- Sunday
- July 5th, 2026
ಕಳಂಜ ಗ್ರಾಮ ಪಂಚಾಯತನ್ನು ಕ್ಷಯ ಮುಕ್ತ ಗ್ರಾಮ ಪಂಚಾಯತ್ ಎಂದು ಘೋಷಣೆ ಮಾಡುವ ನಿಟ್ಟಿನಲ್ಲಿ ಕ್ಷಯರೋಗದ ಕುರಿತು ಮಾಹಿತಿ ನೀಡುವ ಕಾರ್ಯಕ್ರಮ ಮತ್ತು ಟಾಸ್ಕ್ ಪೋರ್ಸ್ ಸಮಿತಿ ರಚನಾ ಸಭೆಯನ್ನು ಕಳಂಜ ಗ್ರಾಮ ಪಂಚಾಯತಿನ ಗೌರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ಗಿರೀಶ್ ಎಂ ಮತ್ತು ಸುಳ್ಯ ತಾಲೂಕು...
ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಇಲ್ಲಿನ ನೇಚರ್ ಕ್ಲಬ್ ವತಿಯಿಂದ ಜೀವವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ಅಕ್ಟೋಬರ್ 26ರಂದು ಕೃಷಿ ಕ್ಷೇತ್ರ ಅಧ್ಯಯನ ಪ್ರವಾಸ ಏರ್ಪಡಿಸಿ ಸುಳ್ಯ ಪರಿಸರದ ಕೆಲವು ಕೃಷಿ ಸಾಧಕರನ್ನು ಸಂದರ್ಶಿಸಿ, ಕೃಷಿ ಕ್ಷೇತ್ರ ವೀಕ್ಷಿಸಿ, ಅಲ್ಲಿನ ವಿಶೇಷತೆಗಳನ್ನು ಅವರ ಕೃಷಿ ಸಾಧನೆಗಳನ್ನು ಪರಿಚಯಿಸಿ ಕೊಡಲಾಯಿತು.ಕೃಷಿ ಕ್ಷೇತ್ರ ಅಧ್ಯಯನದಲ್ಲಿ ಮೊದಲನೆಯದಾಗಿ ಸುಳ್ಯ ತಾಲೂಕಿನ ಬೆಳ್ಳಾರೆ...
ಅಮರ ಸಂಜೀವಿನಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಇದರ ಒಕ್ಕೂಟ ಸಭೆ ಅ.28 ರಂದು ಗಿರಿಜನ ಸಭಾಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಅಮರ ಸಂಜೀವಿನಿ ಒಕ್ಕೂಟದ ಅದ್ಯಕ್ಷರಾದ ರವಿಕಲಾ ಚೆಮ್ನೂರು ವಹಿಸಿದ್ದರು. ಸಭೆಯಲ್ಲಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ವೇತಾ ಹಾಗೂ NRGY ಕೋ-ಆರ್ಡಿನೇಟರ್ ನಮಿತಾ, ಗುತ್ತಿಗಾರು ಗ್ರಾಮಪಂಚಾಯತ್ ಅದ್ಯಕ್ಷರಾದ ರೇವತಿ ಆಚಳ್ಳಿ, ಶ್ರೀಮತಿ ತೇಜಕುಮಾರಿ, ಒಕ್ಕೂಟ...
ಉದಯ ಶಿವಾಲ ಮಾಲಕತ್ವದ ಅರುಣೋದಯ ಜನರಲ್ ಸ್ಟೋರ್ ಕೊಲ್ಲಮೊಗ್ರದ ಎಸ್.ಕೆ ಕಾಂಪ್ಲೆಕ್ಸ್ ನಲ್ಲಿ ಅ.29 ರಂದು ಬೆಳಿಗ್ಗೆ ಗಣಹೋಮದೊಂದಿಗೆ ಶುಭಾರಂಭಗೊಂಡಿತು.ನಮ್ಮಲ್ಲಿ ಎಲ್ಲಾ ರೀತಿಯ ದಿನಸಿ ಸಾಮಾಗ್ರಿಗಳು ಹಾಗೂ ನಂದಿನಿ ಹಾಲು, ಮೊಸರು ಹಾಗೂ ಇತರ ಉತ್ಪನ್ನಗಳು ದೊರೆಯುತ್ತವೆ ಎಂದು ಜನರಲ್ ಸ್ಟೋರ್ ನ ಮಾಲಕರಾದ ಉದಯ ಶಿವಾಲ ತಿಳಿಸಿದ್ದಾರೆ. ವರದಿ :- ಉಲ್ಲಾಸ್ ಕಜ್ಜೋಡಿ
ನೆಲ್ಲೂರು ಕೆಮ್ರಾಜೆ: ಜಿರ್ಮುಕಿ- ಬೊಳ್ಳಾಜೆ ಕೆಸರು ಮಯ ರಸ್ತೆಯ ಕುರಿತ ಅಮರ ಸುದ್ದಿ ವರದಿಗೆ ಪಂಚಾಯತ್ ಉಪಾಧ್ಯಕ್ಷ ಧನಂಜಯ ಕುಮರ್ ಎರ್ಮೆಟ್ಟಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸೇವಾಜೆ ಸೇತುವೆ ದುರಸ್ತಿಯ ಹಿನ್ನಲೆ ಈ ರಸ್ತೆಯ ವಾಹನ ಸಂಚಾರ ದುಪ್ಪಟ್ಟಾದ ಕಾರಣ ರಸ್ತೆ ಕೆಸರುಮಯವಾಗಿತ್ತು. ಇದರ ತಾತ್ಕಾಲಿಕ ದುರಸ್ತಿಯನ್ನು ಅ. 24 ರಂದು ಪಂಚಾಯತ್ ಅಧ್ಯಕ್ಷರು ಹಾಗೂ...
ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯ ಮಾಜಿ ಸದಸ್ಯರೂ ,ಬೆಳ್ಳಾರೆಯ ಉದ್ಯಮಿ ಬಶೀರ್ ಬಿ ಎ ಇವರ ತಂದೆ ಉಸ್ಮಾನ್ ಹಾಜಿ ಮಂಡೇಪು (81) ಅಲ್ಪಕಾಲದ ಅಸೌಖ್ಯದಿಂದ ಅಕ್ಟೋಬರ್ 29 ರಂದು ನಿಧನರಾದರು. ಮೃತರು ಪತ್ನಿ ,ಪುತ್ರ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ 2021- 22ರ ವಾರ್ಷಿಕ ಮಹಾಸಭೆಯು ಅ.28ರಂದು ಪಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಪಂಜ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ ಬಿ.ಕೆ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಸ್ಕೌಟ್ ಆಯುಕ್ತರಾದ ಶ್ರೀ ರಾಮಶೇಷ ಶೆಟ್ಟಿ, ಜಿಲ್ಲಾ ಸಂಸ್ಥೆಯ ಗೈಡ್...
ನಾಲ್ಕೂರು ಗ್ರಾಮದ ಹಲ್ಗುಜಿ ಶ್ರೀ ಶಿರಾಡಿ ದೈವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವವು 2022 ರ ಜ.13 ರಿಂದ ಜ.16 ರವರೆಗೆ ನಡೆಯಲಿದ್ದು, ಇದರ ಪೂರ್ವಭಾವಿ ಸಭೆ ಅ.27 ರಂದು ನಡೆಯಿತು. ಇದೇ ಸಂದರ್ಭದಲ್ಲಿ ಶಿಲ್ಪಿ ವೆಂಕಟ್ರಮಣ ಮರ್ಕಂಜ ಅವರು ದಾರಂದ ಮಹೂರ್ತ ಕಾರ್ಯಕ್ರಮ ನೆರವೇರಿಸಿದರು.ಈ ಸಂದರ್ಭದಲ್ಲಿ ಆಡಳಿತ ಸಮಿತಿ ಹಾಗೂ ಜೀರ್ಣೋದ್ಧಾರ ಸಮಿತಿಗಳಿದ್ದು ವಿವಿಧ...
ಹರಿಹರ ಪಲ್ಲತ್ತಡ್ಕ ಗ್ರಾಮದ ಬೂತ್ ಸಂಖ್ಯೆ 118ರ ಬೂತ್ ಸಮಿತಿ ಅದ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮ ಅ.26 ರಂದು ನಡೆಯಿತು. ಸುಳ್ಯ ಬಿಜೆಪಿ ಮಂಡಲ ಅದ್ಯಕ್ಷರಾದ ಹರೀಶ್ ಕಂಜಿಪಿಲಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಗುತ್ತಿಗಾರು ಮಹಾಶಕ್ತಿ ಕೇಂದ್ರದ ಅದ್ಯಕ್ಷರಾದ ವಿನಯ್ ಮುಳುಗಾಡು, ಹರಿಹರ ಪಲ್ಲತ್ತಡ್ಕ...
ನಾಲ್ಕೂರು ಗ್ರಾಮದ ಒಂದನೇ ವಾರ್ಡ್ ನ ಬಿಜೆಪಿ ಬೂತ್ ಸಮಿತಿ ಅದ್ಯಕ್ಷರಾದ ನಿಶಿತ್ ಮೂರ್ಜೆ ಅವರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮ ಅ.26 ರಂದು ನಡೆಯಿತು. ಸುಳ್ಯ ಬಿಜೆಪಿ ಮಂಡಲ ಅದ್ಯಕ್ಷರಾದ ಹರೀಶ್ ಕಂಜಿಪಿಲಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ಪ್ರದಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಗುತ್ತಿಗಾರು ಗ್ರಾಮಪಂಚಾಯತ್ ಸದಸ್ಯರಾದ ವಿಜಯ ಕುಮಾರ್...
Loading posts...
All posts loaded
No more posts
