- Friday
- May 1st, 2026
ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನದ ಅಂಗವಾಗಿ ಸ. ಪ.ಪೂರ್ವ ಕಾಲೇಜು ಐವರ್ನಾಡು ಇಲ್ಲಿ ಸಭಾ ಕಾರ್ಯಕ್ರಮ, ಗೌರವ ನಮನ, ಫಿಟ್ ಇಂಡಿಯಾ ಫ್ರೀಡಂ ರನ್ 2.0 ಹಾಗೂ ಶಾಲಾ ಆವರಣ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಪ್ರಾಚಾರ್ಯರು, ಪ್ರೌಢಶಾಲಾ ಶಿಕ್ಷಕರು, ಎಲ್ಲಾ ಉಪನ್ಯಾಸಕ, ಶಿಕ್ಷಕ , ಬೋಧಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ 152ನೇ ಗಾಂಧಿ ಜಯಂತಿ ಪ್ರಯುಕ್ತ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಹಾಗೂ ಶಾಲಾ ವಠಾರದಲ್ಲಿ ಸ್ವಚ್ಛತೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಉಪಾಧ್ಯಕ್ಷರಾದ ಕಿರಣ್ ನೆಟ್ಟಾರು, ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಭುವನೇಶ್ವರ್, ಉಪಾಧ್ಯಕ್ಷೆ ಶ್ರೀಮತಿ ಹರಿಣಾಕ್ಷಿ, ಶಾಲಾ ಮುಖ್ಯಗುರು ಸುಬ್ಬಯ್ಯ.ವೈ.ಬಿ, ಅಂಗನವಾಡಿ ಕಾರ್ಯಕರ್ತೆ...
ಮಡಪ್ಪಾಡಿ ಗ್ರಾಮ ಪಂಚಾಯತ್ ಮತ್ತು ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಆಜಾದಿ ಕಾ ಅಮೃತ ಮಹೋತ್ಸವ ಮತ್ತು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಹಿ ಸೇವಾ ಗಾಂಧಿ ನಡಿಗೆ ಹಾಗೂ ಸ್ವಚ್ಛತಾ ಕಾರ್ಯಕ್ರಮ, ಉದ್ಯೋಗ ಖಾತರಿ ಯೋಜನೆಯ ಹೆಚ್ಚುವರಿ ಕ್ರಿಯಾಯೋಜನೆ ತಯಾರಿಕೆಯ ವಿಶೇಷ ಗ್ರಾಮ ಸಭೆ ಮತ್ತು ಬಯಲು ಬಹಿರ್ದೆಸೆ ಮುಕ್ತ ಗ್ರಾಮ ಮಡಪ್ಪಾಡಿ ಎಂಬ ನಾಮಫಲಕವನ್ನು...
ಗಾಂಧಿಜಯಂತಿ ಅಂಗವಾಗಿ ಬಿಜೆಪಿ ಗುತ್ತಿಗಾರು ಗ್ರಾಮ ಸಮಿತಿ ನೇತೃತ್ವದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದಲ್ಲಿ ಹರಿಯುವ ಶಂಖತೀರ್ಥ ನದಿಯ ಸ್ವಚ್ಚತಾ ಕಾರ್ಯಕ್ರಮ ಇಂದು ನಡೆಯಿತು. ದೇವಳದ ಸುತ್ತ ಹರಿಯುವ ನದಿಯಲ್ಲಿ ಬೆಳೆದ ಕಾಡು ಗಿಡಗಳು ಹಾಗೂ ತ್ಯಾಜ್ಯ ಪ್ಲಾಸ್ಟಿಕ್ ಮತ್ತು ಹುಲ್ಲು ಗಳನ್ನು ಕಡಿದು ಸ್ವಚ್ಛ ಗೊಳಿಸಲಾಯಿತು.ಈ ಸ್ವಚ್ಚತಾ ಕಾರ್ಯದಲ್ಲಿ ವಳಲಂಬೆ ದೇವಸ್ಥಾನದ...
ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಈ ಸಾಲಿನ ನೇಶನ್ ಬಿಲ್ಡರ್ ಅವಾರ್ಡ್ ನ್ನು ವಿಜಯ್ಕುಮಾರ ನಡುತೋಟ ಅವರಿಗೆ ಸೆ.29 ರಂದು ನೀಡಿ ಗೌರವಿಸಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ ಶಾಲಾಭಿವೃದ್ಧಿ, ಪಾಠ ಹಾಗೂ ಪಠ್ಯೇತರ ಚಟುವಟಿಗಳಲ್ಲಿ ಮುಂಚೂಣಿಯಲ್ಲಿ ಇರುವವರಿಗೆ ಅಂತರಾಷ್ಟೀಯ ಸಂಸ್ಥೆ ರೋಟರಿಯಿಂದ ಕೊಡಮಾಡುವ 'ನೇಶನ್ ಬಿಲ್ಡರ್ ಅವಾರ್ಡ್' ಪ್ರಶಸ್ತಿಯನ್ನು ಈ ಬಾರಿ ಕಡಬ...
ಕೊಡಿಯಾಲ ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯು ಸೆ.30ರಂದು ಗ್ರಾಮ ಪಂಚಾಯತಿಯ ಮಿನಿ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರದೀಪ್ ರೈ ಅಜ್ರಂಗಳರವರ ಅಧ್ಯಕ್ಷತೆಯಲ್ಲಿನಡೆಯಿತು. ಸಾಮಾನ್ಯ ಸಭೆಯಲ್ಲಿ ಮ.ಗಾ.ಉ. ಖಾತ್ರಿ ಯೋಜನೆಯ ಪ್ರಸ್ತುತ ಕಾಮಗಾರಿ ಬೇಡಿಕೆಗಳ ಬಗ್ಗೆ, ಎರೆಹುಳು ತೊಟ್ಟಿ, ಬಚ್ಚಲುಗುಂಡಿ ನಿರ್ಮಾಣದ ಬಗ್ಗೆ ಚರ್ಚಿಸಲಾಯಿತು. ವಸತಿ ರಹಿತರ ಪಟ್ಟಿ ಪರಿಷ್ಕರಣೆ, ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಆಯೋಜಿಸುವ...
ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಕೋಟೆಮುಂಡುಗಾರು ಇದರ 2020-21ನೇ ವರ್ಷದವಾರ್ಷಿಕ ಮಹಾಸಭೆಯು ಅ.08ನೇ ಶುಕ್ರವಾರ ಪೂರ್ವಾಹ್ನ ಗಂಟೆ 10-30ಕ್ಕೆ ಸರಿಯಾಗಿ ಸಂಘದ ಪ್ರಧಾನ ಕಛೇರಿ ಕೋಟೆಮುಂಡುಗಾರು ಇಲ್ಲಿನ ಸಭಾಭವನದಲ್ಲಿ ನಡೆಯಲಿದೆ. ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಶ್ರೀ ಕೂಸಪ್ಪ ಗೌಡ ಎಂ ಇವರು ವಹಿಸಲಿದ್ದಾರೆ. ಎಲ್ಲಾ ಸದಸ್ಯರು ಸಭೆಗೆ ಸಕಾಲಕ್ಕೆ...
ಗುತ್ತಿಗಾರು ಹಾಗೂ ಹರಿಹರಪಲ್ಲತ್ತಡ್ಕದಲ್ಲಿ ಲಾಸ್ಯ ಕಲಾಶಾಲೆಯ ನೃತ್ಯ ತರಬೇತಿ ಅ.10 ಪುನರಾರಂಭಗೊಳ್ಳಲಿದೆ. ಪ್ರತಿ ಆದಿತ್ಯವಾರ ಹರಿಹರದಲ್ಲಿ ಬೆಳಿಗ್ಗೆ 9.30 ರಿಂದ 12.30 ರವರೆಗೆ ಹಾಗೂ ಗುತ್ತಿಗಾರಿನಲ್ಲಿ 2.30 ರಿಂದ 4.30 ರ ವರೆಗೆ ತರಗತಿಗಳು ನಡೆಯಲಿದೆ. ಆಸಕ್ತರು ದೂರವಾಣಿ ಮುಖಾಂತರ (ಮೊ: 94805 30310) ಸಂಪರ್ಕಿಸಬಹುದು ಎಂದು ಶಿಕ್ಷಕಿ ಶ್ರೀಮತಿ ರೇಶ್ಮಾ ಕಡ್ಯ ತಿಳಿಸಿದ್ದಾರೆ.
ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಭಡ್ತಿಗೊಂಡು ಎಡಮಂಗಲ ಗ್ರಾಮ ಪಂಚಾಯತ್ ಗೆ ವರ್ಗಾವಣೆಗೊಂಡ ಶ್ರೀಮತಿ ಭವ್ಯ ಎಂ.ಬಿ.ಯವರಿಗೆ ಪಂಚಾಯತ್ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮವು ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆಯವರ ಅಧ್ಯಕ್ಷತೆಯಲ್ಲಿ ಸೆ.30 ರಂದು ಬೆಳ್ಳಾರೆ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು. ನೂತನ ಪಿ.ಡಿ.ಒ ಅನುಷಾರವರಿಗೆ...
ಕೊಡಿಯಾಲ ಗ್ರಾಮ ಪಂಚಾಯತಿಯಲ್ಲಿ ಸುಮಾರು 9 ವರ್ಷಗಳ ಕಾಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಬಾಳಿಲ ಗ್ರಾಮ ಪಂಚಾಯತಿಗೆ ವರ್ಗಾವಣೆಗೊಂಡಿರುವ ಹೂವಪ್ಪ ಗೌಡ ರವರನ್ನು ಕೊಡಿಯಾಲ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷರಾದ ಪ್ರದೀಪ್ ರೈ ಅಜ್ರಂಗಳ ಇವರ ಅಧ್ಯಕ್ಷತೆಯಲ್ಲಿ ಸನ್ಮಾನಿಸಿ ಬೀಳ್ಗೊಡಲಾಯಿತು. ಈ ಸಂದರ್ಭದಲ್ಲಿ ಕೊಡಿಯಾಲ ಶಾಲಾ ಮುಖ್ಯ ಶಿಕ್ಷಕ ಸಿದ್ದರಾಜು, ಕೊಡಿಯಾಲ ಗ್ರಾ.ಪಂ. ಉಪಾಧ್ಯಕ್ಷ...
Loading posts...
All posts loaded
No more posts
