ಐನೆಕಿದು : ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ನೀರಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ. 16ರಂದು ಐನೆಕಿದು ಗ್ರಾಮದ ಗುಂಡಡ್ಕ ಬಳಿ ನಡೆದಿದೆ. ಐನೆಕಿದು ಗ್ರಾಮದ ಗುಂಡಡ್ಕ ನಿವಾಸಿ ಜಗದೀಶ ಎಂಬವರು ಮೃತಪಟ್ಟ ವ್ಯಕ್ತಿ. ಜಗದೀಶರವರು ಸಂಜೆ ವೇಳೆ ಗುಂಡಡ್ಕ ಬಳಿ ಮೀನು ಹಿಡಿಯಲು ಹೊಳೆಗೆ ತೆರಳಿದ್ದಾಗ ನೀರಲ್ಲಿ ಮುಳುಗಿದ್ದು, ಅವರೊಂದಿಗಿದ್ದ ಮಕ್ಕಳು ಮನೆಯವರಿಗೆ ಬಂದು ಅಪ್ಪ ನೀರಲ್ಲಿ...

ದೇವ : ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ವತಿಯಿಂದ ಫಲಾನುಭವಿಗಳಿಗೆ ವೀಲ್ ಚಯರ್ ಹಾಗೂ ವಾಟರ್ ಬೆಡ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿರುದ್ದಿ ಯೋಜನೆಯ ಜನಮಂಗಲ ಕಾರ್ಯಕ್ರಮದಡಿ ದೇವಚಳ್ಳ ಗ್ರಾಮದ ಭಾವಮಿತ್ರ ದೇವರವರಿಗೆ ವೀಲ್ ಚಯರ್ ಹಾಗೂ ದೇವ ರಾಟೆ ಗೌರಮ್ಮ ಮತ್ತು ಮಡಪ್ಪಾಡಿ ಗ್ರಾಮದ ಸೀತಮ್ಮ ಕಾಯರ ರವರಿಗೆ ವಾಟರ್ ಬೆಡ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಯೋಜನೆಯ ಗುತ್ತಿಗಾರು ವಲಯದ ಅಧ್ಯಕ್ಷರಾದ ಯೋಗೀಶ್ ದೇವ, ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ, ಮಡಪ್ಪಾಡಿ...
Ad Widget

ಶಶಾಂಕ್ ರೈಸ್ ಮಿಲ್ ಮಾಲಕ ಸದಾನಂದ ಭಟ್ ಅರ್ನಾಡಿ ನಿಧನ

ಅರ್ನಾಡಿಯಲ್ಲಿರುವ ಶಶಾಂಕ್ ರೈಸ್ ಮಿಲ್ ಮಾಲಕ ಅರ್ನಾಡಿ ಸದಾನಂದ ಭಟ್ ಅಲ್ಪ ಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 70 ವರ್ಷ ವಯಸ್ಸಾಗಿತ್ತು. ಹಲವಾರು ವರ್ಷಗಳಿಂದ ರೈಸ್ ಮಿಲ್ ನಡೆಸುತ್ತಾ ಬಂದಿರುವ ಅವರು ಇತ್ತೀಚೆಗೆ ಬೆಂಗಳೂರಿನ ಮಗನ ಮನೆಯಲ್ಲಿ ನೆಲೆಸಿದ್ದರು. ಮೃತರು ಪತ್ನಿ ಶಂಕರಿ, ಪುತ್ರ ಶಶಾಂಕ್, ಪುತ್ರಿ ಪ್ರಿಯಾಂಕ, ಸೊಸೆ, ಅಳಿಯ,...

ಪ್ರಕೃತಿ ವಿಸ್ಮಯ : ಕಡಿದ ಬಾಳೆಗಿಡದಲ್ಲಿ ಮೂಡಿದ ಗೊನೆ

ಅರಂಬೂರಿನಲ್ಲಿರುವ ವಿಶ್ವನಾಥ ಸರಳಿಕುಂಜ ಅವರ ಜಾಗದಲ್ಲಿ ಕಡಿದ ಬಾಳೆ ಗಿಡದಲ್ಲಿ ಗೊನೆ ಮೂಡಿ ಅಚ್ಚರಿ ಮೂಡಿಸಿದೆ.‌

ಅರಂತೋಡು : ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಸವಾರರಿಗೆ ಗಾಯ

ಮಾಣಿ ಮೈಸೂರು ಹೆದ್ದಾರಿಯ ಅರಂತೋಡು ಪೇಟೆಯಲ್ಲಿ ತೊಡಿಕಾನ ತಿರುವು ಸಮೀಪ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬೈಕ್‌ ಮತ್ತು ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಎರಡು ಮುಖಾಮುಖಿ ಢಿಕ್ಕಿಯಾಗಿ ಸವಾರರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಓರ್ವ ಸವಾರನ ಕಾಲಿಗೆ ಗಂಭೀರ ಗಾಯಗಳಾಗಿದ್ದು ಮತ್ತೋರ್ವನ  ಕಾಲಿನ ಹೆಬ್ಬೆರಳು ತುಂಡಾಗಿದ್ದು ಮೂವರನ್ನು ಸುಳ್ಯದ...

ಹರಿಹರ ಪಳ್ಳತ್ತಡ್ಕ : ಸತತ ನಾಲ್ಕೈದು ದಿನಗಳಿಂದ ನಿರಂತರ ಆನೆ ದಾಳಿ ; ಕೃಷಿಗೆ ಅಪಾರ ಹಾನಿ

ಹರಿಹರ ಪಳ್ಳತ್ತಡ್ಕ ಗ್ರಾಮದ ದೇವರುಳಿಯ ಎಂಬಲ್ಲಿನ ಪುಂಡರೀಶ ಎಂಬುವವರ ತೋಟಕ್ಕೆ ಹಾಗೂ ಅವರ ತೋಟದ ಅಕ್ಕಪಕ್ಕದ ತೋಟಗಳಿಗೆ ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಆನೆ ದಾಳಿ ಮಾಡುತ್ತಿದ್ದು, ಆನೆ ದಾಳಿಯಿಂದ ತೋಟದಲ್ಲಿ ಬೆಳೆದ ಕಂಗು, ತೆಂಗು, ಬಾಳೆ ಕೃಷಿಗೆ ಅಪಾರ ಹಾನಿಯುಂಟಾಗಿದೆ ಎಂದು ತಿಳಿದುಬಂದಿದೆ.

ಸುಬ್ರಹ್ಮಣ್ಯಕ್ಕೆ ಆಗಮಿಸಿದ ನಂದಿ ರಥಯಾತ್ರೆಗೆ ಸ್ವಾಮೀಜಿ ಹಾಗೂ ಸಾರ್ವಜನಿಕರಿಂದ ಭವ್ಯ ಸ್ವಾಗತ

ವಿಷಮುಕ್ತ ಗಾಳಿ, ಮಣ್ಣು, ಆಹಾರ, ಪ್ರಕೃತಿ, ಪರಿಸರ ಸಂರಕ್ಷಣೆ, ಪಂಚಗವ್ಯ ಚಿಕಿತ್ಸೆ, ರೋಗಮುಕ್ತ ಭಾರತ, ಸಾಮೂಹಿಕ 1,11,108 ವಿಷ್ಣು ಸಹಸ್ರನಾಮ ಪಾರಾಯಣ, ಒಂದು ಕೋಟಿ ಗೋಮಯ ದೀಪ ಬೆಳಗಿಸುವುದು, ನಂದಿ ಪೂಜೆ, ಗೋಕಥೆ, ಮನೆಮನೆಯಲ್ಲಿ ಗೋವು, ದೇಶಿ ಗೋಮಾತೆಯ ಮಹಿಮೆ ಜನರಿಗೆ ತಿಳಿಸುವುದು, ದೇಶಿ ಗೋಮಾತೆ ಹಾಗೂ ಭೂಮಾತೆಗೆ ಇರುವ ಸಂಬಂಧ ಜನರಿಗೆ ತಿಳಿಸುವುದು, ಗೋಮಾತೆ...

ಕೊಲ್ಲಮೊಗ್ರು : ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟನೆ ಹಾಗೂ ವಾಹನ ಹಸ್ತಾಂತರ

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವತಿಯಿಂದ ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟನೆ ಹಾಗೂ ತ್ಯಾಜ್ಯ ವಿಲೇವಾರಿ ವಾಹನದ ಹಸ್ತಾಂತರ ಕಾರ್ಯಕ್ರಮವು ಮಾ.12 ರಂದು ನಡೆಯಿತು.ಕೀರ್ತಿ ಸಂಜೀವಿನಿ ಒಕ್ಕೂಟದ ವತಿಯಿಂದ ಘನತ್ಯಾಜ್ಯ ವಿಲೇವಾರಿ ಘಟಕ ಕಾರ್ಯನಿರ್ವಹಿಸಲಿದೆ. ಘಟಕವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೋಹಿನಿ ಕಟ್ಟ ದೀಪ ಬೆಳಗಿಸುವ ಮುಖಾಂತರ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷರಾದ ಮಾಧವ ಚಾಂತಾಳ, ಸದಸ್ಯರುಗಳಾದ...

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಖ್ಯಾತ ಚಲನಚಿತ್ರ ನಟ ಪ್ರಭುದೇವ

ಸುಬ್ರಹ್ಮಣ್ಯ ಮಾ.15: ಖ್ಯಾತ ನೃತ್ಯ ಸಂಯೋಜಕ, ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಹಾಗೂ ನಟರಾದ ಪ್ರಭುದೇವ ಅವರು ಕುಟುಂಬ ಸಮೇತ ಇಂದು ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು.ಪ್ರಭುದೇವ, ಅವರ ಪತ್ನಿ ಹಾಗೂ ಕುಟುಂಬವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು.ತದನಂತರ ದೇವಳದ ಕಚೇರಿಯಲ್ಲಿ...

ಕಂದ್ರಪ್ಪಾಡಿ ಜಾತ್ರೋತ್ಸವ – ಭಕ್ತರಿಗೆ ಅಭಯ ನೀಡಿದ ಪುರುಷ ದೈವ ಹಾಗೂ ರಾಜ್ಯದೈವ

ಇತಿಹಾಸ ಪ್ರಸಿದ್ಧ ಕಂದ್ರಪ್ಪಾಡಿ ಶ್ರೀ ರಾಜ್ಯದೈವ ಮತ್ತು ಪುರುಷ ದೈವ ದೈವಸ್ಥಾನಲ್ಲಿ ನಡೆಯುವ ಜಾತ್ರೋತ್ಸವ ವಿಜ್ರಂಭಣೆಯಿಂದ ನಡೆಯಿತು.ಮಾ.14 ರಂದು ಮುಂಡೋಡಿ ತರವಾಡು ಮನೆಯಿಂದ ಮತ್ತು ಶ್ರೀ ರುದ್ರಚಾಮುಂಡಿ ದೈವಸ್ಥಾನದಿಂದ ದೈವದ ಭಂಡಾರ ಆಗಮನ, ಉಗ್ರಾಣ ತುಂಬಿಸುವ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆ ನಡೆಯಿತು. ತಳೂರು ಹಾಗೂ ಮಾಳಿಗೆಯಿಂದ ಪಲ್ಲಕ್ಕಿ ಉತ್ಸವದೊಂದಿಗೆ ದೈವಗಳ ಭಂಡಾರ ತರುವ ಕಾರ್ಯಕ್ರಮ ನಡೆಯಿತು.ಮಾ....
Loading posts...

All posts loaded

No more posts

error: Content is protected !!