- Sunday
- July 5th, 2026
ಕುಕ್ಕುಜಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಸುಮಾರು 36 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಆ. 31ರಂದು ಸ್ವಯಂ ನಿವೃತ್ತಿ ಪಡೆದ ಶ್ರೀಮತಿ ರಾಜೀವಿ ಎಂ.ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಸೆ. 11ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಅಮರಪಡ್ನೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಪದ್ಮಪ್ರಿಯಾರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ರಾಮಚಂದ್ರ ದೀಪ ಬೆಳಗಿಸಿ...
ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಪೂರ್ವ ಸಂಪ್ರದಾಯದಂತೆ ಸೆ.13ರಂದು ಹೊಸ್ತಾರೋಗಣೆ (ನವಾನ್ನ ಪ್ರಸಾದ) ಕಾರ್ಯಕ್ರಮ ನಡೆಯಲಿದ್ದು ಬೆಳಗ್ಗೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, ಕದಿರು ಪೂಜೆ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಪ್ರಾತಃಕಾಲ 5.15ಕ್ಕೆ ಸರಿಯಾಗಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, ಪೂರ್ವಾಹ್ನ ಗಂಟೆ 7.30ಕ್ಕೆ ತೆನೆ ತರುವುದು, ಕದಿರು ಪೂಜೆ ನಡೆಯಲಿದೆ. ಬಳಿಕ ದೇವಳದ...
ಜೇಸಿಐ ಬೆಳ್ಳಾರೆ ಮತ್ತು ಯುವ ಜೇಸೀ ವಿಭಾಗ ಬೆಳ್ಳಾರೆ ಇದರ ಜೇಸೀ ಸಪ್ತಾಹ 2021 ಸಪ್ತ ಕಲೋತ್ಸವದ ಅಂಗವಾಗಿ ವಲಯಾಧ್ಯಕ್ಷರ ಭೇಟಿ ಸೆ.11 ರಂದು ನಡೆಯಿತು. ಬೆಳಿಗ್ಗೆ ಶಾಶ್ವತ ಯೋಜನೆಗಳ ಅನಾವರಣ ಕಾರ್ಯಕ್ರಮದ ಅಂಗವಾಗಿ ನೆಟ್ಟಾರು ಶಾಲೆಗೆ ನೀರಿನ ಟ್ಯಾಂಕ್ ಮತ್ತು ನಾಮಫಲಕವನ್ನು ಕೊಡುಗೆಯಾಗಿ ನೀಡಲಾಯಿತು. ನಂತರ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ಸಭಾ...
ಸರಸ್ವತಿ ಕಾಮತ್ ಅವರ ಆರೋಪ ದುರುದ್ದೇಶಪೂರಿತವಾಗಿದೆ. ಆದರೂ ನಾವು ನ್ಯಾಯಾಲಯದ ಆದೇಶವನ್ನು ಗೌರವಿಸುತ್ತೇವೆ. ಹರೀಶ್ ಕಂಜಿಪಿಲಿ ಅವರು ತಪ್ಪು ಮಾಡಿಲ್ಲ ಎಂದು ನಾವು ಮೇಲಿನ ನ್ಯಾಯಾಲಯದಲ್ಲಿ ಸಾಬೀತುಪಡಿಸುತ್ತೇವೆ ಎಂದು ರಾಜ್ಯ ರೈತಮೋರ್ಚಾದ ಉಪಾಧ್ಯಕ್ಷ ಎ.ವಿ ತೀರ್ಥರಾಮ ಅವರು ಹೇಳಿದರು. ಸುಳ್ಯ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹರೀಶ್ ಕಂಜಿಪಿಲಿ ಅವರು ಬಿಜೆಪಿ ಮಂಡಲದ ಆಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ...
ಆಲೆಟ್ಟಿ (ಅರಂತೋಡು) ಬಿಜೆಪಿ ಮಹಾಶಕ್ತಿ ಕೇಂದ್ರದ ಯುವಮೋರ್ಚಾ ಅಧ್ಯಕ್ಷರಾಗಿ ಪ್ರದೀಪ್ ಕೊಲ್ಲರಮೂಲೆ ಆಯ್ಕೆಯಾಗಿದ್ದಾರೆ. ಇವರು ಕೋಲ್ಚಾರ್ ಬೂತ್ ಸಮಿತಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ಕೊಲ್ಲಮೊಗ್ರು ಗ್ರಾಮದ ಹರಿಶ್ಚಂದ್ರ ಕೋನಡ್ಕ ಸೆ.09 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 65 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಇಬ್ಬರು ಮಕ್ಕಳು, ಕುಟುಂಬಸ್ಥರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ. (ವರದಿ :- ಉಲ್ಲಾಸ್ ಕಜ್ಜೋಡಿ)
ಅರಂತೋಡು ದುರ್ಗಾ ಮಾತಾ ಭಜನಾ ಮಂದಿರದಲ್ಲಿ ಗಣೇಶೋತ್ಸವ ಕಾರ್ಯಕ್ರಮ ಸರಳ ರೀತಿಯಲ್ಲಿ ಆಚರಣೆ ನಡೆಯಿತು. ಬೆಳಿಗ್ಗೆ 5 ಗಂಟೆಗೆ ಗಣಪತಿ ಹವನ, ಸಂಜೆ 5 ಗಂಟೆಯಿಂದ ರಾತ್ರಿ 7.30ರ ತನಕ ಭಜನಾ ಕಾರ್ಯಕ್ರಮ ನಡೆಯಿತು.
ಯುವಕ ಮಂಡಲ (ರಿ) ಮಡಪ್ಪಾಡಿ, ಶ್ರೀ ರಾಮ ಭಜನಾ ಮಂಡಳಿ ಮಡಪ್ಪಾಡಿ, ಮಂಜುಶ್ರೀ ಯಕ್ಷಗಾನ ಕಲಾ ಸಂಘ (ರಿ) ಮಡಪ್ಪಾಡಿ, ಉಜ್ವಲ ಮಹಿಳಾ ಮಂಡಳ(ರಿ) ಮಡಪ್ಪಾಡಿ, ಗ್ರಾಮಸ್ಥರ ಹಾಗೂ ಸಮಸ್ತ ಭಕ್ತಾದಿಗಳ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುತ್ತಿದ್ದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ಈ ವರ್ಷ ಸರಕಾರದ ಷರತ್ತುಬದ್ಧ ನಿಯಮಗಳಿರುವುದರಿಂದ ಕೇವಲ ಗಣಪತಿ ಹವನದೊಂದಿಗೆ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಜಂಟಿ...
ನಾಗರಿಕ ಸೇವಾ ಸಮಿತಿ ಬಾಳಿಲ-ಮುಪ್ಪೇರ್ಯ ಇದರ ವತಿಯಿಂದ 39ನೇ ವರ್ಷದ ನಾಡಹಬ್ಬ ಗಣೇಶೋತ್ಸವ ಆಚರಣೆಸೆ.10 ರಂದು ನಡೆಯಿತು. ಕೋವಿಡ್ ನಿಬಂಧನೆಯಿಂದ ನಡೆದ ಸರಳ ಕಾರ್ಯಕ್ರಮದಲ್ಲಿ ಗಣಪತಿ ಪ್ರತಿಷ್ಠೆ ಹಾಗೂ ಪೂಜಾ ಕಾರ್ಯಕ್ರಮ ನಡೆಯಿತು. ಸ್ಥಳೀಯ ಭಜನಾ ಮಂಡಳಿ ಹಾಗೂ ನಡುಗಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಸಮಿತಿಯ...
Loading posts...
All posts loaded
No more posts
