ಮಾವಿನಕಟ್ಟೆ : ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಆವರಣ ಸ್ವಚ್ಛತೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಉದಯಗಿರಿ ಇದರ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಸ್ವಚ್ಚತಾ ಕಾರ್ಯಕ್ರಮವನ್ನು ಮಾವಿನಕಟ್ಟೆ ಒಕ್ಕೂಟದ ಸದಸ್ಯರು ಶ್ರಮದಾನ ಮಾಡುವುದರ ಮುಖಾಂತರ ನೆರವೇರಿಸಿದರು. ಈ ಸಂದರ್ಭ ವಲಯ ಮೇಲ್ವಿಚಾರಕ ಮುರಳೀಧರ,ದೈವಸ್ಥಾನದ ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಶ್ರೀಕಟೀಲ್, ಸದಸ್ಯರಾದ ಭಾಸ್ಕರ ಬಾಳೆತೋಟ, ಒಕ್ಕೂಟದ...

ಸ್ವಾಮಿ ವಿವೇಕಾನಂದರ ಶ್ರೇಷ್ಠ ಬದುಕು ನಮ್ಮ ಪಕ್ವ ಬದುಕಿಗೆ ದಾರಿದೀಪ – ಕು. ಬೇಬಿ ವಿದ್ಯಾ

ಪ್ರಚಂಡ ಪ್ರತಿಭೆಯಿಂದ ಜಗತ್ತಿನಲ್ಲಿ ಆದರ್ಶ ವ್ಯಕ್ತಿಯಾಗಿ ಗುರುತಿಸಿಕೊಂಡ ಸ್ಫೂರ್ತಿಪ್ರದ ವರ್ಚಸ್ಸಿನ ಸ್ವಾಮಿ ವಿವೇಕಾನಂದರ ಬದುಕಿನ ಆದರ್ಶಗಳನ್ನು, ತತ್ವಗಳನ್ನುಅರಿತು ಮುನ್ನಡೆದಾಗ ನಮ್ಮ ಬದುಕು ಪಕ್ವವಾಗುವುದು ಎಂದು ಸುಳ್ಯ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ಕನ್ನಡ ಉಪನ್ಯಾಸಕಿ, ಯುವ ವಾಗ್ಮಿ ಕು.ಬೇಬಿ ವಿದ್ಯಾ ಪಿ ಬಿ ಹೇಳಿದರು. ಅವರು ನೆಹರು ಮೆಮೋರಿಯಲ್ ಕಾಲೇಜು ಕುರುಂಜಿಭಾಗ್ ಸುಳ್ಯ ಇಲ್ಲಿನ ಮಾನವಿಕ...
Ad Widget

ಹಲ್ಗುಜಿ ಬ್ರಹ್ಮಕಲಶೋತ್ಸವಕ್ಕೆ ಚಾಲನೆ – ಹಸಿರುವಾಣಿ ಮೆರವಣಿಗೆ

ನಾಲ್ಕೂರು ಗ್ರಾಮದ ಕಲ್ಲಾಜೆ ಹಲ್ಗುಜಿ ಶ್ರೀ ಶಿರಾಡಿ ದೈವ, ಅಗ್ನಿ ಗುಳಿಗ ಮತ್ತು ಪರಿವಾರ ದೈವಗಳ ದೈವಸ್ಥಾನ ಜೀರ್ಣೋದ್ಧಾರಗೊಂಡು ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗಿ ನಿಂತಿದ್ದು, ಜ.13 ರಂದು ಅದ್ದೂರಿ ಹಸಿರುವಾಣಿ ಮೆರವಣಿಗೆ ನಡೆಯಿತು.ಹಲ್ಗುಜಿ, ಅಂಜೇರಿ, ರಾಗಿಯಡ್ಕ, ಬನಕೋಡಿ, ಕಲ್ಲಾಜೆ, ಅಂಬೆಕಲ್ಲು, ಎರ್ದಡ್ಕ, ಕೊರಂಬಟ, ಕಾರ್ಜ, ಕಾಯರಮೊಗೆರು, ವಲ್ಪಾರೆ, ಕೊಂಬೊಟ್ಟು, ಮರಕತ, ಉಜಿರಡ್ಕ, ಉದೇರಿ, ಇಜಿನಡ್ಕ,...

ಜ.16-ಜ.21: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಜ.16 ಆದಿತ್ಯವಾರದಿಂದ ಜ.21 ಶುಕ್ರವಾರದ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ದಿನಾಂಕ 16-01-2022ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 10.00ಕ್ಕೆ ಉಗ್ರಾಣ ಮುಹೂರ್ತ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಗಂಟೆ 7.00ಕ್ಕೆ ದೇವತಾ ಪ್ರಾರ್ಥನೆ, ಧ್ವಜಾರೋಹಣ, 7.30ಕ್ಕೆ ಶ್ರೀ ದೇವರ...

ಕೆ.ವಿ.ಜಿ. ಕಾನೂನು ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜಯಂತ್ಯೋತ್ಸವ

ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ೧೫೯ನೇ ಜಯಂತಿ ಉತ್ಸವವನ್ನು ಜ. ೧೩ರಂದು ಆಚರಿಸಲಾಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ನೆಹರು ಮೆಮೋರಿಯಲ್ ಪದವಿಪೂರ್ವ ಕಾಲೇಜು ಅರಂತೋಡು, ಇಲ್ಲಿನ ಉಪನ್ಯಾಸಕ ಪದ್ಮಕುಮಾರ್ ರವರು ಸ್ವಾಮಿ ವಿವೇಕಾನಂದರ ಜೀವನ ಸಂದೇಶವನ್ನು ಸಾರಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ. ಬಿ ಅಧ್ಯಕ್ಷತೆಯನ್ನು ವಹಿಸಿದ್ದರು.ವೇದಿಕೆಯಲ್ಲಿ ಕಾಲೇಜಿನ ಹಿರಿಯ ಉಪನ್ಯಾಸಕರಾದ ಜಯರಾಮ್.ವೈ...

ಸುಳ್ಯಕ್ಕೆ ಕಾಲಿರಿಸಿದ ಎಲೆಕ್ಟ್ರಿಕಲ್ ಸ್ಕೂಟರ್‌ ಶೋರೂಂ – ಗ್ಲೋಬಲ್ ಮೋಟಾರ್ಸ್ ಶುಭಾರಂಭ

ದೇಶದ ಪ್ರಸಿದ್ಧ ಕಂಪೆನಿಯಾದ ಒಕಿನಾವಾ ಎಲೆಕ್ಟ್ರಿಕ್ ಸ್ಕೂಟರ್‌ನ ‘ಗ್ಲೋಬಲ್ ಮೋಟಾರ್ಸ್’ ಶಾಖೆ ಜ.10 ರಂದು ಸುಳ್ಯದ ಶ್ರೀ ರಾಮ್ ಪೇಟೆಯ ಜೆ.ಪಿ.ರೋಡ್‌ ನಲ್ಲಿರುವ ಕುರುಂಜಿಕಾರ್ಸ್ ವಿಶ್ವ ಕಾಂಪ್ಲೆಕ್ಸ್‌ನ ದೀಕ್ಷಾ ಟೆಕ್ಸ್‌ಟೈಲ್ಸ್ ಹತ್ತಿರ ಶುಭಾರಂಭಗೊಂಡಿತು. *ಅತ್ಯುತ್ತಮ ಮೈಲೇಜ್- ಕಡಿಮೆ ಬೆಲೆ* ಒಕಿನಾವಾ ಎಲೆಕ್ಟ್ರಿಕ್ ಸ್ಕೂಟರ್ ದೇಶದ ಪ್ರಸಿದ್ಧ ಕಂಪೆನಿಯಾಗಿದ್ದು, 68000 ದಿಂದ 1 ಲಕ್ಷದ 23 ಸಾವಿರದ...

ಯುವ ರೆಡ್ ಕ್ರಾಸ್ ಘಟಕದಿಂದ ವಿವೇಕಾನಂದ ಜಯಂತಿ ಆಚರಣೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ "ವಿವೇಕ ಚಿಂತನೆ- ಬದುಕಿಗೆ ದಾರಿ" ಎಂಬ ಶೀರ್ಷಿಕೆಯಡಿಯಲ್ಲಿ ವಿವೇಕಾನಂದ ಜಯಂತಿ ಆಚರಣೆ ಕಾರ್ಯಕ್ರಮ ಜನವರಿ 12 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಹರಿಣಿ ಪುತ್ತೂರಾಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ, " ವಿವೇಕಾನಂದರು...

ಸುಬ್ರಹ್ಮಣ್ಯ : ವಿಶೇಷ ಯುವ ಗ್ರಾಮಸಭೆ

ಆಜಾದಿ ಕಾ ಅಮೃತ ಮಹೋತ್ಸವ ಹಾಗೂ ಸ್ವಾಮಿ ವಿವೇಕಾನಂದರ 150 ನೇ ಜನ್ಮ ದಿನಾಚರಣೆಯ ಅಂಗವಾಗಿ ಜ.12 ರಂದು ಸುಬ್ರಹ್ಮಣ್ಯ ಗ್ರಾಮಪಂಚಾಯತ್ ನಲ್ಲಿ ಯುವ ಸಪ್ತಾಹ ವಿಶೇಷ ಯುವ ಗ್ರಾಮಸಭೆಯು ನಡೆಯಿತು.ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಅದ್ಯಕ್ಷರಾದ ಶ್ರೀಮತಿ ಲಲಿತಾ ಗುಂಡಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ ಶೇಖರ್ ಪ್ರಾಸ್ತಾವಿಕ...

ಉಬರಡ್ಕ : ಡಿಜಿಟಲ್ ಗ್ರಂಥಾಲಯ ಹಾಗೂ ಪುಸ್ತಕ ಗೂಡು ಉದ್ಘಾಟನೆ

ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಹಾಗೂ ಪುಸ್ತಕ ಗೂಡು ಉದ್ಘಾಟನಾ ಸಮಾರಂಭ ಜ. 13ರಂದು ನಡೆಯಿತು. ಡಿಜಿಟಲ್ ಮತ್ತು ಮಾಹಿತಿ ಕೇಂದ್ರದ ಮತ್ತು ಪುಸ್ತಕ ಗೂಡು ಉದ್ಘಾಟನೆಯನ್ನು ಗ್ರಾ.ಪಂ.ಅಧ್ಯಕ್ಷೆ ಚಿತ್ರಾಕುಮಾರಿ ನೆರವೇರಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ...

ಅನಾರೋಗ್ಯದಿಂದ ಯುವತಿ ಮೃತ್ಯು

ಅಮರಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ವೆಂಕಟ್ರಮಣ ಗೌಡ ಇಟ್ಟಿಗುಂಡಿಯವರ ಪುತ್ರಿ ಕು.ಲಿಖಿತ (23) ಜ.12 ರಂದು ಸ್ವಗೃಹದಲ್ಲಿ ಕೊನೆಯುಸಿರೆಳೆದರು. ಮೃತ ಯುವತಿ ಕಳೆದ ಕೆಲವು ಸಮಯಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಅಸ್ವಸ್ಥಗೊಂಡಿದ್ದ ಅವಳಿಗೆ ವೈದ್ಯರ ಸಲಹೆಯಂತೆ ಚಿಕಿತ್ಸೆ ಕೊಡಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.ಮೃತರು ಅಜ್ಜ ಶೇಷಪ್ಪ, ಅಜ್ಜಿ ವೀರಮ್ಮ, ತಂದೆ ವೆಂಕಟ್ರಮಣ...
Loading posts...

All posts loaded

No more posts

error: Content is protected !!