- Friday
- July 3rd, 2026
ಕಳಂಜ ಅಲ್ ಫಲಾಹ್ ಯೂತ್ ಕ್ಲಬ್ ಸದಸ್ಯರಿಂದ ಗ್ರಾಮದ ಮಣಿಮಜಲು ರಸ್ತೆಯನ್ನು ಶ್ರಮದಾನದ ಮೂಲಕ ದುರಸ್ತಿ ಮಾಡಲಾಯಿತು. ಈ ಶ್ರಮದಾನದಲ್ಲಿ ಅಲ್ ಫಲಾಹ್ ಯೂತ್ ಕ್ಲಬ್ ಪದಾಧಿಕಾರಿಗಳು, ಸದಸ್ಯರು ಭಾಗಿಗಳಾಗಿದ್ದರು.
ಕಳಂಜ ಗ್ರಾಮದ ತಂಟೆಪ್ಪಾಡಿಯ ನಿನಾದ ಸಾಂಸ್ಕೃತಿಕ ಕೇಂದ್ರದಲ್ಲಿ ಜ.01ರಂದು ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಸಾರಥ್ಯದಲ್ಲಿ ಕಾಲಮಿತಿ ಯಕ್ಷಗಾನ ಬಯಲಾಟ 'ಶ್ರೀದೇವಿ ಮಹಾತ್ಮೆ' ವಿಜೃಂಭಣೆಯಿಂದ ನಡೆಯಿತು. ಅನೇಕ ಪ್ರೇಕ್ಷಕರು, ಕಲಾಭಿಮಾನಿಗಳು ಉಪಸ್ಥಿತರಿದ್ದು ಯಕ್ಷಗಾನದ ಸವಿಯುಂಡರು. ಇದಕ್ಕೂ ಮುಂಚಿತವಾಗಿ ಸಂಜೆ 'ತಂಟೆಪ್ಪಾಡಿ...
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಾಸಿಕ ಸ್ವಚ್ಛತಾ ಕಾರ್ಯಕ್ರಮ ಇಂದು ನಡೆಯಿತು. ಒಡಿಯೂರು ಸಂಘದ ಸದಸ್ಯರು ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗಿಯಾದರು. ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸರ್ವಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ಗುತ್ತಿಗಾರಿನ ಅಕ್ಷಯ್ ಪುಟ್ಬಾಲ್ ನಲ್ಲಿ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರ ನಾಯಕತ್ವದ ಎನ್ ಎಂ ಎ ಎಂ ಇನ್ಸ್ಟಿಟ್ಯೂಟ್ ಆಪ್ ಟೆಕ್ನಾಲಜಿ ನಿಟ್ಟೆ ತಂಡ ವಿಟಿಯು ಮಂಗಳೂರು ಝೋನ್ ಪುಟ್ ಬಾಲ್ ಮ್ಯಾಚ್ ನಲ್ಲಿ ವಿಜೇತವಾಗಿ ಡಿ.31 ರಿಂದ ಬೆಂಗಳೂರಿನಲ್ಲಿ ನಡೆದ ಇಂಟರ್ ಝೋನ್ ಸ್ಪರ್ಧೆಯಲ್ಲಿ ಭಾಗವಹಿಸಿತ್ತು. ಅಲ್ಲಿ ಇವರ ತಂಡ ರಾಷ್ಟ್ರೀಯ ತಂಡಕ್ಕೆ...
ಜ.1ರಂದು ದಿ. ಸಂತೋಷ್ ಮಡ್ತಿಲ ಅಭಿಮಾನಿ ಬಳಗದ ವತಿಯಿಂದ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಅವರ ಪ್ರಥಮ ವರ್ಷದ ಪುಣ್ಯತಿಥಿ ಪ್ರಯುಕ್ತ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮ ಜ.1 ರಂದು ನಡೆಯಿತು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಮಾಜಿ ಅಧ್ಯಕ್ಷ ಎನ್ ಎ ರಾಮಚಂದ್ರ, ವೈದ್ಯಾಧಿಕಾರಿ ಡಾ. ಕರುಣಾಕರ, ಡಾ. ಹಿಮಕರ, ದೊಡ್ಡಣ್ಣ...
ಸರಕಾರಿ ಮಾದರಿ ಶಾಲೆ ಗುತ್ತಿಗಾರು ಇಲ್ಲಿನ ದೈಹಿಕ ಶಿಕ್ಷಕರಾದ ದಯಾನಂದ ಮುತ್ಲಾಜೆ ಅವರು ಡಿ. 31 ರಂದು ನಿವೃತ್ತರಾದರು. ಇವರಿಗೆ ಪ್ರಾ.ಶಾಲಾ ಶಿಕ್ಷಕರ ಸಂಘ ಸುಳ್ಯ ಇವರ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶ್ರೀಧರ್ ಗೌಡ, ಪ್ರಧಾನ ಕಾರ್ಯದರ್ಶಿ ಪದ್ಮನಾಭ ಅತ್ಯಾಡಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಶಾಲಪ್ಪ ತುಂಬತ್ತಾಜೆ, ಉಪಾಧ್ಯಕ್ಷ ಕುಶಾಲಪ್ಪ...
ಉಡುಪಿಯಲ್ಲಿ ಬೃಹತ್ ಜವುಳಿ ಪಾರ್ಕ್ ಅನ್ನು ನಿರ್ಮಾಣ ಮಾಡಲಾಗುವುದು. ಇಲ್ಲಿ ಬಾರೀ ಪ್ರಮಾಣದಲ್ಲಿ ಜವುಳಿ ಉದ್ದಿಮೆಯನ್ನು ಆರಂಭಿಸಲಾಗುವುದು. ಸುಮಾರು 20 ಎಕರೆ ಪ್ರದೇಶದಲ್ಲಿ ಶೀಘ್ರ ಜವುಳಿ ಪಾರ್ಕ್ ನಿರ್ಮಾಣಗೊಳ್ಳಲಿದೆ. ಈ ಮೂಲಕ ಸಹಸ್ರಾರು ಜನರಿಗೆ ಉದ್ಯೋಗವಕಾಶ ದೊರಯಲಿದೆ. ಜವುಳಿ ಪಾರ್ಕ್ ಮಾಡಲು ಬೇಕಾದ ಯೋಜನೆಗಳನ್ನು ಸಿದ್ದಪಡಿಸಲಾಗಿದ್ದು ಸರಕಾರ ಮಟ್ಟದಲ್ಲಿ ಆಗಬೇಕಾದ ನಿಯಮಗಳನ್ನು ಶೀಘ್ರ ರೂಪಿಸಿ ಶೀಘ್ರ...
ರೈತರಿಗೆ ಪ್ರಯೋಜನವಾಗುವ ರೀತಿಯಲ್ಲಿ ಕ್ಯಾಂಪ್ಕೋ ಸಂಸ್ಥೆಯ ಶಾಖೆಯನ್ನು ತೆರೆಯುವ ಬಗ್ಗೆ ಕೃಷಿಕರ ಸಭೆಯನ್ನು ಜ.1 ರಂದು ಐವರ್ನಾಡು ಪ್ರಾ.ಕೃ.ಪ.ಸ.ಸಂಘದ ಸಭಾಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ ವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿ "ರೈತರು ಹಾಗೂ ಅಡಿಕೆ ಬೆಳೆಗಾರರ ಪರವಾಗಿ ಇರುವ ಕ್ಯಾಂಪ್ಕೋ ಸಂಸ್ಥೆಯ ಶಾಖೆಯನ್ನು ತೆರೆದರೆ ಇಲ್ಲಿಯ ಕೃಷಿಕರಿಗೆ ಪ್ರಯೋಜನವಾಗುತ್ತದೆ. ಈಗಾಗಲೇ ನಾವು...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಉಡುಪಿಯ ಕೃಷ್ಣಾಪುರ ಜನಾರ್ಧನ ತೀರ್ಥ ಸಂಸ್ಥಾನದ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಡಿ.31 ರ ಶುಕ್ರವಾರದಂದು ಭೇಟಿ ನೀಡಿ ದೇವರ ದರ್ಶನ ಪಡೆದರು.ಜ.18 ರಂದು ಶ್ರೀ ಕೃಷ್ಣ ಪರಮಾತ್ಮ ಮತ್ತು ಮುಖ್ಯಪ್ರಾಣ ದೇವರ ದ್ವೈವಾರ್ಷಿಕ ಪರ್ಯಾಯದ 50ನೇ ವರ್ಷದ ಪೂಜಾ ಪರ್ಯಾಯ ಮಹೋತ್ಸವ ಜರುಗಲಿದ್ದು, ಆ ಪ್ರಯುಕ್ತ ಶ್ರೀಪಾದರು...
ಕೊಲ್ಲಮೊಗ್ರು ಗ್ರಾಮದ ಪಡಿಕಲ್ಲು ಎಂಬಲ್ಲಿ ಕಟ್ಟವನ್ನು ನಿರ್ಮಿಸಿ ಚಾಂತಾಳ ಮತ್ತು ಪಡಿಕಲ್ಲಿಗೆ ನೀರು ಹಾಯಿಸುವಂತಹ ವ್ಯವಸ್ಥೆಯನ್ನು ಕಳೆದ ವರ್ಷ ಉದ್ಯೋಗ ಖಾತ್ರಿ ಯೋಜನೆಯಲ್ಲಿ 2 ಲಕ್ಷದ 80 ಸಾವಿರ ರೂಪಾಯಿ ಹಣವನ್ನು ಇಟ್ಟು ನಾಲೆಯಲ್ಲಿ ತುಂಬಿದ್ದ ಹೂಳನ್ನು ಸ್ವಚ್ಛಗೊಳಿಸಿ ಹೂಳು ತುಂಬಿದಂತಹ ಎಲ್ಲಾ ಭಾಗವನ್ನು ಸ್ವಚ್ಛ ಮಾಡಿ ಕಟ್ಟೆ ಕಟ್ಟಿ ನೀರನ್ನು ರೈತರ ತೋಟಗಳಿಗೆ ಹಾಯಿಸುವಂತಹ...
Loading posts...
All posts loaded
No more posts
