- Saturday
- May 2nd, 2026
ಐವರ್ನಾಡು ಗ್ರಾ.ಪಂ. ಹಾಗೂ ಐವರ್ನಾಡು ಕೃಷಿಪತ್ತಿನ ಸಹಕಾರಿ ಸಂಘ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಬೃಹತ್ ಕೋವಿಡ್ ಲಸಿಕಾ ಅಭಿಯಾನ ನಡೆಯಿತು.ಈ ಸಂದರ್ಭ ಐವರ್ನಾಡು ಗ್ರಾ.ಪಂ. ಅಧ್ಯಕ್ಷ ಬಾಲಕೃಷ್ಣ ಕೀಲಾಡಿ, ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್. ಮನ್ಮಥ, ಪಿಡಿಒ ಶ್ಯಾಂಪ್ರಸಾದ್, ಆರೋಗ್ಯ ಇಲಾಖೆ ಸಿಬ್ಬಂದಿ ಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಕೊಡಿಯಾಲ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಡಾ.ಜಯರಾಮ ರೈ, ಪಂಚಾಯತ್ ಅಧ್ಯಕ್ಷ ಪ್ರದೀಪ್ ರೈ ಅಜ್ರಂಗಳ, ಬಿಜೆಪಿ ಪ್ರಮುಖರಾದ ಲೋಹಿತ್ ಪೆರಿಯಾನ, ಹರ್ಷನ್ ಕೆ.ಟಿ.ಕಲ್ಪಡ, ಚೇತನ್ ಕೊಡಿಯಾಲ, ಬಾಸ್ಕರ ಗೌಡ ಕಲ್ಪಡ, ಹರೀಶ್ ಆರ್ವಾರ, ಮನೋಹರ ಕಲ್ಪಡ, ಆನಂದ...
ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಬೃಹತ್ ಲಸಿಕಾ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಆರೋಗ್ಯ ಇಲಾಖೆಯವರು ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ಲಸಿಕಾ ವಿತರಣಾ ಅಭಿಯಾನದಲ್ಲಿ ಕೈ ಜೋಡಿಸಿದರು.
ಸುಳ್ಯ ಗಾಂಧಿನಗರ ಕಲ್ಕುಡ ದೈವಸ್ಥಾನದಲ್ಲಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಪಕ್ಷದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಮೋದಿಯವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ ಮತ್ತೊಮ್ಮೆ ಮೋದಿ ಅಧಿಕಾರಕ್ಕೆ ಬರಬೇಕು ಎಂದು ಪ್ರಾರ್ಥಿಸಲಾಯಿತು. ಧರ್ಮದರ್ಶಿ ಉಮೇಶ್ ವಾಗ್ಲೆ ಪ್ರಾರ್ಥನೆ ನೆರೆವೇರಿಸಿದರು. ಈ ಸಂದರ್ಭದಲ್ಲಿ ಕಲ್ಕುಡ ದೈವಸ್ಥಾನದ ಸಮಿತಿಯ ಸದಸ್ಯರು ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದ ಮೊಕ್ತೇಸರರಾದ ಪಿ.ಕೆ ಉಮೇಶ್,...
ಪ್ರಧಾನಿ ನರೇಂದ್ರ ಮೋದಿಯವರ 71 ನೇ ಹುಟ್ಟುಹಬ್ಬದ ಅಂಗವಾಗಿ ವಳಲಂಬೆ ಶ್ರೀ ಶಂಖಪಾಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಪ್ರಮುಖರಾದ ಬಿ.ಕೆ.ಬೆಳ್ಯಪ್ಪ ಗೌಡ, ಎ.ವಿ.ತೀರ್ಧರಾಮ, ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ವೆಂಕಟ್ ವಳಲಂಬೆ, ಅರ್ಚಕರಾದ ಪರಮೇಶ್ವರ ಭಟ್, ಮಹಾಬಲೇಶ್ವರ ಭಟ್ ಹಾಗೂ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.(ಚಿತ್ರ :...
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯ ವಿಪತ್ತು ನಿರ್ವಹಣಾ ಘಟಕ ನಾಲ್ಕೂರು ವತಿಯಿಂದ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿರುವ ನಾಲ್ಕೂರು ಗ್ರಾಮದ ಚತ್ರಪ್ಪಾಡಿ ಆದಿಮಾಯೆ ಸ್ವ-ಸಹಾಯ ಸಂಘದ ಸದಸ್ಯೆ ಪ್ರೇಮಾರವರಿಗೆ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ವೈಯಕ್ತಿಕವಾಗಿ ಸಂಗ್ರಹಿಸಿದ ಮೊತ್ತವನ್ನು ಅವರ ಮನೆಗೆ ಬೇಟಿ ನೀಡಿ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಅವರು ಆರ್ಥಿಕವಾಗಿ ಕಷ್ಟದಲ್ಲಿರುವುದನ್ನು ಮನಗಂಡು...
ಇಂದು ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮ ದಿನದ ಆಚರಣೆಯ ಅಂಗವಾಗಿ ಸುಳ್ಯದ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಪಕ್ಷದ ವತಿಯಿಂದ ನೆರೆವೇರಿಸಲಾಯಿತು. ಈ ಸಂದರ್ಭದಲ್ಲಿ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಮೂಕ್ತೇಸರಾದ ಪಿ.ಕೆ.ಉಮೇಶ್ ದೇವರಿಗೆ ಪ್ರಾರ್ಥನೆ ಸಲ್ಲಿಸಿ ,ಕಾಯರ್ತೋಡಿ ದೇವಸ್ಥಾನದ ಪ್ರಧಾನ ಅರ್ಚಕರಾದ ನೀಲಕಂಠ ವಿಶೇಷ ಪೂಜೆ ನೆರೆವೇರಿಸಿದರು, ವಿಜಯ ದೇಗೊಂಡಿ...
ಪೆರುವಾಜೆ ಭಾವೈಕ್ಯ ಯುವಕ ಮಂಡಲ(ರಿ.) ವತಿಯಿಂದ ಪೂರ್ವಾಧ್ಯಕ್ಷರಾದ ದಿ| ಪ್ರೇಮನಾಥ ರೈ ರವರ ಒಂದನೇ ವರುಷದ ಪುಣ್ಯಸ್ಮರಣೆ ಕಾರ್ಯಕ್ರಮ ಸೆ.16 ರಂದು ಪೆರುವಾಜೆ ಯುವಕ ಮಂಡಲದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾವೈಕ್ಯ ಯುವಕ ಮಂಡಲ ಮತ್ತು ದಿ|ಪ್ರೇಮನಾಥ ರೈ ರವರ ಒಡನಾಟ ಮತ್ತು ಸಮಾಜಮುಖಿ ಕಾರ್ಯಗಳನ್ನು ಯುವಕ ಮಂಡಲದ ಅಧ್ಯಕ್ಷರಾದ ವಾಸುದೇವ ಪೆರುವಾಜೆ ನೆನಪಿಸಿಕೊಂಡರು. ಕಾರ್ಯಕ್ರಮದ ನಂತರ...
ಚಿರಾಯು ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ ಇದರ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಗೌರವಾಧ್ಯಕ್ಷರಾಗಿ ವಿಜಯಕಾಂತ್ ಮಾವಿನಕಟ್ಟೆ, ಅಧ್ಯಕ್ಷರಾಗಿ ಜಯಂತ ಮಾವಿನಕಟ್ಟೆ, ಉಪಾಧ್ಯಕ್ಷರಾಗಿ ಪ್ರವೀಣ್ ಮಾವಿನಕಟ್ಟೆ, ಕಾರ್ಯದರ್ಶಿಯಾಗಿ ಯತೀಂದ್ರ, ಸಂಘಟನಾ ಕಾರ್ಯದರ್ಶಿಯಾಗಿ ದಿನೇಶ ಖಜಾಂಜಿಯಾಗಿ ಫಾರೂಕ್ ಮಾವಿನಕಟ್ಟೆ, ಗೌರವ ಸಲಹೆಗಾರರಾಗಿ ಸಿದ್ದಿಕ್ ಅಬುದಾಬಿ, ತೋಮಸ್ ದುಬೈ ಹಾಗೂ ಕವನ ಮಾವಿನಕಟ್ಟೆ , ಸಂಘಟನಾ...
ಎ.ಯು. ಕ್ರಿಯೇಶನ್ ನಿರ್ಮಾಣದ "ಸಂಘಧ್ಯೇಯ" ಎಂಬ ಕನ್ನಡ ಕಿರುಚಿತ್ರದ ಮುಹೂರ್ತವು ಉಪ್ಪಿನಂಗಡಿಯ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನಡೆಯಿತು. ಕಿರುಚಿತ್ರದ ನಾಯಕನಾಗಿ ನವನೀತಕೃಷ್ಣ ಜೋಗಿಯಡ್ಕರವರು ಬಣ್ಣ ಹಚ್ಚಲಿದ್ದು, ಕಥೆ,ಚಿತ್ರಕಥೆ,ಸಂಭಾಷಣೆ ಮತ್ತು ನಿರ್ದೇಶನವನ್ನು ಅಚಲ್ ಉಬರಡ್ಕ ಮಾಡಲಿದ್ದಾರೆ. ಈ ಕಿರುಚಿತ್ರದಲ್ಲಿ ಶ್ರೀವತ್ಸ ಭಾರಧ್ವಾಜ, ಕಿರಣ್ ಕುಮಾರ್ ಶಾಂತಿನಗರ ಮತ್ತಿತರರು ಪಾತ್ರಗಳಿಗೆ ಜೀವ ತುಂಬಲಿದ್ದಾರೆ. ಛಾಯಾಗ್ರಾಹಕರಾಗಿ ವಿನಯ್ ರೈ...
Loading posts...
All posts loaded
No more posts
