿಸಿದ್ದರು. ಈ ಸಂದರ್ಭದಲ್ಲಿ ಮಾಜಿ ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ಬಿಜೆಪಿ ಮಂಡಲ ಸಮಿತಿ ಪ್ರ.ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಅಜ್ಜಾವರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಯರಾಜ್ ಕುಕ್ಕೇಟಿ, ಗ್ರಾ.ಪಂ.ಅಧ್ಯಕ್ಷೆ ವಿನುತಾ ಪಾತಿಕಲ್ಲು,...

ಬೆಳ್ಳಾರೆ: ಅಜಪಿಲ ಜಾತ್ರಾ ಸಂಭ್ರಮ- ಜಾತ್ರೋತ್ಸವದ ಅಂಗವಾಗಿ ಶ್ರೀ ದೇವರ ನೃತ್ಯ ಬಲಿ

ಫೆ.16ರಂದು ಹಗಲು ದರ್ಶನ ಬಲಿ, ಬಟ್ಟಲು ಕಾಣಿಕೆ, ರಾತ್ರಿ ಅಗ್ನಿಗುಳಿಗ ದೈವದ ನೇಮೋತ್ಸವ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.12ರಿಂದ ಫೆ.16ರ ತನಕ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗುತ್ತಿದ್ದು, ಫೆ.14 ಸೋಮವಾರದಂದು ಬೆಳಗ್ಗೆ ಗಣಪತಿ ಹವನ, ಉಷಾಃಪೂಜೆ,...

ಬೆಳ್ಳಾರೆ ವಿಹಿಂಪ ವತಿಯಿಂದ ವಸ್ತ್ರಸಂಹಿತೆ ಜಾರಿಗೊಳಿಸುವಂತೆ ಮನವಿ

ವಿಶ್ವ ಹಿಂದೂ ಪರಿಷತ್ ವಾಲ್ಮೀಕಿ ಶಾಖೆ ಬೆಳ್ಳಾರೆ ವತಿಯಿಂದ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸುವಂತೆ ಆಡಳಿತಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಅಧಿಕಾರಿ ಶ್ರೀಮತಿ ಸುಹಾನ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಸುನಿಲ್ ರೈ ಪುಡ್ಕಜೆ, ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯರಾದ ಸುರೇಶ್ ಶೆಟ್ಟಿ ಪನ್ನೆ, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ...

ಫೆ.12-ಫೆ.18: ಎಡಮಂಗಲ ಜಾತ್ರೋತ್ಸವ- ವೈಭವದ ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ

ಎಡಮಂಗಲ ಗ್ರಾಮದ ಕಾರಣೀಕ ಕ್ಷೇತ್ರ ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪೂರ್ವಾಶಿಷ್ಟ ಸಂಪ್ರದಾಯ ಪ್ರಕಾರ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ಐದು ದಿವಸಗಳ ಉತ್ಸವಾದಿಗಳು ಸೇರಿದಂತೆ ವಾರ್ಷಿಕ ಜಾತ್ರೋತ್ಸವವು ಫೆ.12ರಂದು ಆರಂಭಗೊಂಡಿದ್ದು, ಫೆ.14 ಸೋಮವಾರದಂದು(ಇಂದು) ಬೆಳಗ್ಗೆ ಬಲಿ ಹೊರಟು ಉತ್ಸವ "ಶ್ರೀ ದೇವರ ದರ್ಶನ ಬಲಿ", ಬಟ್ಟಲು ಕಾಣಿಕೆ, ಮಹಾಪೂಜೆ, ಪ್ರಸಾದ ವಿತರಣೆ ನಡೆದು...

ಸುಬ್ರಹ್ಮಣ್ಯ: ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ನುಡಿನಮನ ಕಾರ್ಯಕ್ರಮ

ಸುಬ್ರಹ್ಮಣ್ಯ ಎ.ಬಿ.ವಿ.ಪಿ ವತಿಯಿಂದ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಸೇನೆಯ ಯೋಧರಿಗೆ 'ನುಡಿ ನಮನ' ಕಾರ್ಯಕ್ರಮವನ್ನು ವಾಲ್ಮೀಕಿ ಆಶ್ರಮ ಶಾಲೆ ಸುಬ್ರಹ್ಮಣ್ಯದಲ್ಲಿ ಫೆ.14ರಂದು ನಡೆಸಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರಾದ ದಿನೇಶ್ ಸಿ ಡಿ ಹಾಗೂ ಯತೀಶ್ ಇವರನ್ನು ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಹರೀಶ್ ಕಾಮತ್ ಹಾಗೂ ನಿವೃತ್ತ ಯೋಧರಾದ ದಿನೇಶ್ ಸಿ ಡಿ ಮತ್ತು ಯತೀಶ್...
Loading posts...

All posts loaded

No more posts

error: Content is protected !!