- Saturday
- May 2nd, 2026
ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನಲ್ಲಿ ಸೆ.21 ರಂದು ಗ್ರಾಮಪಂಚಾಯತ್ ಅದ್ಯಕ್ಷ ಜಯಂತ್ ಬಾಳುಗೋಡು ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ನಡೆಯಿತು.ಸಭೆಯಲ್ಲಿ ಗ್ರಾಮದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಗ್ರಾಮಪಂಚಾಯತ್ ಉಪಾಧ್ಯಕ್ಷ ವಿಜಯ ಅಂಙಣ ಹಾಗೂ ಗ್ರಾಮಪಂಚಾಯತ್ ಸದಸ್ಯರುಗಳಾದ ದಿವಾಕರ ಮುಂಡಾಜೆ, ಶ್ರೀಮತಿ ಬಿಂದು.ಪಿ, ಶ್ರೀಮತಿ ಶಿಲ್ಪಾ ಕೊತ್ನಡ್ಕ ಉಪಸ್ಥಿತರಿದ್ದರು.ಹರಿಹರ ಪಲ್ಲತ್ತಡ್ಕ...
ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಗ್ರೇಡ್ – 1 ಕಾರ್ಯದರ್ಶಿಯಾಗಿ, ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಮತಿ ಭವ್ಯ ಎಂ.ಬಿಯವರಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಮುಂಭಡ್ತಿ ದೊರೆತಿದೆ.ಇವರಿಗೆ ಎಡಮಂಗಲ ಗ್ರಾಮ ಪಂಚಾಯತ್ ಗೆ ವರ್ಗಾವಣೆಯಾಗಿದ್ದು ಅಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಕಳೆದ ಮೂರು ವರ್ಷಗಳಿಂದ ಇವರು ಸೇವೆ...
ಮರ್ಕಂಜ ಗ್ರಾಮದಲ್ಲಿ ಬಹುದಿನಗಳಿಂದ ನೆಟ್ವರ್ಕ್ ಸಮಸ್ಯೆ ಇರುವುದರಿಂದ ಅದರ ಗಂಭೀರತೆಯನ್ನು ಮೋದಿ ಅವರಿಗೆ ಅರ್ಥೈಸಲು SEND EMAIL TO PM ಎಂಬ ಪತ್ರ ಚಳುವಳಿಕಾರ್ಯಕ್ರಮ ಹಮ್ಮಿಕೊಳ್ಳಲು ಮರ್ಕಂಜದ ಗ್ರಾಮಸ್ಥರು ನಿರ್ಧರಿಸಿದ್ದಾರೆ. ಗ್ರಾಮದ ಪ್ರತಿ ಮನೆಯನ್ನು ಸಂಪರ್ಕಿಸಿ ಇಮೇಲ್ ಐಡಿ ಹೊಂದಿದವರನ್ನು ಗುರುತಿಸಿ ಚಳುವಳಿಯಲ್ಲಿ ಭಾಗವಹಿಸಲು ತೀರ್ಮಾನಿಸಿದ್ದಾರೆ. ಸೆ.22 ರಂದು ಸಂಜೆ 5 ಗಂಟೆಗೆ ರೆಂಜಾಳ ವಿನಾಯಕ...
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾದ ಪರಮೇಶ್ವರ ಭಟ್ ರವರ ತೋಟದ ಕೆರೆಯಲ್ಲಿ ಮೊಸಳೆ ಪತ್ತೆಯಾಗಿದ್ದು ಭಯವನ್ನುಂಟು ಮಾಡಿದೆ. ಸಣ್ಣ ಗಾತ್ರದ ಮೊಸಳೆಯಾಗಿದ್ದು ಕಳೆದೊಂದು ವಾರದಿಂದ ಕಾಣಸಿಗುತ್ತಿದೆ ಎನ್ನಲಾಗಿದೆ.
ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕೋವಿಡ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಗುತ್ತಿಗಾರು ಮತ್ತು ನಾಲ್ಕೂರು ಗ್ರಾಮದ ವಿವಿಧೆಡೆ ಸ್ವಾಬ್ ಟೆಸ್ಟ್ ಮಾಡಲಾಗುತ್ತಿದೆ. ಸಿಬ್ಬಂದಿಗಳು ಮನೆಮನೆ ತೆರಳಲು ಗುತ್ತಿಗಾರು ಚರ್ಚ್ ನ ಧರ್ಮಗುರು ಫಾ| ಆದರ್ಶ್ ಪುದಿಯೆಡ್ತ್ ತಮ್ಮ ವಾಹನವನ್ನು ಉಚಿತವಾಗಿ ವ್ಯವಸ್ಥೆ ಮಾಡಿರುತ್ತಾರೆ. ಈ ಸಂದರ್ಭದಲ್ಲಿ ವೈಧ್ಯಾಧಿಕಾರಿ ಶ್ರೀಮತಿ ಚೈತ್ರಭಾನು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು....
ಕೇಂದ್ರದ ಮಾಜಿ ಸಚಿವ ಡಿ. ವಿ ಸದಾನಂದ ಗೌಡ ಅವರದೆಂದು ಹೇಳಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಈ ಬಗ್ಗೆ ಸದಾನಂದ ಗೌಡ ಅವರು ಬೆಂಗಳೂರು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ‘ನನ್ನ ವಿರುದ್ಧ ಫ್ಯಾಬ್ರಿಕೇಟಡ್, ಫೇಕ್, ಮಿಶ್ರಿತ ವಿಡಿಯೋ ಒಂದನ್ನು ಮಾಡಿದ್ದಾರೆ ಎನ್ನುವುದು ನನ್ನ ಗಮನಕ್ಕೆ ಬಂದಿದೆ....
ಮಿತ್ರ ಮಂಡಲ ನಾಗತೀರ್ಥ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸೆ. 18 ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಪಾರ್ವತಿ ಸಭಾ ಭವನದಲ್ಲಿ ನಡೆಯಿತು.ನೂತನ ಅಧ್ಯಕ್ಷರಾಗಿ ನಿತಿನ್ ಕುಮಾರ್ ನಾಗತೀರ್ಥ ಕಾರ್ಯದರ್ಶಿಯಾಗಿ ನವೀನ್ ನಾಗತೀರ್ಥ, ಕೋಶಾಧಿಕಾರಿಯಾಗಿ ಯತೀಶ್ ನಾಗತೀರ್ಥ, ಕ್ರೀಡಾ ಕಾರ್ಯದರ್ಶಿ ಹರ್ಷಿತ್ ಸಂಪ ಆಯ್ಕೆಯಾಗಿದ್ದರು.ನೂತನ ಪದಾಧಿಕಾರಿಗಳಿಗೆ ಯುವ ಜನ ಸಂಯುಕ್ತ ಮಂಡಳಿ...
ಪ್ರತಿಯೊಬ್ಬ ವ್ಯಕ್ತಿಗೂ ಜೀವನದಲ್ಲಿ ಯಶಸ್ವಿಯಾಗಬೇಕೆಂಬ ಇಚ್ಛೆ ಇದ್ದೇ ಇರುತ್ತದೆ.ನಮ್ಮೆಲ್ಲರನ್ನು ಮುಂದೆ ಕೊಂಡು ಹೋಗುವುದು ನಮ್ಮ ಸಾತ್ವಿಕ ಕನಸು ಮತ್ತು ಗುರಿ. ಆ ನಿಟ್ಟಿನಲ್ಲಿ ನಮ್ಮ ವಿಚಾರಗಳನ್ನು ನಾವೇ ಹತೋಟಿಯಲ್ಲಿಟ್ಟುಕೊಂಡು ಕಾರ್ಯಪ್ರವೃತ್ತರಾಗುವುದೇ ಸ್ಥಿತಪ್ರಜ್ಞೆ ಎಂದು ಅಮೇರಿಕಾದ ಡೇಟನ್ ವಿಶ್ವ ವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊಫೆಸರ್ ಡಾ. ಗುಡ್ಡೆ ರಾಘವ ಗೌಡರು ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ...
ಗುತ್ತಿಗಾರು ಎಸ್.ಬಿ.ಗ್ರೂಪ್ಸ್ ವತಿಯಿಂದ ಅರ್ಪಿತ್ ಕೋಲ್ಚಾರ್ ಸ್ಮರಣಾರ್ಥವಾಗಿ ಗ್ರಾಮೀಣ ಪ್ರತಿಭೆ ಕಳೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 623 ಅಂಕ ಪಡೆದ ಗುತ್ತಿಗಾರು ಸ.ಪ.ಪೂ.ಕಾಲೇಜಿನ ವಿದ್ಯಾರ್ಥಿ ನಿಶ್ಮಿತಾ ಕೆ.ಜಿ.ಇವಳನ್ನು ಸನ್ಮಾನಿಸಲಾಯಿತು.
ಯುವಜನ ಸಂಯುಕ್ತ ಮಂಡಳಿಯ 2020-21 ನೇ ಸಾಲಿನ ವಾರ್ಷಿಕ ಮಹಾಸಭೆ ಸೆ.18ರಂದು ಮಂಡಳಿ ಅಧ್ಯಕ್ಷ ಅನಿಲ್ ಪೂಜಾರಿಮನೆ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ದಿಲೀಪ್ ಬಾಬ್ಲುಬೆಟ್ಟು, ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ವೆಂಕಟ್ರಮಣ ಕೆ.ಎಸ್. ಉಪಸ್ಥಿತರಿದ್ದರು. ಕೊರೊನಾ ವಾರಿಯರ್ ಆಗಿ ಪಾರದರ್ಶಕ ಸೇವೆಗಾಗಿ ಮಂಡಳಿಯ ಪೂರ್ವಾಧ್ಯಕ್ಷ ಶೈಲೇಶ್ ಅಂಬೆಕಲ್ಲು ರನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ...
Loading posts...
All posts loaded
No more posts
