- Thursday
- July 2nd, 2026
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಗುತ್ತಿಗಾರು ವಲಯದ ಮಾವಿನಕಟ್ಟೆ ಹಣ ಸಂಗ್ರಹಣಾ ಕೇಂದ್ರದಲ್ಲಿ ಡಿಜಿಟಲ್ ಸೇವಾ ಕೇಂದ್ರವನ್ನು ದೇವಚಳ್ಳ ಗ್ರಾಪಂ ಅಧ್ಯಕ್ಷೆ ಶ್ರೀಮತಿ ಸುಲೋಚನಾ ದೇವ ದೀಪ ಬೆಳಗಿಸಿ ಉದ್ಘಾಟಿಸಿದರು. ತಾಲ್ಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ರಾಧಾಕೃಷ್ಣ ಕಟೀಲ್ ಶುಭ ಹಾರೈಸಿದರು . ಕಾರ್ಯಕ್ರಮದಲ್ಲಿ ಯೋಜನೆ ಕಚೇರಿಯ ಹಣಕಾಸು ಪ್ರಬಂಧಕರಾದ ಆತಿಶ್ ಅವರು ಕಾರ್ಯಕ್ರಮದ...
ಸಂಪಾಜೆ ಗ್ರಾಮದ ಕಲ್ಲುಗುಂಡಿ ಬೆಂಜಮೀನ್ ಕಟ್ಟಡದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ಸಿ. ಎಸ್. ಸಿ ಸೆಂಟರ್ ಉದ್ಘಾಟನೆಗೊಂಡಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಉದ್ಘಾಟನೆ ಮಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯಡಿಯಲ್ಲಿ ಉಚಿತ ಈ ಶ್ರಮ ಕಾರ್ಡ್ ನೀಡುವ ವ್ಯವಸ್ಥೆ ಹಾಗೂ ಇನ್ನಿತರ ಸರಕಾರದ ಸೌಲಭ್ಯಗಳಿಗೆ ನಿಗದಿ ಪಡಿಸದ ಹಣದೊಂದಿಗೆ...
ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಕುಲ್ಕುಂದ ಇದರ 53ನೇ ವರ್ಷದ ಒತ್ತೆಕೋಲದ ಆಮಂತ್ರಣ ಪತ್ರಿಕೆಯನ್ನು ಜ.29 ರಂದು ಬಿಡುಗಡೆ ಮಾಡಲಾಯಿತು.ಈ ಸಂದರ್ಭದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಕುಲ್ಕುಂದ ಇದರ ಅದ್ಯಕ್ಷರು, ಕಾರ್ಯದರ್ಶಿ, ಸದಸ್ಯರು ಹಾಗೂ ಜೀರ್ಣೋದ್ಧಾರ ಸಮಿತಿಯ ಸದಸ್ಯರು ಸೇರಿದಂತೆ ಊರ ಪರವೂರ ಭಕ್ತರು ಉಪಸ್ಥಿತರಿದ್ದರು.ವರದಿ :- ಉಲ್ಲಾಸ್ ಕಜ್ಜೋಡಿ
ಬೆಳ್ಳಾರೆ ಗ್ರಾಮದ ನೆಟ್ಟಾರು ಕಿನ್ನಿಮಜಲು ಶ್ರೀ ಸ್ವಾಮಿ ಕೊರಗಜ್ಜ ಸಾನಿಧ್ಯದಲ್ಲಿ ಘಂಟೆ ತೆಂಬೆರೆಯಲ್ಲಿ ಶ್ರೀ ಕೊರಗಜ್ಜ ದೈವದ ಕೋಲೋತ್ಸವವು ಫೆ.03 ಗುರುವಾರದಂದು ನಡೆಯಲಿದೆ. ವಾರ್ಷಿಕ ಕೋಲೋತ್ಸವದ ಅಂಗವಾಗಿ ಸಂಜೆ ಗಂಟೆ 5.00ರಿಂದ ಭಜನಾ ಸಂಕೀರ್ತಣೆ, ಗಂಟೆ 6.00ಕ್ಕೆ ಕಲ್ಲುರ್ಟಿ-ಮಂತ್ರದೇವತೆ ಹಾಗೂ ಗುಳಿಗನಿಗೆ ಪರ್ವ ಮತ್ತು ಕಲ್ಲುರ್ಟಿ ದರ್ಶನ ಸೇವೆ ನಡೆಯಲಿದೆ.ಗಂಟೆ 7.00ರಿಂದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ...
ಕಲಾಮಾಯೆ (ರಿ.) ಏನೆಕಲ್ ಆಶ್ರಯದಲ್ಲಿ ನಡೆದ ಹತ್ತು ದಿನದ ಆನ್ಲೈನ್ ರಂಗ ಶಿಕ್ಷಣ ತರಬೇತಿ ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಸ್ಮರಣಿಕೆ ಮತ್ತು ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ಜನವರಿ 30 ಭಾನುವಾರ ಶ್ರೀ ಆದಿಶಕ್ತಿ ಭಜನಾ ಮಂದಿರ ಏನೆಕಲ್ ಇಲ್ಲಿ ನಡೆಯಿತು.ಕಲಾ ಪೋಷಕರು, ಧಾರ್ಮಿಕ ಮುಖಂಡರು, ಜ್ಯೋತಿಷ್ಯರಾದ ಪಂಡಿತ್ ಶ್ಯಾಮ್ ಸುಂದರ ಶಾಸ್ತ್ರೀ ಇವರು ಮುಖ್ಯ...
ಕುದ್ರೆಮುಖ ಕಬ್ಬಿಣದ ಅದಿರು ಉತ್ಪಾದಕ ಕಂಪೆನಿಯ ಸಾಮಾಜಿಕ ಕಾರ್ಯಕ್ರಮದಡಿ ಸುಮಾರು 45 ಲಕ್ಷ ರೂ ವೆಚ್ಚದಲ್ಲಿ ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಹೊಸತಾಗಿ ನಿರ್ಮಾಣಗೊಂಡ ಆಮ್ಲಜನಕ ಘಟಕದ ಉದ್ಘಾಟನೆ ಜ.30ರಂದು ನಡೆಯಿತು. ಘಟಕವನ್ನು ಬಂದರು,ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಉದ್ಘಾಟಿಸಿ ಮಾತನಾಡಿ ಕೋವಿಡ್ ಸಂದರ್ಭದಲ್ಲಿ ಆಮ್ಲಜನಕದ ಪ್ರಾಮುಖ್ಯತೆ ಏನು ಎಂಬುದು ತಿಳಿಯಿತು....
ಎಸ್ಕೆಎಸ್ಎಸ್ಎಫ್ ಸುಳ್ಯ ವಲಯ ನೂತನ ಸಮಿತಿ ಆಯ್ಕೆ ಚುನಾವಣೆ 2022 ಜನವರಿ 27 ರಂದು ಸುಪ್ರಿಂ ಹಾಲ್ ನಲ್ಲಿ ಚುನಾವಣಾ ಅಧಿಕಾರಿಗಳಾಗಿ ಆಗಮಿಸಿದ ರಶೀದ್ ರಹ್ಮಾನಿ & ಅಶ್ರಫ್ ಶೇಡಿಗುಂಡಿ ರವರ ಘನ ನೇತೃತ್ವದಲ್ಲಿ ನಡೆಯಿತು. ಅಜ್ಜಾವರ ಬೆಳ್ಳಾರೆ ಸುಳ್ಯ ಕ್ಲಸ್ಟರ್ನಿಂದ 50 ನಾಯಕರು ಚುನಾವಣೆಯಲ್ಲಿ ಬಾಗವಹಿಸಿ ನೂತನ ಸಮಿತಿ ಆಯ್ಕೆ ನಡೆಯಿತು. ನೂತನ ಎಸ್ಕೆಎಸ್ಎಸ್ಎಫ್...
ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ"ಯು ಜ.29ರಂದು ಕಳಂಜ ಕಲ್ಲಮಾಡದಿಂದ ತಂಬಿನಮಕ್ಕಿವರೆಗೆ ಮಾರಿ ಹೊರಡುವ ಮೂಲಕ ಸಂಪನ್ನಗೊಂಡಿತು. ಜ.26 ಬುಧವಾರದಂದು ಪ್ರತಿಷ್ಟಾ ವಾರ್ಷಿಕೋತ್ಸವದೊಂದಿಗೆ ಆರಂಭಗೊಂಡ ಜಾತ್ರೆಯು ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ...
ಬೆಳ್ಳಾರೆ-ನಿಂತಿಕಲ್ಲು ಮುಖ್ಯ ರಸ್ತೆಯ ಪಂಜಿಗಾರು ಮಣಿಮಜಲು ತಿರುವಿನ ಬಳಿ ಮೋರಿ ಕುಸಿತಗೊಂಡಿದ್ದು ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಈಗಾಗಲೇ ಕೆಲವು ವಾಹನಗಳು ಈ ಮೋರಿಗೆ ಬಿದ್ದು ಅಪಘಾತ ಸಂಭವಿಸಿದೆ. ಸುಬ್ರಹ್ಮಣ್ಯ, ಪುತ್ತೂರು ಸಂಪರ್ಕಕ್ಕೆ ಪ್ರಧಾನ ರಸ್ತೆಯಾಗಿರುವ ಈ ರಸ್ತೆಯಲ್ಲಿ ದಿನನಿತ್ಯ ಅನೇಕ ವಾಹನಗಳು ಸಂಚರಿಸುತ್ತಿದ್ದು, ಶೀಘ್ರವೇ ದುರಸ್ತಿಗೊಳಿಸಬೇಕಾದ ಅನಿವಾರ್ಯತೆ ಇದೆ. ಈಗಾಗಲೇ ಗ್ರಾಮ ಪಂಚಾಯತ್ ಹಾಗೂ ಪಿಡಬ್ಲ್ಯೂಡಿಗೆ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆಯಲ್ಲಿ ಜ.28 ರಂದು ಮೆಟ್ರಿಕ್ ಮೇಳ ನಡೆಯಿತು. ಮುತ್ತಪ್ಪ ಗೌಡ ಹೊಸಗದ್ದೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ತಮ್ಮ ಮನೆಗಳಿಂದ ತಂದ ತರಕಾರಿಗಳನ್ನು ಮುಂತಾದವುಗಳನ್ನು ಮಾರಾಟ ಮಾಡಿದರು.ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅದ್ಯಕ್ಷರು ಹಾಗೂ ಸದಸ್ಯರು, ಗ್ರಾಮಪಂಚಾಯತ್ ಉಪಾಧ್ಯಕ್ಷರು ಹಾಗೂ ಸಿಬ್ಬಂದಿವರ್ಗ, ಶಾಲಾ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು, ವಿದ್ಯಾರ್ಥಿಗಳು...
Loading posts...
All posts loaded
No more posts
