- Saturday
- July 4th, 2026
ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಏಕಾಹ ಭಜನೆ ಹಾಗೂ ಕಾರ್ತಿಕ ಪೂರ್ಣಿಮೆಯ ಲಕ್ಷದೀಪ ಉತ್ಸವಗಳು ನ.14 ಆದಿತ್ಯವಾರದಂದು ಆರಂಭಗೊಂಡಿದ್ದು, ಬೆಳಗ್ಗೆ ಶ್ರೀ ದೇವರಿಗೆ ಪ್ರಾರ್ಥನೆ, ಬಳಿಕ ಪಂಡಿತ್ ದೇವರಾಯ ಕಿಣಿ ಮತ್ತು ಬಳಗದವರಿಂದ ಸಂತವಾಣಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಮಣಿಕ್ಕಾರ ಗೋಪಾಲಕೃಷ್ಣ ಶ್ಯಾನುಭಾಗ್, ಮೊಕ್ತೇಸರರಾದ ಯಂ. ಲಕ್ಷ್ಮೀನಾರಾಯಣ ಶ್ಯಾನುಭಾಗ್, ಬಿ....
ಕೊಡಗು, ದ.ಕ ಜಿಲ್ಲಾ ರೈತ ಮೋರ್ಚಾ ಪದಾಧಿಕಾರಿಗಳ ಸಭೆ ನ.18 ರಂದು ಸುಳ್ಯ ವೆಂಕಟ್ರಮಣ ದೇವಸ್ಥಾನದಲ್ಲಿ ಬೆ.11 ಗಂಟೆಗೆ ನಡೆಯಲಿದೆ ಎಂದು ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಅವರು ತಿಳಿಸಿದ್ದಾರೆ. ನ.೧೩ ರಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ಸಭೆಯಲ್ಲಿ ರಾಜ್ಯ ರೈತ ಮೋರ್ಚಾದ ಪ್ರಮುಖರು, ಜಿಲ್ಲಾ ಹಾಗೂ ತಾಲೂಕು ಮಟ್ಟದ...
ಸುಳ್ಯ: ಈ ಪ್ರಸಕ್ತ ಸಾಲಿನ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ವಾರ್ಷಿಕ 453 ಕೋಟಿ ವ್ಯವಹಾರ ನಡೆಸಿ 1.09 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ 15 ಡಿವಿಡೆಂಡ್ ನೀಡಲಾಗುವುದು. ಶೀಘ್ರದಲ್ಲೇ ಸುಬ್ರಹ್ಮಣ್ಯ ಮತ್ತು ಮಡಂತ್ಯಾರುನಲ್ಲಿ ಶಾಖೆ ಆರಂಭಿಸಲಾಗುವುದು ಎಂದು ಸೊಸೈಟಿ ಅಧ್ಯಕ್ಷ ಪಿ.ಸಿ. ಜಯರಾಮ ಅವರು ಹೇಳಿದರು.ಅವರು ಗೌಡ ಸಮುದಾಯ ಭವನದಲ್ಲಿ ವಾರ್ಷಿಕ...
ಶ್ರೀ ಶಾರದಾ ಮಹಿಳಾ ಪದವಿ ಕಾಲೇಜಿನಲ್ಲಿ ಶೈಕ್ಷಣಿಕ ಕಾರ್ಯ ಸಾಧನೆಗೆ "ಮೂಲ-ಸಂಪನ್ಮೂಲ " ವಿಷಯದ ಕುರಿತು ಉಪನ್ಯಾಸಕರೊಂದಿಗೆ ನೇರ ಸಂವಾದ ಕಾರ್ಯಕ್ರಮ ನ.13ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಉಜಿರೆ ಎಸ್.ಡಿ.ಎಂ ಕಾಲೇಜಿನ ಇತಿಹಾಸ ವಿಭಾಗದ ನಿವೃತ್ತ ಮುಖ್ಯಸ್ಥರಾದ ಡಾ.ಪುಂಡರೀಕ ಎ.ಕೆ ಇವರು ಸಂವಾದ ನಡೆಸಿದರು. ಕಾರ್ಯಕ್ರಮದಲ್ಲಿ ದ.ಕ.ಗೌಡ ವಿದ್ಯಾಸಂಘ(ರಿ.)ಸುಳ್ಯ ಇದರ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ, ಪ್ರಧಾನ...
ಹಳೆ ವಿದ್ಯಾರ್ಥಿಗಳ ಸಹಕಾರ ದಿಂದ ಸಂಗ್ರಹಿಸಿದ ಕೊಡುಗೆಗಳನ್ನು ನ.14 ರಂದು ಕಲ್ಲುಗುಂಡಿ ಸರಕಾರಿ ಶಾಲೆಗೆ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ ಎಂದು ಹಳೆ ವಿದ್ಯಾರ್ಥಿ ಸಂಘದ ಸದಸ್ಯ ಪತ್ರಕರ್ತ ಹೇಮಂತ್ ಸಂಪಾಜೆ ಅವರು ಹೇಳಿದರು. ಅವರು ಸುಳ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳು ಲೀನವಾಗುವ ಹಂತಕ್ಕೆ ಬಂದಿದೆ. ಕಲ್ಲುಗುಂಡಿಯ ಸರಕಾರಿ ಕನ್ನಡ ಶಾಲೆಗೆ ಮೂಲಭೂತ...
ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ಗ್ರಾಮಕರಣಿಕರ ಕಚೇರಿಗೆ ಉದ್ಯಮಿ ಅಶೋಕ ಪ್ರಭು ಇವರು ಪ್ರಿಂಟರ್ ಕೊಡುಗೆ ನೀಡಿರುತ್ತಾರೆ.
ಗುತ್ತಿಗಾರು ಗ್ರಾಮದ ಹೊಸೊಳಿಕೆ ಕುಶಾಲಪ್ಪ ಗೌಡರ ಪುತ್ರ ಸಾತ್ವಿಕ್ ರವರ 9ನೇ ವರ್ಷದ ಹುಟ್ಟುಹಬ್ಬವನ್ನು ಅವರ ಮನೆಯಲ್ಲಿ ಆಚರಿಸಿಕೊಳ್ಳಲಾಯಿತು.
ಮೆಸ್ಕಾಂ ಸುಳ್ಯ ಉಪವಿಭಾಗದ ವ್ಯಾಪ್ತಿಯ 33/11ಕೆ.ವಿ. ದ್ವಿ ಮಾರ್ಗದ ರಚನೆಯ ಕಾಮಗಾರಿ ನಡೆಯುತ್ತಿರುವುದರಿಂದ ನ. 23 ರಂದು ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ ಪೀಡರ್ ಗಳಲ್ಲಿ ಬೆಳಿಗ್ಗೆ 9.00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್ ನಾಯ್ಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನರಾಜ್ಯಶಾಸ್ತ್ರ ವಿಭಾಗ, ಚುನಾವಣಾಸಾಕ್ಷರತಾ ಸಂಘ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶ ಇವುಗಳ ಆಶ್ರಯದಲ್ಲಿವೋಟರ್ ಹೆಲ್ಪ್ ಲೈನ್ ಬಗ್ಗೆ ತರಬೇತಿ ಕಾರ್ಯಕ್ರಮನವೆಂಬರ್ 12ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಸುಳ್ಯ ತಾಲೂಕು ತಹಶೀಲ್ದಾರರಾದಕು. ಅನಿತಾಲಕ್ಷ್ಮಿ ಎಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಕ್ಷೇತ್ರ...
ಗುತ್ತಿಗಾರಿನಲ್ಲಿ ಕಳೆದ 27 ವರ್ಷಗಳಿಂದ ಕಾರ್ಯಚರಿಸುತ್ತಿರುವ ಪ್ರಕೃತಿ ಡಿಜಿಟಲ್ ಸ್ಟುಡಿಯೋ & ವಿಡಿಯೋ ಇದರ ಸಹ ಸಂಸ್ಥೆ ಪಂಜದ ವಾಣಿಶ್ರೀ ಕಾಂಪ್ಲೆಕ್ಸ್ ನಲ್ಲಿ ನ.12 ರಂದು ಗಣಹೋಮದೊಂದಿಗೆ ಶುಭಾರಂಭಗೊಂಡಿತು. ಮಾಜಿ ಮಂಡಲ ಪ್ರಧಾನರಾದ ಮುಳಿಯ ತಿಮ್ಮಪ್ಪಯ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರಕೃತಿ ಸ್ಟುಡಿಯೋ ಮಾಲಕರಾದ ಶಿವರಾಮ್ ದೇವ ಹಾಗೂ ಶ್ರೀಮತಿ ಯಶೋಧ ಶಿವರಾಮ್...
Loading posts...
All posts loaded
No more posts
