ಎಸ್ ಡಿ ಪಿ ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ರವರಿಗೆ ಬೆಳ್ಳಾರೆಯಲ್ಲಿ ಸ್ವಾಗತ

ಬೆಳ್ಳಾರೆ: ಎಸ್ ಡಿ ಪಿ ಐ ರಾಜ್ಯಾಧ್ಯಕ್ಷರಾಗಿ ಮೊದಲ ಬಾರಿಗೆ ಬೆಳ್ಳಾರೆಗೆ ಆಗಮಿಸಿದ ಅಬ್ದುಲ್ ಮಜೀದ್ ಮೈಸೂರು ರವರನ್ನು ಬೆಳ್ಳಾರೆ ಮಸೀದಿ ಬಳಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಸಾರ್ವಜನಿಕರು ಸೇರಿ ಶಾಲು ಹೊದಿಸಿ ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಎಸ್ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಇಕ್ಬಾಲ್ ಬೆಳ್ಳಾರೆ, ಕೋಶಾಧಿಕಾರಿ ಹಾಜಿ.ಕೆ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಾಳಿಲ-ಮುಪ್ಪೇರಿಯ ಒಕ್ಕೂಟದ ಸದಸ್ಯರಿಂದ ಶ್ರಮದಾನ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಾಳಿಲ-ಮುಪ್ಪೇರಿಯ ಒಕ್ಕೂಟದ ಸದಸ್ಯರಿಂದ ಜ.23ರಂದು ಅಯ್ಯನಕಟ್ಟೆಯ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕ ಇಲ್ಲಿ ಶ್ರಮದಾನ ನಡೆಸಲಾಯಿತು. ಶ್ರಮದಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತ ಯತೀಶ್. ಕೆ, ಒಕ್ಕೂಟದ ಅಧ್ಯಕ್ಷರಾದ ವೆಂಕಪ್ಪ ನಾಯ್ಕ ಪೋಸೋಡು, ಬಾಳಿಲ ಒಕ್ಕೂಟದ ಸೇವಾ ಪ್ರತಿನಿಧಿ ಹಾಗೂ ಅಯ್ಯನಕಟ್ಟೆ...
Ad Widget

ಅಯ್ಯನಕಟ್ಟೆ ಜಾತ್ರೆಯ ಪ್ರಯುಕ್ತ ಬಾಳಿಲ ಸುಮಂಗಲ ಸಂಜೀವಿನಿ ಒಕ್ಕೂಟದಿಂದ ಶ್ರಮದಾನ

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ವಾರ್ಷಿಕೋತ್ಸವ ಮತ್ತು ನೇಮೋತ್ಸವವು ಜ.26ರಿಂದ ಆರಂಭಗೊಂಡು ಜ.29ರ ತನಕ ಜರುಗಲಿದ್ದು ಇಂದು ಬಾಳಿಲ ಗ್ರಾಮ ಪಂಚಾಯತ್ ಮಟ್ಟದ ಸುಮಂಗಲ ಸಂಜೀವಿನಿ ಒಕ್ಕೂಟದಿಂದ ಶ್ರಮದಾನ ನಡೆಸಲಾಯಿತು.

ಅಯ್ಯನಕಟ್ಟೆ: ಶ್ರಮದಾನ

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ವಾರ್ಷಿಕೋತ್ಸವ ಹಾಗೂ ನೇಮೋತ್ಸವ, "ಅಯ್ಯನಕಟ್ಟೆ ಜಾತ್ರೆ" ಯ ಹಿನ್ನೆಲೆಯಲ್ಲಿ ಊರಿನ ಭಕ್ತಾದಿಗಳಿಂದ ಜ.23ರಂದು ಶ್ರಮದಾನ ನಡೆಸಲಾಯಿತು. ಜಾತ್ರೋತ್ಸವ ನಡೆಯುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ದೈವಸ್ಥಾನ, ಕಲ್ಲಮಾಡ ಹಾಗೂ ತಂಟೆಪ್ಪಾಡಿಯಲ್ಲಿರುವ ಶಿರಾಡಿ ದೈವಸ್ಥಾನದ ಬಳಿ ಶ್ರಮಸೇವೆ ನಡೆಸಲಾಯಿತು.

ಜ.26-ಜ.29: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ-“ಅಯ್ಯನಕಟ್ಟೆ ಜಾತ್ರೆ”

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಬುಧವಾರದಿಂದ ಆರಂಭಗೊಳ್ಳಲಿದ್ದು, ಜ.25 ಮಂಗಳವಾರದಂದು ಹಸಿರು ಕಾಣಿಕೆ ಸಮರ್ಪಣೆ ನಡೆಯಲಿದೆ. ಸಂಜೆ ಗಂಟೆ 5.00ಕ್ಕೆ ಸರಿಯಾಗಿ ಬಾಳಿಲದಲ್ಲಿನ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ಮಹಾದ್ವಾರದ ಬಳಿಯಿಂದ ಹೊರಟು ಮೂರುಕಲ್ಲಡ್ಕದಲ್ಲಿನ ಶ್ರೀ...

ಮುಕ್ಕೂರು ಶಾಲೆಗೆ
ಕೊಳವೆ ಬಾವಿಯ ಪಂಪ್ ಕೊಡುಗೆ

ಮುಕ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಿವೃತ್ತ ಬ್ಯಾಂಕ್ ಉದ್ಯೋಗಿ, ಮುಕ್ಕೂರು ಶಾಲಾ ಹಿತ ಚಿಂತನಾ ಸಮಿತಿ ಕೋಶಾಧಿಕಾರಿ ಹೊನ್ನಪ್ಪ ಗೌಡ ಚಾಮುಂಡಿಮೂಲೆ ಅವರು 18 ಸಾವಿರ ರೂ. ಮೌಲ್ಯದ ಕೊಳವೆ ಬಾವಿ ಪಂಪ್ ಅನ್ನು ಜ.21 ರಂದು ಕೊಡುಗೆಯಾಗಿ ನೀಡಿದರು. ಕಳೆದ ಕೆಲ ದಿನಗಳಿಂದ ಶಾಲೆಯ ಕೊಳವೆಬಾವಿ ಪಂಪ್ ಹಾಳಾಗಿ ಪರ್ಯಾಯ ವ್ಯವಸ್ಥೆ ಇಲ್ಲದೆ...

ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ನ ಸೇವೆಗೊಲಿದ ರಾಜ್ಯ ಪ್ರಶಸ್ತಿ

ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ 2022 ನೇ ಸಾಲಿನ ಯುವಸೇವೆ ಹಾಗೂ ಕ್ರೀಡಾಕ್ಷೇತ್ರದ ಪ್ರತಿಷ್ಠಿತ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ ಗೆ ಆಯ್ಕೆಯಾಗಿದೆ. ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಕೊಡಮಾಡುವ ರಾಜ್ಯ ಪ್ರಶಸ್ತಿಯಾಗಿದ್ದು, ಯುವಸೇವೆ ಮತ್ತು ಕ್ರೀಡೆ ಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ದಲ್ಲಿ ಸಾಂಘಿಕ ಪ್ರಶಸ್ತಿ ಗೆ ಎರಡೇ ಸಂಸ್ಥೆಗಳು ಆಯ್ಕೆ ಆಗಿವೆ....

ಶೇಣಿ : ಇ- ಶ್ರಮ್ ಕಾರ್ಡ್‌, ಪಾನ್ ಕಾರ್ಡ್‌ ನೋಂದಣಿ ಶಿಬಿರ

ಸಾರ್ವಜನಿಕರ ಶ್ರೀಕೃಷ್ಣ ಸೇವಾ ಸಮಿತಿ ಶೇಣಿ ಇದರ ನೇತೃತ್ವದಲ್ಲಿ ಜ 23, ಆದಿತ್ಯವಾರದಂದು ಬೆಳಿಗ್ಗೆ 9 ರಿಂದ ಶೇಣಿ ಸ.ಹಿ.ಪ್ರಾ.ಶಾಲೆಯಲ್ಲಿ ಅಸಂಘಟಿತ ಕಾರ್ಮಿಕರ ಇ- ಶ್ರಮ್ ಕಾರ್ಡ್‌ ನೋಂದಣಿ ಹಾಗೂ ಪಾನ್ ಕಾರ್ಡ್‌ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ನಡೆಯಲಿದೆ. ಸಾರ್ವಜನಿಕರು ಈ ಶಿಬಿರದಲ್ಲಿ ಪಾಲ್ಗೊಂಡು ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಸಂಘಟಕರು ತಿಳಿಸಿದ್ದಾರೆ.

ಜ.23: ಕೇರ್ಪಡ ಶ್ರೀ ಮಹಿಷಮರ್ದಿನಿ‌ ಯಕ್ಷಗಾನ ಕಲಾ ಕೇಂದ್ರದ ವತಿಯಿಂದ 2ನೇ ವರ್ಷದ ಯಕ್ಷಗಾನ ನಾಟ್ಯ ತರಬೇತಿ ಆರಂಭ

ಶ್ರೀ ಮಹಿಷಮರ್ದಿನಿ‌ ಯಕ್ಷಗಾನ ಕಲಾ ಕೇಂದ್ರ ಕೇರ್ಪಡ ಇದರ ವತಿಯಿಂದ ಎರಡನೇ ವರ್ಷದ ಯಕ್ಷಗಾನ ನಾಟ್ಯ ತರಬೇತಿ ಶ್ರೀ ಯಕ್ಷಮಣಿ ಗಿರೀಶ್ ಗಡಿಕಲ್ಲು ಇವರಿಂದ 23.01.2022 ನೇ ಆದಿತ್ಯವಾರ ಶ್ರೀ ಮಹಿಷಮರ್ದಿನಿ ದೇವಸ್ಥಾನ ಕೇರ್ಪಡ ಇಲ್ಲಿ ಪ್ರಾರಂಭವಾಗಲಿದೆ. ಕಳೆದ ವರ್ಷ 23 ವಿದ್ಯಾರ್ಥಿಗಳು ರಂಗಪ್ರವೇಶ ಮಾಡಿರುತ್ತಾರೆ.

ಪರ್ಸ್ ಕಳೆದುಹೋಗಿದೆ

ಕಂದ್ರಪ್ಪಾಡಿ ಮಾವಿನಕಟ್ಟೆ ರಸ್ತೆ ಮಧ್ಯೆ ಒಂದು ಪರ್ಸ್ ಕಳೆದು ಹೋಗಿದೆ. ಅದರಲ್ಲಿ ಆಧಾರ್ ಕಾರ್ಡ್, ಎಟಿಎಂ, ಹಣ ಇದ್ದು ಕಳೆದುಕೊಂಡವರ ಫೋಟೋ ಹಾಗೂ ಇತರ ದಾಖಲೆ ಇದೆ. ದಯವಿಟ್ಟು ಸಿಕ್ಕಿದವರು ಹಿಂದಿರುಗಿಸಬೇಕಾಗಿ ವಿನಂತಿ.87626766516364659441
Loading posts...

All posts loaded

No more posts

error: Content is protected !!