ಅ.07 – ಅ.14: ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವಗಳು

ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ 18 ಪೇಟೆ ದೇವಸ್ಥಾನಗಳಿಗೊಳಪಟ್ಟ ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ವರ್ಷಂಪ್ರತಿ ಜರಗುವ 'ಶ್ರೀ ನವರಾತ್ರಿ ಮಹೋತ್ಸವಗಳು' ಅ.07ನೇ ಗುರುವಾರದಿಂದ ಪ್ರಾರಂಭಗೊಂಡು ಅ.14ನೇ ಗುರುವಾರದವರೆಗೆ ವಿಜೃಂಭಣೆಯಿಂದ ಜರುಗಲಿದೆ.ಅ.07ರಂದು ಬೆಳಿಗ್ಗೆ 8.00ಗಂಟೆಗೆ ದೀಪೋಜ್ವಲನದೊಂದಿಗೆ ಮಹೋತ್ಸವ ಮೊದಲ್ಗೊಳ್ಳಲಿದೆ. ಪ್ರತಿನಿತ್ಯ ಮಧ್ಯಾಹ್ನ ಗಂಟೆ 12.00ರಿಂದ ಉಭಯ ದೇವರಿಗೆ ಮಹಾಪೂಜೆ, ಗಂಟೆ...

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತೆ ಶ್ವೇತಾರಿಗೆ ಸನ್ಮಾನ

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತೆ ಶ್ವೇತಾ ಅವರಿಗೆ ಸಾರ್ವಜನಿಕ ಸನ್ಮಾನ ಸೆ.25 ರಂದು ಊರವರು ಹಾಗೂ ಎಸ್ ಡಿ ಎಂ ಸಿ ವತಿಯಿಂದ ಅಭಿನಂದಿಸಲಾಯಿತು. ದೇವಚಳ್ಳ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಸುಲೋಚನಾ ದೇವ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ್ ಎಸ್ ಪಿ, ದೇವಚಳ್ಳ ಗ್ರಾ.ಪಂ ಉಪಾಧ್ಯಕ್ಷೆ ರಾಜೇಶ್ವರಿ ಮಣಿಕಂಠ ಮಾವಿನಕಟ್ಟೆ ಸದಸ್ಯರಾದ...
Ad Widget

ಗೋವಿಂದನಗರ : ಪೋಷಣ್ ಮಾಸಾಚರಣೆ ಪ್ರಯುಕ್ತ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ

ಕಟ್ಟ ಗೋವಿಂದನಗರ ಅಂಗನವಾಡಿ ಕೇಂದ್ರದಲ್ಲಿ ಸೆ.20 ರಂದು ಪೋಷಣ್ ಮಾಸಾಚರಣೆ ಪ್ರಯುಕ್ತ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ಸವಿತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀಮತಿ ದುರ್ಗಾಲಕ್ಷ್ಮಿ ನಿಶಾಂತ್ ಕಟ್ಟ ಅವರು ಸಮತೋಲನ ಆಹಾರ ಹಾಗೂ ದೈಹಿಕ, ಬೌದ್ಧಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೌಷ್ಟಿಕಾಂಶಗಳನ್ನು ಯಾವ ರೀತಿ ಪಡೆದುಕೊಳ್ಳಬಹುದು...

ಎಣ್ಮೂರು ಸರಕಾರಿ ಪ್ರೌಢಶಾಲೆಯಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ -ಮಕ್ಕಳಿಂದ ವಿಭಿನ್ನ ಖಾದ್ಯ ತಯಾರಿ

ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಪೋಷಣಾ ಅಭಿಯಾನ ಯೋಜನೆಯಡಿ ವಿಭಿನ್ನ ಖಾದ್ಯ ತಯಾರಿ,ಪ್ರದರ್ಶನ ಮತ್ತು ಪೌಷ್ಟಿಕ ಆಹಾರದ ಬಳಕೆಯ ಮಾಹಿತಿ ಕಾರ್ಯಕ್ರಮ ಸೆ.24ರಂದು ನಡೆಯಿತು.ಪೌಷ್ಟಿಕ ಆಹಾರದ ಅಗತ್ಯ, ಪೌಷ್ಟಿಕ ಆಹಾರದ ಕೊರತೆಯಿಂದ ಉಂಟಾಗುವ ದೈಹಿಕ ತೊಂದರೆ, ಹಿತಮಿತವಾದ ಆಹಾರದ ಬಳಕೆಯಿಂದ ಮಾನಸಿಕ ಮತ್ತು ಬೌದ್ಧಿಕ ವಿಕಸನದ ಪ್ರಯೋಜನಗಳ ಬಗ್ಗೆ ಶಾಲಾ ಹಿಂದಿ ಭಾಷಾ ಶಿಕ್ಷಕಿ...

ಐವರ್ನಾಡು ಶಾಲಾ ಎಸ್.ಡಿ.ಎಂ.ಸಿ. ರಚನೆ – ಅಧ್ಯಕ್ಷರಾಗಿ ನವೀನ ಕುಮಾರ್ ಅರಳಿಕಟ್ಟೆ, ಉಪಾಧ್ಯಕ್ಷರಾಗಿ ಶ್ರೀಮತಿ ರಾಜೀವಿ ಉದ್ದಂಪಾಡಿ ಆಯ್ಕೆ

ಐವರ್ನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಎಸ್.ಡಿ.ಎಂ.ಸಿ. ಯನ್ನು ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಲಕೃಷ್ಣ ಕೀಲಾಡಿ ಇವರ ಅಧ್ಯಕ್ಷತೆಯಲ್ಲಿ ಸೆ.23 ರಂದು ರಚಿಸಲಾಯಿತು. ಐವರ್ನಾಡು ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು, ಸದಸ್ಯರಾದ ಯೋಗಿಶ ಕಲ್ಲಗದ್ದೆ, ಮಮತಾ ಉದ್ದಂಪಾಡಿ, ಎಸ್ಡಿಎಂಸಿ ಪೂರ್ವಾಧ್ಯಕ್ಷರಾದ ನಾಗಪ್ಪ ಗೌಡ ಪಾಲೆಪ್ಪಾಡಿ, ಬೆಳ್ಳಾರೆ ವೃತ್ತದ ಶಿಕ್ಷಣ ಸಂಯೋಜಕರಾದ ವಸಂತ...

ಗುತ್ತಿಗಾರು : ರಾಜ್ಯಮಟ್ಟದ ಪ್ರತಿಭೆ ಅನನ್ಯ ಳಿಗೆ ಗೌಡರ ಯುವ ಸೇವಾ ಸಂಘದಿಂದ ಗೌರವಾರ್ಪಣೆ

ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಗುತ್ತಿಗಾರು ಗ್ರಾಮ ಸಮಿತಿ ವತಿಯಿಂದ ಎಸ್‌ ಎಸ್ ಎಲ್ ಸಿ ಯ ಪರೀಕ್ಷೆಯಲ್ಲಿ 625/625 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ನಮ್ಮ ಊರಿಗೆ ಕೀರ್ತಿ ತಂದ ಮಣಿಯಾನಮನೆ ವೇದಾವತಿ ದುರ್ಗೆಶ್ ರವರ ಸುಪುತ್ರಿ ಅನನ್ಯ ರವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಊರಿನ ಹಿರಿಯರಾದ...

ಪಂಜ : ಕ್ಷಯರೋಗ ಪತ್ತೆ ಆಂದೋಲನ ಕಾರ್ಯಕ್ರಮ ಮತ್ತು ”ಹೆಜ್ಜೆ ಬದಲಾದಾಗ” ಕಿರುಚಿತ್ರ ವೀಕ್ಷಣೆ

ಲಯನ್ಸ್ ಕ್ಲಬ್ ಪಂಜ, ಆರೋಗ್ಯ ಇಲಾಖೆ ಸುಳ್ಯ ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕ್ಷಯರೋಗ ಪತ್ತೆ ಆಂದೋಲನದ ಉದ್ಘಾಟನಾ ಕಾರ್ಯಕ್ರಮ ಮತ್ತು ”ಹೆಜ್ಜೆ ಬದಲಾದಾಗ” ಕಿರುಚಿತ್ರ ವೀಕ್ಷಣೆ ಕಾರ್ಯಕ್ರಮ ಸೆ. 24 ರಂದು ಪಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್...

ಐನೆಕಿದು : ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ

ಐನೆಕಿದು ಗ್ರಾಮದ ಬೂತ್ ಸಂಖ್ಯೆ 117 ರಲ್ಲಿ ಸೆ.25 ರಂದು ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಐನೆಕಿದು ಬಿಜೆಪಿ ಬೂತ್ ಸಮಿತಿಯ ಸದಸ್ಯರಾದ ಲಕ್ಷ್ಮೀಶ ಇಜ್ಜಿನಡ್ಕ, ಐನೆಕಿದು ಬಿಜೆಪಿ ಬೂತ್ ಸಮಿತಿಯ ಕಾರ್ಯದರ್ಶಿ ಯಶವಂತ ಕೊಪ್ಪಳಗದ್ದೆ, ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಸದಸ್ಯ ಹಾಗೂ ಗ್ರಾಮ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಗಿರೀಶ್ ಆಚಾರ್ಯ, ಭೂ ಅಬಿವೃದ್ಧಿ...

ಅರೆಭಾಷೆ ಸಂಸ್ಕೃತಿ ಶಿಬಿರ ಸಮಾಪನ : ಆಚಾರ ವಿಚಾರಗಳಲ್ಲಿ ಯುವಜನಾಂಗ ಸಕ್ರಿಯವಾಗಿ ಪಾಲ್ಗೊಳ್ಳಬೇಕು – ಕಜೆಗದ್ದೆ

ಮದುವೆ, ತೊಟ್ಟಿಲು ಶಾಸ್ತ್ರ ಮುಂತಾದ ಗೌಡ ಸಮುದಾಯದ ಶುಭ ಕಾರ್ಯಗಳ ಸಂದರ್ಭಗಳಲ್ಲಿ ಹಾಡುವ ಶೋಬಾನೆ ಹಾಡುಗಳು ಮಹಿಳೆಯರ ನಾಲಗೆಯ ತುದಿಯಲ್ಲೇ ಇರಬೇಕು. ದೈವಾರಾಧನೆ ಹಾಗೂ ಇನ್ನಿತರ ಕಾರ್ಯಕ್ರಮಗಳಲ್ಲಿ ಕೈಗೊಳ್ಳುವ ಆಚರಣೆಗಳಲ್ಲಿ ಯುವಜನಾಂಗವೂ ಸಕ್ರೀಯವಾಗಿ ಪಾಲ್ಗೊಂಡರೆ ಸಮುದಾಯದ ಸಂಸ್ಕೃತಿ ಆಚಾರ ವಿಚಾರಗಳು ನಶಿಸದೆ ಉಳಿಯುವಂತಾಗುತ್ತದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ...

ಸುಳ್ಯ: ಎನ್ ಎಂ ಸಿ ಯಲ್ಲಿ ಫಿಟ್ ಇಂಡಿಯಾ ಮೂವ್ ಮೆಂಟ್ ಕಾರ್ಯಕ್ರಮ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಎನ್ಎಸ್ಎಸ್, ಎನ್ ಸಿ ಸಿ, ಯುವ ರೆಡ್ ಕ್ರಾಸ್ , ರೋವರ್ಸ್- ರೇಂಜರ್ಸ್ ಘಟಕಗಳು ಹಾಗೂ ಕಾಲೇಜಿನ ಕ್ರೀಡಾ ಸಂಘದ ಸಹಯೋಗದೊಂದಿಗೆ ಫಿಟ್ ಇಂಡಿಯಾ ಮೂವ್ ಮೆಂಟ್ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ರಾಷ್ಟ್ರೀಯ ವೈಟ್ ಲಿಪ್ಟಿಂಗ್ ಚಾಂಪಿಯನ್ ರಮೇಶ್ ಎ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ದೈಹಿಕ ಮತ್ತು ಬೌದ್ಧಿಕವಾಗಿ ವ್ಯಕ್ತಿ...
Loading posts...

All posts loaded

No more posts

error: Content is protected !!