ಉಳುವಾರು ದೇವಣ್ಣ ಗೌಡ ನಾಪತ್ತೆ – ದೂರು

ಅರಂತೋಡು ಗ್ರಾಮದ ಉಳುವಾರು ನಿವಾಸಿ ದೇವಣ್ಣ ಗೌಡ ಅವರು ಅ.24 ರ ಮುಂಜಾನೆಯಿಂದ ಕಾಣೆಯಾಗಿದ್ದಾರೆಇವರು ಕಂಡಲ್ಲಿ 9741113650,8762416256, 9591370038 ಈ ಮೊಬೈಲ್ ನಂಬರ್ ಗೆ ಮಾಹಿತಿ ನೀಡಲು ಕೋರಲಾಗಿದೆ.

ಜೇನು ಕೃಷಿ ವಿಭಾಗದ ಸಹಾಯಕ ತಂತ್ರಜ್ಞೆಯಾಗಿ ಶಿಲ್ಪಾ.ಕೆ.ವಿ ನೇಮಕ

ಕಡಬ ಸರಕಾರಿ ಆಸ್ಪತ್ರೆಯ ಪ್ರಥಮ ದರ್ಜೆ ಸಹಾಯಕ ಕೊರಗಪ್ಪಗೌಡ ಮತ್ತು ಬಿಳಿನೆಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ದಮಯಂತಿ ಜಿ ದಂಪತಿಗಳ ಪುತ್ರಿ ಶಿಲ್ಪಾ.ಕೆ.ವಿ, ಜೈವಿಕ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗದ ನಂತರ ಕರ್ನಾಟಕ ಸರಕಾರದ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯ ರಿಸರ್ಚ್ ಸೆಂಟರ್ ನಲ್ಲಿ ಜೇನು ಕೃಷಿ ವಿಭಾಗದ ಸಹಾಯಕ...
Ad Widget

ಶ್ರೀಮತಿ ಸೀತಮ್ಮ ಕಳಂಜ ನಿಧನ

ಕಳಂಜ ಗ್ರಾಮದ ಕಳಂಜ ಮನೆ ಶ್ರೀಮತಿ ಸೀತಮ್ಮ ಕಳಂಜ ಇಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರಿಗೆ 57 ವರ್ಷ ವಯಸ್ಸಾಗಿತ್ತು.ಮೃತರು ಪತಿ ಸುಬ್ರಾಯ ಗೌಡ, ಸಹೋದರಿ ಹೊನ್ನಮ್ಮ, ಪುತ್ರ ಪುರಂದರ ಗೌಡ, ಸೊಸೆ ಶ್ರೀಮತಿ ರಮ್ಯ, ಮೊಮ್ಮಗಳು ಬೇಬಿ ಜನನಿ, ಪುತ್ರಿಯರಾದ ಶ್ರೀಮತಿ ಮೀನಾಕ್ಷಿ, ಶ್ರೀಮತಿ ಹರಿಣಾಕ್ಷಿ, ಶ್ರೀಮತಿ ನಳಿನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಐನೆಕಿದು : ಶ್ರಮದಾನ

ಸುಬ್ರಹ್ಮಣ್ಯ, ಅಜ್ಜಿಗುಡ್ಡೆ, ನೂಜಿಬೆಟ್ಟು ಮೂಲಕ ಐನೆಕಿದು ಸಂಪರ್ಕಿಸುವ ರಸ್ತೆಯ ಇಕ್ಕೆಲಗಳಲ್ಲಿ ಅ.24 ರಂದು ಶ್ರಮದಾನ ಮಾಡುವ ಮೂಲಕ ಸ್ವಚ್ಛತಾ ಕಾರ್ಯ ನಡೆಸಿ ರಸ್ತೆಯನ್ನು ಜನಸಂಚಾರಕ್ಕೆ ಸುಗಮಗೊಳಿಸಲಾಯಿತು. ಈ ಸಂದರ್ಭದಲ್ಲಿ ಊರಿನ ಜನರು ಈ ಶ್ರಮದಾನದಲ್ಲಿ ಭಾಗಿಯಾಗಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ

ಹರಿಹರ ಪಲ್ಲತ್ತಡ್ಕ :ಅ.25 ರಂದು ಎಸ್.ಕೆ ಜನರಲ್ ಸ್ಟೋರ್ ಶುಭಾರಂಭ

ಹರಿಹರ ಪಲ್ಲತ್ತಡ್ಕದ ಶ್ರೀ ದುರ್ಗಾ ಸಂಕೀರ್ಣದಲ್ಲಿ ಅ.25ನೇ ಸೋಮವಾರ ಸಂದೀಪ್ ಕೇವಳ ಮಾಲಕತ್ವದ ಎಸ್.ಕೆ ಜನರಲ್ ಸ್ಟೋರ್ ಶುಭಾರಂಭಗೊಳ್ಳಲಿದೆ. ವರದಿ :- ಉಲ್ಲಾಸ್ ಕಜ್ಜೋಡಿ

ಕೊಲ್ಲಮೊಗ್ರು : ಅ.29 ರಂದು ಅರುಣೋದಯ ಜನರಲ್ ಸ್ಟೋರ್ ಶುಭಾರಂಭ

ಉದಯ ಶಿವಾಲ ಮಾಲಕತ್ವದ ಅರುಣೋದಯ ಜನರಲ್ ಸ್ಟೋರ್ ಅ.29 ನೇ ಶುಕ್ರವಾರದಂದು ಕೊಲ್ಲಮೊಗ್ರದ ಎಸ್.ಕೆ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಳ್ಳಲಿದ್ದು, ನಮ್ಮಲ್ಲಿ ಎಲ್ಲಾ ರೀತಿಯ ದಿನಸಿ ಸಾಮಾಗ್ರಿಗಳು, ನಂದಿನಿ ಹಾಲು, ಮೊಸರು ಹಾಗೂ ಉತ್ಪನ್ನಗಳು ದೊರೆಯುತ್ತವೆ ಎಂದು ಮಾಲಕರಾದ ಉದಯ ಶಿವಾಲ ತಿಳಿಸಿದ್ದಾರೆ. ವರದಿ :- ಉಲ್ಲಾಸ್ ಕಜ್ಜೋಡಿ

ಕೊಡಗು ಸಂಪಾಜೆ ಸೊಸೈಟಿ ಮಹಾಸಭೆ – ರೈತರಿಗೆ ಮಣ್ಣುಪರೀಕ್ಷೆ ಮಾಡಿಯೇ ಪೂರಕ ಗೊಬ್ಬರ ಪೂರೈಕೆಗೆ ಕ್ರಮ – ಅನಂತ್ ಊರುಬೈಲು

ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ 2020-21 ನೆ ಸಾಲಿನ ವಾರ್ಷಿಕ ಮಹಾಸಭೆಯು ಸಂಪಾಜೆ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ದಿನಾಂಕ 23.10.2021 ರಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಶ್ರೀ ಎನ್.ಸಿ ಅನಂತ್ ರವರು ವಹಿಸಿದ್ದರು, ಸಂಘದ ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿ ರೇಣುಕಾಕ್ಷ...

ನ.01: ಯಕ್ಷಯೋಧ ಮಿತ್ರವೃಂದ ಕೋಟೆಮುಂಡುಗಾರು ವತಿಯಿಂದ ಕೃಷ್ಣಲೀಲೆ-ವೀರ ಅಭಿಮನ್ಯು ಯಕ್ಷಗಾನ ಪ್ರದರ್ಶನ ಹಾಗೂ ಯೋಧನಮನ ಕಾರ್ಯಕ್ರಮ

ಯುಗಪುರುಷ ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭಾನುಗ್ರಹದೊಂದಿಗೆ ಆದರಣೀಯ ಡಿ.ಹರ್ಷೇಂದ್ರ ಕುಮಾರ್ ಅವರ ಶುಭಾಶಯಗಳೊಂದಿಗೆ ಯಕ್ಷಯೋಧ ಮಿತ್ರವೃಂದ ಕೋಟೆಮುಂಡುಗಾರು ಅರ್ಪಿಸುವ ಯಕ್ಷಗಾನ ಪ್ರದರ್ಶನ ಕೃಷ್ಣಲೀಲೆ-ವೀರ ಅಭಿಮನ್ಯು ಹಾಗೂ ಯೋಧನಮನ ಕಾರ್ಯಕ್ರಮ ನ.01ರಂದು ಕೋಟೆಮುಂಡುಗಾರು ಶಾಲಾ ವಠಾರದಲ್ಲಿ ಜರುಗಲಿದೆ. ಸಂಜೆ ಸಭಾ ಕಾರ್ಯಕ್ರಮ ನಡೆಯಲಿದ್ದು ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ಎಂ. ಕೂಸಪ್ಪ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ...

ಕ್ಷಯ ಮುಕ್ತ ಗ್ರಾಮ ಪಂಚಾಯತ್ ಟಾಸ್ಕ್ ಪೋರ್ಸ್ ಸಮಿತಿ ರಚನೆ ಮತ್ತು ಮಾಹಿತಿ ಕಾರ್ಯಕ್ರಮ

ನಮ್ಮ ದೇಶವನ್ನು 2025 ಕ್ಕೆ ಕ್ಷಯ ಮುಕ್ತ ಭಾರತ ಮಾಡುವ ಪ್ರಧಾನಿಯವರ ಘೋಷಣೆಯಂತೆ ಮಡಪ್ಪಾಡಿ ಗ್ರಾಮ ಪಂಚಾಯತನ್ನು ಕ್ಷಯ ಮುಕ್ತ ಗ್ರಾಮ ಪಂಚಾಯತ್ ಮಾಡುವ ನಿಟ್ಟಿನಲ್ಲಿ ಟಾಸ್ಕ್ ಪೋರ್ಸ್ ಸಮಿತಿ ರಚನಾ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿಯವರ ಅಧ್ಯಕ್ಷತೆಯಲ್ಲಿ ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯ ಕ್ಷಯ ಚಿಕಿತ್ಸಾ...

ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ವತಿಯಿಂದ ದಸರಾ ಕವಿಗೋಷ್ಠಿ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ಆಶ್ರಯದಲ್ಲಿ ನಡೆದ ದಸರಾ ಕವಿಗೋಷ್ಠಿ ಮತ್ತು ದಸರಾ ಕವಿ ಅಭಿನಂದನಾ ಕಾರ್ಯಕ್ರಮವು ಸುಳ್ಯದ ಕಾನತ್ತಿಲ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಖ್ಯಾತ ಚಿತ್ರ ಕಲಾವಿದರಾದ ಬಿ.ಕೆ.ಮಾಧವ ರಾವ್ ಮಂಗಳೂರುರವರು ಸಮಾರಂಭದ ಸರ್ವಾಧ್ಯಕ್ಷತೆ ವಹಿಸಿದ್ದರು. ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಭೀಮರಾವ್ ವಾಷ್ಠರ್ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು . ದಸರಾ...
Loading posts...

All posts loaded

No more posts

error: Content is protected !!