ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ : ಸ್ಥಳೀಯ ಸಂಸ್ಥೆಗಳ ಸಾಮಾನ್ಯ ಸಭೆ,ಗ್ರಾಮ ಸಭೆ, ಗುದ್ದಲಿ ಪೂಜೆ, ಉದ್ಘಾಟನೆಗೆ ನಿರ್ಬಂಧ

ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ರಾಜ್ಯದ ಒಟ್ಟು 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ. ನವೆಂಬರ್ 16ರಂದು ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದ್ದು, ನವೆಂಬರ್ 23ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನವೆಂಬರ್ 24 ರಂದು ನಾಮಪತ್ರಗಳ ಪರಿಶೀಲನೆ...

ಮರಕತ ದೇವಸ್ಥಾನಕ್ಕೆ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಭೇಟಿ

ಮರಕತ ದೇವಸ್ಥಾನಕ್ಕೆ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಅವರ ಜನ್ಮ ದಿನದ ಅಂಗವಾಗಿ ದೇವರ ದರ್ಶನ ಪಡೆದು ನದಿಯಲ್ಲಿರುವ ದೇವರ ಮೀನಿಗೆ ಆಹಾರವನ್ನು ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮುಳಿಯ ಕೇಶವ ಭಟ್, ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಚಂದ್ರಶೇಖರ ನಡುಗಲ್ಲು, ಚಾಮಯ್ಯ ಚೆಮ್ನೂರು....
Ad Widget

ತೀರ್ಥಪ್ರಸಾದ್ -ಶ್ರುತಿ

ಜಾಲ್ಸೂರು ಗ್ರಾಮದ ಬೈತಡ್ಕ ಕಾಜಿಮಡ್ಕ ದಿ. ನಾರಾಯಣ ಗೌಡರ ಪುತ್ರ ತೀರ್ಥಪ್ರಸಾದ್ ರ ವಿವಾಹ ನಿಶ್ಚಿತಾರ್ಥವು ಮಡಪ್ಪಾಡಿ ಗ್ರಾಮದ ಬಲ್ಕಜೆ ಪಾರೆಪ್ಪಾಡಿ ನೀಲಪ್ಪ ಗೌಡರ ಪುತ್ರಿ ಶ್ರುತಿಯೊಂದಿಗೆ ನ.10 ರಂದು ವಧುವಿನ ಮನೆಯಲ್ಲಿ ನಡೆಯಿತು.

ಶುಭವಿವಾಹ: ಗಾಯತ್ರಿ- ಸತೀಶ್ ಕುಮಾರ್

ಅಮರಮುಡ್ನೂರು ಗ್ರಾಮದ ಕಟ್ಟದಮಜಲು ಶ್ರೀಮತಿ ವಸಂತಿ ಮತ್ತು ಶ್ರೀ ಹರಿಶ್ಚಂದ್ರ ಗೌಡರ ಪುತ್ರಿ ಗಾಯತ್ರಿಯವರ ವಿವಾಹವು ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಕೇಂಕನಾಜೆ ದಿ|ರಾಮಣ್ಣ ಗೌಡರ ಪುತ್ರ ಸತೀಶ್ ಕುಮಾರ್ ರೊಂದಿಗೆ ನ.11ರಂದು ಕುಕ್ಕುಜಡ್ಕ ಸಹಕಾರಿ ಸಂಘದ 'ಅಮರ ಸಹಕಾರ ಸೌಧ' ಸಭಾಭವನದಲ್ಲಿ ನಡೆಯಿತು.

ಹರಿಹರಪಲ್ಲತ್ತಡ್ಕ : ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯಿಂದ ಜೇನು ಕೃಷಿ ಬಗ್ಗೆ ಮಾಹಿತಿ

ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆ ಪುತ್ತೂರು ಇದರ ವತಿಯಿಂದ ನ.10 ರಂದು ಪೂರ್ವಾಹ್ನ 10:30 ಕ್ಕೆ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಹಾಗೂ ಅಪರಾಹ್ನ 02:30 ಕ್ಕೆ ವಳಲಂಬೆ ಶ್ರೀ ಶಂಖಪಾಲ ದೇವಸ್ಥಾನದ ಸಭಾಂಗಣದಲ್ಲಿ ಒಪ್ಪಂದ ಆಧಾರಿತ ಜೇನು ಕೃಷಿ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು.ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರುಗಳಾದ ಮೂಲಚಂದ್ರ ಆರ್ಯಾಪು, ರಾಮ್ ಪ್ರತೀಕ್...

ದೇವ : ಕೆರೆಯಲ್ಲಿ ಪತ್ತೆಯಾದ ಮೊಸಳೆ – ಅರಣ್ಯ ಇಲಾಖೆಯಿಂದ ಸೆರೆ

ದೇವಚಳ್ಳ ಗ್ರಾಮದ ದೇವದಲ್ಲಿ ಮೊಸಳೆ ಪತ್ತೆಯಾಗಿದ್ದು ಅರಣ್ಯ ಇಲಾಖೆಯವರು ಕಾರ್ಯಾಚರಣೆ ನಡೆಸಿ ಸೆರೆಹಿಡಿದ ಘಟನೆ ನ.10 ರಂದು ನಡೆದಿದೆ. ದೇವ ಬಾಲಕೃಷ್ಣ ಗೌಡರ ತೋಟದ ಕೆರೆಯಲ್ಲಿ ನ.10 ರಂದು ಬೆಳಿಗ್ಗೆ ಪತ್ತೆಯಾದ ಮೊಸಳೆಯನ್ನು ಅರಣ್ಯ ಇಲಾಖೆಯವರು ತಡರಾತ್ರಿಯವರೆಗೆ ಕಾರ್ಯಚರಣೆ ನಡೆಸಿ ಸೆರೆ ಹಿಡಿದಿದ್ದಾರೆ. ಕಾರ್ಯಚರಣೆಯಲ್ಲಿ ಸುಳ್ಯ ವಲಯಾರಣ್ಯಾಧಿಕಾರಿ ಗಿರೀಶ್, ಉಪವಲಯಾರಣ್ಯಾಧಿಕಾರಿ ರವೀಂದ್ರ , ಅರಣ್ಯ ರಕ್ಷಕ...

ಮಡಪ್ಪಾಡಿ: ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಂಘದಿಂದ ಅಶ್ರುತರ್ಪಣ ಕಾರ್ಯಕ್ರಮ

"ನಿಮ್ ತರ ಬದುಕೋಕೆ ಪ್ರಯತ್ನ…ನೀವೇ ನಮ್ ಬದುಕಿನ ರಾಜರತ್ನ…..ಮನುಷ್ಯನಿಂದ ದೇವರಾಗಿ ನಿಮ್ಮ ಹುಟ್ಟು ಇದು ಸಾವಲ್ಲ……ಜೊತೆಗಿರದ ಜೀವ ಎಂದೆಂದಿಗೂ ಜೀವಂತ……" ಎಳೆಯ ವಯಸ್ಸಿನಲ್ಲಿ ಅಕಾಲಿಕ ಮರಣ ದವಡೆಗೆ ಸಿಲುಕಿ ಭಗವಂತನ ಪಾದ ಸೇರಿದ ಕರುನಾಡಿನ ಕಣ್ಮಣಿ ಪುನೀತ್ ರಾಜ್ ಕುಮಾರ್ ರಿಗೆ ಮಡಪ್ಪಾಡಿಯ ಯುವಕ ಮಂಡಲ ಸಭಾಭವನದಲ್ಲಿ ಅಶ್ರುತರ್ಪಣ ಕಾರ್ಯಕ್ರಮ ನೆರವೇರಿಸಲಾಯಿತು. ಸುಳ್ಯ ಎಪಿಎಂಸಿ ಅಧ್ಯಕ್ಷರಾದ...

ತೀರ್ಥಪ್ರಸಾದ್ -ಶ್ರುತಿ

ಜಾಲ್ಸೂರು ಗ್ರಾಮದ ಬೈತಡ್ಕ ಕಾಜಿಮಡ್ಕ ದಿ. ನಾರಾಯಣ ಗೌಡರ ಪುತ್ರ ತೀರ್ಥಪ್ರಸಾದ್ ರ ವಿವಾಹ ನಿಶ್ಚಿತಾರ್ಥವು ಮಡಪ್ಪಾಡಿ ಗ್ರಾಮದ ಬಲ್ಕಜೆ ಪಾರೆಪ್ಪಾಡಿ ನೀಲಪ್ಪ ಗೌಡರ ಪುತ್ರಿ ಶ್ರುತಿಯೊಂದಿಗೆ ನ.10 ರಂದು ವಧುವಿನ ಮನೆಯಲ್ಲಿ ನಡೆಯಿತು.

ಸುಬ್ರಹ್ಮಣ್ಯ: ಕುಸುಮ ಸಾರಂಗದ ವತಿಯಿಂದ ಕೆಯಸ್‍ಯಸ್ ಕಾಲೇಜಿನಲ್ಲಿ ದೀಪಾವಳಿ ಆಚರಣೆ

ಸುಬ್ರಹ್ಮಣ್ಯದ ಕೆಯಸ್‍ಯಸ್ ಕಾಲೇಜಿನ ರಂಗಘಟಕ ಕುಸುಮ ಸಾರಂಗದ ವತಿಯಿಂದ ಕಾಲೇಜಿನಲ್ಲಿ ರಂಗ ಬೆಳಕು ಎಂಬ ಹೆಸರಿನಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ.ಗೋವಿಂದ ಎನ್.ಎಸ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಶೋಭಾ ಗಿರಿಧರ್ ಸ್ಕಂದ, ರಂಗ ನಿರ್ದೇಶಕ ಪ್ರವೀಣ್ ಎಡಮಂಗಲ, ಉಪನ್ಯಾಸಕ ವಿನ್ಯಾಸ್...

ಇರುವಂಬಳ್ಳ ಶಾಲೆಗೆ ಊಟದ ತಟ್ಟೆ ಕೊಡುಗೆ

ಅಜ್ಜಾವರ ಗ್ರಾಮ ಪಂಜಾಯತ್ ಮಾಜಿ ಅಧ್ಯಕ್ಷರಾದ ಕರುಣಾಕರ ಆಡ್ಪoಗಾಯ ಹಾಗೂ ಮನೆಯವರು ಇರುವಂಬಳ್ಳ ಸರಕಾರಿ ಕಿರಿಯ ಪ್ರಾಧಾಮಿಕಾ ಶಾಲೆಗೆ ಊಟದ ತಟ್ಟೆಗಳನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಕರುಣಾಕರ ಆಡ್ಪoಗಾಯ ಶ್ರೀಮತಿ ಪುಷ್ಪಲತಾ ಕರುಣಾಕರ ಅಡ್ಪಂಗಾಯ, ಅಜ್ಜಾವರ ಗ್ರಾಮ ಪಂಜಾಯತ್ ಉಪಾಧ್ಯಕ್ಷರಾದ ಲೀಲಾ ಮನಮೋಹನ್, ಅಜ್ಜಾವರ ಗ್ರಾಮ.ಪಂ. ಸದ್ಯಸರಾದ ರಾಹುಲ್ ಆಡ್ಪoಗಾಯ, ಅಬ್ಬಾಸ್ ಎ.ಬಿ. ಅಡ್ಕ,...
Loading posts...

All posts loaded

No more posts

error: Content is protected !!