ಬೆಳ್ಳಾರೆ: ಸುಪ್ರಭ ಜ್ಯುವೆಲ್ಲರಿ ವರ್ಕ್ಸ್ ಸಂಸ್ಥೆಯಲ್ಲಿ ಗಣಹೋಮ ಹಾಗೂ ಲಕ್ಷ್ಮೀಪೂಜೆ

ಬೆಳ್ಳಾರೆಯ ಮುಖ್ಯರಸ್ತೆ ಬಳಿಯ ಶ್ರೀ ದುರ್ಗಾ ವಾಣಿಜ್ಯ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ಸುಪ್ರಭ ಜ್ಯುವೆಲ್ಲರಿ ವರ್ಕ್ಸ್ ಸಂಸ್ಥೆಯು 12ನೇ ವರ್ಷಕ್ಕೆ ಪಾದಾರ್ಪಣೆಗೈದಿದ್ದು ಈ ಪ್ರಯುಕ್ತ ಸಂಸ್ಥೆಯಲ್ಲಿ ನ.4ರಂದು ಗಣಹೋಮ ಹಾಗೂ ಲಕ್ಷ್ಮೀಪೂಜೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಮಾಲಕರಾದ ಸತ್ಯನಾರಾಯಣ ಆಚಾರ್ಯ ಬೆಳ್ಳಾರೆ ಹಾಗೂ ಪ್ರಸಾದ್ ಆಚಾರ್ಯ ಬೆಳ್ಳಾರೆ ಮತ್ತು ಸಂಸ್ಥೆಯ ಸಿಬ್ಬಂದಿ ಪುರುಷೋತ್ತಮ ಮುಂಡುಗಾರು ಉಪಸ್ಥಿತರಿದ್ದರು.

ವಿಶಾಲಾಕ್ಷಿ ಬಾಬ್ಲುಬೆಟ್ಟು ರವರ ಹುಟ್ಟುಹಬ್ಬದ ಅಮೃತ ಮಹೋತ್ಸವ ಆಚರಣೆ

ಕಲ್ಲಡ್ಕ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ದಿ| ಬಿ. ಟಿ. ಗುಡ್ಡಪ್ಪ ಗೌಡರ ಧರ್ಮಪತ್ನಿ ಶ್ರೀಮತಿ ವಿಶಾಲಾಕ್ಷಿ ಯವರ 75ನೇ ಹುಟ್ಟು ಹಬ್ಬದ ಅಮೃತ ಮಹೋತ್ಸವ ಕಾರ್ಯಕ್ರಮ ಅ.31ರಂದು ದಿಲೀಪ್ ಬಾಬ್ಲುಬೆಟ್ಟು ರವರ ಮನೆಯಲ್ಲಿ ಅವರ ಮಕ್ಕಳು, ಮೊಮ್ಮಕ್ಕಳು,ನೆಂಟರಿಸ್ಟರೊಂದಿಗೆ ಸಂಭ್ರಮದಿಂದ ಆಚರಿಸಿಕೊಳ್ಳಲಾಯಿತು. ಖ್ಯಾತ ಗಾಯಕರಾದ ಶಶಿಧರ್ ಮಾವಿನಕಟ್ಟೆ ಮತ್ತು ಬಾಲಕೃಷ್ಣ ನೆಟ್ಟಾರುರವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ...
Ad Widget

ಶೇಣಿ: ಬಸ್ ತಂಗುದಾಣ ಲೋಕಾರ್ಪಣೆ

ಶೇಣಿಯಲ್ಲಿ ಹಲವು ವರ್ಷಗಳಿಂದ ಬೇಡಿಕೆಯಿದ್ದ ಸಾರ್ವಜನಿಕರ ಬಸ್ ನಿಲ್ದಾಣವನ್ನು ಸಾರ್ವಜನಿಕ ಶ್ರೀಕೃಷ್ಣ ಸೇವಾ ಸಮಿತಿ ಮತ್ತು ದಾನಿಗಳ ಸಹಕಾರದಿಂದ ನಿರ್ಮಾಣಗೊಂಡು ನ. 3ರಂದು ಲೋಕಾರ್ಪಣೆಗೊಂಡಿತು. ನಿವೃತ್ತ ಕನ್ನಡ ಉಪನ್ಯಾಸಕರಾದ ಅನಂತ ಪದ್ಮನಾಭ ಗೋಪಾಲಕಜೆ ತಂಗುದಾಣವನ್ನು ಉದ್ಘಾಟಿಸಿ ಸಮಾಜಮುಖಿ ಕೆಲಸಗಳ ಬಗ್ಗೆ ಶ್ಲಾಘಿಸಿದರು. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾರ್ವಜನಿಕ ಶ್ರೀಕೃಷ್ಣ ಸೇವಾ ಸಮಿತಿಯ ಅಧ್ಯಕ್ಷ ಮಾಧವ ಗೌಡ...

ರಥಬೀದಿಯಲ್ಲಿ ಕಟ್ಲೇರಿ ಅಂಗಡಿ ನಡೆಸುತ್ತಿದ್ದ ಧನಂಜಯ ಟೈಲರ್ ನಿಧನ

ಸುಳ್ಯ ಗಾಂಧಿನಗರ ನಾವೂರು ನಿವಾಸಿ ಧನಂಜಯ ಕೆ. ಟೈಲರ್‌ ರವರು ನ.1 ರಂದು ಹೃದಯಾಘಾತದಿಂದ ನಿಧನರಾದರು. ಅವರಿಗೆ 61 ವರ್ಷ ವಯಸ್ಸಾಗಿತ್ತು.ಅವರು ಗಾಂಧಿನಗರ‌ ಮಸೀದಿ ಬಳಿ ಹಲವಾರು ವರ್ಷಗಳ ಕಾಲ ಕಟ್ಲೆರಿ‌ ಅಂಗಡಿಯನ್ನು ನಡೆಸುತ್ತಿದ್ದರು. ಇತ್ತೀಚಿನ ಕೆಲವು ವರ್ಷಗಳಿಂದ ಗಾಂಧಿನಗರದಲ್ಲಿದ್ದ ಉದ್ಯಮವನ್ನು ಸ್ಥಳಾಂತರಿಸಿ ರಥಬೀದಿಯಲ್ಲಿ ಅಂಗಡಿಯನ್ನು ನಡೆಸುತ್ತಿದ್ದರು. ಅಮರಸುದ್ದಿ ಪತ್ರಿಕೆಯ ಏಜೆಂಟರಾಗಿದ್ದರು. ಒಂದು ಅವಧಿಗೆ ಸುಳ್ಯ...

ಚೈನು ಬಿದ್ದು ಸಿಕ್ಕಿರುತ್ತದೆ

ದಿ. 30/10/2021 ರಂದು ಭಾನುವಾರ ಸುಳ್ಯದ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದಲ್ಲಿ ನಡೆದ ಪವಿತ್ರಾ- ಗುಣಪಾಲ ಇವರ ವಿವಾಹ ಸಮಾರಂಭದಲ್ಲಿ ಚೈನೊಂದು ಬಿದ್ದು‌ಸಿಕ್ಕಿರುತ್ತದೆ. ಕಳೆದುಕೊಂಡವರು ಸರಿಯಾದ ವಿವರವನ್ನು ತಿಳಿಸಿ ಪಡೆದುಕೊಳ್ಳಲು ವಿನಂತಿಸಲಾಗಿದೆ. ಸಂಪರ್ಕಿಸಬೇಕಾದ ಸಂಖ್ಯೆ 8971308355, 6362414844, 9482384692

ನ.03: ಐವರ್ನಾಡಿನಲ್ಲಿ ಆರ್.ಪಿ.ಚಿಕನ್ ಸೆಂಟರ್ ಶುಭಾರಂಭ

ಐವರ್ನಾಡಿನ ಮುಚ್ಚಿನಡ್ಕ ಶಿವಕೃಪಾ ಆಯಿಲ್ ಮಿಲ್ ಹತ್ತಿರ ರೇಣುಕಾಪ್ರಸಾದ್ ಚಾಕೋಟೆ ಮಾಲಕತ್ವದಲ್ಲಿ ಆರ್.ಪಿ.ಚಿಕನ್ ಸೆಂಟರ್ ನ.03(ನಾಳೆ) ಬುಧವಾರದಂದು ಶುಭಾರಂಭಗೊಳ್ಳಲಿದೆ. ಇಲ್ಲಿ ಬಾಯ್ಲರ್, ಟೈಸನ್, ಗಿರಿರಾಜ, ಊರುಕೋಳಿ ಹಾಗೂ ಮೊಟ್ಟೆ ರಖಂ ಹಾಗೂ ಚಿಲ್ಲರೆ ದರದಲ್ಲಿ ದೊರೆಯಲಿದೆ ಎಂದು ಮಾಲಕರು ತಿಳಿಸಿದ್ದಾರೆ.

ಯಕ್ಷಯೋಧ ಮಿತ್ರವೃಂದ ಕೋಟೆಮುಂಡುಗಾರು ವತಿಯಿಂದ ಯೋಧನಮನ ಕಾರ್ಯಕ್ರಮ ಹಾಗೂ ಕೃಷ್ಣಲೀಲೆ-ವೀರ ಅಭಿಮನ್ಯು ಯಕ್ಷಗಾನ ಪ್ರದರ್ಶನ

ಯುಗಪುರುಷ ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭಾನುಗ್ರಹದೊಂದಿಗೆ ಆದರಣೀಯ ಡಿ.ಹರ್ಷೇಂದ್ರ ಕುಮಾರ್ ಅವರ ಶುಭಾಶಯಗಳೊಂದಿಗೆ ಯಕ್ಷಯೋಧ ಮಿತ್ರವೃಂದ ಕೋಟೆಮುಂಡುಗಾರು ವತಿಯಿಂದ ಯೋಧನಮನ ಕಾರ್ಯಕ್ರಮ ನ.01ರಂದು ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಸಭಾಭವನದಲ್ಲಿ ಜರುಗಿತು. ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ಎಂ. ಕೂಸಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಸಭಾಕಾರ್ಯಕ್ರಮ ಮುಖ್ಯ ಅತಿಥಿ ಅಭ್ಯಾಗತರಿಂದ ದೀಪ ಬೆಳಗುವ ಮೂಲಕ ಕಾರ್ಯಕ್ರಮವು ಉದ್ಘಾಟನೆಗೊಂಡಿತು....

ಬಾಳಿಲ : ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ 66ನೇ ವರ್ಷದ ಕರ್ನಾಟಕ ರಾಜ್ಯೋತ್ಸವ ಆಚರಣೆ

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ 66ನೇ ವರ್ಷದ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಮಾಡಿ ಶುಭ ಹಾರೈಸಿದ ಪ್ರೌಢಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಎನ್ ವೆಂಕಟ್ರಮಣ ಭಟ್ ಕನ್ನಡವನ್ನು ಉಳಿಸಿ ಬೆಳೆಸಿ ಎಂದರು. ಮುಖ್ಯಶಿಕ್ಷಕರಾದ ಯಶೋಧರ ಎನ್ ಶುಭಹಾರೈಸಿದರು. ದೈಹಿಕ ಶಿಕ್ಷಣ ಶಿಕ್ಷಕ ಹರಿಪ್ರಸಾದ ರೈ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಅಧ್ಯಾಪಕ ವೃಂದದವರು, ಸಿಬ್ಬಂದಿ ವರ್ಗದವರು, ಸ್ಕೌಟ್...

ಯಕ್ಷಯೋಧ ಮಿತ್ರವೃಂದ ಕೋಟೆಮುಂಡುಗಾರು ವತಿಯಿಂದ ಯೋಧನಮನ ಕಾರ್ಯಕ್ರಮ

ಯುಗಪುರುಷ ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭಾನುಗ್ರಹದೊಂದಿಗೆ ಆದರಣೀಯ ಡಿ.ಹರ್ಷೇಂದ್ರ ಕುಮಾರ್ ಅವರ ಶುಭಾಶಯಗಳೊಂದಿಗೆ ಯಕ್ಷಯೋಧ ಮಿತ್ರವೃಂದ ಕೋಟೆಮುಂಡುಗಾರು ವತಿಯಿಂದ ಯೋಧನಮನ ಕಾರ್ಯಕ್ರಮ ನ.01ರಂದು ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಸಭಾಭವನದಲ್ಲಿ ಜರುಗಿತು. ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ಎಂ. ಕೂಸಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಸಭಾಕಾರ್ಯಕ್ರಮ ಮುಖ್ಯ ಅತಿಥಿ ಅಭ್ಯಾಗತರಿಂದ ದೀಪ ಬೆಳಗುವ ಮೂಲಕ ಕಾರ್ಯಕ್ರಮವು ಉದ್ಘಾಟನೆಗೊಂಡಿತು....

ಅಮರಸುದ್ದಿ ಕಚೇರಿಯಲ್ಲಿ ಗಣಹೋಮ

ಅಮರ ಸುದ್ದಿ ಕಚೇರಿಯಲ್ಲಿ ನ.1.ರಂದು ಗಣಹೋಮ ನಡೆಯಿತು. ಈ ಸಂದರ್ಭ ಪ್ರಧಾನ ಸಂಪಾದಕರಾದ ಮುರಳೀಧರ ಅಡ್ಡನಪಾರೆ ಹಾಗೂ ಕುಟುಂಬಸ್ಥರು, ಹಿರಿಯ ವರದಿಗಾರ ಪದ್ಮನಾಭ ಅರಂಬೂರು, ಕಾರ್ಯನಿರ್ವಾಹ ಸಂಪಾದಕ ಸುದೀಪ್ ರಾಜ್ ಕೋಟೆಮೂಲೆ, ಕಚೇರಿ ನಿರ್ವಾಹಕ ಕೀರ್ತನ್ ಕುಕ್ಕುಡೇಲು, ವರದಿಗಾರರಾದ ಜಗದೀಶ್ ಮುಂಡುಗಾರು, ಲಿಪಿ ಸಂಯೋಜಕಿ ಸೌಮ್ಯ ಬಳ್ಳಕ್ಕಾನ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!