ಮಡಪ್ಪಾಡಿ: ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಂಘದಿಂದ ಅಶ್ರುತರ್ಪಣ ಕಾರ್ಯಕ್ರಮ

"ನಿಮ್ ತರ ಬದುಕೋಕೆ ಪ್ರಯತ್ನ…ನೀವೇ ನಮ್ ಬದುಕಿನ ರಾಜರತ್ನ…..ಮನುಷ್ಯನಿಂದ ದೇವರಾಗಿ ನಿಮ್ಮ ಹುಟ್ಟು ಇದು ಸಾವಲ್ಲ……ಜೊತೆಗಿರದ ಜೀವ ಎಂದೆಂದಿಗೂ ಜೀವಂತ……" ಎಳೆಯ ವಯಸ್ಸಿನಲ್ಲಿ ಅಕಾಲಿಕ ಮರಣ ದವಡೆಗೆ ಸಿಲುಕಿ ಭಗವಂತನ ಪಾದ ಸೇರಿದ ಕರುನಾಡಿನ ಕಣ್ಮಣಿ ಪುನೀತ್ ರಾಜ್ ಕುಮಾರ್ ರಿಗೆ ಮಡಪ್ಪಾಡಿಯ ಯುವಕ ಮಂಡಲ ಸಭಾಭವನದಲ್ಲಿ ಅಶ್ರುತರ್ಪಣ ಕಾರ್ಯಕ್ರಮ ನೆರವೇರಿಸಲಾಯಿತು. ಸುಳ್ಯ ಎಪಿಎಂಸಿ ಅಧ್ಯಕ್ಷರಾದ...

ತೀರ್ಥಪ್ರಸಾದ್ -ಶ್ರುತಿ

ಜಾಲ್ಸೂರು ಗ್ರಾಮದ ಬೈತಡ್ಕ ಕಾಜಿಮಡ್ಕ ದಿ. ನಾರಾಯಣ ಗೌಡರ ಪುತ್ರ ತೀರ್ಥಪ್ರಸಾದ್ ರ ವಿವಾಹ ನಿಶ್ಚಿತಾರ್ಥವು ಮಡಪ್ಪಾಡಿ ಗ್ರಾಮದ ಬಲ್ಕಜೆ ಪಾರೆಪ್ಪಾಡಿ ನೀಲಪ್ಪ ಗೌಡರ ಪುತ್ರಿ ಶ್ರುತಿಯೊಂದಿಗೆ ನ.10 ರಂದು ವಧುವಿನ ಮನೆಯಲ್ಲಿ ನಡೆಯಿತು.
Ad Widget

ಸುಬ್ರಹ್ಮಣ್ಯ: ಕುಸುಮ ಸಾರಂಗದ ವತಿಯಿಂದ ಕೆಯಸ್‍ಯಸ್ ಕಾಲೇಜಿನಲ್ಲಿ ದೀಪಾವಳಿ ಆಚರಣೆ

ಸುಬ್ರಹ್ಮಣ್ಯದ ಕೆಯಸ್‍ಯಸ್ ಕಾಲೇಜಿನ ರಂಗಘಟಕ ಕುಸುಮ ಸಾರಂಗದ ವತಿಯಿಂದ ಕಾಲೇಜಿನಲ್ಲಿ ರಂಗ ಬೆಳಕು ಎಂಬ ಹೆಸರಿನಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ.ಗೋವಿಂದ ಎನ್.ಎಸ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಶೋಭಾ ಗಿರಿಧರ್ ಸ್ಕಂದ, ರಂಗ ನಿರ್ದೇಶಕ ಪ್ರವೀಣ್ ಎಡಮಂಗಲ, ಉಪನ್ಯಾಸಕ ವಿನ್ಯಾಸ್...

ಇರುವಂಬಳ್ಳ ಶಾಲೆಗೆ ಊಟದ ತಟ್ಟೆ ಕೊಡುಗೆ

ಅಜ್ಜಾವರ ಗ್ರಾಮ ಪಂಜಾಯತ್ ಮಾಜಿ ಅಧ್ಯಕ್ಷರಾದ ಕರುಣಾಕರ ಆಡ್ಪoಗಾಯ ಹಾಗೂ ಮನೆಯವರು ಇರುವಂಬಳ್ಳ ಸರಕಾರಿ ಕಿರಿಯ ಪ್ರಾಧಾಮಿಕಾ ಶಾಲೆಗೆ ಊಟದ ತಟ್ಟೆಗಳನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಕರುಣಾಕರ ಆಡ್ಪoಗಾಯ ಶ್ರೀಮತಿ ಪುಷ್ಪಲತಾ ಕರುಣಾಕರ ಅಡ್ಪಂಗಾಯ, ಅಜ್ಜಾವರ ಗ್ರಾಮ ಪಂಜಾಯತ್ ಉಪಾಧ್ಯಕ್ಷರಾದ ಲೀಲಾ ಮನಮೋಹನ್, ಅಜ್ಜಾವರ ಗ್ರಾಮ.ಪಂ. ಸದ್ಯಸರಾದ ರಾಹುಲ್ ಆಡ್ಪoಗಾಯ, ಅಬ್ಬಾಸ್ ಎ.ಬಿ. ಅಡ್ಕ,...

ಮುರುಳ್ಯ : ಯುವತಿಗೆ ಕೈ ಸನ್ನೆ ಮಾಡಿದವನ ಮೇಲೆ ಠಾಣೆಯಲ್ಲಿ ಪ್ರಕರಣ ದಾಖಲು-ಜಾಮೀನು

ಮುರುಳ್ಯ ಗ್ರಾಮದ ಅಲೆಕ್ಕಾಡಿಯಲ್ಲಿ ಯುವತಿಯೊಬ್ಬಳು ಯುವಕನೋರ್ವ ಅಸಹ್ಯವಾಗಿ ವರ್ತಿಸಿದ್ದಾನೆಂದು ಪೊಲೀಸು ದೂರು ನೀಡಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನವಾಜ್ ಎಂಬ ಯುವಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ‌ನ್ಯಾಯಾಲಯ ಜಾಮೀನು ನೀಡಿರುವುದಾಗಿ ತಿಳಿದು ಬಂದಿದೆ. ಅಲೆಕ್ಕಾಡಿಯಲ್ಲಿ ಬಾಡಿಗೆ ರೂಮ್ ಮಾಡಿಕೊಂಡಿದ್ದ ಕಲ್ಮಡ್ಕದ ಕಜೆ ನವಾಜ್ (29)...

ಕೊಡಿಯಾಲ ಗ್ರಾಮ ಪಂಚಾಯತ್ ಗ್ರಾಮ ಸಭೆ – ಇಲಾಖಾಧಿಕಾರಿಗಳಿಂದ ಮಾಹಿತಿ

ಕೊಡಿಯಾಲ ಗ್ರಾಮ ಪಂಚಾಯತ್ 2021-22 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರದೀಪ್ ರೈ ಅಜ್ರಂಗಳರವರ ಅಧ್ಯಕ್ಷತೆಯಲ್ಲಿ ನ.8 ರಂದು ಪಂಚಾಯತ್ ಆವರಣದಲ್ಲಿ ನಡೆಯಿತು. ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷ ಹರ್ಷನ್ ಕೆ.ಟಿ, ಸದಸ್ಯರಾದ ಕರುಣಾಕರ ಆಳ್ವ, ಶ್ರೀಮತಿ ಚಿತ್ರ, ಶ್ರೀಮತಿ ವಿಜಯಕುಮಾರಿ, ಶ್ರೀಮತಿ ಯಶವಂತಿ ಉಪಸ್ಥಿತರಿದ್ದರು.ತೋಟಗಾರಿಕಾ ಇಲಾಖೆಯ ಸಹಾಯಕ ತೋಟಗಾರಿಕಾ...

ನ.10 : ಸುಳ್ಯ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ

ಸುಳ್ಯ ನಗರ ಪಂಚಾಯತ್ ನ ಕಲ್ಲುಮುಟ್ಲು ನೀರು ಶುದ್ಧೀಕರಣ ಘಟಕದಲ್ಲಿ ಟ್ಯಾಂಕ್ ಗಳನ್ನು ಸ್ವಚ್ಛಗೊಳಿಸುವ ಕಾರ್ಯ ಇರುವುದರಿಂದ ನವೆಂಬರ್ 10 ಬುಧವಾರದಂದು ಸುಳ್ಯ ನಗರ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ತಿಳಿಸಿದ್ದಾರೆ.

ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಪರವಾಗಿ ಅಭಿನಂದನೆ

ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ ಶ್ರೀಯುತ ಹರೇಕಳ ಹಾಜಬ್ಬ ಅವರನ್ನು ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಪರವಾಗಿ ಅಭಿನಂದಿಸಲಾಯಿತು. ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ವಸಂತ ಶೆಟ್ಟಿ ಬೆಳ್ಳಾರೆ ಹಾಗೂ ಕಾರ್ಯದರ್ಶಿಗಳಾದ ಶ್ರೀ ಡಾ.ಎಂ ಎಸ್ ಶಶಿಕುಮಾರ್, ಶಾಲೆಯ ಪ್ರಾಂಶುಪಾಲರು ಹಾಗೂ ಸದಸ್ಯರು ಮತ್ತು ಪೋಷಕರು ಸೇರಿ ವಿಮಾನ...

ಸುಳ್ಯ : ರಬ್ಬರ್ ಟ್ಯಾಪರ್ಸ್ ಕೃಷಿ ಮಜ್ದೂರು ಸಂಘದ ಕಾರ್ಯಕಾರಿ ಸಮಿತಿ ಸಭೆ

ಭಾರತೀಯ ಮಜ್ದೂರು ಸಂಘ ಬೆಳ್ತಂಗಡಿ ಸಂಯೋಜಿತ ರಬ್ಬರ್ ಟ್ಯಾಪರ್ಸ ಕೃಷಿ ಮಜ್ದೂರು ಸಂಘ ಸುಳ್ಯ ಇದರ ಕಾರ್ಯಕಾರಿ ಸಮಿತಿ ರಚನಾ ಸಭೆಯು ನ. 07ರಂದು ಸುಳ್ಯ ಕಲ್ಕುಡ ದೈವಸ್ಥಾನ ವಠಾರದಲ್ಲಿ ನಡೆಯಿತು. ಸುಳ್ಯ ತಾಲೂಕಿನ ರಬ್ಬರ್ ಟ್ಯಾಪರ್ಸ ಕೃಷಿ ಮಜ್ದೂರು ಸಂಘದ ಕಾರ್ಯಕಾರಿ ಸಮಿತಿ ರಚನಾ ಸಭೆಯು ಶಶಿಕುಮಾರ್ ಅಡ್ಯಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅವಿಭಜಿತ...

ಅಯ್ಯನಕಟ್ಟೆ ಅಂಗನವಾಡಿಯಲ್ಲಿ ಮಕ್ಕಳ ಪ್ರಾರಂಭೋತ್ಸವ

ಸರ್ಕಾರದ ಆದೇಶದಂತೆ ಸೂಕ್ತ ಮುಂಜಾಗೃತ ಕ್ರಮಗಳನ್ನು ಪಾಲಿಸಿಕೊಂಡು ಅಂಗನವಾಡಿಗಳನ್ನು ತೆರೆಯಲು ನಿರ್ಧರಿಸಿದ್ದು ಈ ನಿಟ್ಟಿನಲ್ಲಿ ಇಂದು ಕಳಂಜ ಗ್ರಾಮದ ಅಯ್ಯನಕಟ್ಟೆ ಅಂಗನವಾಡಿಯಲ್ಲಿ ಮಕ್ಕಳ ಪ್ರಾರಂಭೋತ್ಸವವನ್ನು ನಡೆಸಲಾಯಿತು. ಪುಟಾಣಿಗಳಿಗೆ ಹೂವು ನೀಡುವುದರ ಮೂಲಕ ಅಂಗನವಾಡಿಗೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಕು. ದೀಪ್ತಿ ಎನ್, ಸಹಾಯಕಿ ಶ್ರೀಮತಿ ಲಲಿತಾ ಮಣಿಮಜಲು, ಎ.ಎನ್.ಎಂ ಬೇಬಿ ಕೆ ಸಿ,...
Loading posts...

All posts loaded

No more posts

error: Content is protected !!