ಮಾ.14 ರಂದು ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ನೂತನ ಸಮಿತಿಗೆ ಹಸ್ತಾಂತರ

ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತವನ್ನು ನೂತನ ವ್ಯವಸ್ಥಾಪನಾ ಸಮಿತಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಮಾ.14 ರಂದು ನಡೆಯಲಿದೆ. ಸರಕಾರ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಿದ್ದು ಅಧ್ಯಕ್ಷರಾಗಿ ಶ್ರೀಮತಿ ನಿರ್ಮಲ ಪದ್ಮನಾಭ ಪರಮಲೆ ಆಯ್ಕೆಗೊಂಡಿದ್ದು ಅವರಿಗೆ ಅಧಿಕಾರ ಹಸ್ತಾಂತರ ನಡೆಯಲಿದೆ. ಹಾಗೂ ಅಂದೇ ವಾರ್ಷಿಕ ಜಾತ್ರೋತ್ಸವ ಸಮಿತಿಯ ರಚನೆಯ ಬಗ್ಗೆ ವಿಶೇಷ ಸಮಿತಿ ಸಭೆಯನ್ನು ಕರೆಯಲಾಗಿದ್ದು...

ಲ್ಯಾಂಪ್ ಸೊಸೈಟಿ ಆಡಳಿತ ಬಿಜೆಪಿ ತೆಕ್ಕೆಗೆ – ಯಶಸ್ವಿಯಾದ ಆಪರೇಶನ್ ಕಮಲ – ಅಧ್ಯಕ್ಷರಾಗಿ ನೀಲಮ್ಮಕೆ. ಕಣಿಪ್ಪಿಲ, ಉಪಾಧ್ಯಕ್ಷರಾಗಿ ಪುಂಡರಿಕ ಕೆ. ಕಾಪುಮಲೆ

ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ಬಲ ಪಡೆದ ಬಳಿಕ ಪ್ರತಿಷ್ಠೆಯ ಕಣವಾಗಿದ್ದ ಲ್ಯಾಂಪ್ ಸೊಸೈಟಿಯಲ್ಲಿ ಆಪರೇಶನ್ ಕಮಲ ನಡೆದು ಅಧ್ಯಕ್ಷೀಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಅಧ್ಯಕ್ಷರಾಗಿ ನೀಲಮ್ಮಕೆ. ಕಣಿಪ್ಪಿಲ, ಉಪಾಧ್ಯಕ್ಷರಾಗಿ ಪುಂಡರಿಕ ಕೆ. ಕಾಪುಮಲೆ ಅಲೆಟ್ಟಿ ಇವರು ಆಯ್ಕೆಯಾಗಿದ್ದಾರೆ.ಅಧ್ಯಕ್ಷತೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ನೀಲಮ್ಮ ಹಾಗೂ ಕಾಂಗ್ರೆಸ್ ನಿಂದ ಮಾಧವ ದೇವರಗದ್ದೆ, ಉಪಾಧ್ಯಕ್ಷತೆಗೆ ಬಿಜೆಪಿಯಿಂದ ಪುಂಡರಿಕ...
Ad Widget

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸುಳ್ಯ ಶಾಖೆಯ ನೂತನ ಕಾರ್ಯದರ್ಶಿಯಾಗಿ ಶ್ರೀಮತಿ ಪ್ರಮೀಳಾ.ಟಿ ಆಯ್ಕೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸುಳ್ಯ ಶಾಖೆಯ ಕಾರ್ಯದರ್ಶಿಯಾದ ಪೃಥ್ವಿ ಕುಮಾರ್.ಟಿ ರವರು ನಿಯೋಜನೆ ಮೇಲೆ ಶಿಕ್ಷಣ ಇಲಾಖೆಯ ಆಯುಕ್ತಾಲಯ ಬೆಂಗಳೂರು ಇಲ್ಲಿಗೆ ಕರ್ತವ್ಯಕ್ಕೆ ಹಾಜರಾಗಿರುವ ಹಿನ್ನೆಲೆಯಲ್ಲಿ ತೆರವಾದ ಸಂಘದ ಕಾರ್ಯದರ್ಶಿ ಹುದ್ದೆಗೆ ಸಂಘದ ಹಿರಿಯ ಪದಾಧಿಕಾರಿಗಳು ಹಾಗೂ ಪ್ರಸ್ತುತ ಉಪಾಧ್ಯಕ್ಷರಾಗಿರುವ ಶ್ರೀಮತಿ ಪ್ರಮೀಳಾ.ಟಿ ರವರನ್ನು 2024-29 ನೇ ಸಾಲಿನ ಅವಧಿಗೆ ಸಂಘದ ನೂತನ...

ಕನಕಮಜಲು : ಅಂಗಡಿ ಅಂಗಡಿಯಿಂದ ಕಳ್ಳತನಕ್ಕೆ ಯತ್ನ – ಇಬ್ಬರು ಕಳ್ಳರನ್ನು ಸೆರೆ ಹಿಡಿದ ಊರವರು

ಕನಕಮಜಲಿನಲ್ಲಿ ಅಂಗಡಿ ಕಳವು ನಡೆಸುತ್ತಿದ್ದಾಗಲೇ ಇಬ್ಬರು ಕಳ್ಳರನ್ನು ಊರವರು ಹಿಡಿದು, ವಿಚಾರಿಸಿ ಇದೀಗ ಪೋಲೀಸರಿಗೊಪ್ಪಿಸಿರುವ ಘಟನೆ ವರದಿಯಾಗಿದೆ. ಕನಕಮಜಲು ಗ್ರಾಮದ ನರಿಯೂರು ಸೀತಾರಾಮ ಗೌಡರ ಕಟ್ಟಡದಲ್ಲಿರುವ ಧನಂಜಯ ಎಂಬವರ ಮಾಲಕತ್ವದ ಶ್ರೀ ಗಣೇಶ್ ಸ್ಟೋರ್ ನ ಒಳಗೆ ರಾತ್ರಿ ಸುಮಾರು 3.30 ಕ್ಕೆ ಜೋರು ಶಬ್ದ ಕೇಳುತ್ತಿತ್ತೆಂದೂ, ಇದು ಸೀತಾರಾಮ ಗೌಡರ ಮಗನಿಗೆ ಕೇಳಿ ಅವರು...

ಸುಬ್ರಹ್ಮಣ್ಯ : ಮಾ.14 ರಂದು ಸುಬ್ರಹ್ಮಣ್ಯಕ್ಕೆ ಪುರಪ್ರವೇಶ ಮಾಡಲಿರುವ “ನಂದಿ ರಥಯಾತ್ರೆ” – ಪೂರ್ವಭಾವಿ ಸಭೆ

ಗೋಸೇವಾ ಗತಿವಿಧಿ ಕರ್ನಾಟಕ, ರಾಧಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್(ರಿ.) ವತಿಯಿಂದ ಕರ್ನಾಟಕ ರಾಜ್ಯದಾದ್ಯಂತ ಹೊರಟ “ನಂದಿ ರಥಯಾತ್ರೆ” ಯು ಮಾ.14 ಶುಕ್ರವಾರದಂದು ಸಂಜೆ 4:30 ಕ್ಕೆ ಸುಬ್ರಹ್ಮಣ್ಯಕ್ಕೆ ಪುರಪ್ರವೇಶ ಮಾಡಲಿದ್ದು, ಸಂಜೆ 4:45 ರಿಂದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಸಂಪುಟ ನರಸಿಂಹ ಸ್ವಾಮಿ ಮಠ ಸುಬ್ರಹ್ಮಣ್ಯ ಇವರಿಂದ ಕಾಶಿಕಟ್ಟೆ...

ಕೊಲ್ಲಮೊಗ್ರು : ಸ್ಥಳೀಯರಿಂದ ಶ್ರಮದಾನ

ಕೊಲ್ಲಮೊಗ್ರು ಗ್ರಾಮದ ಕಟ್ಟ ಎಂಬಲ್ಲಿ ರಸ್ತೆ ಬದಿಯಲ್ಲಿ ಹುಲ್ಲು, ಗಿಡಗಂಟಿಗಳು ಬೆಳೆದು ವಾಹನ ಸವಾರರಿಗೆ ಸಂಚರಿಸಲು ಕಷ್ಟಕರವಾಗುತ್ತಿದ್ದು, ಮಾ.09 ರಂದು ಸ್ಥಳೀಯರು ಶ್ರಮದಾನದ ಮೂಲಕ ರಸ್ತೆ ಬದಿಯ ಕಾಡು ಹೆರೆದು ಸ್ವಚ್ಛಗೊಳಿಸಿದರು.(ವರದಿ : ಉಲ್ಲಾಸ್ ಕಜ್ಜೋಡಿ)

ಕುಕ್ಕೆಯಲ್ಲಿ ಬಾಲಿವುಡ್ ನಟಿ ಕತ್ರಿನಾ ಕೈಪ್ ಅವರಿಂದ ಸರ್ಪಸಂಸ್ಕಾರ ಸೇವೆ

ಸುಬ್ರಹ್ಮಣ್ಯ : ಬಾಲಿವುಡ್ ನಟಿ ಕತ್ರಿನಾ ಕೈಫ್ ಮಾ.11 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಎರಡು ದಿನಗಳ ಸರ್ಪಸಂಸ್ಕಾರ ಸೇವೆಯಲ್ಲಿ ಪಾಲ್ಗೊಂಡಿರುವರು.ದಕ್ಷಿಣ ಭಾರತದ ಸುಪ್ರಸಿದ್ಧ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಅನೇಕ ಬಾಲಿವುಡ್, ಹಾಲಿವುಡ್ ನಟ ನಟಿಯರು ಆಗಮಿಸುತ್ತಿದ್ದು, ಸಂತಾನ ಭಾಗ್ಯವಿಲ್ಲದವರು, ಚರ್ಮರೋಗ ವ್ಯಾಧಿ, ಆರೋಗ್ಯ ವೃದ್ಧಿಗಾಗಿ ಸೇವೆಯನ್ನು ಸಲ್ಲಿಸುವಂಥದ್ದು ಸರ್ವೇಸಾಮಾನ್ಯವಾಗಿದೆ.ಅದೇ ರೀತಿ ಕತ್ರಿನಾ ಕೈಫ್...

ಬೆಳ್ಳಾರೆ : ಮಹಿಳಾ ಸಬಲೀಕರಣದತ್ತ ನಮ್ಮ ಚಿತ್ತ ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ, ನಿರಂತರ ಕ್ರಿಯಾಶೀಲ ಚಟುವಟಿಕೆಗಳಿಂದ ನೆಮ್ಮದಿ ಜೀವನ – ರಾಜಣ್ಣ, ಸ್ವ ಉದ್ಯೋಗದಿಂದ ಸ್ವಾವಲಂಬಿ ಬದುಕು – ಜಯಶ್ರೀ ಕೊಯಿಂಗೋಡಿ

ಗ್ರಾಮ ಪಂಚಾಯತು ಬೆಳ್ಳಾರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬೆಳ್ಳಾರೆ ವಲಯ ಧನಲಕ್ಷ್ಮೀ ಸ್ತ್ರೀಶಕ್ತಿ ಗೊಂಚಲು ಸಮಿತಿ ಬೆಳ್ಳಾರೆ, ಲಕ್ಷ್ಮೀ ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟ(ರಿ.) ಬೆಳ್ಳಾರೆ ಸೆಸ್ಕೋ ಸೋಲಾರ್ ಲೈಟ್ಸ್ ಪ್ರೈ.ಲಿ. ಬೆಂಗಳೂರು ಮತ್ತು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿಅಂತರಾಷ್ಟ್ರೀಯ...

ಎಸ್.ಕೆ.ಡಿ.ಆರ್.ಡಿ.ಪಿ. ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಸುಳ್ಳ ತಾಲೂಕು ಇದರ ವತಿಯಿಂದ ಬಡ್ಡಡ್ಕದ ಕೂರ್ನಡ್ಕ ಎಂಬಲ್ಲಿ ಶ್ರೀಮತಿ ತೇಜಕುಮಾರಿಯವರಿಗೆ ವಾತ್ಸಲ್ಯ ಮನೆಯನ್ನು ಹಸ್ತಾಂತರಿಸಲಾಯಿತು. ಸುಳ್ಯ ತಾಲೂಕಿನ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಲೋಕನಾಥ್ ಅಮಚೂರು ನವರು ನಾಮಫಲಕವನ್ನು ಅನಾವರಣಗೊಳಿಸಿ ಗ್ರಾಮೀಣ ಮಟ್ಟದಲ್ಲಿ ಕೊರತೆಗಳು ಕಂಡುಬಂದಲ್ಲಿ ಮೊದಲಾಗಿ ಆ ಸಮಸ್ಯೆಯನ್ನು ಗುರುತಿಸಿ...

ಧೂಮಪಾನ ಮುಕ್ತ ಭಾರತ ಜನುಮಿಸಲಿ, ವಿಶ್ವ ಧೂಮಪಾನ ರಹಿತ ದಿನ………. ಮಾರ್ಚ್ 13

ಪ್ರತಿ ವರುಷ ಮಾರ್ಚ್ ತಿಂಗಳ ಎರಡನೇ ಬುಧವಾರದಂದು ವಿಶ್ವ ಧೂಮಪಾನ ರಹಿತ ದಿನ ಎಂದು ಆಚರಿಸಲಾಗುತ್ತದೆ. ಈ ವರುಷಮಾರ್ಚ್ 13 ರಂದು ವಿಶ್ವದಾದ್ಯಂತ ವಿಶ್ವ ಧೂಮಪಾನ ರಹಿತ ದಿನ ಎಂದು ಆಚರಿಸಲಾಗುತ್ತಿದೆ. ಈ ದಿನದಂದು ತಂಬಾಕಿನ ಎಲ್ಲಾ ರೀತಿಯ ಉತ್ಪನ್ನಗಳಿಂದ 24 ಗಂಟೆಗಳ ಕಾಲ ದೂರವಿದ್ದು, ತಂಬಾಕಿನ ಉತ್ಪನ್ನಗಳ ಬಳಕೆಯಿಂದ ಉಂಟಾಗುವ ತೊಂದರೆಗಳನ್ನು ಮತ್ತು ದುಷ್ಪರಿಣಾಮಗಳನ್ನು...
Loading posts...

All posts loaded

No more posts

error: Content is protected !!