ಗುತ್ತಿಗಾರು : ಸಹಕಾರಿ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧ ಆಯ್ಕೆ – ಅಧ್ಯಕ್ಷರಾಗಿ ಜಯಪ್ರಕಾಶ್ ಮೊಗ್ರ – ಉಪಾಧ್ಯಕ್ಷರಾಗಿ ಕೃಷ್ಣಯ್ಯ ಮೂಲೆತೋಟ ಆಯ್ಕೆ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯಪ್ರಕಾಶ್ ಮೊಗ್ರ ಹಾಗೂ ಉಪಾಧ್ಯಕ್ಷರಾಗಿ ಕೃಷ್ಣಯ್ಯ ಮೂಲೆತೋಟ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಶ್ವ ಕಿಡ್ನಿ ದಿನ – ಮಾರ್ಚ್ 12

ಪ್ರತಿ ವರ್ಷ ಮಾರ್ಚ್ ತಿಂಗಳ ಎರಡನೇ ಗುರುವಾರದಂದು ವಿಶ್ವದಾದ್ಯಂತ ವಿಶ್ವ ಕಿಡ್ನಿ ದಿನ ಎಂದು ಆಚರಿಸಲಾಗುತ್ತಿದೆ. ಜಾಗತಿಕವಾಗಿ, ವಿಶ್ವದಾದ್ಯಂತ ಕಿಡ್ನಿ ಸಂಬಂಧಿ ರೋಗಗಳ ಬಗ್ಗೆ ಅರಿವು ಜಾಗತಿ ಮೂಡಿಸಿ, ಜನರಲ್ಲಿ ಕಿಡ್ನಿಗಳ ಸುರಕ್ಷತೆ ಬಗ್ಗೆ ಹೆಚ್ಚಿನ ತಿಳುವಳಿಕೆ ಮೂಡಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ. 2016ರಲ್ಲಿ 66 ದೇಶಗಳು ಈ ಆಚರಣೆಯನ್ನು ಜಾರಿಗೆ ತಂದರು....
Ad Widget

ಪಂಜ: ಶ್ರೀ ಶಾಸ್ತಾವೇಶ್ವರ ದೇವರಿಗೆ ಪ್ರಭಾವಳಿ ಸಮರ್ಪಣೆ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶಾಸ್ತಾವೇಶ್ವರ ದೇವರಿಗೆ ಪ್ರಭಾವಳಿಯನ್ನು ಗಂಗಾಧರ ಗೌಡ ಗುಂಡಡ್ಕ ಹಾಗು ಶ್ರೀಮತಿ ಸೀತ ಇವರ ಪುತ್ರ ಚೇತನ್ ಗುಂಡಡ್ಕ, ಶ್ರೀಮತಿ ರಶ್ಮಿ ಮತ್ತು ದಿಯಾನ್ ಗುಂಡಡ್ಕ ಇವರು ಸೇವಾ ರೂಪದಲ್ಲಿ ಸಮರ್ಪಿಸಿದರು. ಈ ವೇಳೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂ‌ರ್ ಉಪಸ್ಥಿತರಿದ್ದರು.

ಐವರ್ನಾಡಿನಲ್ಲಿ ತಮಿಳು ಸಿನಿಮಾ ಶೂಟಿಂಗ್

ಐವರ್ನಾಡಿನಲ್ಲಿ ತಮಿಳು,ತೆಲುಗು ಚಲನಚಿತ್ರಕ್ಕಾಗಿ ಚಿತ್ರೀಕರಣ ನಡೆಯುತ್ತಿದೆ. ಕೆಲದಿನಗಳಿಂದ ಗ್ರಾಮದ ಬೇರೆ,ಬೇರೆ ಕಡೆಗಳಲ್ಲಿ ಚಿತ್ರೀಕರಣ ನಡೆಯುತ್ತಿದ್ದು ಹಲವು ಜನರು ಭಾಗವಹಿಸುತ್ತಿದ್ದಾರೆ.ಇಂದು ಮುಖ್ಯ ರಸ್ತೆ ನೆಕ್ರೆಪ್ಪಾಡಿ ಕಾಂಪ್ಲೆಕ್ಸ್ ಎದುರು ಚಿತ್ರೀಕರಣ ನಡೆಯುತ್ತಿದೆ. ತಮಿಳುನಾಡಿನ ಸುಮಾರು 80 ಜನರು ಈ ಚಿತ್ರೀಕರಣ ತಂಡದಲ್ಲಿದ್ದು ಐವರ್ನಾಡಿನ ಯುವಕರು ಕೂಡ ಇವರೊಂದಿಗೆ ಭಾಗವಹಿಸುತ್ತಿದ್ದಾರೆ. ಚಿತ್ರೀಕರಣ ತಂಡದವರು ಸುಳ್ಯದ ಕಮಾಂಡ‌ರ್ ಜೀಪುಗಳನ್ನು ಹಾಗೂ ಇತರ...

ಮಾ.9ರಂದು ಅರಂತೋಡಿ ನಲ್ಲಿ ಎಸ್ ಕೆ ಎಸ್ ಎಫ್ ಶಾಖೆ ವತಿಯಿಂದ ಮಜ್ಲಿಸುನ್ನೂರು ಮತ್ತು ಬೃಹತ್ ಇಫ್ತಾರ್ ಸಂಗಮ

ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆ ವತಿಯಿಂದ ಮಜ್ಲಿಸ್ ನೂರ್ ಹಾಗೂ ಇಫ್ತಾರ್ ಕೂಟವು ಆದಿತ್ಯವಾರ ಸಂಜೆ 4 ಗಂಟೆಗೆ ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ನಡೆಯಲಿದೆ. ಅರಂತೋಡು ಮಸೀದಿ ಖತೀಬರಾದ ಬಹು ಇಸ್ಮಾಯಿಲ್ ಫೈಝಿ ಗಟ್ಟಮನೆ ಯವರು ಮಜ್ಲಿಸ್ ನ್ನೂರು ನೇತೃತ್ವ ವಹಿಸಲಿದ್ದಾರೆ.ಅಧ್ಯಕ್ಷತೆಯನ್ನು ಎಸ್ ಕೆ ಎಸ್ ಎಸ್ ಎಫ್ ಅರಂತೋಡು...

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಸಮಿತಿಗೆ ಆಡಳಿತ ಹಸ್ತಾಂತರ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಆಡಳಿತ ಸಮಿತಿಯ ಆಡಳಿತ ಹಸ್ತಾಂತರ ಪ್ರಕ್ರಿಯೆಯು ಮಾ.6 ರಂದು ನಡೆಯಿತು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಿತ್ರದೇವ ಅವರಿಗೆ ಲೆಕ್ಕಪತ್ರಗಳನ್ನು ನೀಡುವ ಮೂಲಕ ಗುತ್ತಿಗಾರು ಪಿಡಿಒರವರು ಅಧಿಕಾರ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಸನತ್ ಮುಳುಗಾಡು, ಜಯಾನಂದ ಪಟ್ಟೆ, ಪುರುಷೋತ್ತಮ ಬದಿಯಡ್ಕ, ಉಷಾ ಮಲ್ಕಜೆ ಉಪಸ್ಥಿತರಿದರು.

ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಸರಕಾರದಿಂದ ಬಜೆಟ್ ನಲ್ಲಿ ಘೋಷಣೆ, ಸುಳ್ಯದ ಹೋರಾಟ ಸಮಿತಿಯಿಂದ ಅಭಿನಂದನೆ, ಕಾಲೇಜಿಗೆ ಕುಮಾರಿ ಸೌಜನ್ಯ ಹೆಸರಿಡಲು ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಸರಕಾರಿ ಮೆಡಿಕಲ್‌ ಕಾಲೇಜನ್ನು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿರುವುದನ್ನು ನಾವು ಸ್ವಾಗತಿಸುತ್ತೇವೆ, ಸರಕಾರವನ್ನು ಅಭಿನಂದಿಸುತ್ತೇವೆ ಎಂದು ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಅಶೋಕ್‌ ಎಡಮಲೆ ತಿಳಿಸಿದರು. ಮಾ.7ರಂದು ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪುತ್ತೂರು ಶಾಸಕರಾಗಿದ್ದ ಶಕುಂತಳಾ ಶೆಟ್ಟಿ ಅವರು...

ರಸ್ತೆ ಬದಿ ಅನಧಿಕೃತವಾಗಿ ವ್ಯಾಪಾರ ನಡೆಸುತ್ತಿರುವುದನ್ನು ತೆರವುಗೊಳಿಸಲು ಸೂಚನೆ

ರಾಷ್ಟ್ರೀಯ ಹೆದ್ದಾರಿ-275 ರಲ್ಲಿ ಸಂಪಾಜೆಯಿಂದ ಕುಶಾಲನಗರದವರೆಗೆ ರಸ್ತೆಯ ಇಕ್ಕೆಲಗಳಲ್ಲಿ ವ್ಯಾಪಾರಿಗಳು ಅಲ್ಲಲ್ಲಿ ಅನಧಿಕೃತವಾಗಿ ಹಣ್ಣಿನ ಅಂಗಡಿಗಳನ್ನು ಮತ್ತು ಇತರೆ ಗೂಡಂಗಡಿಗಳನ್ನು ನಿರ್ಮಿಸಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ.ಗ್ರಾಹಕರು ಅಂಗಡಿಗಳ ಮುಂದೆ ವಾಹನಗಳನ್ನು ನಿಲ್ಲಿಸಿಕೊಳ್ಳುತ್ತಿರುವುದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುವ ವಾಹನಗಳ ಸರಾಗ ಸಂಚಾರಕ್ಕೆ ಅಡ್ಡಿಯುಂಟಾಗುತ್ತಿದೆ. ರಸ್ತೆಯಲ್ಲಿನ ವಾಹನ ನಿಲುಗಡೆಯಿಂದಾಗಿ ಅಪಘಾತ ಸಂಭವಿಸುವ ಸಾಧ್ಯತೆಯಿರುವುದರಿಂದ ಮಾರ್ಚ್, 15 ರೊಳಗೆ ಸಂಬಂಧಿಸಿದ ವ್ಯಾಪಾರಿಗಳು...

ಮಾರ್ಚ್ 15 ರಂದು ಸಹಕಾರಿ ರತ್ನ, ಮಹಾಮಂಡಲದ ಅಧ್ಯಕ್ಷ ಚಂದ್ರ ಕೋಲ್ಚಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮ, ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾ ಮಂಡಳ ಅಧ್ಯಕ್ಷರ ಅಧಿಕೃತ ಭೇಟಿ ಕಾರ್ಯಕ್ರಮ, ಸಹಕಾರ ಕ್ಷೇತ್ರದ ಸಾಧನೆಗೆ ಐವರಿಗೆ ವಿಶೇಷ ಗೌರವ, ಸುದ್ಧಿಗೋಷ್ಠಿ ಯಲ್ಲಿ ಅಭಿನಂದನಾ ಸಮಿತಿ ಪದಾಧಿಕಾರಿಗಳಿಂದ ಮಾಹಿತಿ

ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ ಬೆಂಗಳೂರು, ಇದರ ನೂತನ ನಿರ್ದೇಶಕರಾಗಿ ಬಹುಮತದಿಂದ ಆಯ್ಕೆಯಾಗಿರುವ ಚಂದ್ರ ಕೋಲ್ಚಾರ್ ಅವರಿಗೆ ಅಭಿನಂದನಾ ಸಮಾರಂಭ ಮತ್ತು ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ ಬೆಂಗಳೂರು ಇದರ ನೂತನ ಅಧ್ಯಕ್ಷ ಎಸ್.ಚಂದ್ರಶೇಖರ ಮೈಸೂರು ಇವರ ಅಧಿಕೃತ ಭೇಟಿ ಕಾರ್ಯಕ್ರಮ ಮಾ.15 ಶನಿವಾರ ಸಂಜೆ 5 ರಿಂದ ಲಯನ್ಸ್...

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ “ಮುಟ್ಟು ಗುಟ್ಟಲ್ಲ” ಹದಿಹರೆಯದ ಹೆಣ್ಣು ಮಕ್ಕಳಿಗೆ ಆರೋಗ್ಯ ಮಾಹಿತಿ ಕಾರ್ಯಕ್ರಮ

ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಆಶ್ರಯದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಸಹಕಾರದೊಂದಿಗೆ ಸ್ನೇಹಶ್ರೀ ಮಹಿಳಾ ಮಂಡಲದ ದಶ ಸಂಭ್ರಮದ ದಶ ಕಾರ್ಯಕ್ರಮಗಳ ಅಂಗವಾಗಿ ಮುಟ್ಟು ಗುಟ್ಟಲ್ಲ ಹದಿ ಹರೆಯದ ಹೆಣ್ಣು ಮಕ್ಕಳಿಗೆ ಆರೋಗ್ಯ ಮಾಹಿತಿ ಕಾರ್ಯಕ್ರಮವು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯ ಪ್ರಾಥಮಿಕ ವಿಭಾಗದಲ್ಲಿ ಮಾ.6 ರಂದು ನಡೆಯಿತು. ವಿಜಯಾ ಹೊಮಿಯೋ ಕ್ಲಿನಿಕ್...
Loading posts...

All posts loaded

No more posts

error: Content is protected !!