ಮಂಡೆಕೋಲು : ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಸದಾನಂದ ಮಾವಜಿ

ಮಂಡೆಕೋಲು ಶ್ರಿ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ 9 ಜನ ನೂತನ ಸದಸ್ಯರನ್ನು ಸರಕಾರ ಈ ಹಿಂದೆ ಆಯ್ಕೆ ಮಾಡಿತ್ತು. ಸಮಿತಿಯ ಮೊದಲ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಸದಾನಂದ ಮಾವಜಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಸಮಿತಿಯಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಶಿವರಾಮ ಗೌಡ ಪೇರಾಲು, ಕೃಷಿಕ ಶುಭಕರ ಬೊಳುಗಲ್ಲು, ಉದ್ಯಮಿ ವಿಕಾಸ್ ಮೀನಗದ್ದೆ, ಸತೀಶ್ ಕಣೆಮರಡ್ಕ,...

ಮಾ.31:ತಾಲೂಕು ವೈದ್ಯಾಧಿಕಾರಿ ನಂದಕುಮಾರ್ ನಿವೃತ್ತಿ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಬಿ ಕಮಿಟಿ ವತಿಯಿಂದ ಸನ್ಮಾನ

ಮಾ.31 ರಂದು ನಿವೃತ್ತಿ ಹೊಂದಲಿರುವ ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ| ನಂದಕುಮಾ‌ರ್ ಬಾಳಿಕಳರವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಬಿ ಕಮಿಟಿ ವತಿಯಿಂದ ಸನ್ಮಾನಿಸಲಾಯಿತು. ಮಾ.೨೦ ರಂದು ಡಾ.ನಂದಕುಮಾರ್‌ರು ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಡಾ.ರೇಣುಕಾ ಪ್ರಸಾದ್ ಕೆ.ವಿ. ಹಾಗೂ ಡಾ. ಜ್ಯೋತಿಆರ್ ಪ್ರಸಾದ್ ನೇತೃತ್ವದ ಅಕಾಡೆಮಿ ಆಫ್‌ ಲಿಬರಲ್ ಎಜುಕೇಶನ್ (ರಿ) ಸುಳ್ಯ ಕಮಿಟಿ `ಬಿ'...
Ad Widget

ಕೆ. ಎಸ್.ಎಸ್ ಕಾಲೇಜಿನಲ್ಲಿ ಜಾಗತಿಕ ತಾಪಮಾನ ಏರಿಕೆ ಕುರಿತು ಅತಿಥಿ ಉಪನ್ಯಾಸ

ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದೊಂದಿಗೆ ಅರ್ಥಶಾಸ್ತ್ರ ವಿಭಾಗದಿಂದ 01/03/2025 ರಂದು ಜಾಗತಿಕ ತಾಪಮಾನ ಏರಿಕೆ ಕುರಿತು ಅತಿಥಿ ಉಪನ್ಯಾಸವನ್ನು ಆಯೋಜಿಸಲಾಗಿತ್ತು.ಖ್ಯಾತ ವನ್ಯಜೀವಿ ಸಂರಕ್ಷಕ ಭುವನೇಶ್ ಕೈಕಂಬ ಅವರು ಸಂಪನ್ಮೂಲ ವ್ಯಕ್ತಿಯಾಗಿ ಅರಣ್ಯನಾಶ, ಪರಿಸರ ಮಾಲಿನ್ಯ ಮತ್ತು ಹಸಿರುಮನೆ ಅನಿಲ ಹೊರಸೂಸುವಿಕೆ ಮುಂತಾದ ಜಾಗತಿಕ ತಾಪಮಾನ ಏರಿಕೆಗೆ ಕಾರಣವಾಗುವ ಮಾನವ...

ದುಗ್ಗಲಡ್ಕ ಶ್ರೀ ದುಗ್ಗಲಾಯ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವ

ದುಗ್ಗಲಡ್ಕ ಶ್ರೀ ದುಗ್ಗಲಾಯ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವದ ಪ್ರಯುಕ್ತ ಮಾ.19ರಂದು ರಾತ್ರಿ ಶ್ರೀ ರುಧಿರ ಚಾಮುಂಡಿ ದೈವದ ನೇಮೋತ್ಸವ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಸಂಜೆ ನಡುಬೆಟ್ಟು ಚಾವಡಿಯಿಂದ ಶ್ರೀ ದೈವಗಳ ಭಂಡಾರ ಆಗಮಿಸಿ ರುಧಿರ ಚಾಮುಂಡಿ ದೈವದ ನೇಮೋತ್ಸವ,ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ...

ಮಾರ್ಚ್ 20 : ವಿಶ್ವ ಬಾಯಿ ಆರೋಗ್ಯ ದಿ‌ನ

ಪ್ರತಿ ವರ್ಷ ಮಾರ್ಚ್ 20ರಂದು ವಿಶ್ವ ಬಾಯಿ ಆರೋಗ್ಯ ದಿನ ಎಂದು ಆಚರಿಸಿ ಬಾಯಿ ಆರೋಗ್ಯದ ಬಗ್ಗೆ ಜನರಲ್ಲಿ ಜಾಗ್ರತಿ ಮೂಡಿಸಲಾಗುತ್ತದೆ. 2007ರಲ್ಲಿ ಈ ಆಚರಣೆ ಆರಂಭವಾಯಿತು. ಬಾಯಿಯ ಆರೋಗ್ಯವನ್ನು ಕಾಪಾಡುವುದು ಹೇಗೆ ಮತ್ತು ಬಾಯಿ ಆರೋಗ್ಯವನ್ನು ಕಾಪಾಡಿಕೊಳ್ಳುವುದರಿಂದ ದೇಹದ ಆರೋಗ್ಯದ ಮೇಲೆ ಉಂಟಾಗುವ ಧನ್ಮಾತ್ಮಕ ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಸದುದ್ದೇಶ ಈ...

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು ರಾಜ್ಯಮಟ್ಟದ ಅತ್ಲೆಟಿಕ್ ಮೀಟ್‌ನಲ್ಲಿ ಚಿನ್ನ ಹಾಗೂ ಬೆಳ್ಳಿಯ ಪದಕ

ವಿಶ್ವೇಶ್ವರಾಯ ತಾಂತ್ರಿಕ ಮಹಾವಿದ್ಯಾಲಯ, ಬೆಳಗಾವಿ, ಜೆ.ಎನ್.ಎನ್.ಸಿ.ಇ, ಶಿವಮೊಗ್ಗದಲ್ಲಿ ನಡೆದ 2024-25ನೇ ಸಾಲಿನ ವಿ.ಟಿ.ಯು ರಾಜ್ಯಮಟ್ಟದ ಅತ್ಲೆಟಿಕ್ ಮೀಟ್‌ನಲ್ಲಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು, ಸುಳ್ಯ ಇದರ ಕಂಪ್ಯೂಟಕ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ, 8ನೇ ಸೆಮಿಸ್ಟರ್ ವಿದ್ಯಾರ್ಥಿ ಟಿಷನ್ ಮಾದಪ್ಪ ಅವರು 21 ಕಿಲೋ ಮೀಟರ್ ಹಾಗೂ 5೦೦೦ ಮಿ. ಓಟದಲ್ಲಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡು ಅದಲ್ಲದೆ...

ಪಂಜ : ಯುವ ತೇಜಸ್ಸು ಬಳಗದಿಂದ ಸಹಾಯಧನ‌ ಹಸ್ತಾಂತರ

ಐವತೊಕ್ಲು ಗ್ರಾಮದ ಪಲ್ಲೋಡಿ ನಿವಾಸಿ ,ಮೀನಾಕ್ಷಿ ಇವರು ಕಳೆದ ಒಂದು ವರ್ಷದಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಇವರ ಚಿಕಿತ್ಸೆಗಾಗಿ ಯುವ ತೇಜಸ್ಸು ಬಳಗದಿಂದ ಆರ್ಥಿಕ ಸಹಾಯಧನದ ₹. 12000/- ಚೆಕ್ ಅನ್ನು ಮಾ.16ರಂದು ಅವರ ನಿವಾಸದಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಯುವ ತೇಜಸ್ಸು ಬಳಗದ ಸದಸ್ಯರು ಉಪಸ್ಥಿತರಿದ್ದರು.

ಎಸ್.ಡಿ.ಪಿ.ಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಸಭೆ – ಚುನಾವಣೆಗೆ ಸಿದ್ಧತೆ

ಎಸ್.ಡಿ.ಪಿ.ಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ಅಧ್ಯಕ್ಷರಾದ ಮೀರಾಝ್ ಸುಳ್ಯ ರವರ ಅಧ್ಯಕ್ಷತೆಯಲ್ಲಿ ಸವಣೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು.ಗ್ರಾಮಾಂತರ ಜಿಲ್ಲಾ ಪ್ರ.ಕಾರ್ಯದರ್ಶಿ ಸಿದ್ದೀಕ್ ಅಲೆಕ್ಕಾಡಿ ವೀಕ್ಷಕರಾಗಿ ಆಗಮಿಸಿ ಸಲಹೆ ಸೂಚನೆಗಳನ್ನು ನೀಡಿದರು.ಸಭೆಯಲ್ಲಿ ಮುಂಬರುವ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ವಿಷಯದಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಪ್ರತೀ ಬ್ರಾಂಚ್ ಮಟ್ಟದಿಂದ ಆಯಾಯ...

ಇನ್ಸ್‌ಪೈಯರ್ ಅವಾರ್ಡ್‌ ಗೆ ಬೆಳ್ಳಾರೆ ಕೆಪಿಎಸ್ ವಿದ್ಯಾರ್ಥಿಗಳು ಆಯ್ಕೆ

ಭಾರತ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಆಯೋಜಸಲ್ಪಡುತ್ತಿರುವ ಇನ್ಸ್‌ಪೈಯರ್ ಅವಾರ್ಡ್‌ ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಪ್ರಾಥಮಿಕ ವಿಭಾಗದ ಇಬ್ಬರು ವಿದ್ಯಾರ್ಥಿಗಳು ಅವಾರ್ಡ್‌ಗೆ ಆಯ್ಕೆಯಾಗಿರುತ್ತಾರೆ. 6ನೇ ಆಂಗ್ಲ ಮಾಧ್ಯಮ ವಿಭಾಗದ ಪಿ ಮನ್ವಿ ಹಾಗೂ ಅಹನ್ ಗೌಡ ಕೆ ಎಚ್ ಆಯ್ಕೆಯಾದ ವಿದ್ಯಾರ್ಥಿಗಳು. ವಿಜ್ಙಾನ ಶಿಕ್ಷಕ ದಿನೇಶ್ ಮಾಚಾರ್ ಇವರ...

ವಿಜ್ರಂಭಣೆಯಿಂದ ನಡೆದ ಮಾವಿನಕಟ್ಟೆ ವಿಷ್ಣುಮೂರ್ತಿ ದೈವದ ಒತ್ತೆಕೋಲ – ದೈವದ ಕೃಪೆಗೆ ಪಾತ್ರರಾದ ಸಾವಿರಾರು ಭಕ್ತರು

ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.18 ಮತ್ತು 19 ರಂದು ಶ್ರೀ ದೈವದ ಒತ್ತೆಕೋಲ ಮಹೋತ್ಸವ ನಡೆಯಿತು. ಮಾ.18 ರಂದು ಬೆಳಿಗ್ಗೆ ಗಣಪತಿ ಹವನ , ಶುದ್ಧಿ ಕಲಶ, ಮೇಲೇರಿ ಕಾರ್ಯಕ್ರಮ , ಅಶ್ವತ್ಥ ಪೂಜೆ ಮದ್ಯಾಹ್ನ ಅನ್ನ ಸಂತರ್ಪಣೆ, ರಾತ್ರಿ ಭಂಡಾರ ತೆಗೆಯುವುದು, ಮೇಲೇರಿಗೆ ಅಗ್ನಿ ಸ್ಪರ್ಶ, ಸಾರ್ವಜನಿಕ ಅನ್ನ ಸಂತರ್ಪಣೆ ಹಾಗೂ ಕುಳಿಚಾಟ...
Loading posts...

All posts loaded

No more posts

error: Content is protected !!