ಸುಳ್ಯದ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರ ಸಮಾರೋಪ

ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆಯು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆಲೆಟ್ಟಿ ನಾರ್ಕೋಡು ಇಲ್ಲಿ ಮಾರ್ಚ್ ೦8ರಿಂದ 1೦ರವರೆಗೆ ನಡೆದಿದ್ದು, ಇದರ ಸಮಾರೋಪ ಸಮಾರಂಭವು ಮಾ-1೦ರಂದು ಶಾಲಾ ರಂಗಮಂದಿರದಲ್ಲಿ ನಡೆಯಿತು.ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು. ವೇದಿಕೆಯಲ್ಲಿ ಆಲೆಟ್ಟಿ ಗ್ರಾಮ ಪಂಚಾಯತ್...

ಸುಳ್ಯದಲ್ಲಿ ತಂಪೆರೆದ ಮಳೆ

https://youtu.be/brDpSjsSTqg?si=IlprEAySjK_ioyuA ಸುಳ್ಯದಲ್ಲಿ ಇಂದು ಸಂಜೆ 3.30 ರ ವೇಳೆಗೆ ಮಳೆ ಸುರಿದಿದ್ದು ಬಿಸಿಲ ಬೇಗೆಯಿಂದ ಬೆಂದು ಹೋಗಿದ್ದ ಪೇಟೆಯಲ್ಲಿ ತಂಪೆರೆದಿದೆ. ಅರಂತೋಡು ಭಾಗದಲ್ಲಿ ಹೆಚ್ಚಿನ ಮಳೆ ಸುರಿದಿದೆ.
Ad Widget

ಆರ್ಥಿಕ ವರ್ಷ ಮುಕ್ತಾಯದ ಹಿನ್ನೆಲೆ – ಬಾಕಿ ಬಿಲ್ ಪಾವತಿಗೆ ಮೆಸ್ಕಾಂ ಸೂಚನೆ

ಆರ್ಥಿಕ ವರ್ಷ ಮಕ್ತಾಯದ (ಮಾರ್ಚ್) ಹಿನ್ನೆಲೆಯಲ್ಲಿ ಗ್ರಾಹಕರು ತಮ್ಮ ಸ್ಥಾವರಗಳ ಬಾಕಿ ಇರುವ ಪೂರ್ಣ ಪ್ರಮಾಣದ ವಿದ್ಯುತ್ ಬಿಲ್ಲನ್ನು ಪಾವತಿ ಮಾಡುವಂತೆ ಮನವಿ ಮಾಡಿದ್ದು, ವಿದ್ಯುತ್ ಬಿಲ್ ಬಾಕಿ ಇರಿಸಿದ ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಚಿಲ್ತಡ್ಕ ಜತ್ತಪ್ಪ ಮಾಸ್ಟರ್ ರಿಗೆ ತಾರಸಿ ಕೃಷಿಕ ಡಾ| ಕೃಷ್ಣಪ್ಪಗೌಡ ಪಡ್ಡಂಬೈಲ್ ಅವರಿಂದ ಸನ್ಮಾನ

ಗುತ್ತಿಗಾ‌ರು ಗ್ರಾಮದ ಚಿತ್ತಡ್ಕ ಜತ್ತಪ್ಪ ಮಾಸ್ಟ‌ರ್ ದಂಪತಿಗಳಿಗೆ ಅಭಿನಂದನಾ ಕಾರ್ಯಕ್ರಮವು ಇತ್ತೀಚೆಗೆ ಅವರ ಚಿಲ್ತಡ್ಕ ನಿವಾಸದಲ್ಲಿ ನಡೆಯಿತು. ಆರೋಗ್ಯಪೂರ್ಣ ಸಮಾಜದ ನಿರ್ಮಾಣಕ್ಕಾಗಿ ತೊಡಗಿಸಿಕೊಂಡು ಬಂದಿರುವ ಹಿರಿಯ ನಾಗರಿಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಂಗಳೂರಿನ ಮರೋಳಿ ಬಳಿಯ ನಿವಾಸಿ ತಾರಸಿ ಕೃಷಿಕ ಡಾ| ಕೃಷ್ಣಪ್ಪಗೌಡ ಪಡ್ಡಂಬೈಲ್ ರವರು ಕಳೆದ ಹಲವಾರು ವರ್ಷಗಳಿಂದ ಅಭಿನಂದನಾ ಕಾರ್ಯಕ್ರಮವನ್ನು ನಡೆಸಿಕೊಂಡು ಬಂದಿದ್ದಾರೆ. ಈ...

ಮಾ.14 ರಂದು ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ನೂತನ ಸಮಿತಿಗೆ ಹಸ್ತಾಂತರ

ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತವನ್ನು ನೂತನ ವ್ಯವಸ್ಥಾಪನಾ ಸಮಿತಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಮಾ.14 ರಂದು ನಡೆಯಲಿದೆ. ಸರಕಾರ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಿದ್ದು ಅಧ್ಯಕ್ಷರಾಗಿ ಶ್ರೀಮತಿ ನಿರ್ಮಲ ಪದ್ಮನಾಭ ಪರಮಲೆ ಆಯ್ಕೆಗೊಂಡಿದ್ದು ಅವರಿಗೆ ಅಧಿಕಾರ ಹಸ್ತಾಂತರ ನಡೆಯಲಿದೆ. ಹಾಗೂ ಅಂದೇ ವಾರ್ಷಿಕ ಜಾತ್ರೋತ್ಸವ ಸಮಿತಿಯ ರಚನೆಯ ಬಗ್ಗೆ ವಿಶೇಷ ಸಮಿತಿ ಸಭೆಯನ್ನು ಕರೆಯಲಾಗಿದ್ದು...

ಲ್ಯಾಂಪ್ ಸೊಸೈಟಿ ಆಡಳಿತ ಬಿಜೆಪಿ ತೆಕ್ಕೆಗೆ – ಯಶಸ್ವಿಯಾದ ಆಪರೇಶನ್ ಕಮಲ – ಅಧ್ಯಕ್ಷರಾಗಿ ನೀಲಮ್ಮಕೆ. ಕಣಿಪ್ಪಿಲ, ಉಪಾಧ್ಯಕ್ಷರಾಗಿ ಪುಂಡರಿಕ ಕೆ. ಕಾಪುಮಲೆ

ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ಬಲ ಪಡೆದ ಬಳಿಕ ಪ್ರತಿಷ್ಠೆಯ ಕಣವಾಗಿದ್ದ ಲ್ಯಾಂಪ್ ಸೊಸೈಟಿಯಲ್ಲಿ ಆಪರೇಶನ್ ಕಮಲ ನಡೆದು ಅಧ್ಯಕ್ಷೀಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಅಧ್ಯಕ್ಷರಾಗಿ ನೀಲಮ್ಮಕೆ. ಕಣಿಪ್ಪಿಲ, ಉಪಾಧ್ಯಕ್ಷರಾಗಿ ಪುಂಡರಿಕ ಕೆ. ಕಾಪುಮಲೆ ಅಲೆಟ್ಟಿ ಇವರು ಆಯ್ಕೆಯಾಗಿದ್ದಾರೆ.ಅಧ್ಯಕ್ಷತೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ನೀಲಮ್ಮ ಹಾಗೂ ಕಾಂಗ್ರೆಸ್ ನಿಂದ ಮಾಧವ ದೇವರಗದ್ದೆ, ಉಪಾಧ್ಯಕ್ಷತೆಗೆ ಬಿಜೆಪಿಯಿಂದ ಪುಂಡರಿಕ...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸುಳ್ಯ ಶಾಖೆಯ ನೂತನ ಕಾರ್ಯದರ್ಶಿಯಾಗಿ ಶ್ರೀಮತಿ ಪ್ರಮೀಳಾ.ಟಿ ಆಯ್ಕೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸುಳ್ಯ ಶಾಖೆಯ ಕಾರ್ಯದರ್ಶಿಯಾದ ಪೃಥ್ವಿ ಕುಮಾರ್.ಟಿ ರವರು ನಿಯೋಜನೆ ಮೇಲೆ ಶಿಕ್ಷಣ ಇಲಾಖೆಯ ಆಯುಕ್ತಾಲಯ ಬೆಂಗಳೂರು ಇಲ್ಲಿಗೆ ಕರ್ತವ್ಯಕ್ಕೆ ಹಾಜರಾಗಿರುವ ಹಿನ್ನೆಲೆಯಲ್ಲಿ ತೆರವಾದ ಸಂಘದ ಕಾರ್ಯದರ್ಶಿ ಹುದ್ದೆಗೆ ಸಂಘದ ಹಿರಿಯ ಪದಾಧಿಕಾರಿಗಳು ಹಾಗೂ ಪ್ರಸ್ತುತ ಉಪಾಧ್ಯಕ್ಷರಾಗಿರುವ ಶ್ರೀಮತಿ ಪ್ರಮೀಳಾ.ಟಿ ರವರನ್ನು 2024-29 ನೇ ಸಾಲಿನ ಅವಧಿಗೆ ಸಂಘದ ನೂತನ...

ಕನಕಮಜಲು : ಅಂಗಡಿ ಅಂಗಡಿಯಿಂದ ಕಳ್ಳತನಕ್ಕೆ ಯತ್ನ – ಇಬ್ಬರು ಕಳ್ಳರನ್ನು ಸೆರೆ ಹಿಡಿದ ಊರವರು

ಕನಕಮಜಲಿನಲ್ಲಿ ಅಂಗಡಿ ಕಳವು ನಡೆಸುತ್ತಿದ್ದಾಗಲೇ ಇಬ್ಬರು ಕಳ್ಳರನ್ನು ಊರವರು ಹಿಡಿದು, ವಿಚಾರಿಸಿ ಇದೀಗ ಪೋಲೀಸರಿಗೊಪ್ಪಿಸಿರುವ ಘಟನೆ ವರದಿಯಾಗಿದೆ. ಕನಕಮಜಲು ಗ್ರಾಮದ ನರಿಯೂರು ಸೀತಾರಾಮ ಗೌಡರ ಕಟ್ಟಡದಲ್ಲಿರುವ ಧನಂಜಯ ಎಂಬವರ ಮಾಲಕತ್ವದ ಶ್ರೀ ಗಣೇಶ್ ಸ್ಟೋರ್ ನ ಒಳಗೆ ರಾತ್ರಿ ಸುಮಾರು 3.30 ಕ್ಕೆ ಜೋರು ಶಬ್ದ ಕೇಳುತ್ತಿತ್ತೆಂದೂ, ಇದು ಸೀತಾರಾಮ ಗೌಡರ ಮಗನಿಗೆ ಕೇಳಿ ಅವರು...

ಸುಬ್ರಹ್ಮಣ್ಯ : ಮಾ.14 ರಂದು ಸುಬ್ರಹ್ಮಣ್ಯಕ್ಕೆ ಪುರಪ್ರವೇಶ ಮಾಡಲಿರುವ “ನಂದಿ ರಥಯಾತ್ರೆ” – ಪೂರ್ವಭಾವಿ ಸಭೆ

ಗೋಸೇವಾ ಗತಿವಿಧಿ ಕರ್ನಾಟಕ, ರಾಧಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್(ರಿ.) ವತಿಯಿಂದ ಕರ್ನಾಟಕ ರಾಜ್ಯದಾದ್ಯಂತ ಹೊರಟ “ನಂದಿ ರಥಯಾತ್ರೆ” ಯು ಮಾ.14 ಶುಕ್ರವಾರದಂದು ಸಂಜೆ 4:30 ಕ್ಕೆ ಸುಬ್ರಹ್ಮಣ್ಯಕ್ಕೆ ಪುರಪ್ರವೇಶ ಮಾಡಲಿದ್ದು, ಸಂಜೆ 4:45 ರಿಂದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಸಂಪುಟ ನರಸಿಂಹ ಸ್ವಾಮಿ ಮಠ ಸುಬ್ರಹ್ಮಣ್ಯ ಇವರಿಂದ ಕಾಶಿಕಟ್ಟೆ...

ಕೊಲ್ಲಮೊಗ್ರು : ಸ್ಥಳೀಯರಿಂದ ಶ್ರಮದಾನ

ಕೊಲ್ಲಮೊಗ್ರು ಗ್ರಾಮದ ಕಟ್ಟ ಎಂಬಲ್ಲಿ ರಸ್ತೆ ಬದಿಯಲ್ಲಿ ಹುಲ್ಲು, ಗಿಡಗಂಟಿಗಳು ಬೆಳೆದು ವಾಹನ ಸವಾರರಿಗೆ ಸಂಚರಿಸಲು ಕಷ್ಟಕರವಾಗುತ್ತಿದ್ದು, ಮಾ.09 ರಂದು ಸ್ಥಳೀಯರು ಶ್ರಮದಾನದ ಮೂಲಕ ರಸ್ತೆ ಬದಿಯ ಕಾಡು ಹೆರೆದು ಸ್ವಚ್ಛಗೊಳಿಸಿದರು.(ವರದಿ : ಉಲ್ಲಾಸ್ ಕಜ್ಜೋಡಿ)
Loading posts...

All posts loaded

No more posts

error: Content is protected !!