ಡಾ. ಅನುರಾಧಾ ಕುರುಂಜಿಯವರಿಗೆ ರಾಷ್ಟ್ರಮಟ್ಟದ ಭಾರತ ವಿದ್ಯಾ ರತ್ನ ಅವಾರ್ಡ್

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕರು, ವಲಯ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ನವದೆಹಲಿಯ ಇಂಟರ್ ನ್ಯಾಷನಲ್ ಬ್ಯುಸಿನೆಸ್ ಕೌನ್ಸಿಲ್ ನವರು ಪ್ರತಿವರ್ಷ ಕೊಡಮಾಡುವ "ಭಾರತ ವಿದ್ಯಾ ರತ್ನ ಅವಾರ್ಡ್ 2021" ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯಕ ಹಾಗೂ ಸಂಘಟನಾ ಕ್ಷೇತ್ರವನ್ನು ಗಮನಿಸಿ ಕೊಡಮಾಡುವ 2021 ನೇ ಸಾಲಿನ‌ ಪ್ರಶಸ್ತಿಗೆ ದಕ್ಷಿಣ...

ಹರಿಹರ ಪಲ್ಲತ್ತಡ್ಕ : ಎಲ್.ಕೆ.ಜಿ, ಯು.ಕೆ.ಜಿ ಆರಂಭ

ಹರಿಹರ ಪಲ್ಲತ್ತಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನ.25 ರಂದು ಎಲ್.ಕೆ.ಜಿ ಹಾಗೂ ಯು.ಕೆ.ಜಿ ತರಗತಿ ಆರಂಭಗೊಂಡಿತು.ವೈದ್ಯರಾದ ಡಾ| ಚಂದ್ರಶೇಖರ ಕಿರಿಭಾಗ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಎಸ್.ಡಿ.ಎಂ.ಸಿ ಅದ್ಯಕ್ಷರಾದ ನೇಮಿಚಂದ್ರ ದೋಣಿಪಳ್ಳ ಪ್ರಾಸ್ತಾವಿಕವಾಗಿ ಭಾಷಣ ಮಾಡಿದರು. ಶಾಲಾ ಶಿಕ್ಷಕಿ ಶ್ರೀಮತಿ ದೇವಕಿ ನೆತ್ತಾರ ವಂದಿಸಿದರು.ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸಾವಿತ್ರಿ,...
Ad Widget

ಒಕ್ಕಲಿಗ ಸಮುದಾಯದ ಬೇಡಿಕೆ ಹಾಗೂ ಸಮುದಾಯದ ಅಭಿವೃದ್ಧಿಯೇ ನಮ್ಮ ಮೊದಲ ಆದ್ಯತೆ- ಡಾ‌.ಕೆ.ವಿ ಚಿದಾನಂದ

ನಮ್ಮ ಊರಿನ ಹಾಗೂ ಒಕ್ಕಲಿಗ ಸಮುದಾಯದ ಅಭಿವೃದ್ಧಿಗಾಗಿ ಈ ಬಾರಿಯ ಒಕ್ಕಲಿಗ ಸಮುದಾಯದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ನಾನು ಈ ಭಾಗದಲ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಸುವವರೆಗೂ ಇಲ್ಲಿನ ಸಮುದಾಯ ಬಾಂಧವರಿಗೆ ಇಂಥದೊಂದು ಚುನಾವಣೆಯಿದೆ ಎಂಬ ಮಾಹಿತಿಯೇ ಇರಲಿಲ್ಲ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷ ಡಾ.ಕೆ.ವಿ ಚಿದಾನಂದ ಅವರು ಹೇಳಿದರು‌. ಸುಳ್ಯದಲ್ಲಿ ನ.೨೬ ರಂದು...

ದೇವಚಳ್ಳ: ಅಚ್ರಪ್ಪಾಡಿ ಶಾಲೆಯಲ್ಲಿ ಸಂವಿಧಾನ ದಿನಾಚರಣೆ

ಸ.ಕಿ.ಪ್ರಾ.ಶಾಲೆ ಅಚ್ರಪ್ಪಾಡಿ ಇಲ್ಲಿ ನ.26 ಶುಕ್ರವಾರದಂದು "ಸಂವಿಧಾನ ದಿನಾಚರಣೆ"ಯನ್ನು ಆಚರಿಸಲಾಯಿತು. ಇದರ ಅಂಗವಾಗಿ ಸಂವಿಧಾನ ಪ್ರಸ್ತಾವನೆಯ ಪ್ರತಿಜ್ಞೆಯನ್ನು ಶಾಲಾ ಮಕ್ಕಳು, ಶಾಲಾ ಶಿಕ್ಷಕರು ಹಾಗೂ ಶಾಲಾ ಅಡುಗೆ ಸಿಬ್ಬಂದಿಯವರೆಲ್ಲರು ಸೇರಿ ಸ್ವೀಕರಿಸಿದರು. ಸಂವಿಧಾನದ ಮಹತ್ವ ಮತ್ತು ಸಂವಿಧಾನ ಪ್ರಸ್ತಾವನೆಯ ಬಗ್ಗೆ ಹಾಗೂ ಸಂವಿಧಾನ ರಚನೆಯ ವಿಧಿ ವಿಧಾನಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಲಾಯಿತು. ನಂತರ 11:15ಕ್ಕೆ...

ಬಾಳಿಲ: ವಿದ್ಯಾಬೋಧಿನೀ ಹಿ.ಪ್ರಾ.ಶಾಲೆಯಲ್ಲಿ ಸಂವಿಧಾನ ದಿನಾಚರಣೆ

ನ.26ರಂದು ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದಲ್ಲಿ "ಸಂವಿಧಾನ ದಿನಾಚರಣೆ"ಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯಗುರುಗಳು, ಶಾಲಾಶಿಕ್ಷಕರು, ಮತ್ತು ವಿದ್ಯಾರ್ಥಿಗಳು ಭಾಗವಹಿಸಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಮೂರ್ತಿ ಇವರು ಮಕ್ಕಳಿಗೆ ನಮ್ಮ ಸಂವಿಧಾನ ಪ್ರಸ್ತಾವನೆಯ ಮಹತ್ವವನ್ನು ತಿಳಿಸಿದರು.

ಸುಳ್ಯ: ಶ್ರೀ ಶಾರದಾ ಮಹಿಳಾ ಕಾಲೇಜಿನಲ್ಲಿ ಸಂವಿಧಾನ ದಿನದ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕಾರ

ಶ್ರೀ ಶಾರದಾ ಮಹಿಳಾ ಕಾಲೇಜಿನಿನಲ್ಲಿ ನ. 26 ರಂದು ಸಂವಿಧಾನ ದಿನದ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿನಿಯರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಸುಳ್ಯ: ಶೌರ್ಯ ಶ್ರೀ ವಿಪತ್ತು ನಿರ್ವಹಣಾ ಘಟಕ ಸುಳ್ಯ ತಾಲೂಕು ಸಮಿತಿ ರಚನೆ,
ತಾಲೂಕು ಸಮಿತಿ ಕ್ಯಾಪ್ಟನ್ ಆಗಿ ಜಯರಾಮ್.ಪಿ.ಜಿ ಹಾಗೂ ಸಹ ಕ್ಯಾಪ್ಟನ್ ಆಗಿ ಸತೀಶ್ ಹಾಲೆಮಜಲು

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಧರ್ಮಸ್ಥಳ ಇದರ ಕಾರ್ಯಕ್ರಮದಡಿಯಲ್ಲಿ ಶೌರ್ಯ ಶ್ರೀ ವಿಪತ್ತು ನಿರ್ವಹಣಾ ಘಟಕವು ರಾಜ್ಯದ 34 ತಾಲೂಕುಗಳಲ್ಲಿ ಕಾರ್ಯನಿರ್ವಾಹಹಿಸುತ್ತಿದೆ. ಇದರ ಸುಳ್ಯ ತಾಲೂಕು ಸಮಿತಿಯು ನವೆಂಬರ್ 25 ರ ಗುರುವಾರದಂದು ಸುಳ್ಯ ತಾಲ್ಲೂಕಿನ ಯೋಜನಾ ಕಚೇರಿ ಸುಳ್ಯದಲ್ಲಿ ರಚನೆಗೊಂಡಿದ್ದು, ಸುಳ್ಯ ಘಟಕದ ಜಯರಾಮ್.ಪಿ.ಜಿ. ಅವರು ತಾಲೂಕು ಕ್ಯಾಪ್ಟನ್ ಆಗಿ ಹಾಗೂ ಸಹ ಕ್ಯಾಪ್ಟನ್...

ಡಿ.13ರಂದು ವಿಹಿಂಪ ಬಜರಂಗದಳ ವತಿಯಿಂದ ಸುಳ್ಯದಲ್ಲಿ ಶೌರ್ಯ ಸಂಚಲನ ಕಾರ್ಯಕ್ರಮ – ಬೆಳ್ಳಾರೆ ವಾಲ್ಮೀಕಿ ಶಾಖೆಯಿಂದ ಇಂದು ಕರಪತ್ರ ಬಿಡುಗಡೆ

ವಿಶ್ವಹಿಂದೂ ಪರಿಷದ್ ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿಸುಳ್ಯ ಪ್ರಖಂಡ ವತಿಯಿಂದ ಗೀತಾ ಜಯಂತಿ ಅಂಗವಾಗಿ ಐತಿಹಾಸಿಕ ಹಿಂದುತ್ವದ ಭದ್ರಕೋಟೆ ಸುಳ್ಯದಲ್ಲಿ ಡಿ.13ರಂದು ಜರುಗಲಿರುವ ಶೌರ್ಯ ಸಂಚಲನ ಕಾರ್ಯಕ್ರಮದ ಕರಪತ್ರ ಬಿಡುಗಡೆ ಕಾರ್ಯಕ್ರಮವು ಬೆಳ್ಳಾರೆಯ ವಾಲ್ಮೀಕಿ ಶಾಖೆ ವತಿಯಿಂದ ಇಂದು(ನ.25) ನಡೆಯಿತು. ಕಾರ್ಯಕ್ರಮವು ಸಂಜೆ 7 ಗಂಟೆಗೆ ಸರಿಯಾಗಿ ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ನಡೆಯಿತು. ಉದ್ಯಮಿ ರಾಜೇಶ್...

ಕರಿಕ್ಕಳ: ಪುರಿಯಶ್ರೀ ಜನರಲ್ ಸ್ಟೋರ್ ಶುಭಾರಂಭ

ಪಂಜ ಸಮೀಪದ ಕರಿಕ್ಕಳ ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದ ಮುಖ್ಯ ದ್ವಾರದ ಬಳಿ ಹರೀಶ್ ಪುರಿಯ ಮಾಲಕತ್ವದ ಪುರಿಯಶ್ರೀ ಜನರಲ್ ಸ್ಟೋರ್ ನ.25ರಂದು ಶುಭಾರಂಭಗೊಂಡಿತು. ಈ ಸಂದರ್ಭದಲ್ಲಿ ಮಾಲಕರಾದ ಶ್ರೀ ಹರೀಶ್ , ಶ್ರೀಮತಿ ಶ್ವೇತ, ಶ್ರೀ ಪುಟ್ಟಣ್ಣ ಗೌಡ, ಶ್ರೀಮತಿ ಪದ್ಮಾವತಿ ಮತ್ತಿತರರು ಉಪಸ್ಥಿತರಿದ್ದರು. ಇಲ್ಲಿ ಗೃಹಬಳಕೆಯ ದಿನಸಿ ವಸ್ತುಗಳು ದೊರೆಯುತ್ತದೆ ಎಂದು ಮಾಲಕರು...

ರೆಂಜಿಲಾಡಿ : ನಿರಂತರ ಮಳೆಯಿಂದ ಮನೆ ಮಾಡು ಕುಸಿತ ; ಅಪಾರ ಹಾನಿ

ನೂಜಿಬಾಳ್ತಿಲ : ನಿರಂತರವಾಗಿ ಸುರಿದ ಮಳೆಗೆ ಮನೆಯ ಮೇಲ್ಚಾವಣಿ ಸಂಪೂರ್ಣವಾಗಿ ಕುಸಿದು ಅಪಾರ ಹಾನಿ ಸಂಭವಿಸಿದ ಘಟನೆ ನ.23ರ ಮಂಗಳವಾರ ರಾತ್ರಿ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದಲ್ಲಿ ನಡೆದಿದೆ.ರೆಂಜಿಲಾಡಿ ಗ್ರಾಮದ ನೂಜಿ ಕೆಂಚರಣ್ಯ ಎಂಬುವವರ ಪತ್ನಿ ಕುಂಞಮ್ಮ ಎಂಬುವವರ ಮನೆಗೆ ಹಾನಿಯಾಗಿದೆ. ಮನೆಯ ಮೇಲ್ಚಾವಣಿ ಕುಸಿದಿದ್ದು, ಹಂಚು ಸಹಿತ ಪೀಠೋಪಕರಣಗಳು ನಾಶಗೊಂಡಿವೆ. ಘಟನೆ ವೇಳೆ ಮನೆ...
Loading posts...

All posts loaded

No more posts

error: Content is protected !!