- Friday
- May 1st, 2026
ಹರಿಹರ ಪಲ್ಲತ್ತಡ್ಕದ ಪ್ರೈಮರಿ ಶಾಲೆಯ ಬಳಿ ಅ.21 ರ ಸಂಜೆ ಅಂಬ್ಯುಲೆನ್ಸ್ ಮತ್ತು ಲಾರಿಯ ನಡುವೆ ಅಪಘಾತ ಸಂಭವಿಸಿದ್ದು, ಹರಿಹರ ಪಲ್ಲತ್ತಡ್ಕದಿಂದ ತೆಂಗಿನ ಕಾಯಿ ಹೇರಿಕೊಂಡು ನಡುಗಲ್ಲು ಕಡೆಗೆ ಹೋಗುತ್ತಿದ್ದ ಲಾರಿ ಆ ಕಡೆಯಿಂದ ಬಂದ ಅಂಬ್ಯುಲೆನ್ಸ್ ಗೆ ಡಿಕ್ಕಿ ಹೊಡೆದಿದ್ದು, ಎರಡೂ ವಾಹನಗಳಿಗೂ ಅಲ್ಪ ಸ್ವಲ್ಪ ಹಾನಿಯಾಗಿದ್ದು, ಲಾರಿ ಅಂಬ್ಯುಲೆನ್ಸ್ ಗೆ ಗುದ್ದಿ ರಸ್ತೆಯ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ಅನುರಾಧಾ ಕುರುಂಜಿಯವರಿಂದ ಮಡಿಕೇರಿ ಆಕಾಶವಾಣಿಯಲ್ಲಿ ಡಾ. ಕುರುಂಜಿ ವೆಂಕಟರಮಣ ಗೌಡೆರ ಕುರಿತು ಸರಣಿ ಕಾರ್ಯಕ್ರಮ ನಡೆಯಲಿದೆ. ಮಡಿಕೇರಿ ಆಕಾಶವಾಣಿಯು ಡಾ. ಕುರುಂಜಿ ವೆಂಕಟರಮಣ ಗೌಡರ ಜೀವನ ಮತ್ತು ಸಾಧನೆ ಕುರಿತು ಅರೆಭಾಷೆಯಲ್ಲಿ ಸರಣಿ ಕಾರ್ಯಕ್ರಮವನ್ನು ಪ್ರಸಾರ ಮಾಡಲಿದ್ದು, ಮೊದಲ ಹಂತದ ಕಾರ್ಯಕ್ರಮವನ್ನು ಡಾ. ಅನುರಾಧಾ ಕುರುಂಜಿಯವರು...
ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗ ಹರಿಹರ ಪಲ್ಲತ್ತಡ್ಕ ಇಲ್ಲಿಗೆ ಗಣಿತ ಅತಿಥಿ ಶಿಕ್ಷಕರು ಬೇಕಾಗಿದ್ದಾರೆ.ಆಸಕ್ತರು ಈ ಕೆಳಗಿನ ಸಂಪರ್ಕ ಸಂಖ್ಯೆಗಳಿಗೆ ಸಂಪರ್ಕಿಸಬಹುದು.948203976508257200865 ವರದಿ :- ಉಲ್ಲಾಸ್ ಕಜ್ಜೋಡಿ
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಡಳಿತ ಮಂಡಳಿಯು ನೂತನ ಲಾಂಛನವನ್ನು ಸಿದ್ಧಗೊಳಿಸಿದೆ. ರಜತ ವರ್ಣದ ಏಳು ಹೆಡೆಯ ನಾಗರಾಜ ಮತ್ತು ಷಣ್ಮುಖನನ್ನು ಶ್ರೀ ದೇವರ ಉತ್ಸವ ಮೂರ್ತಿಯನ್ನು ಹೋಲುವ ಏಳು ಹೆಡೆ ನಾಗರಾಜನ ನಡುವೆ ಷಣ್ಮುಖ ವಿರಾಜಮಾನನಾಗಿರುವ ರಜತ ವರ್ಣದ ಚಿತ್ರವು ಲಾಂಛನದ ಮದ್ಯ ಭಾಗವನ್ನು ಅಲಂಕರಿಸಿದೆ. ಅಂತರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿವಪ್ರಸಾದ್...
ಬೆಂಗಳೂರಿನ ಶ್ರೀ ಜ್ಞಾನಮಂದಾರ ಶಿಕ್ಷಕಿಯರ ತರಬೇತಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಅಂಕಪಟ್ಟಿ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಂಸ್ಥೆಯ ವಿದ್ಯಾರ್ಥಿನಿಯರಾದ ಶ್ರೀಮತಿ ಸೌಮ್ಯ.ಕೆ.ಎಚ್, ಶ್ರೀಮತಿ ಲೆವಿನಾ.ಕೆ, ಕುಮಾರಿ ಹರ್ಷಿತ ಅವರುಗಳು ಶೇ.95 ರಷ್ಟು ಅಂಕಗಳಿಸಿದ್ದು ಅವರಿಗೆಆರ್.ಎನ್.ಎಸ್ ಸಮೂಹ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಹಾಗೂ ಆಡಳಿತಾಧಿಕಾರಿ ಡಾ.ಸುಧೀರ್ ಪೈ ಕೆ ಎಲ್ ರವರು ಅಂಕಪಟ್ಟಿ ವಿತರಿಸಿದರು. ಈ ಕಾರ್ಯಕ್ರಮದಲ್ಲಿ...
ಸುಬ್ರಹ್ಮಣ್ಯ: ಇಲ್ಲಿನ ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯೊಬ್ವರ ಮೃತದೇಹ ಪತ್ತೆಯಾಗಿದೆ. ಗೃಹ ರಕ್ಷಕ ದಳದ ಸಿಬ್ಬಂದಿಗಳು ಸ್ಥಳೀಯರ ನೆರವಿನೊಂದಿಗೆ ಕುಮಾರಧಾರ ನದಿಯಿಂದ ಮೃತ ದೇಹವನ್ನು ಮೇಲೆಕ್ಕೆತ್ತಿದ್ದಾರೆ. ಬಳಿಕ ಸುಬ್ರಹ್ಮಣ್ಯ ಪ್ರಾಥಮಿಕ ಅರೋಗ್ಯ ಕೇಂದ್ರದ ಶವಾಗಾರದಲ್ಲಿ ಮೃತ ದೇಹವನ್ನು ಇರಿಸಲಾಗಿದೆ. ಮೃತ ಮಹಿಳೆಯ ಪ್ರಾಯ ಸುಮಾರು 55 ವರ್ಷ ಆಗಬಹುದೆಂದು ಅಂದಾಜಿಸಲಾಗಿದೆ. ವಿಳಾಸ ಪತ್ತೆ ಇನ್ನಷ್ಟೇ ಆಗಬೇಕಿದ್ದು,ಸುಬ್ರಹ್ಮಣ್ಯ...
ಬೆಂಗಳೂರು ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ ಶಿಕ್ಷಣ ತಜ್ಞ ಆರ್.ಎನ್.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಹಾಗೂ ಮುಖ್ಯಸ್ಥ ಡಾ|ಸುಧೀರ್ ಪೈ ಎನ್ ಎಲ್ ಅವರನ್ನು ಕರ್ನಾಟಕದ ರಾಜ್ಯಪಾಲರು ನೇಮಕ ಮಾಡಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ ನಾಮಕರಣ ಸದಸ್ಯರಾಗಿ ನೇಮಕಗೊಂಡಿರುವ ಬೆಂಗಳೂರು ಮತ್ತು ಮುರುಡೇಶ್ವರದ ಪ್ರಸಿದ್ಧ ಆರ್.ಎನ್.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಮತ್ತು ಮುಖ್ಯಸ್ಥರಾಗಿರುವ...
ಲಿಯೋ ಕ್ಲಬ್ ಆಫ್ ಮೈಸೂರ್ ಎರಿಶ್ ನಡೆಸಿದ ಮೈಸೂರ್ ರಾಜ್ಯ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಉಜಿರೆಯ ಎಸ್.ಡಿ.ಎಮ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳಾದ ಪ್ರಾರ್ಥನ್ ಮತ್ತು ಕಾರ್ತಿಕ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಪ್ರಾರ್ಥನ್ ಗಿರಿಧರ್ ಸ್ಕಂದ ಮತ್ತು ಶೋಭ ದಂಪತಿಯ ಪುತ್ರನಾದರೆ ಕಾರ್ತಿಕ್ ಸುಬ್ರಹ್ಮಣ್ಯದ ಉದ್ಯಮಿ ರವಿ ಕಕ್ಕೆಪದವು ಮತ್ತು ಶ್ರೀಮತಿ ಗೀತಾ ರವಿ ದಂಪತಿಯ ಪುತ್ರ
ಸುಬ್ರಹ್ಮಣ್ಯ: ನಾಗಾರಾಧನ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಮನೆಯವರೊಂದಿಗೆ ರವಿವಾರ ಬೇಟಿ ನೀಡಿದರು.ಕ್ಷೇತ್ರಕ್ಕೆ ಬೇಟಿ ನೀಡಿದ ಅವರು ಕ್ಷೇತ್ರದಲ್ಲಿ ಆಶ್ಲೇಷ ಬಲಿ, ಅಭಿಷೇಕ ಸೇವೆ ನೆರವೇರಿಸಿ ಮಹಾಪೂಜೆಯಲ್ಲಿ ಪಾಲ್ಗೊಂಡರು. ನಾಗಪ್ರತಿಷ್ಠೆ ಸೇವೆ ನೆರವೇರಿಸಿದರು. ಶ್ರೀ ದೇವರ ದರುಶನ ಪಡೆದು, ಶ್ರೀ ಹೊಸಳಿಗಮ್ಮನ ದರುಶನ ಪಡೆದು ಪ್ರಾರ್ಥನೆ...
Loading posts...
All posts loaded
No more posts
