- Saturday
- May 2nd, 2026
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸೆ.23 ರಂದು ಸುಬ್ರಹ್ಮಣ್ಯದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ರವೀಂದ್ರ ಕುಮಾರ್ ರುದ್ರಪಾದ ಅವರ ಅಧ್ಯಕ್ಷತೆಯಲ್ಲಿ ಅಭ್ಯಾಸ ವರ್ಗ ಹಾಗೂ ಮಾಹಿತಿ ಕಾರ್ಯಕ್ರಮ ನಡೆಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಪ್ರಸನ್ನ ಕುಮಾರ್ ದರ್ಬೆ ಕಾರ್ಯಕ್ರಮ ಉದ್ಘಾಟಿಸಿದರು.ಈ ಅಭ್ಯಾಸ ವರ್ಗ ಕಾರ್ಯಕ್ರಮದಲ್ಲಿ ಪ್ರಜಾಪ್ರಭುತ್ವದಲ್ಲಿ ಪರಿಣಾಮಕಾರಿ...
ರಾಷ್ಟ್ರೀಯವಾದಿ ಚಿಂತಕ, ಭಾರತೀಯ ಜನಸಂಘದ ಸಂಸ್ಥಾಪಕರಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ರವರ 105ನೇ ಜನ್ಮ ಜಯಂತಿ ಆಚರಣೆ ಇಂದು ಸುಳ್ಯ ದ ಬಿ.ಜೆ.ಪಿ ಕಛೇರಿಯಲ್ಲಿ ನಡೆಯಿತು. ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಎನ್.ಎ. ರಾಮಚಂದ್ರ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ವಹಿಸಿದ್ದರು. ನಗರ ಪಂಚಾಯತ್...
ಹರಿಹರ ಪಲ್ಲತ್ತಡ್ಕ ಗ್ರಾಮದ ಕೊಲ್ಲಮೊಗ್ರು ರಸ್ತೆಯ ಕಟ್ಟ ತಿರುವಿನಲ್ಲಿ ರಾಸಾಯನಿಕ ಗೊಬ್ಬರ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಸೆ.25 ರಂದು ನಡೆದಿದೆ.ವಾಹನವೊಂದಕ್ಕೆ ಸೈಡ್ ಕೊಡುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಲಾರಿಯ ಚಾಲಕ ಹಾಗೂ ನಿರ್ವಾಹಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.ಈ ಅಪಘಾತಕ್ಕೆ ರಸ್ತೆ ಇಕ್ಕಟ್ಟಾಗಿರುವುದು ಹಾಗೂ ಇತ್ತೀಚೆಗೆ ಕೇಬಲ್ ಅಳವಡಿಕೆ ಮಾಡುವ ಸಂದರ್ಭದಲ್ಲಿ...
ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ ಎಸ್ ಯು ಐ) ಸುಳ್ಯ ವಿಧಾನಸಭಾ ಕ್ಷೇತ್ರದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಯಾಗಿ ಸಂಪಾಜೆ ಗ್ರಾಮದ ಗೂನಡ್ಕದಪಿ. ಯು. ಉಬೈಸ್ ಗೂನಡ್ಕ ರವರು ನೇಮಕಗೊಂಡಿದ್ದಾರೆ. ಇವರನ್ನು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ ಮತ್ತು ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಅಬುಸಾಲಿ ಗೂನಡ್ಕ ರವರ...
ಸುಳ್ಯದಲ್ಲಿರುವ ಮಂಗಳೂರು ಎಲೆಕ್ಟ್ರಾನಿಕ್ಸ್ & ಫರ್ನೀಚರ್ಸ್ ನ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನೀಚರ್ ವಿಭಾಗಕ್ಕೆ ಅನುಭವಸ್ಥ ಪುರುಷ ಅಭ್ಯರ್ಥಿ ಬೇಕಾಗಿದ್ದಾರೆ. ನೇರವಾಗಿ ಭೇಟಿಯಾಗಬಹುದು. ಸ್ಥಳೀಯರಿಗೆ ಮೊದಲ ಆದ್ಯತೆಫೋ: 08257-232366, mob:9742992599
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬಹುಸಂಖ್ಯಾತರು ಮಾತನಾಡುವ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಮಾಡಲು ಹಾಗೂ 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ಆಗ್ರಹಿಸಿ ಹಾಗೂ ಈ ಬಗ್ಗೆ ಸದನದಲ್ಲಿ ಜನಪ್ರತಿನಿಧಿಗಳು ದ್ವನಿ ಎತ್ತುವಂತೆ ಆಗ್ರಹಿಸಿ ಪೋಸ್ಟ್ ಕಾರ್ಡ್ ಚಳುವಳಿ ನಡೆಸಲು ತುಳುನಾಡಿನ ವಿವಿಧ ಸಂಘಟನೆಗಳು ಮುಂದಾಗಿವೆ.ತುಳುಭಾಷೆಗೆ ರಾಜ್ಯ ಭಾಷೆಯ ಮಾನ್ಯತೆ ನೀಡಲು ಈ ಹಿಂದಿನಿಂದಲೇ ಆಗ್ರಹಗಳು...
ಮಡಪ್ಪಾಡಿ ಗ್ರಾಮದ ಬಿಜೆಪಿ ಬೂತ್ ಸಂಖ್ಯೆ 226 ಹಾಗೂ 227 ರ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ ಕಾರ್ಯಕ್ರಮ ಕೇವಳ ದೇವಸ್ಥಾನದ ಅವರಣದಲ್ಲಿ ನಡೆಸಲಾಯಿತು. ಪಕ್ಷದ ಹಿರಿಯರಾದ ಲೋಕಪ್ಪ ಶೀರಡ್ಕ ಇವರು ದೀನ್ ದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಗುತ್ತಿಗಾರು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ವಿನಯ್ ಕುಮಾರ್ ಮುಳುಗಾಡು...
ಬೆಳ್ಳಾರೆ : ಪ್ರತಿಭಟನಾ ನಿರತ ಅಸ್ಸಾಂ ಜನರ ಮೇಲೆ ಪೋಲಿಸರಿಂದ ಗುಂಡೇಟು, ದೌರ್ಜನ್ಯ ಖಂಡಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ವತಿಯಿಂದ ಭಿತ್ತಿ ಪತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನಾ ನಿರತ ಅಸ್ಸಾಂ ನ ಗ್ರಾಮೀಣ ಜನರ ಮೇಲೆ ಸರ್ಕಾರಿ ಪ್ರಾಯೋಜಿತವಾಗಿ ಪೋಲಿಸರು ಗುಂಡೇಟು ನಡೆಸಿ ಮೂರು ಜನರನ್ನು ಬಲಿ ಪಡೆದು ಹಲವಾರು ಜನರನ್ನು...
ಕೋಲ್ಚಾರು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಸುದರ್ಶನ ಪಾತಿಕಲ್ಲು ಅವರು ಒಂದು ನಿರ್ದಿಷ್ಟ ಸಮುದಾಯದ ಹುಡುಗರನ್ನು ತಾಲಿಬಾನ್ ಗಳು ಎಂದು ಕರೆದಿಲ್ಲ. ತಮ್ಮ ಸ್ವಂತ ವಸ್ತುಗಳನ್ನು ಹಾಳು ಮಾಡುವುದು ತಾಲಿಬಾನ್ ಗಳ ಸಂಸ್ಕೃತಿ ಎಂದು ಬುದ್ದಿಮಾತು ಹೇಳಿದ್ದಾರೆ ಅಷ್ಟೇ. ಆದರೆ ಕೆಲವರು ಕೋಮು ಸೌಹಾರ್ದತೆ ಕೆಡಿಸಲು ಈ ರೀತಿಯ ಅಪಪ್ರಚಾರ ಮಾಡುತ್ತಿದ್ದಾರೆ ಪ್ರತ್ಯಕ್ಷದರ್ಶಿ...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ ಸುಳ್ಯ ಸಂಯೋಗದಲ್ಲಿ ಅಮೃತ ಗೊಂಚಲು ಸಮಿತಿ ಹರಿಹರ ಪಲ್ಲತ್ತಡ್ಕ ವತಿಯಿಂದ ಸೆ.21 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಭವನದಲ್ಲಿ ಗೊಂಚಲು ಸಭೆ ಹಾಗೂ ಪೌಷ್ಟಿಕ ಆಹಾರ ಮಾಸಾಚರಣೆ ಕಾರ್ಯಕ್ರಮ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಶ್ರೀಮತಿ ಹರ್ಷಿಣಿಯವರು ವಹಿಸಿದರು. ಶ್ರೀಮತಿ ತಾರಾ ಮಲ್ಲಾರ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಹರಿಹರೇಶ್ವರ...
Loading posts...
All posts loaded
No more posts
