- Tuesday
- May 5th, 2026
ದಿನಾಂಕ : 26-12-2021ರಂದು ನಡೆಯಬೇಕಾಗಿದ್ದ ದೇವಚಳ್ಳಗ್ರಾಮದ ಮೆತ್ತಡ್ಕ ಶ್ರೀಮತಿ ಪದ್ಮಾವತಿ ಮತ್ತು ಹೊನ್ನಪ್ಪ ಗೌಡರ ಪುತ್ರ ಶರತ್ ಮತ್ತು ಅಮರಮುಡ್ನೂರು ಗ್ರಾಮದ ಕಾನಡ್ಕ ಶ್ರೀಮತಿ ಪುಷ್ಪವೇಣಿ ಮತ್ತು ಯಶವಂತ ಗೌಡರ ಪುತ್ರ ಹರ್ಷಿತಾರವರ ವಿವಾಹ ಕಾರ್ಯಕ್ರಮ ವು ಕಾರಣಾಂತರಗಳಿಂದ ಮುಂದೂಡಲಾಗಿದೆ. ಇವರ ವಿವಾಹ ಕಾರ್ಯಕ್ರಮವು ಇದೇ ಬರುವ ದಿನಾಂಕ 23-01-2022ರಂದು ವಿಷ್ಣು ಕಲಾ ಮಂದಿರ ಮಾವಿನಕಟ್ಟೆಯಲ್ಲಿ...
ವಿದ್ಯಾಬೋಧಿನೀ ಪ್ರಾಥಮಿಕ ಶಾಲಾ ಭಜನಾ ತಂಡವು ಅನೇಕ ಕಡೆ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು, ಶಾಲಾ ಎಸ್ಡಿಎಂಸಿ ಉಪಾಧ್ಯಕ್ಷೆ ಕೊಡುಗೈ ದಾನಿ ಶ್ರೀಮತಿ ಹರಿಣಾಕ್ಷಿ ಮತ್ತು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ತ್ರಿವೇಣಿ ವಿಶ್ವೇಶ್ವರ ಪುರೋಹಿತ್ ಅವರು ಭಜನಾ ತಂಡದ ಹುಡುಗಿಯರಿಗೆ ಸಮವಸ್ತ್ರ ಕೊಡುಗೆ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು ಸುಬ್ಬಯ್ಯ ವೈ ಬಿ ಇಬ್ಬರಿಗೂ...
ಸುಬ್ರಹ್ಮಣ್ಯ - ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2020-21 ನೇ ಸಾಲಿನ ವಾರ್ಷಿಕ ಮಹಾಸಭೆಯು ಡಿ.19 ರ ಆದಿತ್ಯವಾರದಂದು ಬೆಳಿಗ್ಗೆ 10:00 ಗಂಟೆಗೆ ಸಂಘದ ಅಧ್ಯಕ್ಷ ಜಯಪ್ರಕಾಶ್ ಕೂಜುಗೋಡು ಇವರ ಅಧ್ಯಕ್ಷತೆಯಲ್ಲಿ ಎಸ್.ಎಸ್.ಪಿ.ಯು ಕಾಲೇಜಿನ ಬೆಳಿಹಬ್ಬ ಸಭಾಭವನದಲ್ಲಿ ನಡೆಯಿತು.ಸಂಘವು 2020-21 ನೇ ಸಾಲಿನಲ್ಲಿ 20,06,389 ರೂಪಾಯಿ ಲಾಭಾಂಶ ದಾಖಲಿಸಿದ್ದು, ಸಂಘದ ಸದಸ್ಯರಿಗೆ ಶೇ.6%...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಹಿರಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ರತ್ನಾವತಿ ಡಿ. ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಅಚ್ಚುತ ಪೂಜಾರಿ, ಜೆಸಿಐ ಇಂಡಿಯಾದ ವಲಯ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಶಾಸ್ತ್ರ ಸಂಘದಿಂದ "Maths Shortcut tricks and tips" ಎಂಬ ವಿಷಯದ ಕುರಿತ ತರಬೇತಿ ಕಾರ್ಯಾಗಾರವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು.ಐ ಆರ್ ಸಿ ಎಂ ಡಿ ಶಿಕ್ಷಣ ಸಂಸ್ಥೆ ಪುತ್ತೂರು ಇದರ ಸಹ ಸಂಸ್ಥಾಪಕಿ ಹಾಗೂ ಅಕಾಡೆಮಿಕ್ ಕೌನ್ಸೆಲರ್ ಆದ ಶ್ರೀಮತಿ ಪ್ರಫುಲ್ಲಾ ಗಣೇಶ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಕಾಲೇಜಿನ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಡಿ.18 ರ ಶನಿವಾರದಂದು ಮೆಟ್ರಿಕ್ ಮೇಳ ನಡೆಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಉಮೇಶ್ವರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ವಿದ್ಯಾರ್ಥಿಗಳು ತಮ್ಮ ಮನೆಗಳಿಂದ ವಿವಿಧ ಬಗೆಯ ತರಕಾರಿ, ಹಣ್ಣು ಹಾಗೂ ಮನೆಯಲ್ಲಿ ತಯಾರಿಸಿದ ತಿಂಡಿ ಮುಂತಾದವುಗಳನ್ನು ತಂದು ಮಾರಾಟ ಮಾಡಿದರು.ಸಾರ್ವಜನಿಕರು ಹಾಗೂ ಪೋಷಕರು ವಿದ್ಯಾರ್ಥಿಗಳಿಂದ ತರಕಾರಿ, ಹಣ್ಣು, ತಿಂಡಿ ಮುಂತಾದವುಗಳನ್ನು...
ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ ಮುಪ್ಪೇರಿಯ ಇದರ ವಾರ್ಷಿಕೋತ್ಸವದ ಪ್ರಯುಕ್ತ ಭಜನೆ ತರಬೇತಿಯು ಇಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆ ತನಕ ಜರುಗಿತು. ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಮಾಧವ ಪಂಜ ಮತ್ತು ಶ್ರೀಮತಿ ಸುಮಾ ಆಚಾರ್ ಭಜನೆ ಹೇಳಿಕೊಟ್ಟರು. ಇವರನ್ನು ಶ್ರೀ ರಾಧಾಕೃಷ್ಣ ರಾವ್ ಉಡುವೆಕೋಡಿ ಗೌರವಿಸಿ, ಅವರ ಬಗ್ಗೆ ಶ್ಲಾಘನೀಯ...
ಮುರುಳ್ಯ- ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ(ನಿ.) ಅಲೆಕ್ಕಾಡಿ ಇದರ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯ ಡಿ.19 ಆದಿತ್ಯವಾರದಂದು ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯ, ಅಲೆಕ್ಕಾಡಿಯಲ್ಲಿ ಸಂಘದ ಅಧ್ಯಕ್ಷರಾದ ವಸಂತ ಹೆಚ್ ಹುದೇರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಹಿರಿಯ ಕೃಷಿಕರಾದ ಗಿರಿಯಪ್ಪ ಗೌಡ ದೀಪ ಬೆಳಗಿಸಿ ಮಹಾಸಭೆಯನ್ನು ಉದ್ಘಾಟಿಸಿದರು. ಸಂಘದ ಮುಖ್ಯ...
ಚಂದ್ರಶೇಖರ ಪೇರಾಲು ಅವರು ಸುಳ್ಯದ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಕೊಡುಗೆ ಅಪಾರವಾಗಿದೆ. ಎಲ್ಲಾಶಿಕ್ಷಕರಿಗೂ ಇವರು ಮಾದರಿಯಾಗಿದ್ದಾರೆ. ಇವರ ನಿವೃತ್ತ ಜೀವನ ಉತ್ತಮವಾಗಿರಲಿ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷ ಡಾ.ಕೆ.ವಿ. ಚಿದಾನಂದ ಅವರು ಅಭಿಪ್ರಾಯಪಟ್ಟರು. ಡಿ.18 ರಂದು ಸುಳ್ಯದ ಗಿರಿದರ್ಶಿನಿ ಸಭಾಭವನದಲದಲ್ಲಿ ಚಂದ್ರಶೇಖರ ಪೇರಾಲು ಅಭಿನಂಧನಾ ಕಾರ್ಯಕ್ರಮದಲ್ಲಿ ಪೇರಾಲು ದಂಪತಿಗಳನ್ನು ಸಮ್ಮಾನಿಸಿ ಅವರು...
ಸುಳ್ಯ ತಾಲ್ಲೂಕು ಬಂಟರ ಯಾನೆ ನಾಡವರ ಸಂಘದ ಸಭೆಯು ಬಂಟ್ಸ್ ಹಾಸ್ಟೆಲಿನ ಸಭಾಂಗಣದಲ್ಲಿ ಡಿ. 18ರಂದು ತಾಲ್ಲೂಕು ಅಧ್ಯಕ್ಷರಾದ ಎನ್. ಜಯಪ್ರಕಾಶ್ ರೈ ಅಧ್ಯಕ್ಷತೆಯಲ್ಲಿ ನಡೆಯಿತು. ಕೇನ್ಯ ರವೀಂದ್ರನಾಥ ರೈ ಸುಭಾಶ್ಚಂದ್ರ ರೈ ತೋಟ ,ಗಂಗಾಧರ ರೈ, ಪ್ರೀತಮ್ ರೈ ಹಾಗೂ ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ಸಭೆನಡೆಯಿತು. ಜನವರಿಯಲ್ಲಿ ನಡೆಯುವ ಸಮಾವೇಶದ ಆಮಂತ್ರಣ ಪತ್ರಿಕೆಯನ್ನು ಈ...
Loading posts...
All posts loaded
No more posts
