ಸಮಾಜ ಸೇವಕ ರವಿ ಕಕ್ಕೆಪದವು ಅವರಿಗೆ ಗೌರವ ಡಾಕ್ಟರೇಟ್‌

ಸುಬ್ರಹ್ಮಣ್ಯದ ಉದ್ಯಮಿ, ಸಮಾಜಸೇವಕ, ಜೇಸಿಐ ರಾಷ್ಟ್ರೀಯ ಪ್ರಶಸ್ತಿ ವಿಜೇತ ರವಿ ಕಕ್ಕೆಪದವು ಅವರ ಸೇವೆಯನ್ನು ಗುರುತಿಸಿ ಚೆನ್ನೈನ “ಏಶಿಯನ್ ಕಲ್ಟರ್ ರಿಸರ್ಚ್ ಯುನಿವರ್ಸಿಟಿ ಗೌರವ ಡಾಕ್ಟರೇಟ್ ನೀಡಲಿದೆ. ತಮಿಳುನಾಡಿನ ಹೊಸೋರು ನಲ್ಲಿ ಡಾಕ್ಟರೇಟ್ ಪ್ರದಾನ ಸಮಾರಂಭ ಫೆ. 3 ರಂದು ನಡೆಯಲಿದೆ

ಬಶೀರ್ ಆರ್.ಬಿ. ಅವರಿಗೆ ಡಾಕ್ಟರೇಟ್ ಗೌರವ : ಫೆ.3 ರಂದು ತಮಿಳುನಾಡಿನಲ್ಲಿ ಪ್ರದಾನ

ಪೈಚಾರ್‌ ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾಗಿ ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ಗುರುತಿಸಲ್ಪಟ್ಟ, ಬಶೀರ್ ಆರ್.ಬಿ. ಪೈಚಾರ್ ಅವರಿಗೆ ಚೆನ್ನೈ ಏಷಿಯನ್ ಕಲ್ಚರ್ ರಿಸರ್ಚ್ ಯುನಿವರ್ಸಿಟಿ ಯಿಂದ ಗೌರವ ಡಾಕ್ಟರೇಟ್ ಗೆ ಆಯ್ಕೆಯಾಗಿದ್ದಾರೆ. ಫೆ.3 ರಂದು ತಮಿಳುನಾಡಿನ ಹೊಸೋರುನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಮಾಜ ಸೇವೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ನೀಡಲಿದ್ದಾರೆ. ಇವರು ಮುಳುಗು ತಜ್ಞರಾಗಿ ಕೂಡ...
Ad Widget

ಏನೆಕಲ್ಲು : ಶ್ರೀ ಕ್ಷೇ.ಧ. ಗ್ರಾ.ಯೋಜನೆಯ ಡಿಜಿಟಲ್ ಸೇವಾಕೇಂದ್ರ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಸುಳ್ಯ ತಾಲೂಕು ಇದರ ವತಿಯಿಂದ ಸುಬ್ರಹ್ಮಣ್ಯ ವಲಯದ ಏನೆಕಲ್ಲು ಹಣ ಸಂಗ್ರಹಣಾ ಕೇಂದ್ರದಲ್ಲಿ ಡಿಜಿಟಲ್ ಸೇವಾ ಕೇಂದ್ರವನ್ನು ಏನೆಕಲ್ಲು ಸಹಕಾರಿ ಬ್ಯಾಂಕ್ ನ ಅದ್ಯಕ್ಷ ಭವಾನಿಶಂಕರ ಪೂಂಬಾಡಿ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.ಈ ಕಾರ್ಯಕ್ರಮಕ್ಕೆ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಸ್ಥಾಪಕಾಧ್ಯಕ್ಷರು ಹಾಗೂ ನಿಕಟಪೂರ್ವ ಅದ್ಯಕ್ಷರಾದ ಶಿವಪ್ರಸಾದ್...

ಐವರ್ನಾಡು : ದಿ|ಎನ್.ಎಂ.ಬಾಲಕೃಷ್ಣ ಗೌಡರ ಪುತ್ಥಳಿ ನಿರ್ಮಾಣಕ್ಕೆ ಚಾಲನೆ

ಐವರ್ನಾಡಿನ ರಾಜಕೀಯ ಮುಂದಾಳು,ಕೊಡುಗೈದಾನಿಯಾಗಿ,ಐವರ್ನಾಡಿನ ಅಭಿವೃದ್ಧಿಗೆ ಕಾರಣರಾಗಿದ್ದ ದಿ.ಎನ್.ಎಂ.ಬಾಲಕೃಷ್ಣ ಗೌಡರ ಪುತ್ಥಳಿ ರಚನೆಗೆ ಭೂಮಿ ಪೂಜೆಯು ಜ.31 ರಂದು ನಡೆಯಿತು.ಬೆಳಿಗ್ಗೆ ಪಾಲೆಪ್ಪಾಡಿ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಪುತ್ಥಳಿಯ ರಚನಾ ಸ್ಥಳದಲ್ಲಿ ಭೂಮಿ ಪೂಜೆ ನಡೆಯಿತು.ಪುತ್ಥಳಿ ರಚನಾ ಸಮಿತಿಯ ಗೌರವಾಧ್ಯಕ್ಷೆ ಶ್ರೀಮತಿ ಜ್ಯೋತ್ಸ್ನಾ ಪಾಲೆಪ್ಪಾಡಿ ಭೂಮಿ ಪೂಜೆ ನೆರವೇರಿಸಿದರು. ಪುರೋಹಿತ ಗಿರೀಶ್ ಅಸ್ರಣ್ಣ ಧಾರ್ಮಿಕ...

ಮಾವಿನಕಟ್ಟೆ : ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನೆ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಗುತ್ತಿಗಾರು ವಲಯದ ಮಾವಿನಕಟ್ಟೆ ಹಣ ಸಂಗ್ರಹಣಾ ಕೇಂದ್ರದಲ್ಲಿ ಡಿಜಿಟಲ್ ಸೇವಾ ಕೇಂದ್ರವನ್ನು ದೇವಚಳ್ಳ ಗ್ರಾಪಂ ಅಧ್ಯಕ್ಷೆ ಶ್ರೀಮತಿ ಸುಲೋಚನಾ ದೇವ ದೀಪ ಬೆಳಗಿಸಿ ಉದ್ಘಾಟಿಸಿದರು. ತಾಲ್ಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ರಾಧಾಕೃಷ್ಣ ಕಟೀಲ್ ಶುಭ ಹಾರೈಸಿದರು . ಕಾರ್ಯಕ್ರಮದಲ್ಲಿ ಯೋಜನೆ ಕಚೇರಿಯ ಹಣಕಾಸು ಪ್ರಬಂಧಕರಾದ ಆತಿಶ್ ಅವರು ಕಾರ್ಯಕ್ರಮದ...

ಕಲ್ಲುಗುಂಡಿ : ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಸಿ.ಎಸ್.ಸಿ. ಸೆಂಟರ್ ಉದ್ಘಾಟನೆ

ಸಂಪಾಜೆ ಗ್ರಾಮದ ಕಲ್ಲುಗುಂಡಿ ಬೆಂಜಮೀನ್ ಕಟ್ಟಡದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ಸಿ. ಎಸ್. ಸಿ ಸೆಂಟರ್ ಉದ್ಘಾಟನೆಗೊಂಡಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಉದ್ಘಾಟನೆ ಮಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯಡಿಯಲ್ಲಿ ಉಚಿತ ಈ ಶ್ರಮ ಕಾರ್ಡ್ ನೀಡುವ ವ್ಯವಸ್ಥೆ ಹಾಗೂ ಇನ್ನಿತರ ಸರಕಾರದ ಸೌಲಭ್ಯಗಳಿಗೆ ನಿಗದಿ ಪಡಿಸದ ಹಣದೊಂದಿಗೆ...

ಕುಲ್ಕುಂದ : ಶ್ರೀ ಮಹಾವಿಷ್ಣುಮೂರ್ತಿ ಒತ್ತೆಕೋಲದ ಆಮಂತ್ರಣ ಬಿಡುಗಡೆ

ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಕುಲ್ಕುಂದ ಇದರ 53ನೇ ವರ್ಷದ ಒತ್ತೆಕೋಲದ ಆಮಂತ್ರಣ ಪತ್ರಿಕೆಯನ್ನು ಜ.29 ರಂದು ಬಿಡುಗಡೆ ಮಾಡಲಾಯಿತು.ಈ ಸಂದರ್ಭದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಕುಲ್ಕುಂದ ಇದರ ಅದ್ಯಕ್ಷರು, ಕಾರ್ಯದರ್ಶಿ, ಸದಸ್ಯರು ಹಾಗೂ ಜೀರ್ಣೋದ್ಧಾರ ಸಮಿತಿಯ ಸದಸ್ಯರು ಸೇರಿದಂತೆ ಊರ ಪರವೂರ ಭಕ್ತರು ಉಪಸ್ಥಿತರಿದ್ದರು.ವರದಿ :- ಉಲ್ಲಾಸ್ ಕಜ್ಜೋಡಿ

ಫೆ.03: ನೆಟ್ಟಾರು ಕಿನ್ನಿಮಜಲು ಶ್ರೀ ಸ್ವಾಮಿ ಕೊರಗಜ್ಜ ಸಾನ್ನಿಧ್ಯದಲ್ಲಿ ವಾರ್ಷಿಕ ಕೋಲೋತ್ಸವ

ಬೆಳ್ಳಾರೆ ಗ್ರಾಮದ ನೆಟ್ಟಾರು ಕಿನ್ನಿಮಜಲು ಶ್ರೀ ಸ್ವಾಮಿ ಕೊರಗಜ್ಜ ಸಾನಿಧ್ಯದಲ್ಲಿ ಘಂಟೆ ತೆಂಬೆರೆಯಲ್ಲಿ ಶ್ರೀ ಕೊರಗಜ್ಜ ದೈವದ ಕೋಲೋತ್ಸವವು ಫೆ.03 ಗುರುವಾರದಂದು ನಡೆಯಲಿದೆ. ವಾರ್ಷಿಕ ಕೋಲೋತ್ಸವದ ಅಂಗವಾಗಿ ಸಂಜೆ ಗಂಟೆ 5.00ರಿಂದ ಭಜನಾ ಸಂಕೀರ್ತಣೆ, ಗಂಟೆ 6.00ಕ್ಕೆ ಕಲ್ಲುರ್ಟಿ-ಮಂತ್ರದೇವತೆ ಹಾಗೂ ಗುಳಿಗನಿಗೆ ಪರ್ವ ಮತ್ತು ಕಲ್ಲುರ್ಟಿ ದರ್ಶನ ಸೇವೆ ನಡೆಯಲಿದೆ.ಗಂಟೆ 7.00ರಿಂದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ...

ಏನೆಕಲ್ : “ಅಭಿನಯ ಕರ್ನಾಟಕ” ಆನ್ಲೈನ್ ಶಿಬಿರದ ಪ್ರಮಾಣ ಪತ್ರ ವಿತರಣೆ

ಕಲಾಮಾಯೆ (ರಿ.) ಏನೆಕಲ್ ಆಶ್ರಯದಲ್ಲಿ ನಡೆದ ಹತ್ತು ದಿನದ ಆನ್ಲೈನ್ ರಂಗ ಶಿಕ್ಷಣ ತರಬೇತಿ ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಸ್ಮರಣಿಕೆ ಮತ್ತು ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ಜನವರಿ 30 ಭಾನುವಾರ ಶ್ರೀ ಆದಿಶಕ್ತಿ ಭಜನಾ ಮಂದಿರ ಏನೆಕಲ್ ಇಲ್ಲಿ ನಡೆಯಿತು.ಕಲಾ ಪೋಷಕರು, ಧಾರ್ಮಿಕ ಮುಖಂಡರು, ಜ್ಯೋತಿಷ್ಯರಾದ ಪಂಡಿತ್ ಶ್ಯಾಮ್ ಸುಂದರ ಶಾಸ್ತ್ರೀ ಇವರು ಮುಖ್ಯ...

ಸಚಿವ ಅಂಗಾರರಿಂದ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಘಟಕ ಲೋಕಾರ್ಪಣೆ : ಕುದ್ರೆಮುಖ ಕಬ್ಬಿಣದ ಅದಿರು ಉತ್ಪಾದಕ ಕಂಪೆನಿಯ ಕೊಡುಗೆ

ಕುದ್ರೆಮುಖ ಕಬ್ಬಿಣದ ಅದಿರು ಉತ್ಪಾದಕ ಕಂಪೆನಿಯ ಸಾಮಾಜಿಕ ಕಾರ್ಯಕ್ರಮದಡಿ ಸುಮಾರು 45 ಲಕ್ಷ ರೂ ವೆಚ್ಚದಲ್ಲಿ ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಹೊಸತಾಗಿ ನಿರ್ಮಾಣಗೊಂಡ ಆಮ್ಲಜನಕ ಘಟಕದ ಉದ್ಘಾಟನೆ ಜ.30ರಂದು ನಡೆಯಿತು. ಘಟಕವನ್ನು ಬಂದರು,ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಉದ್ಘಾಟಿಸಿ ಮಾತನಾಡಿ ಕೋವಿಡ್ ಸಂದರ್ಭದಲ್ಲಿ ಆಮ್ಲಜನಕದ ಪ್ರಾಮುಖ್ಯತೆ ಏನು ಎಂಬುದು ತಿಳಿಯಿತು....
Loading posts...

All posts loaded

No more posts

error: Content is protected !!