- Friday
- May 1st, 2026
ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2020 - 21 ನೇ ಸಾಲಿನ ವಾರ್ಷಿಕ ಮಹಾಸಭೆಯು ಅ.08ರಂದು ಸಂಘದ ಪ್ರಧಾನ ಕಛೇರಿ ಕೋಟೆಮುಂಡುಗಾರಿನ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಕೂಸಪ್ಪ ಗೌಡ ಮುಗುಪ್ಪುರವರು ಅಧ್ಯಕ್ಷತೆ ವಹಿಸಿ ಸರ್ವರನ್ನು ಸ್ವಾಗತಿಸಿದರು. ಸಂಘದ ಪ್ರಥಮ ದರ್ಜೆ ಕ್ಲರ್ಕ್ ಉಮೇಶ್ ಕಾರ್ಯಸೂಚಿ ಮಂಡಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ...
ಇತಿಹಾಸ ಪ್ರಸಿದ್ಧ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಅ.5 ರಾತ್ರಿಯಿಂದ ನವರಾತ್ರಿ ಉತ್ಸವವು ಆರಂಭಗೊಂಡಿದ್ದು ಶ್ರೀ ಕ್ಷೇತ್ರದ ರಂಗಪೂಜೆ, ಭಕ್ತಾಧಿಗಳ ಸಾಮೂಹಿಕ ರಂಗಪೂಜೆ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.ಅ.6ರಂದು ಬೆಳಿಗ್ಗೆ ಶ್ರೀ ದೇವರಿಗೆ ಪೂಜೆ ನೆರವೇರಿತು. ಮಧ್ಯಾಹ್ನ ಪೂಜೆ ನಡೆದು, ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಪೆರುವಾಜೆ, ಕ್ಷೇತ್ರದ...
ಕಾರ್ಯನಿಮಿತ್ತ ಅ.5 ರಂದು ಸುಳ್ಯಕ್ಕೆ ಆಗಮಿಸಿದ ರಾಜ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ದೇವರ ದರುಶನ ಪಡೆದರು. ಬಳಿಕ ಶ್ರೀ ಹೊಸಳಿಗಮ್ಮ ದೈವದ ದರುಶನ ಪಡೆದು, ಪ್ರಸಾದ ಸ್ವೀಕರಿಸಿದರು. ಬಳಿಕ ಕ್ಷೇತ್ರದಲ್ಲಿ ಅನ್ನಪ್ರಸಾದ ಸ್ವೀಕರಿಸಿದರು.ಇವರ ಜತೆಗೆ ಕಾಂಗ್ರೆಸ್ ಮುಖಂಡರಾದ ರಮಾನಾಥ ರೈ, ಮಿಥುನ್ ರೈ,...
ಮರ್ಕಂಜ ಗ್ರಾಮದ ದಾಸರಬೈಲು ಸ.ಕಿ.ಪ್ರಾ.ಶಾಲೆಯಲ್ಲಿ ಮಕ್ಕಳ ಇ- ಕಲಿಕಾ ದೃಷ್ಟಿಕೋನದಿಂದ ಆರಂಭವಾಗಿರುವ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಅ.8 ರಂದು ನಡೆಯಲಿದೆ. ಇಲ್ಲಿ ಸಂಪೂರ್ಣ ಸೌರಶಕ್ತಿಯಿಂದ ಸ್ಮಾರ್ಟ್ ಕ್ಲಾಸ್ ನಡೆಯಲಿದೆ ಎಂದು ಎಸ್ ಡಿ ಎಂ ಸಿ ಅಧ್ಯಕ್ಷ ಪದ್ಮನಾಭ ಎನ್.ವಿ., ಹಾಗೂ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.
ಆರಂತೋಡು ಗ್ರಾಮದ ಪಿಂಡಿಮನೆ ಕುಟುಂಬದ ದೈವಸ್ಥಾನದ ಬಳಿ ಜಿಲ್ಲಾ ಪಂಚಾಯತ್ ನ 2.5ಲಕ್ಷ ಅನುದಾನದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ, ಬಿ. ಜೆ. ಪಿ ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿ ಅ.5 ರಂದು ಗುದ್ದಲಿ ಪೂಜೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಆರಂತೋಡು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಹರಿಣಿ ದೇರಾಜೆ ಉಪಾಧ್ಯಕ್ಷೆ ಕು. ಶ್ವೇತಾ...
ನಾಲ್ಕೂರು ಗ್ರಾಮದ ದಿ.ಮೇದಪ್ಪ ಅಂಬೆಕಲ್ಲು ಅವರ ಪತ್ನಿ ಚಿನ್ನಮ್ಮ ಅಂಬೆಕಲ್ಲು ಅವರು ಅ.04 ರಂದು ರಾತ್ರಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ 68 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ಹರ್ಷನಾಥ ಅಂಬೆಕಲ್ಲು, ಗಂಗಾಧರ ಅಂಬೆಕಲ್ಲು, ಮೂವರು ಪುತ್ರಿಯರು ಹಾಗೂ ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ. (ವರದಿ :- ಉಲ್ಲಾಸ್ ಕಜ್ಜೋಡಿ)
ಇಂದು ಸುಳ್ಯಕ್ಕೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ . ಶಿವಕುಮಾರ್ ಅವರು ಬಳಿಕ ಕುಕ್ಕೆ ಸುಬ್ರಹ್ಮಣ್ಯ ಹೋಗಿ ನಂತರ ನಿಂತಿಕಲ್ಲಿನ ಎಂ.ಮಾಧವ ಗೌಡ ಕಾಮಧೇನು ಅವರ ಧರ್ಮಶ್ರೀ ಆರ್ಕೇಡ್ ನಲ್ಲಿರುವ ಮಯೂರ ಗೋಲ್ಡ್ ಫ್ಯಾಲೇಸ್ ಗೆ ಭೇಟಿ ನೀಡಿದರು. ಉದ್ಯಮಿ ಹಾಗೂ ಕಾಮಧೇನು ಗ್ರೂಪ್ಸ್ ಮಾಲಕ ಎಂ.ಮಾಧವ ಗೌಡ , ಮಯೂರ ಗೋಲ್ಡ್ ಮಾಲಕ ದೀಕ್ಷಿತ್...
ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಮರದಲ್ಲಿ ಇದ್ದ ಬಳ್ಳಿಯೊಂದು ಸಿಲುಕಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಕೇವಳದಲ್ಲಿ ನಡೆದಿದೆ. ಕೇವಳ ಹೂವಪ್ಪ ಗೌಡರವರು ಮಧ್ಯಾಹ್ನ ವೇಳೆ ತನ್ನ ಮನೆಯ ಎದುರಿನ ಸಣ್ಣ ಗಾತ್ರದ ಮರದ ಗೆಲ್ಲು ಕಡಿಯಲು ಹತ್ತಿದ್ದರು. ಗೆಲ್ಲು ಬೀಳುವ ಸಂದರ್ಭದಲ್ಲಿ ಮರದಲ್ಲಿದ್ದ ಹಬ್ಬಿದ್ದ ಬಳ್ಳಿಗೆ ಅವರು ಆಕಸ್ಮಿಕವಾಗಿ ಸಿಲುಕಿದರೆನ್ನಲಾಗಿದೆ....
ಹಿಂದೂ ಜಾಗರಣ ವೇದಿಕೆ ಕಣ್ಕಲ್ ಕೇನ್ಯ ಇದರ ವತಿಯಿಂದ ಅ.3ರಂದು ಸ್ವಚ್ಚತಾ ಶ್ರಮದಾನ ನಡೆಸಲಾಯಿತು. ನೇಲ್ಯಡ್ಕದಿಂದ ಐನಡ್ಕ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಇರುವ ಪೊದೆಗಳನ್ನು ಕಳೆ ಕೊಚ್ಚುವ ಯಂತ್ರದಲ್ಲಿ ಸ್ವಚ್ಚಗೊಳಿಸಲಾಯಿತು. ಈ ಶ್ರಮದಾನದಲ್ಲಿ ಜಾಗರಣ ವೇದಿಕೆಯ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.
ಅಡ್ತಲೆ ಪ್ರಾಥಮಿಕ ಶಾಲೆಯಲ್ಲಿ ಗಾಂಧಿಜಯಂತಿ ಹಾಗೂ ಸ್ವಚ್ಛತಾ ಕಾರ್ಯಕ್ರಮ ಸ್ಪಂದನ ಗೆಳೆಯರ ಬಳಗ ಹಾಗೂ ನಾಗರಿಕ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ನಡೆಯಿತು. ನಿವೃತ್ತ ಯೋಧ ಕಮಲಾಕ್ಷ ಪಿಂಡಿಮನೆಯವರು ಗಾಂಧಿ ನಡಿಗೆ ಜಾಥಾಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ. ಸಿ. ಅಧ್ಯಕ್ಷ ಗೋಪಾಲಕೃಷ್ಣ ಪಿಂಡಿಮನೆ ವಹಿಸಿದ್ದರು. ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಸುಜಯಾ ಲೋಹಿತ್...
Loading posts...
All posts loaded
No more posts
