- Monday
- June 8th, 2026
ಕೊಲ್ಲಮೊಗ್ರು ಗ್ರಾಮದ ಚಿದಾನಂದ ಮಲ್ಲಾಜೆ ಜೂ.16ರಂದು ಸ್ವಗೃಹದಲ್ಲಿ ನಿಧನರಾದರು.ಇವರು ಕೆಲ ಸಮಯಗಳಿಂದ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದರು.ಮೃತರಿಗೆ 65 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಮೀನಾಕ್ಷಿ, ಪುತ್ರಿ ಶ್ರೀಮತಿ ಸಂಧ್ಯಾ ಶ್ರೀಧರ್ ಮೆಟ್ಟಿನಡ್ಕ, ಪುತ್ರ ಗಲ್ಫ್ ನಲ್ಲಿ ಉದ್ಯೋಗಿಯಾಗಿರುವ ಅಕ್ಷಯ್, ಸಹೋದರರಾದ ಗೋಪಾಲಕೃಷ್ಣ, ಅಶೋಕ್, ಸಹೋದರಿ ಶ್ರೀಮತಿ ರತ್ನಾವತಿ ಐನೆಕಿದು ಹಾಗೂ ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.
ಪುತ್ತೂರಿನ ಪ್ರಸಿದ್ಧ ಜಿ ಎಲ್ ಆಚಾರ್ಯ ಜ್ಯುವೆಲರ್ಸ್ ಸಂಸ್ಥೆಯಿಂದ ಜೂನ್ 09ರಿಂದ " ಕರಿಮಣಿ ಮೇಳ" ಎಂಬ ಹೊಸ ಯೋಜನೆಯೊಂದ್ದು ಪ್ರಾರಂಭಗೊಳ್ಳಲಿದ್ದು ಇದರಲ್ಲಿ ಗ್ರಾಹಕರು ತಮ್ಮ ಹಳೆಯ ಕರಿಮಣಿಯನ್ನು ಹೊಸತರೊಂದಿಗೆ ಬದಲಾಯಿಸಿ ಪ್ರತಿ ಗ್ರಾಂಗೆ ರೂ 150ರಂತೆ ಅಧಿಕ ದರ ಪಡೆದುಕೊಳ್ಳಬಹುದಾಗಿದ್ದು ಗ್ರಾಹಕರು ಈ ಅವಕಾಶವನ್ನು ಪಡೆದುಕೊಳ್ಳಬೇಕಾಗಿ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ
2025-26ನೇ ಸಾಲಿನ ಪ್ರಾಂತ್ಯ 8ರ ವಲಯ 1ರ ವಲಯಾಧ್ಯಕ್ಷರಾಗಿ ದಿಲೀಪ್ ಬಾಬ್ಲುಬೆಟ್ಟು ಆಯ್ಕೆಯಾಗಿದ್ದಾರೆ ಜಿಲ್ಲೆಯಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಪಂಜ ಲಯನ್ಸ್ ಸಂಸ್ಥೆಯ ಅತ್ಯಂತ ಕ್ರಿಯಾಶೀಲ ಸದಸ್ಯ,ಪೂರ್ವಾಧ್ಯಕ್ಷ,ನ್ಯಾಯವಾದಿ ದಿಲೀಪ್ ಬಾಬ್ಲುಬೆಟ್ಟು ಇವರನ್ನು ಜಿಲ್ಲಾ ರಾಜ್ಯಪಾಲರಾದ ಕುಡ್ಲಿ ಅರವಿಂದ ಶೆಣೈ ಇವರು ಪ್ರಾಂತ್ಯ 8ರ ವಲಯ 1ರ ವಲಯ ಅಧ್ಯಕ್ಷರಾಗಿ ಮುಂದಿನ ಲಯಸ್ಟಿಕ್ ವರ್ಷಕ್ಕೆ ನಿಯುಕ್ತಿಗೊಳಿಸಿರುತ್ತಾರೆ. ಈಗಾಗಲೇ ಮಂಗಳೂರ...
ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿರುವ ಮೈದಾನದಲ್ಲಿ ಶ್ರೀಮತಿ ಪದ್ಮಾವತಿ ಉಪೇಂದ್ರ ಕಾಮತ್ ಮತ್ತು ಮನೆಯವರು ಸೇವೆಯಾಗಿ ನೀಡುವ ಅಶ್ವಥ ಕಟ್ಟೆಯ ಭೂಮಿ ಪೂಜೆ ಕಾರ್ಯಕ್ರಮ ಜೂ. 1 ರಂದು ನಡೆಯಿತು. ದೇವಸ್ಥಾನದ ಅರ್ಚಕ ಶ್ರೀವರ ಪಾಂಗಣ್ಣಾಯ ಪೂಜಾ ವಿಧಿ ವಿಧಾನಗಳನ್ನು ನೇರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಮುಂದೆ ಇದೇ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯು ತುರ್ತು ಕ್ರಮಗಳನ್ನು ಕೈಗೊಂಡಿದೆ.ಆದ್ದರಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆ,...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ವ್ಯಾಪಕ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆಗಳಿಗೆ, ಸರ್ಕಾರಿ ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ಇಂದು(ಮೇ.30) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಗು ಅನಾರೋಗ್ಯದಿಂದ ಮೃತಪಟ್ಟ ಹಿನ್ನಲೆಯಲ್ಲಿ ದು:ಖವನ್ನು ಸಹಿಸಿಕೊಳ್ಳಲಾಗದೆ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 28ರಂದು ಬಾಳಿಲದಿಂದ ವರದಿಯಾಗಿದೆ. ಬಾಳಿಲ ಬೊಮ್ಮಣಮಜಲು ಎಂಬಲ್ಲಿನ ನಿವಾಸಿ ಬಾಲಕೃಷ್ಣ ಎಂಬವರ ಆರು ತಿಂಗಳ ಪುತ್ರಿ ಕೆಲದಿನಗಳ ಹಿಂದೆ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿತ್ತು. ಇದರಿಂದ ನೊಂದ ಮಗುವಿನ ತಂದೆ ಬಾಲಕೃಷ್ಣರು ಮೇ. 28 ರಂದು ರಾತ್ರಿ ಮನೆ ಬಳಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯು ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ನಿರ್ದೇಶಕರಾದ ಶ್ರೀ ಬಾಬು ನಾಯ್ಕ್ ಸರ್ ರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ತಾಲೂಕು ಯೋಜನಾಧಿಕಾರಿಗಳಾದ ಶ್ರೀ ಮಾಧವ ಗೌಡ ಸರ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ...
ಮಡಪ್ಪಾಡಿ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ವತಿಯಿಂದ ಕೃಷಿ ಸಲಕರಣೆ, ಗೃಹೋಪಯೋಗಿ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಸಾಲಮೇಳ ಕಾರ್ಯಕ್ರಮವು ಯುವಕ ಮಂಡಲ ಮಡಪ್ಪಾಡಿ ಇದರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಎನ್.ಟಿ. ಹೊನ್ನಪ್ಪ, ಕೃಷಿಕರು ಹಾಗೂ ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಉದ್ಘಾಟಿಸಿ ಶುಭಹಾರೈಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿನಯ್ ಕುಮಾರ್ ಮುಳುಗಾಡು...
ಕುಕ್ಕೆ ಸುಬ್ರಹ್ಮಣದ ಕುಮಾರಧಾರ ಸ್ನಾನ ಘಟ್ಟಕ್ಕೆ ಕಡಬ ತಹಶಿಲ್ದಾರ್ ಪ್ರಭಾಕರ ಖಜೂರೆ ಹಾಗೂ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಮೇ.,27 ರಂದು ಭೇಟಿ ನೀಡಿದ್ದುವಿಪರೀತ ಮಳೆ ಬರುತ್ತಿರುವ ಕಾರಣ ಸ್ನಾನ ಘಟ್ಟ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಸ್ನಾನ ಘಟ್ಟ ಕ್ಕೆ ಭಕ್ತರು ಇಳಿಯದಂತೆ ತಹಶಿಲ್ದಾರ್ ಆದೇಶ ಮಾಡಿರುವುದಾಗಿ ವರದಿಯಾಗಿದೆ. ಹೊಸ ಸೇತುವೆ ಕಾಮಗಾರಿ ಪ್ರಗತಿಯಲ್ಲಿದ್ದು ಅದರ...
Loading posts...
All posts loaded
No more posts
